Homeಮುಖಪುಟಪಾಕ್ ಯುವತಿಯ ಹನಿಟ್ರ್ಯಾಪ್‌ಗೆ ಸಿಲುಕಿದ್ದ DRDO ವಿಜ್ಞಾನಿ ಕುರೂಲ್ಕರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

ಪಾಕ್ ಯುವತಿಯ ಹನಿಟ್ರ್ಯಾಪ್‌ಗೆ ಸಿಲುಕಿದ್ದ DRDO ವಿಜ್ಞಾನಿ ಕುರೂಲ್ಕರ್ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ

- Advertisement -
- Advertisement -

ಪಾಕಿಸ್ತಾನದ ಗುಪ್ತಚರ ವಿಭಾಗದ ಪರ ಕೆಲಸ ಮಾಡುತ್ತಿದ್ದ ಯುವತಿಯ ಜೊತೆಗೆ ಡಿಆರ್‌ಡಿಒ ವಿಜ್ಞಾನಿ ಪ್ರದೀಪ್ ಕುರೂಲ್ಕರ್ ಅವರು ಭಾರತದ ಕ್ಷಿಪಣಿ ಯೋಜನೆ ಕುರಿತಂತೆ ವಿವಿಧ ವರ್ಗೀಕೃತ ರಕ್ಷಣಾ ಯೋಜನೆಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು ಎಂದು ದೆಹಲಿ ಪೊಲೀಸರು ಆರೋಪಪಟ್ಟಿಯಲ್ಲಿ ಸಲ್ಲಿಸಿದ್ದಾರೆ ಎಂದು ಶನಿವಾರ ಪಿಟಿಐ ವರದಿ ಮಾಡಿದೆ.

ಜರಾ ದಾಸ್‌ಗುಪ್ತಾ ಎಂಬ ಹೆಸರಿನಲ್ಲಿ ಪ್ರದೀಪ್ ಕುರೂಲ್ಕರ್ ಜತೆ ಚಾಟಿಂಗ್ ನಡೆಸುತ್ತಿದ್ದ ಪಾಕಿಸ್ತಾನದ ಬೇಹುಗಾರಿಕಾ ಸಂಸ್ಥೆಯ ಯುವತಿ, ಅವರಿಂದ ಅನೇಕ ರಹಸ್ಯ ವಿಚಾರಗಳನ್ನು ಪಡೆದುಕೊಂಡಿದ್ದಳು ಎನ್ನಲಾಗಿದೆ.

ಪುಣೆಯಲ್ಲಿನ ಡಿಆರ್‌ಡಿಒ ಪ್ರಯೋಗಾಲಯಗಳ ಪೈಕಿ ಒಂದರ ನಿರ್ದೇಶಕರಾಗಿದ್ದ ಕುರೂಲ್ಕರ್ ವಿರುದ್ಧ ಕಳೆದ ವಾರ ನ್ಯಾಯಾಲಯದಲ್ಲಿ ಮಹಾರಾಷ್ಟ್ರ ಪೊಲೀಸ್ ಇಲಾಖೆಯ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಆರೋಪಪಟ್ಟಿ ಸಲ್ಲಿಸಿದೆ.

ಮೇ 3 ರಂದು, ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳವು ಶಂಕಿತ ಹನಿ ಟ್ರ್ಯಾಪಿಂಗ್ ಪ್ರಕರಣದಲ್ಲಿ ಬೇಹುಗಾರಿಕೆ ಮತ್ತು ಅಕ್ರಮ ಸಂವಹನಕ್ಕೆ ಸಂಬಂಧಿಸಿದ ಅಧಿಕೃತ ರಹಸ್ಯ ಕಾಯ್ದೆಯ ಸೆಕ್ಷನ್‌ಗಳ ಅಡಿಯಲ್ಲಿ ಕುರುಲ್ಕರ್ ಅವರನ್ನು ಬಂಧಿಸಿತ್ತು.

ಕುರುಲ್ಕರ್ ಅವರು ಪರಮಾಣು ಸಾಮರ್ಥ್ಯದ ಅಗ್ನಿ ಕ್ಷಿಪಣಿ ಮತ್ತು ಮಿಷನ್ ಶಕ್ತಿ, ಉಪಗ್ರಹ ವಿರೋಧಿ ಕ್ಷಿಪಣಿ ಪರೀಕ್ಷೆ ಸೇರಿದಂತೆ ಹಲವಾರು ಕಾರ್ಯತಂತ್ರದ ಮಹತ್ವದ DRDO ಯೋಜನೆಗಳ ಪ್ರಮುಖ ಸದಸ್ಯರಾಗಿದ್ದರು. ಪ್ರಸ್ತುತ ಪುಣೆಯ ಯರವಾಡ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರದೀಪ್ ಕುರೂಲ್ಕರ್ ಮತ್ತು ‘ಜರಾ ದಾಸ್‌ಗುಪ್ತಾ’ ಇಬ್ಬರೂ ವಾಟ್ಸಾಪ್, ವಾಯ್ಸ್ ಮತ್ತು ವಿಡಿಯೋ ಕಾಲ್‌ಗಳ ಮೂಲಕ ನಿರಂತರ ಸಂಪರ್ಕದಲ್ಲಿದ್ದರು ಎಂದು ಜಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಬ್ರಿಟನ್‌ ಮೂಲದ ಸಾಫ್ಟ್‌ವೇರ್ ಎಂಜಿನಿಯರ್ ಎಂದು ಗುರುತಿಸಿಕೊಂಡಿದ್ದ ಜರಾ, ಕುರೂಲ್ಕರ್ ಅವರಿಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋಗಳನ್ನು ಕಳುಹಿಸುವ ಮೂಲಕ ಅವರ ಗೆಳೆತನ ಸಂಪಾದಿಸಿದ್ದಳು. ತನಿಖೆ ವೇಳೆ ಆಕೆಯ ಐಪಿ ವಿಳಾಸ ಪಾಕಿಸ್ತಾನದಲ್ಲಿ ಪತ್ತೆಯಾಗಿತ್ತು ಎಂದು ಎಟಿಎಸ್ ಹೇಳಿದೆ.

ಬ್ರಹ್ಮೋಸ್ ಲಾಂಚರ್, ಡ್ರೋನ್, ಯುಸಿವಿ, ಅಗ್ನಿ ಕ್ಷಿಪಣಿ ಲಾಂಚರ್ ಮತ್ತು ಮಿಲಿಟರಿ ಬ್ರಿಡ್ಜಿಂಗ್ ವ್ಯವಸ್ಥೆ ಸೇರಿದಂತೆ ಅನೇಕ ವರ್ಗೀಕೃತ ಮತ್ತು ಸೂಕ್ಷ್ಮ ಮಾಹಿತಿಗಳನ್ನು ಕರೂಲ್ಕರ್ ಅವರಿಂದ ಪಡೆದುಕೊಳ್ಳಲು ಪಾಕಿಸ್ತಾನದ ಏಜೆಂಟ್ ಪ್ರಯತ್ನಿಸಿದ್ದಳು.

ಇಲ್ಲಿಯವರೆಗೆ, ಪೊಲೀಸರು ಡಿಆರ್‌ಡಿಒ ಅಧಿಕಾರಿಗಳು ಮತ್ತು ಭಾರತೀಯ ವಾಯುಪಡೆಯ ಅಧಿಕಾರಿ ಸೇರಿದಂತೆ 203 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿದ್ದಾರೆ, ಅವರನ್ನು ಪಾಕಿಸ್ತಾನಿ ಆಪರೇಟಿವ್ ಸಂಪರ್ಕಿಸಿದ್ದಾರೆ ಎಂದು ಹೇಳಲಾಗಿದೆ.

”ಕರೂಲ್ಕರ್ ಅವರು ಜರಾ ದಾಸ್‌ಗುಪ್ತ ಎಂಬ ನಕಲಿ ಹೆಸರಿನಿಂದ ಪರಿಚಿತಳಾದ ಯುವತಿ ಕಡೆ ಆಕರ್ಷಿತಳಾಗಿದ್ದಳು. ಡಿಆರ್‌ಡಿಒದ ವರ್ಗೀಕೃತ ಮತ್ತು ಗೋಪ್ಯ ಮಾಹಿತಿಗಳ ದತ್ತಾಂಶಗಳನ್ನು ತಮ್ಮ ವೈಯಕ್ತಿಕ ಫೋನ್‌ನಲ್ಲಿ ಇರಿಸಿಕೊಂಡಿದ್ದ ಅವರು, ಅದನ್ನು ಆಕೆ ಜತೆ ಹಂಚಿಕೊಂಡಿದ್ದರು” ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

“ಆಕೆಯಿಂದ ಆಕರ್ಷಿತರಾದ ಕುರುಲ್ಕರ್, ಡಿಆರ್‌ಡಿಒದ ವರ್ಗೀಕೃತ ಮತ್ತು ಸೂಕ್ಷ್ಮ ಮಾಹಿತಿಯನ್ನು ತನ್ನ ವೈಯಕ್ತಿಕ ಫೋನ್‌ನಲ್ಲಿ ಸಂಗ್ರಹಿಸಿದರು ಮತ್ತು ನಂತರ ಅದನ್ನು ಜಾರಾ ಅವರೊಂದಿಗೆ ಹಂಚಿಕೊಂಡಿದ್ದಾರೆ” ಎಂದು ಆರೋಪಪಟ್ಟಿ ಆರೋಪಿಸಿದೆ.

ಇಬ್ಬರು ಇಮೇಲ್ ಮತ್ತು ಇನ್‌ಸ್ಟಾಗ್ರಾಮ್‌ನಲ್ಲಿ ಸಂಪರ್ಕದಲ್ಲಿದ್ದರು ಮತ್ತು ಮಹಿಳೆ ಸೂಚಿಸಿದ “bingechat.net” ಮತ್ತು “cloudchat.net” ಎಂಬ ಎರಡು ಅಪ್ಲಿಕೇಶನ್‌ಗಳ ಮೂಲಕ ವೀಡಿಯೊ ಕರೆಗಳ ಮೂಲಕವೂ ಸಂಪರ್ಕದಲ್ಲಿದ್ದರು ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

“ಆ್ಯಪ್ ಅನ್ನು ಬಳಸುವುದರಿಂದ, ಆರೋಪಿಯ ಮೊಬೈಲ್ ಫೋನ್‌ನಲ್ಲಿ ಮಾಲ್‌ವೇರ್ ಅನ್ನು ಸೇರಿಸುವ ಸಾಧ್ಯತೆಯಿದೆ” ಎಂದು ಆರೋಪಪಟ್ಟಿ ಹೇಳಿದೆ. ಕುರುಲ್ಕರ್ ಅವರ ಫೋನ್‌ನ ಫೋರೆನ್ಸಿಕ್ ವಿಶ್ಲೇಷಣೆಯಲ್ಲಿ, ಡಿಆರ್‌ಡಿಒ ಮಾಲ್‌ವೇರ್ ಅನ್ನು ಕಂಡುಹಿಡಿದಿದೆ, ನಂತರ ಅದನ್ನು ಭಯೋತ್ಪಾದನಾ ನಿಗ್ರಹ ದಳಕ್ಕೆ ವರದಿ ಮಾಡಲಾಗಿದೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ಕುರುಲ್ಕರ್ ಅವರು ಮಿಲಿಟರಿಗಾಗಿ ರೊಬೊಟಿಕ್ ಉಪಕರಣಗಳ ತಯಾರಿಕೆಯಲ್ಲಿ ತೊಡಗಿರುವ ಭಾರತೀಯ ಸೇನೆಯಲ್ಲಿ ಕೆಲಸ ಮಾಡುವ ಖಾಸಗಿ ಮಾರಾಟಗಾರರ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯ ಹೆಸರುಗಳು ಮತ್ತು ಇತರ ವಿವರಗಳನ್ನು ಹಂಚಿಕೊಂಡಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ.

”ಶತ್ರು ರಾಷ್ಟ್ರವು ಸಿಇಒ ಅವರ ಕಾರ್ಯಸ್ಥಳ ಮತ್ತು ಕೆಲಸದ ಸ್ವರೂಪ ಮತ್ತು ಸಶಸ್ತ್ರ ಪಡೆಗಳಿಗಾಗಿ ಅವರು ತಯಾರಿಸಿದ ಉಪಕರಣಗಳಿಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಮತ್ತು ನಿರ್ದಿಷ್ಟ ಮಾಹಿತಿಯನ್ನು ಹುಡುಕಬಹುದು ಎಂದು ತಿಳಿದಿದ್ದರೂ, ಕುರುಲ್ಕರ್ ಅವರು ಕಾರ್ಯಾಚರಣೆಯ ರಚನೆಯನ್ನು ಹಂಚಿಕೊಂಡಿದ್ದಾರೆ” ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ.

ಮೇಲ್ಮೈನಿಂದ ಮೇಲ್ಮೈಗೆ ಹಾರುವ ವಾಯು ಕ್ಷಿಪಣಿಗಳು (ಎಸ್‌ಎಎಂ), ಡ್ರೋನ್‌ಗಳು, ಬ್ರಹ್ಮೋಸ್ ಮತ್ತು ಅಗ್ನಿ ಕ್ಷಿಪಣಿ ಲಾಂಚರ್‌ಗಳು ಮತ್ತು ಯುಸಿವಿ ಸೇರಿದಂತೆ ವಿವಿಧ ಯೋಜನೆಗಳ ಬಗ್ಗೆ ಕುರೂಲ್ಕರ್ ಅವರು ಆಕೆ ಜತೆ ಮಾತನಾಡಿದ್ದರು. ಅವರಿಬ್ಬರೂ ಜೂನ್ 2022ರಿಂದ ಡಿಸೆಂಬರ್ 2022ರವರೆಗೂ ಸಂಪರ್ಕದಲ್ಲಿದ್ದರು ಎಂದು ಎಟಿಎಸ್ ಮಾಹಿತಿ ನೀಡಿದೆ.

ಪ್ರದೀಪ್ ಕುರೂಲ್ಕರ್ ಅವರ ಚಟುವಟಿಕೆಗಳು ಅನುಮಾನಾಸ್ಪದವಾಗಿ ಕಂಡುಬಂದ ಹಿನ್ನೆಲೆಯಲ್ಲಿ ಡಿಆರ್‌ಡಿಒ ತನಿಖೆ ಆರಂಭಿಸಿತ್ತು. ಅದಕ್ಕೂ ಮುನ್ನ 2023ರ ಫೆಬ್ರವರಿಯಲ್ಲಿ ಜರಾಳ ನಂಬರ್ ಅನ್ನು ಕುರೂಲ್ಕರ್ ಬ್ಲಾಕ್ ಮಾಡಿದ್ದರು. ಇದಾಗಿ ಸ್ವಲ್ಪ ಸಮಯದಲ್ಲಿಯೇ ಅಪರಿಚಿತ ಭಾರತೀಯ ಸಂಖ್ಯೆಯಿಂದ ಅವರಿಗೆ ವಾಟ್ಸಾಪ್ ಸಂದೇಶ ಬಂದಿತ್ತು. ‘ನನ್ನ ನಂಬರ್ ಏಕೆ ಬ್ಲಾಕ್ ಮಾಡಿದ್ದೀರಿ?’ ಎಂದು ಅದರಲ್ಲಿ ಪ್ರಶ್ನಿಸಲಾಗಿತ್ತು. ವಿಜ್ಞಾನಿಗಳು ಯಾರ ಜತೆಗೂ ತಮ್ಮ ವೈಯಕ್ತಿಕ ಹಾಗೂ ಅಧಿಕೃತ ಕಾರ್ಯಕ್ರಮಗಳು ಮತ್ತು ಸ್ಥಳಗಳ ಮಾಹಿತಿಗಳನ್ನು ಹಂಚಿಕೊಳ್ಳಬಾರದು ಎಂಬುದು ತಿಳಿದಿದ್ದರೂ ಆಕೆಗೆ ಅವುಗಳನ್ನು ರವಾನಿಸಿದ್ದರು.

ಇದನ್ನೂ ಓದಿ: ಪಾಕಿಸ್ತಾನದ ಗೂಢಚಾರಿಕೆ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಡಿಆರ್‌ಡಿಒ ವಿಜ್ಞಾನಿ ಆರ್‌ಎಸ್‌ಎಸ್ ವ್ಯಕ್ತಿ: ಕಾಂಗ್ರೆಸ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...