Homeಮುಖಪುಟಪಾಕ್ ಯುವತಿಯ ಹನಿಟ್ರ್ಯಾಪ್‌ಗೆ ಸಿಲುಕಿದ್ದ DRDO ವಿಜ್ಞಾನಿ ಕುರೂಲ್ಕರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಪಾಕ್ ಯುವತಿಯ ಹನಿಟ್ರ್ಯಾಪ್‌ಗೆ ಸಿಲುಕಿದ್ದ DRDO ವಿಜ್ಞಾನಿ ಕುರೂಲ್ಕರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

- Advertisement -
- Advertisement -

ಪಾಕಿಸ್ತಾನದ ಗುಪ್ತಚರ ವಿಭಾಗದ ಪರ ಕೆಲಸ ಮಾಡುತ್ತಿದ್ದ ಯುವತಿಯ ಜೊತೆಗೆ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರೂಲ್ಕರ್ ಅವರು ಭಾರತದ ಕ್ಷಿಪಣಿ ಯೋಜನೆ ಕುರಿತಂತೆ ವಿವಿಧ ವರ್ಗೀಕೃತ ರಕ್ಷಣಾ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು ಎಂದು ದೆಹಲಿ ಪೊಲೀಸರು ಆರೋಪಪಟ್ಟಿಯಲ್ಲಿ ಸಲ್ಲಿಸಿದ್ದಾರೆ ಎಂದು ಶನಿವಾರ ಪಿಟಿಐ ವರದಿ ಮಾಡಿದೆ.

ಜರಾ ದಾಸ್‌ಗುಪ್ತಾ ಎಂಬ ಹೆಸರಿನಲ್ಲಿ ಪ್ರದೀಪ್ ಕುರೂಲ್ಕರ್ ಜತೆ ಚಾಟಿಂಗ್ ನಡೆಸುತ್ತಿದ್ದ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಯ ಯುವತಿ, ಅವರಿಂದ ಅನೇಕ ರಹಸ್ಯ ವಿಚಾರಗಳನ್ನು ಪಡೆದುಕೊಂಡಿದ್ದಳು ಎನ್ನಲಾಗಿದೆ.

ಪುಣೆಯಲ್ಲಿನ ಡಿಆರ್‌ಡಿಒ ಪ್ರಯೋಗಾಲಯಗಳ ಪೈಕಿ ಒಂದರ ನಿರ್ದೇಶಕರಾಗಿದ್ದ ಕುರೂಲ್ಕರ್ ವಿರುದ್ಧ ಕಳೆದ ವಾರ ನ್ಯಾಯಾಲಯದಲ್ಲಿ ಮಹಾರಾಷ್ಟ್ರ ಪೊಲೀಸ್ ಇಲಾಖೆಯ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆರೋಪಪಟ್ಟಿ ಸಲ್ಲಿಸಿದೆ.

ಮೇ 3 ರಂದು, ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳವು ಶಂಕಿತ ಹನಿ ಟ್ರ್ಯಾಪಿಂಗ್ ಪ್ರಕರಣದಲ್ಲಿ ಬೇಹುಗಾರಿಕೆ ಮತ್ತು ಅಕ್ರಮ ಸಂವಹನಕ್ಕೆ ಸಂಬಂಧಿಸಿದ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಕುರುಲ್ಕರ್ ಅವರನ್ನು ಬಂಧಿಸಿತ್ತು.

ಕುರುಲ್ಕರ್ ಅವರು ಪರಮಾಣು ಸಾಮರ್ಥ್ಯದ ಅಗ್ನಿ ಕ್ಷಿಪಣಿ ಮತ್ತು ಮಿಷನ್ ಶಕ್ತಿ, ಉಪಗ್ರಹ ವಿರೋಧಿ ಕ್ಷಿಪಣಿ ಪರೀಕ್ಷೆ ಸೇರಿದಂತೆ ಹಲವಾರು ಕಾರ್ಯತಂತ್ರದ ಮಹತ್ವದ DRDO ಯೋಜನೆಗಳ ಪ್ರಮುಖ ಸದಸ್ಯರಾಗಿದ್ದರು. ಪ್ರಸ್ತುತ ಪುಣೆಯ ಯರವಾಡ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರದೀಪ್ ಕುರೂಲ್ಕರ್ ಮತ್ತು ‘ಜರಾ ದಾಸ್‌ಗುಪ್ತಾ’ ಇಬ್ಬರೂ ವಾಟ್ಸಾಪ್, ವಾಯ್ಸ್ ಮತ್ತು ವಿಡಿಯೋ ಕಾಲ್‌ಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದರು ಎಂದು ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಬ್ರಿಟನ್‌ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಎಂದು ಗುರುತಿಸಿಕೊಂಡಿದ್ದ ಜರಾ, ಕುರೂಲ್ಕರ್ ಅವರಿಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋಗಳನ್ನು ಕಳುಹಿಸುವ ಮೂಲಕ ಅವರ ಗೆಳೆತನ ಸಂಪಾದಿಸಿದ್ದಳು. ತನಿಖೆ ವೇಳೆ ಆಕೆಯ ಐಪಿ ವಿಳಾಸ ಪಾಕಿಸ್ತಾನದಲ್ಲಿ ಪತ್ತೆಯಾಗಿತ್ತು ಎಂದು ಎಟಿಎಸ್ ಹೇಳಿದೆ.

ಬ್ರಹ್ಮೋಸ್ ಲಾಂಚರ್, ಡ್ರೋನ್, ಯುಸಿವಿ, ಅಗ್ನಿ ಕ್ಷಿಪಣಿ ಲಾಂಚರ್ ಮತ್ತು ಮಿಲಿಟರಿ ಬ್ರಿಡ್ಜಿಂಗ್ ವ್ಯವಸ್ಥೆ ಸೇರಿದಂತೆ ಅನೇಕ ವರ್ಗೀಕೃತ ಮತ್ತು ಸೂಕ್ಷ್ಮ ಮಾಹಿತಿಗಳನ್ನು ಕರೂಲ್ಕರ್ ಅವರಿಂದ ಪಡೆದುಕೊಳ್ಳಲು ಪಾಕಿಸ್ತಾನದ ಏಜೆಂಟ್ ಪ್ರಯತ್ನಿಸಿದ್ದಳು.

ಇಲ್ಲಿಯವರೆಗೆ, ಪೊಲೀಸರು ಡಿಆರ್‌ಡಿಒ ಅಧಿಕಾರಿಗಳು ಮತ್ತು ಭಾರತೀಯ ವಾಯುಪಡೆಯ ಅಧಿಕಾರಿ ಸೇರಿದಂತೆ 203 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿದ್ದಾರೆ, ಅವರನ್ನು ಪಾಕಿಸ್ತಾನಿ ಆಪರೇಟಿವ್ ಸಂಪರ್ಕಿಸಿದ್ದಾರೆ ಎಂದು ಹೇಳಲಾಗಿದೆ.

”ಕರೂಲ್ಕರ್ ಅವರು ಜರಾ ದಾಸ್‌ಗುಪ್ತ ಎಂಬ ನಕಲಿ ಹೆಸರಿನಿಂದ ಪರಿಚಿತಳಾದ ಯುವತಿ ಕಡೆ ಆಕರ್ಷಿತಳಾಗಿದ್ದಳು. ಡಿಆರ್‌ಡಿಒದ ವರ್ಗೀಕೃತ ಮತ್ತು ಗೋಪ್ಯ ಮಾಹಿತಿಗಳ ದತ್ತಾಂಶಗಳನ್ನು ತಮ್ಮ ವೈಯಕ್ತಿಕ ಫೋನ್‌ನಲ್ಲಿ ಇರಿಸಿಕೊಂಡಿದ್ದ ಅವರು, ಅದನ್ನು ಆಕೆ ಜತೆ ಹಂಚಿಕೊಂಡಿದ್ದರು” ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

“ಆಕೆಯಿಂದ ಆಕರ್ಷಿತರಾದ ಕುರುಲ್ಕರ್, ಡಿಆರ್‌ಡಿಒದ ವರ್ಗೀಕೃತ ಮತ್ತು ಸೂಕ್ಷ್ಮ ಮಾಹಿತಿಯನ್ನು ತನ್ನ ವೈಯಕ್ತಿಕ ಫೋನ್‌ನಲ್ಲಿ ಸಂಗ್ರಹಿಸಿದರು ಮತ್ತು ನಂತರ ಅದನ್ನು ಜಾರಾ ಅವರೊಂದಿಗೆ ಹಂಚಿಕೊಂಡಿದ್ದಾರೆ” ಎಂದು ಆರೋಪಪಟ್ಟಿ ಆರೋಪಿಸಿದೆ.

ಇಬ್ಬರು ಇಮೇಲ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಸಂಪರ್ಕದಲ್ಲಿದ್ದರು ಮತ್ತು ಮಹಿಳೆ ಸೂಚಿಸಿದ “bingechat.net” ಮತ್ತು “cloudchat.net” ಎಂಬ ಎರಡು ಅಪ್ಲಿಕೇಶನ್‌ಗಳ ಮೂಲಕ ವೀಡಿಯೊ ಕರೆಗಳ ಮೂಲಕವೂ ಸಂಪರ್ಕದಲ್ಲಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆ್ಯಪ್ ಅನ್ನು ಬಳಸುವುದರಿಂದ, ಆರೋಪಿಯ ಮೊಬೈಲ್ ಫೋನ್‌ನಲ್ಲಿ ಮಾಲ್‌ವೇರ್ ಅನ್ನು ಸೇರಿಸುವ ಸಾಧ್ಯತೆಯಿದೆ” ಎಂದು ಆರೋಪಪಟ್ಟಿ ಹೇಳಿದೆ. ಕುರುಲ್ಕರ್ ಅವರ ಫೋನ್‌ನ ಫೋರೆನ್ಸಿಕ್ ವಿಶ್ಲೇಷಣೆಯಲ್ಲಿ, ಡಿಆರ್‌ಡಿಒ ಮಾಲ್‌ವೇರ್ ಅನ್ನು ಕಂಡುಹಿಡಿದಿದೆ, ನಂತರ ಅದನ್ನು ಭಯೋತ್ಪಾದನಾ ನಿಗ್ರಹ ದಳಕ್ಕೆ ವರದಿ ಮಾಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕುರುಲ್ಕರ್ ಅವರು ಮಿಲಿಟರಿಗಾಗಿ ರೊಬೊಟಿಕ್ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಭಾರತೀಯ ಸೇನೆಯಲ್ಲಿ ಕೆಲಸ ಮಾಡುವ ಖಾಸಗಿ ಮಾರಾಟಗಾರರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಹೆಸರುಗಳು ಮತ್ತು ಇತರ ವಿವರಗಳನ್ನು ಹಂಚಿಕೊಂಡಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

”ಶತ್ರು ರಾಷ್ಟ್ರವು ಸಿಇಒ ಅವರ ಕಾರ್ಯಸ್ಥಳ ಮತ್ತು ಕೆಲಸದ ಸ್ವರೂಪ ಮತ್ತು ಸಶಸ್ತ್ರ ಪಡೆಗಳಿಗಾಗಿ ಅವರು ತಯಾರಿಸಿದ ಉಪಕರಣಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಮತ್ತು ನಿರ್ದಿಷ್ಟ ಮಾಹಿತಿಯನ್ನು ಹುಡುಕಬಹುದು ಎಂದು ತಿಳಿದಿದ್ದರೂ, ಕುರುಲ್ಕರ್ ಅವರು ಕಾರ್ಯಾಚರಣೆಯ ರಚನೆಯನ್ನು ಹಂಚಿಕೊಂಡಿದ್ದಾರೆ” ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

ಮೇಲ್ಮೈನಿಂದ ಮೇಲ್ಮೈಗೆ ಹಾರುವ ವಾಯು ಕ್ಷಿಪಣಿಗಳು (ಎಸ್‌ಎಎಂ), ಡ್ರೋನ್‌ಗಳು, ಬ್ರಹ್ಮೋಸ್ ಮತ್ತು ಅಗ್ನಿ ಕ್ಷಿಪಣಿ ಲಾಂಚರ್‌ಗಳು ಮತ್ತು ಯುಸಿವಿ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಕುರೂಲ್ಕರ್ ಅವರು ಆಕೆ ಜತೆ ಮಾತನಾಡಿದ್ದರು. ಅವರಿಬ್ಬರೂ ಜೂನ್ 2022ರಿಂದ ಡಿಸೆಂಬರ್ 2022ರವರೆಗೂ ಸಂಪರ್ಕದಲ್ಲಿದ್ದರು ಎಂದು ಎಟಿಎಸ್ ಮಾಹಿತಿ ನೀಡಿದೆ.

ಪ್ರದೀಪ್ ಕುರೂಲ್ಕರ್ ಅವರ ಚಟುವಟಿಕೆಗಳು ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಡಿಆರ್‌ಡಿಒ ತನಿಖೆ ಆರಂಭಿಸಿತ್ತು. ಅದಕ್ಕೂ ಮುನ್ನ 2023ರ ಫೆಬ್ರವರಿಯಲ್ಲಿ ಜರಾಳ ನಂಬರ್ ಅನ್ನು ಕುರೂಲ್ಕರ್ ಬ್ಲಾಕ್ ಮಾಡಿದ್ದರು. ಇದಾಗಿ ಸ್ವಲ್ಪ ಸಮಯದಲ್ಲಿಯೇ ಅಪರಿಚಿತ ಭಾರತೀಯ ಸಂಖ್ಯೆಯಿಂದ ಅವರಿಗೆ ವಾಟ್ಸಾಪ್ ಸಂದೇಶ ಬಂದಿತ್ತು. ‘ನನ್ನ ನಂಬರ್ ಏಕೆ ಬ್ಲಾಕ್ ಮಾಡಿದ್ದೀರಿ?’ ಎಂದು ಅದರಲ್ಲಿ ಪ್ರಶ್ನಿಸಲಾಗಿತ್ತು. ವಿಜ್ಞಾನಿಗಳು ಯಾರ ಜತೆಗೂ ತಮ್ಮ ವೈಯಕ್ತಿಕ ಹಾಗೂ ಅಧಿಕೃತ ಕಾರ್ಯಕ್ರಮಗಳು ಮತ್ತು ಸ್ಥಳಗಳ ಮಾಹಿತಿಗಳನ್ನು ಹಂಚಿಕೊಳ್ಳಬಾರದು ಎಂಬುದು ತಿಳಿದಿದ್ದರೂ ಆಕೆಗೆ ಅವುಗಳನ್ನು ರವಾನಿಸಿದ್ದರು.

ಇದನ್ನೂ ಓದಿ: ಪಾಕಿಸ್ತಾನದ ಗೂಢಚಾರಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್ ವ್ಯಕ್ತಿ: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...