Homeಕರ್ನಾಟಕಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ: ಪರೀಕ್ಷಾರ್ಥಿಗಳ ಆಕ್ರೋಶ

- Advertisement -
- Advertisement -

ಎನ್‌ಟಿಎ ಮತ್ತು ಯುಜಿಸಿ ಸಹಭಾಗಿತ್ವದಲ್ಲಿ ನಡೆಯುವ ನೆಟ್, ಜೆಆರ್‌ಎಫ್ ಪರೀಕ್ಷೆ ವೇಳೆ ಪೀಣ್ಯದ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾರ್ಥಿಗಳಿಂದ ಸಿಬ್ಬಂದಿಗಳು ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ವೇಳೆ ಸಿಬ್ಬಂದಿ ಹಾಗೂ ಪರೀಕ್ಷಾರ್ಥಿಗಳ ನಡುವೆ ಕೆಲಕಾಲ ವಾಗ್ವಾದ ನಡೆದಿದೆ.

ಬುಧವಾರ ನಗರದ ಪೀಣ್ಯ 1ನೇ ಹಂತದಲ್ಲಿರುವ ಬಿಟ್‌ಬೈಟೆಕ್ ಸೊಲ್ಯೂಷನ್‌ನಲ್ಲಿ ಸಿಬ್ಬಂದಿಯು ಪರೀಕ್ಷಾರ್ಥಿಗಳಿಂದ ಮೊಬೈಲ್ ಡಿಪಾಸಿಟ್‌ಗೆ ಹಣ ವಸೂಲಿ ಮಾಡಲು ಮುಂದಾಗಿದ್ದಾರೆ. ಈ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದ 150ಕ್ಕೂ ಹೆಚ್ಚು ಅಭ್ಯರ್ಥಿಗಳ ಪೈಕಿ ಬಹುತೇಕರು ಮೊಬೈಲ್, ಬ್ಯಾಗ್‌ಗಳನ್ನು ತಂದಿದ್ದರು. ಪರೀಕ್ಷೆ ಆರಂಭವಾಗುವುದಕ್ಕಿಂತ ಮೊದಲು ಎಲ್ಲ ಅಭ್ಯರ್ಥಿಗಳು ಮೊಬೈಲ್‌ಗಳನ್ನು ಪರೀಕ್ಷಾ ಸಿಬ್ಬಂದಿ ಬಳಿ ಡೆಪಾಸಿಟ್ ಮಾಡಿದ್ದರು. ಪರೀಕ್ಷೆ ಮುಗಿದ ನಂತರ ಆ ಮೊಬೈಲ್‌ಗಳನ್ನು ವಾಪಸ್ ಕೊಡಬೇಕಾದರೆ ಪ್ರತಿಯೊಬ್ಬರೂ 20 ರುಪಾಯಿ ಕೊಡಬೇಕೆಂದು ಪರೀಕ್ಷಾ ಸಿಬ್ಬಂದಿ ಹೇಳಿದ್ದರು. ಇದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ‘ನಾವೇಕೆ ದುಡ್ಡು ಕೊಡಬೇಕು? ನಮ್ಮ ಬಳಿ ದುಡ್ಡು ಇಲ್ಲ’ ಎಂದು ಹೇಳಿದ್ದಾರೆ. ಆಗ ಪರೀಕ್ಷಾ ಸಿಬ್ಬಂದಿ ‘ದುಡ್ಡು ಕೊಡುವವರೆಗೂ ನಿಮ್ಮ ಮೊಬೈಲ್‌ಗಳನ್ನು ವಾಪಸ್ ಕೊಡುವುದಿಲ್ಲ’ ಎಂದು ಹೇಳಿದ್ದಾರೆ.

ಸಿಬ್ಬಂದಿಯ ಈ ನಡೆಯಿಂದ ಕೆರಳಿದ ಪರೀಕ್ಷಾರ್ಥಿಗಳು, ತಂದಿರುವ ಬ್ಯಾಗ್ ಮತ್ತು ಮೊಬೈಲ್‌ಗಳನ್ನು ಎಲ್ಲಿ ಇಡಬೇಕು? ಎಂದು ಪ್ರಶ್ನಿಸಿದ್ದಾರೆ. ಆಗ ಸಿಬ್ಬಂದಿಗಳು, ದುಡ್ಡು ಕೊಟ್ಟರೆ ನಾವು ಇಟ್ಟುಕೊಳ್ಳುತ್ತೇವೆ, ಇಲ್ಲವಾದರೆ ಹೊರಗೆ ಇಡಿ ಎಂದು ಹೇಳಿದ್ದಾರೆ. ಇದರಿಂದ ಅಸಮಾಧಾನಗೊಂಡ ಪರೀಕ್ಷಾರ್ಥಿಗಳು ಪರೀಕ್ಷೆ ಕೇಂದ್ರದಲ್ಲಿ ಮೊಬೈಲ್ ಡೆಪಾಸಿಟ್‌ಗೂ ಹಣ ಪಡೆದದ್ದು ಇದೆ ಮೊದಲು ಎಂದು ಎನ್‌ಟಿ‌ಎಗೆ ಹಿಡಿಶಾಪ ಹಾಕಿದರು.

ಈ ಬಗ್ಗೆ ಪರೀಕ್ಷಾರ್ಥಿಯಾಗಿರುವ ಅನಿಲ್ ಕುಮಾರ್ ಮಾತನಾಡಿ, ”ಪರೀಕ್ಷಾ ನೋಂದಣಿ ಶುಲ್ಕವಾಗಿ ನಾವು 1000 ರೂ. ಪಾವತಿಸಿರುತ್ತೇವೆ. ಆದರೂ ಪರೀಕ್ಷಾ ಕೇಂದ್ರದಲ್ಲಿ 20 ರೂಪಾಯಿ ಮೊಬೈಲ್ ಡೆಪಾಸಿಟ್‌ಗೆ ಪಡೆದರು. ಈ ಹಿಂದೆಯೂ ಸಹ ನಾವು ನೆಟ್ ಪರೀಕ್ಷೆ ಮತ್ತು ಹಲವು ಸರ್ಕಾರಿ ಪರೀಕ್ಷೆಗಳನ್ನು ಬರೆದಿದ್ದೇವೆ, ಆದರೆ ಅಲ್ಲೆಲ್ಲೂ ಮೊಬೈಲ್ ಡಿಪಾಸಿಟ್‌ಗೆ ಹಣ ಪಡೆದಿರಲಿಲ್ಲ. ಈ ಬಗ್ಗೆ UGC ಕೂಡಲೇ ಗಮನ ಹರಿಸಬೇಕು” ಎಂದು ಹೇಳಿದರು.

ಮತ್ತೋರ್ವ ಪರೀಕ್ಷಾರ್ಥಿಯಾಗಿರುವ ಮುನಿಸ್ವಾಮಿ ಮಾತನಾಡಿ, ”ಮೊಬೈಲ್ ಡೆಪಾಸಿಟ್‌ಗೆ ಹಣ ವಸೂಲಿ ಮಾಡುತ್ತಿರುವುದು ಇದೇ ಮೊದಲ ಎನಿಸುತ್ತದೆ. ಈ ಪರೀಕ್ಷಾ ಕೇಂದ್ರದಲ್ಲಿ ಸರಿಯಾದ ಸೌಲಭ್ಯಗಳೂ ಇಲ್ಲ, ಆದರೂ ಹೆಚ್ಚಿನ ಹಣ ವಸೂಲಿಗೆ ಮುಂದಾಗಿದೆ. ಈ ಕೇಂದ್ರದಲ್ಲಿ 150 ಜನರಿಗೆ ಒಂದೇ ಶೌಚಾಲಯವಿದೆ. ಅಭ್ಯರ್ಥಿಗಳು ಪರೀಕ್ಷೆಯ ಅರ್ಧ ಸಮಯವನ್ನು ಶೌಚಾಲಯದ ಬಾಗಿಲಲ್ಲೇ ಕಳೆಯುವಂತಾಯಿತು. ಸೂಕ್ತ ಸೌಲಭ್ಯಗಳಿರುವ ಕೇಂದ್ರಗಳನ್ನು ಎನ್‌ಟಿ‌ಎ ಆಯ್ಕೆ ಮಾಡಬೇಕು. ಇಲ್ಲವಾದರೆ ಅಭ್ಯರ್ಥಿಗಳಿಗೆ ವಿನಾಕಾರಣ ತೊಂದರೆಯಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ವಿದ್ಯುತ್ ದರ ಏರಿಕೆ: ಇಂದು ಕರ್ನಾಟಕ ಬಂದ್‌ಗೆ ವ್ಯಾಪಾರ, ಉದ್ಯಮ ಸಂಸ್ಥೆಗಳಿಂದ ಕರೆ; ಸಿಪಿಎಂ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...