Homeಕರ್ನಾಟಕಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

- Advertisement -
- Advertisement -

ಎನ್‌ಟಿಎ ಮತ್ತು ಯುಜಿಸಿ ಸಹಭಾಗಿತ್ವದಲ್ಲಿ ನಡೆಯುವ ನೆಟ್, ಜೆಆರ್‌ಎಫ್ ಪರೀಕ್ಷೆ ವೇಳೆ ಪೀಣ್ಯದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳಿಂದ ಸಿಬ್ಬಂದಿಗಳು ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳ ನಡುವೆ ಕೆಲಕಾಲ ವಾಗ್ವಾದ ನಡೆದಿದೆ.

ಬುಧವಾರ ನಗರದ ಪೀಣ್ಯ 1ನೇ ಹಂತದಲ್ಲಿರುವ ಬಿಟ್‌ಬೈಟೆಕ್ ಸೊಲ್ಯೂಷನ್‌ನಲ್ಲಿ ಸಿಬ್ಬಂದಿಯು ಪರೀಕ್ಷಾರ್ಥಿಗಳಿಂದ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ 150ಕ್ಕೂ ಹೆಚ್ಚು ಅಭ್ಯರ್ಥಿಗಳ ಪೈಕಿ ಬಹುತೇಕರು ಮೊಬೈಲ್, ಬ್ಯಾಗ್‌ಗಳನ್ನು ತಂದಿದ್ದರು. ಪರೀಕ್ಷೆ ಆರಂಭವಾಗುವುದಕ್ಕಿಂತ ಮೊದಲು ಎಲ್ಲ ಅಭ್ಯರ್ಥಿಗಳು ಮೊಬೈಲ್‌ಗಳನ್ನು ಪರೀಕ್ಷಾ ಸಿಬ್ಬಂದಿ ಬಳಿ ಡೆಪಾಸಿಟ್ ಮಾಡಿದ್ದರು. ಪರೀಕ್ಷೆ ಮುಗಿದ ನಂತರ ಆ ಮೊಬೈಲ್‌ಗಳನ್ನು ವಾಪಸ್ ಕೊಡಬೇಕಾದರೆ ಪ್ರತಿಯೊಬ್ಬರೂ 20 ರುಪಾಯಿ ಕೊಡಬೇಕೆಂದು ಪರೀಕ್ಷಾ ಸಿಬ್ಬಂದಿ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ‘ನಾವೇಕೆ ದುಡ್ಡು ಕೊಡಬೇಕು? ನಮ್ಮ ಬಳಿ ದುಡ್ಡು ಇಲ್ಲ’ ಎಂದು ಹೇಳಿದ್ದಾರೆ. ಆಗ ಪರೀಕ್ಷಾ ಸಿಬ್ಬಂದಿ ‘ದುಡ್ಡು ಕೊಡುವವರೆಗೂ ನಿಮ್ಮ ಮೊಬೈಲ್‌ಗಳನ್ನು ವಾಪಸ್ ಕೊಡುವುದಿಲ್ಲ’ ಎಂದು ಹೇಳಿದ್ದಾರೆ.

ಸಿಬ್ಬಂದಿಯ ಈ ನಡೆಯಿಂದ ಕೆರಳಿದ ಪರೀಕ್ಷಾರ್ಥಿಗಳು, ತಂದಿರುವ ಬ್ಯಾಗ್ ಮತ್ತು ಮೊಬೈಲ್‌ಗಳನ್ನು ಎಲ್ಲಿ ಇಡಬೇಕು? ಎಂದು ಪ್ರಶ್ನಿಸಿದ್ದಾರೆ. ಆಗ ಸಿಬ್ಬಂದಿಗಳು, ದುಡ್ಡು ಕೊಟ್ಟರೆ ನಾವು ಇಟ್ಟುಕೊಳ್ಳುತ್ತೇವೆ, ಇಲ್ಲವಾದರೆ ಹೊರಗೆ ಇಡಿ ಎಂದು ಹೇಳಿದ್ದಾರೆ. ಇದರಿಂದ ಅಸಮಾಧಾನಗೊಂಡ ಪರೀಕ್ಷಾರ್ಥಿಗಳು ಪರೀಕ್ಷೆ ಕೇಂದ್ರದಲ್ಲಿ ಮೊಬೈಲ್ ಡೆಪಾಸಿಟ್‌ಗೂ ಹಣ ಪಡೆದದ್ದು ಇದೆ ಮೊದಲು ಎಂದು ಎನ್‌ಟಿ‌ಎಗೆ ಹಿಡಿಶಾಪ ಹಾಕಿದರು.

ಈ ಬಗ್ಗೆ ಪರೀಕ್ಷಾರ್ಥಿಯಾಗಿರುವ ಅನಿಲ್ ಕುಮಾರ್ ಮಾತನಾಡಿ, ”ಪರೀಕ್ಷಾ ನೋಂದಣಿ ಶುಲ್ಕವಾಗಿ ನಾವು 1000 ರೂ. ಪಾವತಿಸಿರುತ್ತೇವೆ. ಆದರೂ ಪರೀಕ್ಷಾ ಕೇಂದ್ರದಲ್ಲಿ 20 ರೂಪಾಯಿ ಮೊಬೈಲ್ ಡೆಪಾಸಿಟ್‌ಗೆ ಪಡೆದರು. ಈ ಹಿಂದೆಯೂ ಸಹ ನಾವು ನೆಟ್ ಪರೀಕ್ಷೆ ಮತ್ತು ಹಲವು ಸರ್ಕಾರಿ ಪರೀಕ್ಷೆಗಳನ್ನು ಬರೆದಿದ್ದೇವೆ, ಆದರೆ ಅಲ್ಲೆಲ್ಲೂ ಮೊಬೈಲ್ ಡಿಪಾಸಿಟ್‌ಗೆ ಹಣ ಪಡೆದಿರಲಿಲ್ಲ. ಈ ಬಗ್ಗೆ UGC ಕೂಡಲೇ ಗಮನ ಹರಿಸಬೇಕು” ಎಂದು ಹೇಳಿದರು.

ಮತ್ತೋರ್ವ ಪರೀಕ್ಷಾರ್ಥಿಯಾಗಿರುವ ಮುನಿಸ್ವಾಮಿ ಮಾತನಾಡಿ, ”ಮೊಬೈಲ್ ಡೆಪಾಸಿಟ್‌ಗೆ ಹಣ ವಸೂಲಿ ಮಾಡುತ್ತಿರುವುದು ಇದೇ ಮೊದಲ ಎನಿಸುತ್ತದೆ. ಈ ಪರೀಕ್ಷಾ ಕೇಂದ್ರದಲ್ಲಿ ಸರಿಯಾದ ಸೌಲಭ್ಯಗಳೂ ಇಲ್ಲ, ಆದರೂ ಹೆಚ್ಚಿನ ಹಣ ವಸೂಲಿಗೆ ಮುಂದಾಗಿದೆ. ಈ ಕೇಂದ್ರದಲ್ಲಿ 150 ಜನರಿಗೆ ಒಂದೇ ಶೌಚಾಲಯವಿದೆ. ಅಭ್ಯರ್ಥಿಗಳು ಪರೀಕ್ಷೆಯ ಅರ್ಧ ಸಮಯವನ್ನು ಶೌಚಾಲಯದ ಬಾಗಿಲಲ್ಲೇ ಕಳೆಯುವಂತಾಯಿತು. ಸೂಕ್ತ ಸೌಲಭ್ಯಗಳಿರುವ ಕೇಂದ್ರಗಳನ್ನು ಎನ್‌ಟಿ‌ಎ ಆಯ್ಕೆ ಮಾಡಬೇಕು. ಇಲ್ಲವಾದರೆ ಅಭ್ಯರ್ಥಿಗಳಿಗೆ ವಿನಾಕಾರಣ ತೊಂದರೆಯಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿದ್ಯುತ್ ದರ ಏರಿಕೆ: ಇಂದು ಕರ್ನಾಟಕ ಬಂದ್‌ಗೆ ವ್ಯಾಪಾರ, ಉದ್ಯಮ ಸಂಸ್ಥೆಗಳಿಂದ ಕರೆ; ಸಿಪಿಎಂ ಬೆಂಬಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...