Homeಕರ್ನಾಟಕಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

- Advertisement -
- Advertisement -

ಎನ್‌ಟಿಎ ಮತ್ತು ಯುಜಿಸಿ ಸಹಭಾಗಿತ್ವದಲ್ಲಿ ನಡೆಯುವ ನೆಟ್, ಜೆಆರ್‌ಎಫ್ ಪರೀಕ್ಷೆ ವೇಳೆ ಪೀಣ್ಯದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳಿಂದ ಸಿಬ್ಬಂದಿಗಳು ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳ ನಡುವೆ ಕೆಲಕಾಲ ವಾಗ್ವಾದ ನಡೆದಿದೆ.

ಬುಧವಾರ ನಗರದ ಪೀಣ್ಯ 1ನೇ ಹಂತದಲ್ಲಿರುವ ಬಿಟ್‌ಬೈಟೆಕ್ ಸೊಲ್ಯೂಷನ್‌ನಲ್ಲಿ ಸಿಬ್ಬಂದಿಯು ಪರೀಕ್ಷಾರ್ಥಿಗಳಿಂದ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ 150ಕ್ಕೂ ಹೆಚ್ಚು ಅಭ್ಯರ್ಥಿಗಳ ಪೈಕಿ ಬಹುತೇಕರು ಮೊಬೈಲ್, ಬ್ಯಾಗ್‌ಗಳನ್ನು ತಂದಿದ್ದರು. ಪರೀಕ್ಷೆ ಆರಂಭವಾಗುವುದಕ್ಕಿಂತ ಮೊದಲು ಎಲ್ಲ ಅಭ್ಯರ್ಥಿಗಳು ಮೊಬೈಲ್‌ಗಳನ್ನು ಪರೀಕ್ಷಾ ಸಿಬ್ಬಂದಿ ಬಳಿ ಡೆಪಾಸಿಟ್ ಮಾಡಿದ್ದರು. ಪರೀಕ್ಷೆ ಮುಗಿದ ನಂತರ ಆ ಮೊಬೈಲ್‌ಗಳನ್ನು ವಾಪಸ್ ಕೊಡಬೇಕಾದರೆ ಪ್ರತಿಯೊಬ್ಬರೂ 20 ರುಪಾಯಿ ಕೊಡಬೇಕೆಂದು ಪರೀಕ್ಷಾ ಸಿಬ್ಬಂದಿ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ‘ನಾವೇಕೆ ದುಡ್ಡು ಕೊಡಬೇಕು? ನಮ್ಮ ಬಳಿ ದುಡ್ಡು ಇಲ್ಲ’ ಎಂದು ಹೇಳಿದ್ದಾರೆ. ಆಗ ಪರೀಕ್ಷಾ ಸಿಬ್ಬಂದಿ ‘ದುಡ್ಡು ಕೊಡುವವರೆಗೂ ನಿಮ್ಮ ಮೊಬೈಲ್‌ಗಳನ್ನು ವಾಪಸ್ ಕೊಡುವುದಿಲ್ಲ’ ಎಂದು ಹೇಳಿದ್ದಾರೆ.

ಸಿಬ್ಬಂದಿಯ ಈ ನಡೆಯಿಂದ ಕೆರಳಿದ ಪರೀಕ್ಷಾರ್ಥಿಗಳು, ತಂದಿರುವ ಬ್ಯಾಗ್ ಮತ್ತು ಮೊಬೈಲ್‌ಗಳನ್ನು ಎಲ್ಲಿ ಇಡಬೇಕು? ಎಂದು ಪ್ರಶ್ನಿಸಿದ್ದಾರೆ. ಆಗ ಸಿಬ್ಬಂದಿಗಳು, ದುಡ್ಡು ಕೊಟ್ಟರೆ ನಾವು ಇಟ್ಟುಕೊಳ್ಳುತ್ತೇವೆ, ಇಲ್ಲವಾದರೆ ಹೊರಗೆ ಇಡಿ ಎಂದು ಹೇಳಿದ್ದಾರೆ. ಇದರಿಂದ ಅಸಮಾಧಾನಗೊಂಡ ಪರೀಕ್ಷಾರ್ಥಿಗಳು ಪರೀಕ್ಷೆ ಕೇಂದ್ರದಲ್ಲಿ ಮೊಬೈಲ್ ಡೆಪಾಸಿಟ್‌ಗೂ ಹಣ ಪಡೆದದ್ದು ಇದೆ ಮೊದಲು ಎಂದು ಎನ್‌ಟಿ‌ಎಗೆ ಹಿಡಿಶಾಪ ಹಾಕಿದರು.

ಈ ಬಗ್ಗೆ ಪರೀಕ್ಷಾರ್ಥಿಯಾಗಿರುವ ಅನಿಲ್ ಕುಮಾರ್ ಮಾತನಾಡಿ, ”ಪರೀಕ್ಷಾ ನೋಂದಣಿ ಶುಲ್ಕವಾಗಿ ನಾವು 1000 ರೂ. ಪಾವತಿಸಿರುತ್ತೇವೆ. ಆದರೂ ಪರೀಕ್ಷಾ ಕೇಂದ್ರದಲ್ಲಿ 20 ರೂಪಾಯಿ ಮೊಬೈಲ್ ಡೆಪಾಸಿಟ್‌ಗೆ ಪಡೆದರು. ಈ ಹಿಂದೆಯೂ ಸಹ ನಾವು ನೆಟ್ ಪರೀಕ್ಷೆ ಮತ್ತು ಹಲವು ಸರ್ಕಾರಿ ಪರೀಕ್ಷೆಗಳನ್ನು ಬರೆದಿದ್ದೇವೆ, ಆದರೆ ಅಲ್ಲೆಲ್ಲೂ ಮೊಬೈಲ್ ಡಿಪಾಸಿಟ್‌ಗೆ ಹಣ ಪಡೆದಿರಲಿಲ್ಲ. ಈ ಬಗ್ಗೆ UGC ಕೂಡಲೇ ಗಮನ ಹರಿಸಬೇಕು” ಎಂದು ಹೇಳಿದರು.

ಮತ್ತೋರ್ವ ಪರೀಕ್ಷಾರ್ಥಿಯಾಗಿರುವ ಮುನಿಸ್ವಾಮಿ ಮಾತನಾಡಿ, ”ಮೊಬೈಲ್ ಡೆಪಾಸಿಟ್‌ಗೆ ಹಣ ವಸೂಲಿ ಮಾಡುತ್ತಿರುವುದು ಇದೇ ಮೊದಲ ಎನಿಸುತ್ತದೆ. ಈ ಪರೀಕ್ಷಾ ಕೇಂದ್ರದಲ್ಲಿ ಸರಿಯಾದ ಸೌಲಭ್ಯಗಳೂ ಇಲ್ಲ, ಆದರೂ ಹೆಚ್ಚಿನ ಹಣ ವಸೂಲಿಗೆ ಮುಂದಾಗಿದೆ. ಈ ಕೇಂದ್ರದಲ್ಲಿ 150 ಜನರಿಗೆ ಒಂದೇ ಶೌಚಾಲಯವಿದೆ. ಅಭ್ಯರ್ಥಿಗಳು ಪರೀಕ್ಷೆಯ ಅರ್ಧ ಸಮಯವನ್ನು ಶೌಚಾಲಯದ ಬಾಗಿಲಲ್ಲೇ ಕಳೆಯುವಂತಾಯಿತು. ಸೂಕ್ತ ಸೌಲಭ್ಯಗಳಿರುವ ಕೇಂದ್ರಗಳನ್ನು ಎನ್‌ಟಿ‌ಎ ಆಯ್ಕೆ ಮಾಡಬೇಕು. ಇಲ್ಲವಾದರೆ ಅಭ್ಯರ್ಥಿಗಳಿಗೆ ವಿನಾಕಾರಣ ತೊಂದರೆಯಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿದ್ಯುತ್ ದರ ಏರಿಕೆ: ಇಂದು ಕರ್ನಾಟಕ ಬಂದ್‌ಗೆ ವ್ಯಾಪಾರ, ಉದ್ಯಮ ಸಂಸ್ಥೆಗಳಿಂದ ಕರೆ; ಸಿಪಿಎಂ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...