Homeಮುಖಪುಟದಾನದ ಹೆಸರಿನಲ್ಲಿ 'ಧಾರ್ಮಿಕ ನಂಬಿಕೆ'ಯನ್ನು ಪ್ರಭಾವಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ - ಉಪ ರಾಷ್ಟ್ರಪತಿ ಜಗದೀಪ್ ಧನಕರ್

ದಾನದ ಹೆಸರಿನಲ್ಲಿ ‘ಧಾರ್ಮಿಕ ನಂಬಿಕೆ’ಯನ್ನು ಪ್ರಭಾವಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ – ಉಪ ರಾಷ್ಟ್ರಪತಿ ಜಗದೀಪ್ ಧನಕರ್

- Advertisement -
- Advertisement -

ದಾನ ಪಡೆದವರ ‘ಧಾರ್ಮಿಕ ನಂಬಿಕೆ’ಯ ಮೇಲೆ ಪ್ರಭಾವ ಬೀರಲು ದಾನವನ್ನು ಬಳಸುವುದು ಪ್ರಜಾಪ್ರಭುತ್ವಕ್ಕೆ ಗಂಭೀರ ಸವಾಲುಗಳನ್ನು ಒಡ್ಡುತ್ತದೆ, ಅಗತ್ಯವಿರುವವರಿಗೆ ಬೇಷರತ್ತಾಗಿ ಸಹಾಯ ಮಾಡಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಖರ್ ಒತ್ತಿ ಹೇಳಿದ್ದಾರೆ. ಅವರು ಶುಕ್ರವಾರ ಮಂಡ್ಯದ ಬಿಜಿ ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದರು. ದಾನದ ಹೆಸರಿನಲ್ಲಿ

“ದಾನ, ನೆರವು ಅಥವಾ ಅಶಕ್ತರ ಕೈಹಿಡಿಯುವುದ ಯಾವುದೆ ನಿರೀಕ್ಷೆಗಳು ಅಥವಾ ಯಾವುದೆ ಪ್ರತಿಪಾದನೆಗಳು ಇಲ್ಲದೆ ಮಾಡಬೇಕು. ನಮ್ಮ ತತ್ತ್ವಶಾಸ್ತ್ರವು ಒಳ್ಳೆಯದನ್ನು ಮಾಡಿ, ಅದನ್ನು ಮರೆತುಬಿಡಲು ಹೇಳುತ್ತದೆ” ಎಂದು ಅವರು ಹೇಳಿದ್ದಾರೆ. ದಾನವು ಧಾರ್ಮಿಕ ನಂಬಿಕೆಯ ಸ್ವಾತಂತ್ರ್ಯವನ್ನು ನಿರ್ಬಂಧಿಸಿದರೆ ಅದು ರಾಷ್ಟ್ರೀಯ ಏಕತೆಗೆ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೇಶದ ಯುವಜನರು ಸಾಂಪ್ರದಾಯಿಕವಾಗಿ ಹುಡುಕುವ ಸರ್ಕಾರಿ ಉದ್ಯೋಗಗಳ ಅನ್ವೇಷಣೆಯಿಂದ ದೂರವಿರಲು ಹೇಳಿದ ಅವರು, ಬದಲಿಯಾಗಿ ವೇಗವಾಗಿ ಮುನ್ನಡೆಯುತ್ತಿರುವ ಭಾರತದಲ್ಲಿ ಹೊರಹೊಮ್ಮುತ್ತಿರುವ ವೃತ್ತಿ ಅವಕಾಶಗಳನ್ನು ಅನ್ವೇಷಿಸಲು ಒತ್ತಾಯಿಸಿದ್ದಾರೆ. ದಾನದ ಹೆಸರಿನಲ್ಲಿ

“ನಿಮ್ಮಲ್ಲಿ ಕೆಲವರು ಸರ್ಕಾರಿ ಸೇವೆಯೊಂದೇ ದಾರಿ ಎಂದು ಭಾವಿಸುತ್ತಾರೆ. ಅದರೆ ಅದು ಹಾಗೆ ಇಲ್ಲ. ಸುತ್ತಲೂ ನೋಡಿ, ಭಾರತವು ಸಮುದ್ರ, ಭೂಮಿ, ಆಕಾಶ ಮತ್ತು ಬಾಹ್ಯಾಕಾಶದಲ್ಲಿ ಮುನ್ನಡೆಯುತ್ತಿರುವಾಗ ನೀವು ಅವಕಾಶಗಳನ್ನು ಕಂಡುಕೊಳ್ಳುತ್ತೀರಿ” ಎಂದು ಧನಖರ್ ಹೇಳಿದ್ದಾರೆ. ಸುಳ್ಳು ಮತ್ತು ತಪ್ಪು ಮಾಹಿತಿಯ ವಿರುದ್ಧ ಜಾಗರೂಕರಾಗಿರಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಅವರು, ಇವುಗಳು ರಾಷ್ಟ್ರೀಯ ಆರೋಗ್ಯಕ್ಕೆ ಹಾನಿಕಾರಕವೆಂದು ವಿವರಿಸಿದ್ದಾರೆ.

“ನಾವು 5,000 ವರ್ಷಗಳಿಂದ ಒಳಗೊಳ್ಳುವಿಕೆಯನ್ನು ಮಾಡುತ್ತಲೆ ಬಂದಿದ್ದು, ಅದರಲ್ಲಿ ನಮಗೆ ಯಾವುದೆ ಪಾಠಗಳ ಅಗತ್ಯವಿಲ್ಲ. ಈ ತತ್ತ್ವಶಾಸ್ತ್ರ ಮಾತ್ರ ಸಮರ್ಥನೀಯವಾಗಿದ್ದು, ಜಾಗತಿಕ ಶಾಂತಿ ಮತ್ತು ಸೌಹಾರ್ದತೆಯನ್ನು ಉಂಟುಮಾಡುತ್ತದೆ. ಆದರೆ ಕೆಲವು ಜನರು ಅಂತರ್ಗತತೆಯ ಪ್ರಜ್ಞೆಯನ್ನು ವಿನಾಶಗೊಳಿಸುವ ವಿಭಿನ್ನ ಪರಿಕಲ್ಪನೆಯನ್ನು ಹೊಂದಿದ್ದಾರೆ. ಅಂತವರ ಬಗ್ಗೆ ನಾವು ಅತ್ಯಂತ ಜಾಗರೂಕರಾಗಿರಬೇಕು” ಎಂದು ಹೇಳಿದ್ದಾರೆ.

ಆದಿಚುಂಚನಗಿರಿ ಮಠವು ಜಾಗತಿಕವಾಗಿ ತನ್ನ 26 ಶಾಖಾ ಮಠಗಳು ಮತ್ತು 500 ಶಿಕ್ಷಣ ಸಂಸ್ಥೆಗಳ ಮೂಲಕ ವ್ಯಾಪಕವಾದ ಸಾಮಾಜಿಕ ಕಾರ್ಯಗಳನ್ನು ಮಾಡಿದೆ ಎಂದು ಶ್ಲಾಘಿಸಿದ ಅವರು, ತಳಮಟ್ಟದ ಗುಂಪುಗಳಿಗೆ ಅದು ಮಾಡಿರುವ ಸಮರ್ಪಣೆಯನ್ನು ಶ್ಲಾಘಿಸಿದ್ದಾರೆ. “ದುರ್ಬಲರಿಗಾಗಿ ಸಂಸ್ಥೆ ಮಾಡುತ್ತಿರುವ ಸೇವೆಯು ಸನಾತನ ಧರ್ಮದ ವಿಮರ್ಶಕರಿಗೆ ಪ್ರತಿಕ್ರಿಯೆಯಾಗಿ ನಿಂತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಲ್ಡ್‌ಪ್ಲೇ, ದಿಲ್ಜೀತ್ ದೋಸಾಂಜ್‌ನ ಸಂಗೀತ ಕಚೇರಿಗಳ ಟಿಕೆಟ್ ಮಾರಾಟದಲ್ಲಿ ‘ಅಕ್ರಮ’ ಪತ್ತೆ – ಇಡಿ ಹೇಳಿಕೆ

ಕೋಲ್ಡ್‌ಪ್ಲೇ, ದಿಲ್ಜೀತ್ ದೋಸಾಂಜ್‌ನ ಸಂಗೀತ ಕಚೇರಿಗಳ ಟಿಕೆಟ್ ಮಾರಾಟದಲ್ಲಿ ‘ಅಕ್ರಮ’ ಪತ್ತೆ – ಇಡಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...