Homeಮುಖಪುಟದಾನದ ಹೆಸರಿನಲ್ಲಿ 'ಧಾರ್ಮಿಕ ನಂಬಿಕೆ'ಯನ್ನು ಪ್ರಭಾವಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ - ಉಪ ರಾಷ್ಟ್ರಪತಿ ಜಗದೀಪ್ ಧನಕರ್

ದಾನದ ಹೆಸರಿನಲ್ಲಿ ‘ಧಾರ್ಮಿಕ ನಂಬಿಕೆ’ಯನ್ನು ಪ್ರಭಾವಿಸುವುದು ಪ್ರಜಾಪ್ರಭುತ್ವಕ್ಕೆ ಮಾರಕ – ಉಪ ರಾಷ್ಟ್ರಪತಿ ಜಗದೀಪ್ ಧನಕರ್

- Advertisement -
- Advertisement -

ದಾನ ಪಡೆದವರ ‘ಧಾರ್ಮಿಕ ನಂಬಿಕೆ’ಯ ಮೇಲೆ ಪ್ರಭಾವ ಬೀರಲು ದಾನವನ್ನು ಬಳಸುವುದು ಪ್ರಜಾಪ್ರಭುತ್ವಕ್ಕೆ ಗಂಭೀರ ಸವಾಲುಗಳನ್ನು ಒಡ್ಡುತ್ತದೆ, ಅಗತ್ಯವಿರುವವರಿಗೆ ಬೇಷರತ್ತಾಗಿ ಸಹಾಯ ಮಾಡಬೇಕು ಎಂದು ಉಪ ರಾಷ್ಟ್ರಪತಿ ಜಗದೀಪ್ ಧನಖರ್ ಒತ್ತಿ ಹೇಳಿದ್ದಾರೆ. ಅವರು ಶುಕ್ರವಾರ ಮಂಡ್ಯದ ಬಿಜಿ ನಗರದಲ್ಲಿರುವ ಆದಿಚುಂಚನಗಿರಿ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡುತ್ತಿದ್ದರು. ದಾನದ ಹೆಸರಿನಲ್ಲಿ

“ದಾನ, ನೆರವು ಅಥವಾ ಅಶಕ್ತರ ಕೈಹಿಡಿಯುವುದ ಯಾವುದೆ ನಿರೀಕ್ಷೆಗಳು ಅಥವಾ ಯಾವುದೆ ಪ್ರತಿಪಾದನೆಗಳು ಇಲ್ಲದೆ ಮಾಡಬೇಕು. ನಮ್ಮ ತತ್ತ್ವಶಾಸ್ತ್ರವು ಒಳ್ಳೆಯದನ್ನು ಮಾಡಿ, ಅದನ್ನು ಮರೆತುಬಿಡಲು ಹೇಳುತ್ತದೆ” ಎಂದು ಅವರು ಹೇಳಿದ್ದಾರೆ. ದಾನವು ಧಾರ್ಮಿಕ ನಂಬಿಕೆಯ ಸ್ವಾತಂತ್ರ್ಯವನ್ನು ನಿರ್ಬಂಧಿಸಿದರೆ ಅದು ರಾಷ್ಟ್ರೀಯ ಏಕತೆಗೆ ಮತ್ತು ಸಂವಿಧಾನದಲ್ಲಿ ಪ್ರತಿಪಾದಿಸಲಾದ ಮೌಲ್ಯಗಳಿಗೆ ಅಪಾಯವನ್ನುಂಟುಮಾಡುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ದೇಶದ ಯುವಜನರು ಸಾಂಪ್ರದಾಯಿಕವಾಗಿ ಹುಡುಕುವ ಸರ್ಕಾರಿ ಉದ್ಯೋಗಗಳ ಅನ್ವೇಷಣೆಯಿಂದ ದೂರವಿರಲು ಹೇಳಿದ ಅವರು, ಬದಲಿಯಾಗಿ ವೇಗವಾಗಿ ಮುನ್ನಡೆಯುತ್ತಿರುವ ಭಾರತದಲ್ಲಿ ಹೊರಹೊಮ್ಮುತ್ತಿರುವ ವೃತ್ತಿ ಅವಕಾಶಗಳನ್ನು ಅನ್ವೇಷಿಸಲು ಒತ್ತಾಯಿಸಿದ್ದಾರೆ. ದಾನದ ಹೆಸರಿನಲ್ಲಿ

“ನಿಮ್ಮಲ್ಲಿ ಕೆಲವರು ಸರ್ಕಾರಿ ಸೇವೆಯೊಂದೇ ದಾರಿ ಎಂದು ಭಾವಿಸುತ್ತಾರೆ. ಅದರೆ ಅದು ಹಾಗೆ ಇಲ್ಲ. ಸುತ್ತಲೂ ನೋಡಿ, ಭಾರತವು ಸಮುದ್ರ, ಭೂಮಿ, ಆಕಾಶ ಮತ್ತು ಬಾಹ್ಯಾಕಾಶದಲ್ಲಿ ಮುನ್ನಡೆಯುತ್ತಿರುವಾಗ ನೀವು ಅವಕಾಶಗಳನ್ನು ಕಂಡುಕೊಳ್ಳುತ್ತೀರಿ” ಎಂದು ಧನಖರ್ ಹೇಳಿದ್ದಾರೆ. ಸುಳ್ಳು ಮತ್ತು ತಪ್ಪು ಮಾಹಿತಿಯ ವಿರುದ್ಧ ಜಾಗರೂಕರಾಗಿರಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದ ಅವರು, ಇವುಗಳು ರಾಷ್ಟ್ರೀಯ ಆರೋಗ್ಯಕ್ಕೆ ಹಾನಿಕಾರಕವೆಂದು ವಿವರಿಸಿದ್ದಾರೆ.

“ನಾವು 5,000 ವರ್ಷಗಳಿಂದ ಒಳಗೊಳ್ಳುವಿಕೆಯನ್ನು ಮಾಡುತ್ತಲೆ ಬಂದಿದ್ದು, ಅದರಲ್ಲಿ ನಮಗೆ ಯಾವುದೆ ಪಾಠಗಳ ಅಗತ್ಯವಿಲ್ಲ. ಈ ತತ್ತ್ವಶಾಸ್ತ್ರ ಮಾತ್ರ ಸಮರ್ಥನೀಯವಾಗಿದ್ದು, ಜಾಗತಿಕ ಶಾಂತಿ ಮತ್ತು ಸೌಹಾರ್ದತೆಯನ್ನು ಉಂಟುಮಾಡುತ್ತದೆ. ಆದರೆ ಕೆಲವು ಜನರು ಅಂತರ್ಗತತೆಯ ಪ್ರಜ್ಞೆಯನ್ನು ವಿನಾಶಗೊಳಿಸುವ ವಿಭಿನ್ನ ಪರಿಕಲ್ಪನೆಯನ್ನು ಹೊಂದಿದ್ದಾರೆ. ಅಂತವರ ಬಗ್ಗೆ ನಾವು ಅತ್ಯಂತ ಜಾಗರೂಕರಾಗಿರಬೇಕು” ಎಂದು ಹೇಳಿದ್ದಾರೆ.

ಆದಿಚುಂಚನಗಿರಿ ಮಠವು ಜಾಗತಿಕವಾಗಿ ತನ್ನ 26 ಶಾಖಾ ಮಠಗಳು ಮತ್ತು 500 ಶಿಕ್ಷಣ ಸಂಸ್ಥೆಗಳ ಮೂಲಕ ವ್ಯಾಪಕವಾದ ಸಾಮಾಜಿಕ ಕಾರ್ಯಗಳನ್ನು ಮಾಡಿದೆ ಎಂದು ಶ್ಲಾಘಿಸಿದ ಅವರು, ತಳಮಟ್ಟದ ಗುಂಪುಗಳಿಗೆ ಅದು ಮಾಡಿರುವ ಸಮರ್ಪಣೆಯನ್ನು ಶ್ಲಾಘಿಸಿದ್ದಾರೆ. “ದುರ್ಬಲರಿಗಾಗಿ ಸಂಸ್ಥೆ ಮಾಡುತ್ತಿರುವ ಸೇವೆಯು ಸನಾತನ ಧರ್ಮದ ವಿಮರ್ಶಕರಿಗೆ ಪ್ರತಿಕ್ರಿಯೆಯಾಗಿ ನಿಂತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋಲ್ಡ್‌ಪ್ಲೇ, ದಿಲ್ಜೀತ್ ದೋಸಾಂಜ್‌ನ ಸಂಗೀತ ಕಚೇರಿಗಳ ಟಿಕೆಟ್ ಮಾರಾಟದಲ್ಲಿ ‘ಅಕ್ರಮ’ ಪತ್ತೆ – ಇಡಿ ಹೇಳಿಕೆ

ಕೋಲ್ಡ್‌ಪ್ಲೇ, ದಿಲ್ಜೀತ್ ದೋಸಾಂಜ್‌ನ ಸಂಗೀತ ಕಚೇರಿಗಳ ಟಿಕೆಟ್ ಮಾರಾಟದಲ್ಲಿ ‘ಅಕ್ರಮ’ ಪತ್ತೆ – ಇಡಿ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...