Homeಮುಖಪುಟಪಾಕ್ ಯುವತಿಯ ಹನಿಟ್ರ್ಯಾಪ್‌ಗೆ ಸಿಲುಕಿದ್ದ DRDO ವಿಜ್ಞಾನಿ ಕುರೂಲ್ಕರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಪಾಕ್ ಯುವತಿಯ ಹನಿಟ್ರ್ಯಾಪ್‌ಗೆ ಸಿಲುಕಿದ್ದ DRDO ವಿಜ್ಞಾನಿ ಕುರೂಲ್ಕರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

- Advertisement -
- Advertisement -

ಪಾಕಿಸ್ತಾನದ ಗುಪ್ತಚರ ವಿಭಾಗದ ಪರ ಕೆಲಸ ಮಾಡುತ್ತಿದ್ದ ಯುವತಿಯ ಜೊತೆಗೆ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರೂಲ್ಕರ್ ಅವರು ಭಾರತದ ಕ್ಷಿಪಣಿ ಯೋಜನೆ ಕುರಿತಂತೆ ವಿವಿಧ ವರ್ಗೀಕೃತ ರಕ್ಷಣಾ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು ಎಂದು ದೆಹಲಿ ಪೊಲೀಸರು ಆರೋಪಪಟ್ಟಿಯಲ್ಲಿ ಸಲ್ಲಿಸಿದ್ದಾರೆ ಎಂದು ಶನಿವಾರ ಪಿಟಿಐ ವರದಿ ಮಾಡಿದೆ.

ಜರಾ ದಾಸ್‌ಗುಪ್ತಾ ಎಂಬ ಹೆಸರಿನಲ್ಲಿ ಪ್ರದೀಪ್ ಕುರೂಲ್ಕರ್ ಜತೆ ಚಾಟಿಂಗ್ ನಡೆಸುತ್ತಿದ್ದ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಯ ಯುವತಿ, ಅವರಿಂದ ಅನೇಕ ರಹಸ್ಯ ವಿಚಾರಗಳನ್ನು ಪಡೆದುಕೊಂಡಿದ್ದಳು ಎನ್ನಲಾಗಿದೆ.

ಪುಣೆಯಲ್ಲಿನ ಡಿಆರ್‌ಡಿಒ ಪ್ರಯೋಗಾಲಯಗಳ ಪೈಕಿ ಒಂದರ ನಿರ್ದೇಶಕರಾಗಿದ್ದ ಕುರೂಲ್ಕರ್ ವಿರುದ್ಧ ಕಳೆದ ವಾರ ನ್ಯಾಯಾಲಯದಲ್ಲಿ ಮಹಾರಾಷ್ಟ್ರ ಪೊಲೀಸ್ ಇಲಾಖೆಯ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆರೋಪಪಟ್ಟಿ ಸಲ್ಲಿಸಿದೆ.

ಮೇ 3 ರಂದು, ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳವು ಶಂಕಿತ ಹನಿ ಟ್ರ್ಯಾಪಿಂಗ್ ಪ್ರಕರಣದಲ್ಲಿ ಬೇಹುಗಾರಿಕೆ ಮತ್ತು ಅಕ್ರಮ ಸಂವಹನಕ್ಕೆ ಸಂಬಂಧಿಸಿದ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಕುರುಲ್ಕರ್ ಅವರನ್ನು ಬಂಧಿಸಿತ್ತು.

ಕುರುಲ್ಕರ್ ಅವರು ಪರಮಾಣು ಸಾಮರ್ಥ್ಯದ ಅಗ್ನಿ ಕ್ಷಿಪಣಿ ಮತ್ತು ಮಿಷನ್ ಶಕ್ತಿ, ಉಪಗ್ರಹ ವಿರೋಧಿ ಕ್ಷಿಪಣಿ ಪರೀಕ್ಷೆ ಸೇರಿದಂತೆ ಹಲವಾರು ಕಾರ್ಯತಂತ್ರದ ಮಹತ್ವದ DRDO ಯೋಜನೆಗಳ ಪ್ರಮುಖ ಸದಸ್ಯರಾಗಿದ್ದರು. ಪ್ರಸ್ತುತ ಪುಣೆಯ ಯರವಾಡ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರದೀಪ್ ಕುರೂಲ್ಕರ್ ಮತ್ತು ‘ಜರಾ ದಾಸ್‌ಗುಪ್ತಾ’ ಇಬ್ಬರೂ ವಾಟ್ಸಾಪ್, ವಾಯ್ಸ್ ಮತ್ತು ವಿಡಿಯೋ ಕಾಲ್‌ಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದರು ಎಂದು ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಬ್ರಿಟನ್‌ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಎಂದು ಗುರುತಿಸಿಕೊಂಡಿದ್ದ ಜರಾ, ಕುರೂಲ್ಕರ್ ಅವರಿಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋಗಳನ್ನು ಕಳುಹಿಸುವ ಮೂಲಕ ಅವರ ಗೆಳೆತನ ಸಂಪಾದಿಸಿದ್ದಳು. ತನಿಖೆ ವೇಳೆ ಆಕೆಯ ಐಪಿ ವಿಳಾಸ ಪಾಕಿಸ್ತಾನದಲ್ಲಿ ಪತ್ತೆಯಾಗಿತ್ತು ಎಂದು ಎಟಿಎಸ್ ಹೇಳಿದೆ.

ಬ್ರಹ್ಮೋಸ್ ಲಾಂಚರ್, ಡ್ರೋನ್, ಯುಸಿವಿ, ಅಗ್ನಿ ಕ್ಷಿಪಣಿ ಲಾಂಚರ್ ಮತ್ತು ಮಿಲಿಟರಿ ಬ್ರಿಡ್ಜಿಂಗ್ ವ್ಯವಸ್ಥೆ ಸೇರಿದಂತೆ ಅನೇಕ ವರ್ಗೀಕೃತ ಮತ್ತು ಸೂಕ್ಷ್ಮ ಮಾಹಿತಿಗಳನ್ನು ಕರೂಲ್ಕರ್ ಅವರಿಂದ ಪಡೆದುಕೊಳ್ಳಲು ಪಾಕಿಸ್ತಾನದ ಏಜೆಂಟ್ ಪ್ರಯತ್ನಿಸಿದ್ದಳು.

ಇಲ್ಲಿಯವರೆಗೆ, ಪೊಲೀಸರು ಡಿಆರ್‌ಡಿಒ ಅಧಿಕಾರಿಗಳು ಮತ್ತು ಭಾರತೀಯ ವಾಯುಪಡೆಯ ಅಧಿಕಾರಿ ಸೇರಿದಂತೆ 203 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿದ್ದಾರೆ, ಅವರನ್ನು ಪಾಕಿಸ್ತಾನಿ ಆಪರೇಟಿವ್ ಸಂಪರ್ಕಿಸಿದ್ದಾರೆ ಎಂದು ಹೇಳಲಾಗಿದೆ.

”ಕರೂಲ್ಕರ್ ಅವರು ಜರಾ ದಾಸ್‌ಗುಪ್ತ ಎಂಬ ನಕಲಿ ಹೆಸರಿನಿಂದ ಪರಿಚಿತಳಾದ ಯುವತಿ ಕಡೆ ಆಕರ್ಷಿತಳಾಗಿದ್ದಳು. ಡಿಆರ್‌ಡಿಒದ ವರ್ಗೀಕೃತ ಮತ್ತು ಗೋಪ್ಯ ಮಾಹಿತಿಗಳ ದತ್ತಾಂಶಗಳನ್ನು ತಮ್ಮ ವೈಯಕ್ತಿಕ ಫೋನ್‌ನಲ್ಲಿ ಇರಿಸಿಕೊಂಡಿದ್ದ ಅವರು, ಅದನ್ನು ಆಕೆ ಜತೆ ಹಂಚಿಕೊಂಡಿದ್ದರು” ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

“ಆಕೆಯಿಂದ ಆಕರ್ಷಿತರಾದ ಕುರುಲ್ಕರ್, ಡಿಆರ್‌ಡಿಒದ ವರ್ಗೀಕೃತ ಮತ್ತು ಸೂಕ್ಷ್ಮ ಮಾಹಿತಿಯನ್ನು ತನ್ನ ವೈಯಕ್ತಿಕ ಫೋನ್‌ನಲ್ಲಿ ಸಂಗ್ರಹಿಸಿದರು ಮತ್ತು ನಂತರ ಅದನ್ನು ಜಾರಾ ಅವರೊಂದಿಗೆ ಹಂಚಿಕೊಂಡಿದ್ದಾರೆ” ಎಂದು ಆರೋಪಪಟ್ಟಿ ಆರೋಪಿಸಿದೆ.

ಇಬ್ಬರು ಇಮೇಲ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಸಂಪರ್ಕದಲ್ಲಿದ್ದರು ಮತ್ತು ಮಹಿಳೆ ಸೂಚಿಸಿದ “bingechat.net” ಮತ್ತು “cloudchat.net” ಎಂಬ ಎರಡು ಅಪ್ಲಿಕೇಶನ್‌ಗಳ ಮೂಲಕ ವೀಡಿಯೊ ಕರೆಗಳ ಮೂಲಕವೂ ಸಂಪರ್ಕದಲ್ಲಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆ್ಯಪ್ ಅನ್ನು ಬಳಸುವುದರಿಂದ, ಆರೋಪಿಯ ಮೊಬೈಲ್ ಫೋನ್‌ನಲ್ಲಿ ಮಾಲ್‌ವೇರ್ ಅನ್ನು ಸೇರಿಸುವ ಸಾಧ್ಯತೆಯಿದೆ” ಎಂದು ಆರೋಪಪಟ್ಟಿ ಹೇಳಿದೆ. ಕುರುಲ್ಕರ್ ಅವರ ಫೋನ್‌ನ ಫೋರೆನ್ಸಿಕ್ ವಿಶ್ಲೇಷಣೆಯಲ್ಲಿ, ಡಿಆರ್‌ಡಿಒ ಮಾಲ್‌ವೇರ್ ಅನ್ನು ಕಂಡುಹಿಡಿದಿದೆ, ನಂತರ ಅದನ್ನು ಭಯೋತ್ಪಾದನಾ ನಿಗ್ರಹ ದಳಕ್ಕೆ ವರದಿ ಮಾಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕುರುಲ್ಕರ್ ಅವರು ಮಿಲಿಟರಿಗಾಗಿ ರೊಬೊಟಿಕ್ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಭಾರತೀಯ ಸೇನೆಯಲ್ಲಿ ಕೆಲಸ ಮಾಡುವ ಖಾಸಗಿ ಮಾರಾಟಗಾರರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಹೆಸರುಗಳು ಮತ್ತು ಇತರ ವಿವರಗಳನ್ನು ಹಂಚಿಕೊಂಡಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

”ಶತ್ರು ರಾಷ್ಟ್ರವು ಸಿಇಒ ಅವರ ಕಾರ್ಯಸ್ಥಳ ಮತ್ತು ಕೆಲಸದ ಸ್ವರೂಪ ಮತ್ತು ಸಶಸ್ತ್ರ ಪಡೆಗಳಿಗಾಗಿ ಅವರು ತಯಾರಿಸಿದ ಉಪಕರಣಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಮತ್ತು ನಿರ್ದಿಷ್ಟ ಮಾಹಿತಿಯನ್ನು ಹುಡುಕಬಹುದು ಎಂದು ತಿಳಿದಿದ್ದರೂ, ಕುರುಲ್ಕರ್ ಅವರು ಕಾರ್ಯಾಚರಣೆಯ ರಚನೆಯನ್ನು ಹಂಚಿಕೊಂಡಿದ್ದಾರೆ” ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

ಮೇಲ್ಮೈನಿಂದ ಮೇಲ್ಮೈಗೆ ಹಾರುವ ವಾಯು ಕ್ಷಿಪಣಿಗಳು (ಎಸ್‌ಎಎಂ), ಡ್ರೋನ್‌ಗಳು, ಬ್ರಹ್ಮೋಸ್ ಮತ್ತು ಅಗ್ನಿ ಕ್ಷಿಪಣಿ ಲಾಂಚರ್‌ಗಳು ಮತ್ತು ಯುಸಿವಿ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಕುರೂಲ್ಕರ್ ಅವರು ಆಕೆ ಜತೆ ಮಾತನಾಡಿದ್ದರು. ಅವರಿಬ್ಬರೂ ಜೂನ್ 2022ರಿಂದ ಡಿಸೆಂಬರ್ 2022ರವರೆಗೂ ಸಂಪರ್ಕದಲ್ಲಿದ್ದರು ಎಂದು ಎಟಿಎಸ್ ಮಾಹಿತಿ ನೀಡಿದೆ.

ಪ್ರದೀಪ್ ಕುರೂಲ್ಕರ್ ಅವರ ಚಟುವಟಿಕೆಗಳು ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಡಿಆರ್‌ಡಿಒ ತನಿಖೆ ಆರಂಭಿಸಿತ್ತು. ಅದಕ್ಕೂ ಮುನ್ನ 2023ರ ಫೆಬ್ರವರಿಯಲ್ಲಿ ಜರಾಳ ನಂಬರ್ ಅನ್ನು ಕುರೂಲ್ಕರ್ ಬ್ಲಾಕ್ ಮಾಡಿದ್ದರು. ಇದಾಗಿ ಸ್ವಲ್ಪ ಸಮಯದಲ್ಲಿಯೇ ಅಪರಿಚಿತ ಭಾರತೀಯ ಸಂಖ್ಯೆಯಿಂದ ಅವರಿಗೆ ವಾಟ್ಸಾಪ್ ಸಂದೇಶ ಬಂದಿತ್ತು. ‘ನನ್ನ ನಂಬರ್ ಏಕೆ ಬ್ಲಾಕ್ ಮಾಡಿದ್ದೀರಿ?’ ಎಂದು ಅದರಲ್ಲಿ ಪ್ರಶ್ನಿಸಲಾಗಿತ್ತು. ವಿಜ್ಞಾನಿಗಳು ಯಾರ ಜತೆಗೂ ತಮ್ಮ ವೈಯಕ್ತಿಕ ಹಾಗೂ ಅಧಿಕೃತ ಕಾರ್ಯಕ್ರಮಗಳು ಮತ್ತು ಸ್ಥಳಗಳ ಮಾಹಿತಿಗಳನ್ನು ಹಂಚಿಕೊಳ್ಳಬಾರದು ಎಂಬುದು ತಿಳಿದಿದ್ದರೂ ಆಕೆಗೆ ಅವುಗಳನ್ನು ರವಾನಿಸಿದ್ದರು.

ಇದನ್ನೂ ಓದಿ: ಪಾಕಿಸ್ತಾನದ ಗೂಢಚಾರಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್ ವ್ಯಕ್ತಿ: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...