Homeಮುಖಪುಟಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತ: ಸ್ಪಷ್ಟನೆ ನೀಡಿದ ವಾಟ್ಸಾಪ್!

ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತ: ಸ್ಪಷ್ಟನೆ ನೀಡಿದ ವಾಟ್ಸಾಪ್!

ಈಗಾಗಲೇ ವಾಟ್ಸಾಪ್‌ನ ಹೊಸ ನಿಯಮಗಳಿಂದಾಗಿ ಕೋಟ್ಯಾಂತರ ಬಳಕೆದಾರರು ವಾಟ್ಸಾಪ್ ತೊರೆದು ಸಿಗ್ನಲ್ ಆಪ್ ಸೇರಿಕೊಂಡಿದ್ದಾರೆ.

- Advertisement -
- Advertisement -

ಫೇಸ್‌ಬುಕ್ ಮಾಲಿಕತ್ವದ ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕುತ್ತದೆ/ಮಾರುತ್ತದೆ, ಚಾಟ್‌ಗಳನ್ನು ನೋಡುತ್ತದೆ ಎಂಬ ಟೀಕೆಗಳ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ವಾಟ್ಸಾಪ್ ಸ್ಪಷ್ಟೀಕರಣ ನೀಡಿದೆ.

“ತನ್ನ ಗೌಪ್ಯತಾ ನೀತಿಗಳಲ್ಲಿ ತಂದ ಬದಲಾವಣೆಗಳಲ್ಲಿ ಕೆಲವನ್ನು ತಿದ್ದುಪಡಿ ಮಾಡುತ್ತಿದ್ದೇವೆ. ನಿಮ್ಮ ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತವಾಗಿರಲಿವೆ, ಎಂಡ್ ಟು ಎಂಡ್ encryption 100% ಮುಂದುವರೆಯಲಿದೆ” ಎಂದು ವಾಟ್ಸಾಪ್ ಟ್ವೀಟ್ ಮಾಡಿದೆ.

ವಾಟ್ಸಾಪ್ ಘೋಷಿಸಿರುವ/ಸ್ಪಷ್ಟನೆ ನೀಡಿರುವ ಅಂಶಗಳು ಈ ಕೆಳಗಿನಂತಿವೆ.

  • ವಾಟ್ಸಾಪ್ ಆಗಲಿ ಅಥವಾ ಫೇಸ್‌ಬುಕ್‌ ಆಗಲಿ ನಿಮ್ಮ ಖಾಸಗಿ ಸಂದೇಶಗಳನ್ನು ನೋಡುವುದಿಲ್ಲ ಅಥವಾ ನಿಮ್ಮ ಕರೆಗಳನ್ನು ಕೇಳಿಸಿಕೊಳ್ಳುವುದಿಲ್ಲ.
  • ಪ್ರತಿಯೊಬ್ಬರ ಸಂದೇಶ ಕಳುಹಿಸುವ ಅಥವಾ ಕರೆ ಮಾಡುವವರ ದಾಖಲೆಗಳನ್ನು ವಾಟ್ಸಾಪ್ ಇರಿಸಿಕೊಳ್ಳುವುದಿಲ್ಲ.
  • ನಿಮ್ಮ ಲೊಕೇಶನ್ ನೋಡಲು ವಾಟ್ಸಾಪ್ ಮತ್ತು ಫೇಸ್‌ಬುಕ್‌ಗೆ ಸಾಧ್ಯವಿಲ್ಲ.
  • ವಾಟ್ಸಾಪ್ ನಿಮ್ಮ ಸಂಪರ್ಕಗಳನ್ನು ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುವುದಿಲ್ಲ.
  • ವಾಟ್ಸಾಪ್ ಗುಂಪುಗಳು ಖಾಸಗಿಯಾಗಿ ಉಳಿಯುತ್ತವೆ.
  • ನಿಮ್ಮ ಸಂದೇಶಗಳನ್ನು ಕಣ್ಮರೆಯಾಗುವಂತೆ ನೀವು ಹೊಂದಿಸಬಹುದು.
  • ನಿಮ್ಮ ಡೇಟಾವನ್ನು ನೀವು ಡೌನ್‌ಲೋಡ್ ಮಾಡಬಹುದು.

ಒಂದು ವಾರದ ಹಿಂದೆ ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ತನ್ನ ಗೌಪ್ಯತಾ ನೀತಿಗಳನ್ನು ಬದಲಿಸುತ್ತಿರುವುದಾಗಿ ಮಾಹಿತಿ ನೀಡಿತ್ತು. “ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ ‘ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿತ್ತು.

ಇದನ್ನೂ ಓದಿ: ನಿಮ್ಮ ವೈಯಕ್ತಿಕ ಡೇಟಾ ಬಳಸಲು ಅನುಮತಿಸಿ, ಇಲ್ಲವೆ ಹೊರನಡೆಯಿರಿ: ವಾಟ್ಸಾಪ್ ಎಚ್ಚರಿಕೆ

ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿತ್ತು.

ಇದರಿಂದ ಕೆರಳಿದ ಕೋಟ್ಯಾಂತರ ಬಳಕೆದಾರರು ವಾಟ್ಸಾಪ್ ತ್ಯಜಿಸಿ ಸಿಗ್ನಲ್ ಎಂಬ ಸುರಕ್ಷತಾ ಆಪ್‌ಗೆ ಸೇರಿಕೊಂಡಿದ್ದರು. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‌ ಒನ್ ಸ್ಥಾನಕ್ಕೇರಿದೆ.


ಇದನ್ನೂ ಓದಿ: ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು


ಸಿಗ್ನಲ್ ಆಪ್‌ನ ಘೋಷವಾಕ್ಯವೇ ಖಾಸಗಿತನಕ್ಕೆ ಹೆಲೋ ಹೇಳಿ ಎಂಬುದಾಗಿದೆ. ಇದರಲ್ಲಿ ಎಂಡ್‌ ಟು ಎಂಡ್‌ ಎನ್‌ಕ್ರಿಪ್ಡೆಡ್ ಇದ್ದು ಯಾವುದೇ ಸಂದೇಶ-ಸಂಭಾಷಣೆಯನ್ನು ಬೇರೆಯವರು ತಿಳಿಯಲು ಸಾಧ್ಯವಿಲ್ಲ. ಎಲ್ಲಕ್ಕಿಂತ ಮಿಗಿಲಾಗಿ ಸಿಗ್ನಲ್ ಆಪ್‌ ಅನ್ನು ಸ್ವತಂತ್ರ ಲಾಭರಹಿತ ಸಂಸ್ಥಯು ಅಭಿವೃದ್ದಿಪಡಿಸಿದೆ.


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...