Homeಮುಖಪುಟದಾನದ ಹೆಸರಿನಲ್ಲಿ 'ಧಾರ್ಮಿಕ ನಂಬಿಕೆ'ಯನ್ನು ಪ್ರಭಾವಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ - ಉಪ ರಾಷ್ಟ್ರಪತಿ ಜಗದೀಪ್ ಧನಕರ್

ದಾನದ ಹೆಸರಿನಲ್ಲಿ ‘ಧಾರ್ಮಿಕ ನಂಬಿಕೆ’ಯನ್ನು ಪ್ರಭಾವಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ – ಉಪ ರಾಷ್ಟ್ರಪತಿ ಜಗದೀಪ್ ಧನಕರ್

- Advertisement -
- Advertisement -

ದಾನ ಪಡೆದವರ ‘ಧಾರ್ಮಿಕ ನಂಬಿಕೆ’ಯ ಮೇಲೆ ಪ್ರಭಾವ ಬೀರಲು ದಾನವನ್ನು ಬಳಸುವುದು ಪ್ರಜಾಪ್ರಭುತ್ವಕ್ಕೆ ಗಂಭೀರ ಸವಾಲುಗಳನ್ನು ಒಡ್ಡುತ್ತದೆ, ಅಗತ್ಯವಿರುವವರಿಗೆ ಬೇಷರತ್ತಾಗಿ ಸಹಾಯ ಮಾಡಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಖರ್ ಒತ್ತಿ ಹೇಳಿದ್ದಾರೆ. ಅವರು ಶುಕ್ರವಾರ ಮಂಡ್ಯದ ಬಿಜಿ ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದರು. ದಾನದ ಹೆಸರಿನಲ್ಲಿ

“ದಾನ, ನೆರವು ಅಥವಾ ಅಶಕ್ತರ ಕೈಹಿಡಿಯುವುದ ಯಾವುದೆ ನಿರೀಕ್ಷೆಗಳು ಅಥವಾ ಯಾವುದೆ ಪ್ರತಿಪಾದನೆಗಳು ಇಲ್ಲದೆ ಮಾಡಬೇಕು. ನಮ್ಮ ತತ್ತ್ವಶಾಸ್ತ್ರವು ಒಳ್ಳೆಯದನ್ನು ಮಾಡಿ, ಅದನ್ನು ಮರೆತುಬಿಡಲು ಹೇಳುತ್ತದೆ” ಎಂದು ಅವರು ಹೇಳಿದ್ದಾರೆ. ದಾನವು ಧಾರ್ಮಿಕ ನಂಬಿಕೆಯ ಸ್ವಾತಂತ್ರ್ಯವನ್ನು ನಿರ್ಬಂಧಿಸಿದರೆ ಅದು ರಾಷ್ಟ್ರೀಯ ಏಕತೆಗೆ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೇಶದ ಯುವಜನರು ಸಾಂಪ್ರದಾಯಿಕವಾಗಿ ಹುಡುಕುವ ಸರ್ಕಾರಿ ಉದ್ಯೋಗಗಳ ಅನ್ವೇಷಣೆಯಿಂದ ದೂರವಿರಲು ಹೇಳಿದ ಅವರು, ಬದಲಿಯಾಗಿ ವೇಗವಾಗಿ ಮುನ್ನಡೆಯುತ್ತಿರುವ ಭಾರತದಲ್ಲಿ ಹೊರಹೊಮ್ಮುತ್ತಿರುವ ವೃತ್ತಿ ಅವಕಾಶಗಳನ್ನು ಅನ್ವೇಷಿಸಲು ಒತ್ತಾಯಿಸಿದ್ದಾರೆ. ದಾನದ ಹೆಸರಿನಲ್ಲಿ

“ನಿಮ್ಮಲ್ಲಿ ಕೆಲವರು ಸರ್ಕಾರಿ ಸೇವೆಯೊಂದೇ ದಾರಿ ಎಂದು ಭಾವಿಸುತ್ತಾರೆ. ಅದರೆ ಅದು ಹಾಗೆ ಇಲ್ಲ. ಸುತ್ತಲೂ ನೋಡಿ, ಭಾರತವು ಸಮುದ್ರ, ಭೂಮಿ, ಆಕಾಶ ಮತ್ತು ಬಾಹ್ಯಾಕಾಶದಲ್ಲಿ ಮುನ್ನಡೆಯುತ್ತಿರುವಾಗ ನೀವು ಅವಕಾಶಗಳನ್ನು ಕಂಡುಕೊಳ್ಳುತ್ತೀರಿ” ಎಂದು ಧನಖರ್ ಹೇಳಿದ್ದಾರೆ. ಸುಳ್ಳು ಮತ್ತು ತಪ್ಪು ಮಾಹಿತಿಯ ವಿರುದ್ಧ ಜಾಗರೂಕರಾಗಿರಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಅವರು, ಇವುಗಳು ರಾಷ್ಟ್ರೀಯ ಆರೋಗ್ಯಕ್ಕೆ ಹಾನಿಕಾರಕವೆಂದು ವಿವರಿಸಿದ್ದಾರೆ.

“ನಾವು 5,000 ವರ್ಷಗಳಿಂದ ಒಳಗೊಳ್ಳುವಿಕೆಯನ್ನು ಮಾಡುತ್ತಲೆ ಬಂದಿದ್ದು, ಅದರಲ್ಲಿ ನಮಗೆ ಯಾವುದೆ ಪಾಠಗಳ ಅಗತ್ಯವಿಲ್ಲ. ಈ ತತ್ತ್ವಶಾಸ್ತ್ರ ಮಾತ್ರ ಸಮರ್ಥನೀಯವಾಗಿದ್ದು, ಜಾಗತಿಕ ಶಾಂತಿ ಮತ್ತು ಸೌಹಾರ್ದತೆಯನ್ನು ಉಂಟುಮಾಡುತ್ತದೆ. ಆದರೆ ಕೆಲವು ಜನರು ಅಂತರ್ಗತತೆಯ ಪ್ರಜ್ಞೆಯನ್ನು ವಿನಾಶಗೊಳಿಸುವ ವಿಭಿನ್ನ ಪರಿಕಲ್ಪನೆಯನ್ನು ಹೊಂದಿದ್ದಾರೆ. ಅಂತವರ ಬಗ್ಗೆ ನಾವು ಅತ್ಯಂತ ಜಾಗರೂಕರಾಗಿರಬೇಕು” ಎಂದು ಹೇಳಿದ್ದಾರೆ.

ಆದಿಚುಂಚನಗಿರಿ ಮಠವು ಜಾಗತಿಕವಾಗಿ ತನ್ನ 26 ಶಾಖಾ ಮಠಗಳು ಮತ್ತು 500 ಶಿಕ್ಷಣ ಸಂಸ್ಥೆಗಳ ಮೂಲಕ ವ್ಯಾಪಕವಾದ ಸಾಮಾಜಿಕ ಕಾರ್ಯಗಳನ್ನು ಮಾಡಿದೆ ಎಂದು ಶ್ಲಾಘಿಸಿದ ಅವರು, ತಳಮಟ್ಟದ ಗುಂಪುಗಳಿಗೆ ಅದು ಮಾಡಿರುವ ಸಮರ್ಪಣೆಯನ್ನು ಶ್ಲಾಘಿಸಿದ್ದಾರೆ. “ದುರ್ಬಲರಿಗಾಗಿ ಸಂಸ್ಥೆ ಮಾಡುತ್ತಿರುವ ಸೇವೆಯು ಸನಾತನ ಧರ್ಮದ ವಿಮರ್ಶಕರಿಗೆ ಪ್ರತಿಕ್ರಿಯೆಯಾಗಿ ನಿಂತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಲ್ಡ್‌ಪ್ಲೇ, ದಿಲ್ಜೀತ್ ದೋಸಾಂಜ್‌ನ ಸಂಗೀತ ಕಚೇರಿಗಳ ಟಿಕೆಟ್ ಮಾರಾಟದಲ್ಲಿ ‘ಅಕ್ರಮ’ ಪತ್ತೆ – ಇಡಿ ಹೇಳಿಕೆ

ಕೋಲ್ಡ್‌ಪ್ಲೇ, ದಿಲ್ಜೀತ್ ದೋಸಾಂಜ್‌ನ ಸಂಗೀತ ಕಚೇರಿಗಳ ಟಿಕೆಟ್ ಮಾರಾಟದಲ್ಲಿ ‘ಅಕ್ರಮ’ ಪತ್ತೆ – ಇಡಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...