Homeಮುಖಪುಟಔಷಧಿ ಪೂರೈಕೆಗೆ ತಡೆ, ಸಾಂಕ್ರಾಮಿಕ ಕಾಯ್ದೆ ಉಲ್ಲಂಘನೆ ಆರೋಪ: ಹೋರಾಟನಿರತ ರೈತರ ಮೇಲೆ ಸುಪ್ರೀಂನಲ್ಲಿ PIL

ಔಷಧಿ ಪೂರೈಕೆಗೆ ತಡೆ, ಸಾಂಕ್ರಾಮಿಕ ಕಾಯ್ದೆ ಉಲ್ಲಂಘನೆ ಆರೋಪ: ಹೋರಾಟನಿರತ ರೈತರ ಮೇಲೆ ಸುಪ್ರೀಂನಲ್ಲಿ PIL

ಬಿಹಾರ ಚುನಾವಣೆ ನಡೆದಾಗಿ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಗೆ ಲಕ್ಷಾಂತರ ಜನ ಸೇರಿದ್ದರು, ಆಗ ಎಲ್ಲಿ ಹೋಗಿತ್ತು ನಿಮ್ಮ ಈ ಸಾಂಕ್ರಾಮಿಕ ಕಾಯ್ದೆ ಎಂದು ರೈತರು ಕಿಡಿಕಾರಿದ್ದಾರೆ.

- Advertisement -
- Advertisement -

ಲಾಠೀ ಏಟು, ಜಲಫಿರಂಗಿ ಮತ್ತು ಅಶ್ರವಾಯುಗಳನ್ನು ಸಿಡಿಸಿ ರೈತರನ್ನು ಬಗ್ಗುಬಡಿಯಲು ಯತ್ನಿಸಿದ ಸರ್ಕಾರ ಕಳೆದ ಮೂರು ದಿನಗಳಿಂದ ಅವರೊಂದಿಗೆ ಮಾತುಕತೆ ನಡೆಸಲು ಮುಂದಾಗಿತ್ತು. ಆದರೆ ರೈತರು ಕೇಂದ್ರದ ವಾದಗಳನ್ನು ಒಪ್ಪದೆ, 3 ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಪಟ್ಟು ಹಿಡಿದು ಹೋರಾಟ ಮುಂದುವರೆಸಿದಾಗ ಅವರ ಮೇಲೆ ಸಾಂಕ್ರಾಮಿಕ ಕಾಯ್ದೆ ಉಲ್ಲಂಘನೆಯ ಆರೋಪಗಳನ್ನು ಹೊರಿಸಿದೆ. ದೆಹಲಿ ಪೊಲೀಸರು ಈ ಕುರಿತು ರೈತ ಹೋರಾಟಗಾರರಿಗೆ ನೋಟಿಸ್ ನೀಡಿದ್ದಾರೆ.

ಇದೇ ಸಂದರ್ಭದಲ್ಲಿ ರೈತರು ದೆಹಲಿ ತಲುಪುವು ಎಲ್ಲಾ ರಸ್ತೆಗಳನ್ನು ಬಂದ್ ಮಾಡಿರುವುದರಿಂದ ಔಷಧಿ ಪೂರೈಕೆಗೆ ತಡೆಯಾಗಿದೆ. ಹಾಗಾಗಿ ದೆಹಲಿ ಗಡಿಗಳಲ್ಲಿ ಹೋರಾಟ ನಿರತರನ್ನು ರೈತರನ್ನು ಎಲ್ಲಿಂದ ಹೊರಗೆ ಕಳಿಸಬೇಕೆಂದು ಇಂದು ಸುಪ್ರೀಂನಲ್ಲಿ ಪಿಐಎಲ್‌ ಒಂದು ದಾಖಲಾಗಿದೆ.

ಸಾಂಕ್ರಾಮಿಕ ರೋಗ ಕಾಯ್ದೆ ಉಲ್ಲಂಘಿಸಿದ ನೆಪವೊಡ್ಡಿ ಪ್ರತಿಭಟನಾ ನಿರತ ರೈತ ನಾಯಕರಿಗೆ ಪೊಲೀಸ್ ನೋಟಿಸ್‌ ನೀಡಿದ ಸರ್ಕಾರದ ಕ್ರಮವನ್ನು ಎಐಕೆಎಸ್‌ಸಿಸಿ ಖಂಡಿಸಿದೆ. ಬಿಹಾರದಲ್ಲಿ ಚುನಾವಣೆ ನಡೆದಾಗಿ ಪ್ರಧಾನಿ ನರೇಂದ್ರ ಮೋದಿಯವರ ಸಾರ್ವಜನಿಕ ಸಭೆಗೆ ಲಕ್ಷಾಂತರ ಜನ ಸೇರಿದ್ದರು. ಪ್ರಧಾನಿ ಕ್ಷೇತ್ರ ವಾರಣಾಸಿಯಲ್ಲಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಲಕ್ಷಾಂತರ ಜನ ಸೇರಿ ದೀಪೋತ್ಸವ ಆಚರಿಸಿದರು, ಆಗ ಎಲ್ಲಿ ಹೋಗಿತ್ತು ನಿಮ್ಮ ಈ ಕಾಯ್ದೆ ಎಂದು ರೈತ ಮುಖಂಡರು ಕಿಡಿಕಾರಿದ್ದಾರೆ.

ಎಂಎಸ್‌ಪಿ ಕೊಡುತ್ತೇವೆ ಎಂಬ ಸರ್ಕಾರದ ಮಾತನ್ನು ನಾವು ನಂಬುವುದಿಲ್ಲ. ಸ್ವಾಮಿನಾಥನ್ ಆಯೋಗದ ವರದಿಯಂತೆ ರೈತ ಬೆಳೆದ ಬೆಳಗೆ ಖರ್ಚು ಸೇರಿ ಒಂದೂವರೆ ಪಟ್ಟು ಬೆಲೆ ನಿಗದಿ ಮಾಡಬೇಕು. ಇದಕ್ಕಾಗಿ ಕಾನೂನು ತರಬೇಕೆಂದು ಆಗ್ರಹಿಸಿದ್ದಾರೆ. ಅದೇ ಸಮಯದಲ್ಲಿ ನೀತಿ ಆಯೋಗವು ಕಾರ್ಪೊರೇಟ್‌ಗಳ ಪರವಾಗಿ ಬ್ಯಾಟಿಂಗ್ ಮಾಡುತ್ತಾ ಕೃಷಿ ಕಾಯ್ದೆಗಳನ್ನು ಸಮರ್ಥಿಸುವುದನ್ನು ಎಐಕೆಎಸ್‌ಸಿಸಿ ಖಂಡಿಸಿದೆ.


ಇದನ್ನೂ ಓದಿ: ಪಂಜಾಬಿನ ಪುಟ್ಟ ಮಕ್ಕಳಿಗೂ ಗೊತ್ತು ಈ ರೈತ ವಿರೋಧಿ ನೀತಿಗಳ ಪರಿಣಾಮ ಏನೆಂದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...