Homeಮುಖಪುಟಪಾಕ್ ಯುವತಿಯ ಹನಿಟ್ರ್ಯಾಪ್‌ಗೆ ಸಿಲುಕಿದ್ದ DRDO ವಿಜ್ಞಾನಿ ಕುರೂಲ್ಕರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಪಾಕ್ ಯುವತಿಯ ಹನಿಟ್ರ್ಯಾಪ್‌ಗೆ ಸಿಲುಕಿದ್ದ DRDO ವಿಜ್ಞಾನಿ ಕುರೂಲ್ಕರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

- Advertisement -
- Advertisement -

ಪಾಕಿಸ್ತಾನದ ಗುಪ್ತಚರ ವಿಭಾಗದ ಪರ ಕೆಲಸ ಮಾಡುತ್ತಿದ್ದ ಯುವತಿಯ ಜೊತೆಗೆ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರೂಲ್ಕರ್ ಅವರು ಭಾರತದ ಕ್ಷಿಪಣಿ ಯೋಜನೆ ಕುರಿತಂತೆ ವಿವಿಧ ವರ್ಗೀಕೃತ ರಕ್ಷಣಾ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು ಎಂದು ದೆಹಲಿ ಪೊಲೀಸರು ಆರೋಪಪಟ್ಟಿಯಲ್ಲಿ ಸಲ್ಲಿಸಿದ್ದಾರೆ ಎಂದು ಶನಿವಾರ ಪಿಟಿಐ ವರದಿ ಮಾಡಿದೆ.

ಜರಾ ದಾಸ್‌ಗುಪ್ತಾ ಎಂಬ ಹೆಸರಿನಲ್ಲಿ ಪ್ರದೀಪ್ ಕುರೂಲ್ಕರ್ ಜತೆ ಚಾಟಿಂಗ್ ನಡೆಸುತ್ತಿದ್ದ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಯ ಯುವತಿ, ಅವರಿಂದ ಅನೇಕ ರಹಸ್ಯ ವಿಚಾರಗಳನ್ನು ಪಡೆದುಕೊಂಡಿದ್ದಳು ಎನ್ನಲಾಗಿದೆ.

ಪುಣೆಯಲ್ಲಿನ ಡಿಆರ್‌ಡಿಒ ಪ್ರಯೋಗಾಲಯಗಳ ಪೈಕಿ ಒಂದರ ನಿರ್ದೇಶಕರಾಗಿದ್ದ ಕುರೂಲ್ಕರ್ ವಿರುದ್ಧ ಕಳೆದ ವಾರ ನ್ಯಾಯಾಲಯದಲ್ಲಿ ಮಹಾರಾಷ್ಟ್ರ ಪೊಲೀಸ್ ಇಲಾಖೆಯ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆರೋಪಪಟ್ಟಿ ಸಲ್ಲಿಸಿದೆ.

ಮೇ 3 ರಂದು, ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳವು ಶಂಕಿತ ಹನಿ ಟ್ರ್ಯಾಪಿಂಗ್ ಪ್ರಕರಣದಲ್ಲಿ ಬೇಹುಗಾರಿಕೆ ಮತ್ತು ಅಕ್ರಮ ಸಂವಹನಕ್ಕೆ ಸಂಬಂಧಿಸಿದ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಕುರುಲ್ಕರ್ ಅವರನ್ನು ಬಂಧಿಸಿತ್ತು.

ಕುರುಲ್ಕರ್ ಅವರು ಪರಮಾಣು ಸಾಮರ್ಥ್ಯದ ಅಗ್ನಿ ಕ್ಷಿಪಣಿ ಮತ್ತು ಮಿಷನ್ ಶಕ್ತಿ, ಉಪಗ್ರಹ ವಿರೋಧಿ ಕ್ಷಿಪಣಿ ಪರೀಕ್ಷೆ ಸೇರಿದಂತೆ ಹಲವಾರು ಕಾರ್ಯತಂತ್ರದ ಮಹತ್ವದ DRDO ಯೋಜನೆಗಳ ಪ್ರಮುಖ ಸದಸ್ಯರಾಗಿದ್ದರು. ಪ್ರಸ್ತುತ ಪುಣೆಯ ಯರವಾಡ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರದೀಪ್ ಕುರೂಲ್ಕರ್ ಮತ್ತು ‘ಜರಾ ದಾಸ್‌ಗುಪ್ತಾ’ ಇಬ್ಬರೂ ವಾಟ್ಸಾಪ್, ವಾಯ್ಸ್ ಮತ್ತು ವಿಡಿಯೋ ಕಾಲ್‌ಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದರು ಎಂದು ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಬ್ರಿಟನ್‌ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಎಂದು ಗುರುತಿಸಿಕೊಂಡಿದ್ದ ಜರಾ, ಕುರೂಲ್ಕರ್ ಅವರಿಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋಗಳನ್ನು ಕಳುಹಿಸುವ ಮೂಲಕ ಅವರ ಗೆಳೆತನ ಸಂಪಾದಿಸಿದ್ದಳು. ತನಿಖೆ ವೇಳೆ ಆಕೆಯ ಐಪಿ ವಿಳಾಸ ಪಾಕಿಸ್ತಾನದಲ್ಲಿ ಪತ್ತೆಯಾಗಿತ್ತು ಎಂದು ಎಟಿಎಸ್ ಹೇಳಿದೆ.

ಬ್ರಹ್ಮೋಸ್ ಲಾಂಚರ್, ಡ್ರೋನ್, ಯುಸಿವಿ, ಅಗ್ನಿ ಕ್ಷಿಪಣಿ ಲಾಂಚರ್ ಮತ್ತು ಮಿಲಿಟರಿ ಬ್ರಿಡ್ಜಿಂಗ್ ವ್ಯವಸ್ಥೆ ಸೇರಿದಂತೆ ಅನೇಕ ವರ್ಗೀಕೃತ ಮತ್ತು ಸೂಕ್ಷ್ಮ ಮಾಹಿತಿಗಳನ್ನು ಕರೂಲ್ಕರ್ ಅವರಿಂದ ಪಡೆದುಕೊಳ್ಳಲು ಪಾಕಿಸ್ತಾನದ ಏಜೆಂಟ್ ಪ್ರಯತ್ನಿಸಿದ್ದಳು.

ಇಲ್ಲಿಯವರೆಗೆ, ಪೊಲೀಸರು ಡಿಆರ್‌ಡಿಒ ಅಧಿಕಾರಿಗಳು ಮತ್ತು ಭಾರತೀಯ ವಾಯುಪಡೆಯ ಅಧಿಕಾರಿ ಸೇರಿದಂತೆ 203 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿದ್ದಾರೆ, ಅವರನ್ನು ಪಾಕಿಸ್ತಾನಿ ಆಪರೇಟಿವ್ ಸಂಪರ್ಕಿಸಿದ್ದಾರೆ ಎಂದು ಹೇಳಲಾಗಿದೆ.

”ಕರೂಲ್ಕರ್ ಅವರು ಜರಾ ದಾಸ್‌ಗುಪ್ತ ಎಂಬ ನಕಲಿ ಹೆಸರಿನಿಂದ ಪರಿಚಿತಳಾದ ಯುವತಿ ಕಡೆ ಆಕರ್ಷಿತಳಾಗಿದ್ದಳು. ಡಿಆರ್‌ಡಿಒದ ವರ್ಗೀಕೃತ ಮತ್ತು ಗೋಪ್ಯ ಮಾಹಿತಿಗಳ ದತ್ತಾಂಶಗಳನ್ನು ತಮ್ಮ ವೈಯಕ್ತಿಕ ಫೋನ್‌ನಲ್ಲಿ ಇರಿಸಿಕೊಂಡಿದ್ದ ಅವರು, ಅದನ್ನು ಆಕೆ ಜತೆ ಹಂಚಿಕೊಂಡಿದ್ದರು” ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

“ಆಕೆಯಿಂದ ಆಕರ್ಷಿತರಾದ ಕುರುಲ್ಕರ್, ಡಿಆರ್‌ಡಿಒದ ವರ್ಗೀಕೃತ ಮತ್ತು ಸೂಕ್ಷ್ಮ ಮಾಹಿತಿಯನ್ನು ತನ್ನ ವೈಯಕ್ತಿಕ ಫೋನ್‌ನಲ್ಲಿ ಸಂಗ್ರಹಿಸಿದರು ಮತ್ತು ನಂತರ ಅದನ್ನು ಜಾರಾ ಅವರೊಂದಿಗೆ ಹಂಚಿಕೊಂಡಿದ್ದಾರೆ” ಎಂದು ಆರೋಪಪಟ್ಟಿ ಆರೋಪಿಸಿದೆ.

ಇಬ್ಬರು ಇಮೇಲ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಸಂಪರ್ಕದಲ್ಲಿದ್ದರು ಮತ್ತು ಮಹಿಳೆ ಸೂಚಿಸಿದ “bingechat.net” ಮತ್ತು “cloudchat.net” ಎಂಬ ಎರಡು ಅಪ್ಲಿಕೇಶನ್‌ಗಳ ಮೂಲಕ ವೀಡಿಯೊ ಕರೆಗಳ ಮೂಲಕವೂ ಸಂಪರ್ಕದಲ್ಲಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆ್ಯಪ್ ಅನ್ನು ಬಳಸುವುದರಿಂದ, ಆರೋಪಿಯ ಮೊಬೈಲ್ ಫೋನ್‌ನಲ್ಲಿ ಮಾಲ್‌ವೇರ್ ಅನ್ನು ಸೇರಿಸುವ ಸಾಧ್ಯತೆಯಿದೆ” ಎಂದು ಆರೋಪಪಟ್ಟಿ ಹೇಳಿದೆ. ಕುರುಲ್ಕರ್ ಅವರ ಫೋನ್‌ನ ಫೋರೆನ್ಸಿಕ್ ವಿಶ್ಲೇಷಣೆಯಲ್ಲಿ, ಡಿಆರ್‌ಡಿಒ ಮಾಲ್‌ವೇರ್ ಅನ್ನು ಕಂಡುಹಿಡಿದಿದೆ, ನಂತರ ಅದನ್ನು ಭಯೋತ್ಪಾದನಾ ನಿಗ್ರಹ ದಳಕ್ಕೆ ವರದಿ ಮಾಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕುರುಲ್ಕರ್ ಅವರು ಮಿಲಿಟರಿಗಾಗಿ ರೊಬೊಟಿಕ್ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಭಾರತೀಯ ಸೇನೆಯಲ್ಲಿ ಕೆಲಸ ಮಾಡುವ ಖಾಸಗಿ ಮಾರಾಟಗಾರರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಹೆಸರುಗಳು ಮತ್ತು ಇತರ ವಿವರಗಳನ್ನು ಹಂಚಿಕೊಂಡಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

”ಶತ್ರು ರಾಷ್ಟ್ರವು ಸಿಇಒ ಅವರ ಕಾರ್ಯಸ್ಥಳ ಮತ್ತು ಕೆಲಸದ ಸ್ವರೂಪ ಮತ್ತು ಸಶಸ್ತ್ರ ಪಡೆಗಳಿಗಾಗಿ ಅವರು ತಯಾರಿಸಿದ ಉಪಕರಣಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಮತ್ತು ನಿರ್ದಿಷ್ಟ ಮಾಹಿತಿಯನ್ನು ಹುಡುಕಬಹುದು ಎಂದು ತಿಳಿದಿದ್ದರೂ, ಕುರುಲ್ಕರ್ ಅವರು ಕಾರ್ಯಾಚರಣೆಯ ರಚನೆಯನ್ನು ಹಂಚಿಕೊಂಡಿದ್ದಾರೆ” ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

ಮೇಲ್ಮೈನಿಂದ ಮೇಲ್ಮೈಗೆ ಹಾರುವ ವಾಯು ಕ್ಷಿಪಣಿಗಳು (ಎಸ್‌ಎಎಂ), ಡ್ರೋನ್‌ಗಳು, ಬ್ರಹ್ಮೋಸ್ ಮತ್ತು ಅಗ್ನಿ ಕ್ಷಿಪಣಿ ಲಾಂಚರ್‌ಗಳು ಮತ್ತು ಯುಸಿವಿ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಕುರೂಲ್ಕರ್ ಅವರು ಆಕೆ ಜತೆ ಮಾತನಾಡಿದ್ದರು. ಅವರಿಬ್ಬರೂ ಜೂನ್ 2022ರಿಂದ ಡಿಸೆಂಬರ್ 2022ರವರೆಗೂ ಸಂಪರ್ಕದಲ್ಲಿದ್ದರು ಎಂದು ಎಟಿಎಸ್ ಮಾಹಿತಿ ನೀಡಿದೆ.

ಪ್ರದೀಪ್ ಕುರೂಲ್ಕರ್ ಅವರ ಚಟುವಟಿಕೆಗಳು ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಡಿಆರ್‌ಡಿಒ ತನಿಖೆ ಆರಂಭಿಸಿತ್ತು. ಅದಕ್ಕೂ ಮುನ್ನ 2023ರ ಫೆಬ್ರವರಿಯಲ್ಲಿ ಜರಾಳ ನಂಬರ್ ಅನ್ನು ಕುರೂಲ್ಕರ್ ಬ್ಲಾಕ್ ಮಾಡಿದ್ದರು. ಇದಾಗಿ ಸ್ವಲ್ಪ ಸಮಯದಲ್ಲಿಯೇ ಅಪರಿಚಿತ ಭಾರತೀಯ ಸಂಖ್ಯೆಯಿಂದ ಅವರಿಗೆ ವಾಟ್ಸಾಪ್ ಸಂದೇಶ ಬಂದಿತ್ತು. ‘ನನ್ನ ನಂಬರ್ ಏಕೆ ಬ್ಲಾಕ್ ಮಾಡಿದ್ದೀರಿ?’ ಎಂದು ಅದರಲ್ಲಿ ಪ್ರಶ್ನಿಸಲಾಗಿತ್ತು. ವಿಜ್ಞಾನಿಗಳು ಯಾರ ಜತೆಗೂ ತಮ್ಮ ವೈಯಕ್ತಿಕ ಹಾಗೂ ಅಧಿಕೃತ ಕಾರ್ಯಕ್ರಮಗಳು ಮತ್ತು ಸ್ಥಳಗಳ ಮಾಹಿತಿಗಳನ್ನು ಹಂಚಿಕೊಳ್ಳಬಾರದು ಎಂಬುದು ತಿಳಿದಿದ್ದರೂ ಆಕೆಗೆ ಅವುಗಳನ್ನು ರವಾನಿಸಿದ್ದರು.

ಇದನ್ನೂ ಓದಿ: ಪಾಕಿಸ್ತಾನದ ಗೂಢಚಾರಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್ ವ್ಯಕ್ತಿ: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...