Homeಅಂಕಣಗಳುಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

ಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

- Advertisement -
- Advertisement -

ಈದೇಶದಲ್ಲಿ ದಲಿತರು ಆದಿವಾಸಿಗಳು ಅಲ್ಪಸಂಖ್ಯಾತರು ಮಲತಾಯಿ ಮಕ್ಕಳು. ಛತ್ತೀಸಗಢದ ಬಿಜಾಪುರ ಜಿಲ್ಲೆಯ ಸರ್ಕೇಗುಡದಲ್ಲಿ 2012ರಲ್ಲಿ ಹುಸಿ ಎನ್ಕೌಂಟರೊಂದು ನಡೆಯಿತು. ಆರು ಮಂದಿ ಅಪ್ರಾಪ್ತ ವಯಸ್ಕರೂ ಸೇರಿದಂತೆ 17 ಮಂದಿ ಆದಿವಾಸಿಗಳನ್ನು ಈ ಎನ್ಕೌಂಟರಿನಲ್ಲಿ ಕೊಲ್ಲಲಾಗಿತ್ತು. ಈ ಹತ್ಯಾಕಾಂಡದಲ್ಲಿ ಹತರಾದವರಿಗೆ ಮಾವೋವಾದಿಗಳ ಹಣೆಪಟ್ಟಿ ಹಚ್ಚಿತ್ತು ಅಂದಿನ ರಮಣಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ. ಭಾರೀ ಪ್ರತಿಭಟನೆ ವಿವಾದದ ನಂತರ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿತ್ತು.

ಮಧ್ಯಪ್ರದೇಶ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ವಿ.ಕೆ. ಅಗರವಾಲ ಆಯೋಗ ಸಲ್ಲಿಸಿದ ವರದಿಯನ್ನು 2019ರ ಡಿಸೆಂಬರಿನಲ್ಲಿ ಛತ್ತೀಸಗಢ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಭದ್ರತಾ ಪಡೆಗಳಿಂದ ಹತರಾದ 17 ಮಂದಿಯ ಪೈಕಿ ಯಾರೂ ಮಾವೋವಾದಿಗಳಾಗಿರಲಿಲ್ಲ ಎಂದು ಈ ವರದಿಯಲ್ಲಿ ಹೇಳಲಾಗಿತ್ತು. ಗ್ರಾಮಸ್ಥರನ್ನು ಬಹಳ ಸಮೀಪದಿಂದ ಗುಂಡು ಹಾರಿಸಿ ಕೊಲ್ಲಲಾಗಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಸ್ಥಳೀಯ ಪೊಲೀಸರಿದ್ದ ಭದ್ರತಾ ಪಡೆಯು ಗಾಬರಿಯಲ್ಲಿ ಗುಂಡು ಹಾರಿಸಿರಬೇಕು. ಎನ್ಕೌಂಟರ್ ಜರುಗಿದ್ದು ರಾತ್ರಿಯ ಹೊತ್ತು. ಆದರೆ ಈ 17 ಮಂದಿಯ ಪೈಕಿ ಒಬ್ಬ ಯುವಕನನ್ನು ಬೆಳಿಗ್ಗೆ ಹಿಡಿದು ಗುಂಡು ಹಾರಿಸಿ ಕೊಲ್ಲಲಾಗಿದೆ ಎಂದೂ ಆಯೋಗ ಹೇಳಿತ್ತು.

ಭದ್ರತಾ ಪಡೆಯ ಕೆಲವರಿಗೆ ಆಗಿರುವ ಗಾಯಗಳಿಗೆ ತಮ್ಮದೇ ಸಂಗಾತಿಗಳ ಮತ್ತೊಂದು ತಂಡ ಕತ್ತಲಲ್ಲಿ ಗೊತ್ತಿಲ್ಲದೆ ಹಾರಿಸಿರುವ ಗುಂಡುಗಳೇ ಕಾರಣ. ಆದರೆ ಅಷ್ಟು ಮಂದಿ ಗ್ರಾಮಸ್ಥರ ಹಬ್ಬದ ಆಚರಣೆಯ ಯೋಜನೆಯನ್ನು ಚರ್ಚಿಸಲು ಸೇರಿದ್ದರು ಎಂಬ ಕಾರಣವನ್ನು ನಂಬಲಾಗದು ಎಂದೂ ವರದಿಯಲ್ಲಿ ಸಂದೇಹ ಪ್ರಕಟಿಸಲಾಗಿತ್ತು.

ಬಸಗುಡಾದಿಂದ ಹೊರಟ ಎರಡು ಭದ್ರತಾ ಪಡೆಯ ತಂಡಗಳು ಮೂರು ಕಿ.ಮೀ. ದೂರದ ಸರ್ಕೇಗುಡದಲ್ಲಿ ’ಮಾವೋವಾದಿಗಳ ಸಭೆ’ ನಡೆಯುತ್ತಿದ್ದುದನ್ನು ಕಂಡವು. ಸಭೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರ ಭದ್ರತಾ ಪಡೆಯ ತಂಡಗಳ ಮೇಲೆ ಗುಂಡು ಹಾರಿಸಿದರು. ಭದ್ರತಾ ಪಡೆಗಳು ವಾಪಸು ಗುಂಡು ಹಾರಿಸಿದರು ಎಂಬುದು ಭದ್ರತಾ ಪಡೆಗಳ ಹೇಳಿಕೆಯಾಗಿತ್ತು.

ಆದರೆ ಗ್ರಾಮಸ್ಥರ ಪ್ರಕಾರ ತಾವು ಬೀಜ ಪಂಡುಮ್ ಹಬ್ಬದ ಸಿದ್ಧತೆಗಾಗಿ ಸಭೆ ಸೇರಿದ್ದು. ಭದ್ರತಾ ಪಡೆಗಳು ಅವರನ್ನು ಸುತ್ತುವರೆದು ಗುಂಡು ಹಾರಿಸಿದವು. ಪಡೆಗಳಿಂದ ಹತ್ಯೆಗೀಡಾದ ಮತ್ತು ಗಾಯಗೊಂಡ ಗ್ರಾಮಸ್ಥರ ನಕ್ಸಲೀಯರು ಎನ್ನಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ. ’ದೂರದಲ್ಲಿ ಅನುಮಾನಾಸ್ಪದ ಸದ್ದು ಕೇಳಿಬರುತ್ತಿದೆ ಎಂಬುದಾಗಿ ತಮ್ಮ ’ಮಾರ್ಗದರ್ಶಿ’ಯ ಮಾತಿನಿಂದ ಪ್ರಭಾವಿತರಾದಂತಿರುವ ಪೊಲೀಸರು ಗಾಬರಿಯಾಗಿ ನಕ್ಸಲೀಯರಿದ್ದಾರೆಂದು ಭಾವಿಸಿ ಗುಂಡು ಹಾರಿಸಿ ಗ್ರಾಮಸ್ಥರ ಸಾವು ನೋವುಗಳಿಗೆ ಕಾರಣರಾಗಿದ್ದಾರೆ. ಗ್ರಾಮಸ್ಥರ ಗುಂಡು ಹಾರಿಸಿಲ್ಲವೆಂಬ ಅಂಶವು ಹಿರಿಯ ಪೊಲೀಸ್ ಅಧಿಕಾರಿಗಳಾದ ಎಸ್.ಇಳಂಗೋ ಮತ್ತು ಮನೀಶ್ ಬರ್ಮೋಲ ಅವರ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಸಾಕ್ಷ್ಯಾಧಾರಗಳ ಪ್ರಕಾರ 17 ರಲ್ಲಿ ಹತ್ತು ಮಂದಿ ಬೆನ್ನಿಗೆ ಗುಂಡು ಬಿದ್ದು ಸತ್ತಿದ್ದಾರೆ. ಅರ್ಥಾತ್ ಪರಾರಿಯಾಗುತ್ತಿದ್ದಾಗ ಕೊಲ್ಲಲಾಗಿದೆ. ಕೆಲವರು ತಲೆಗೆ ಗುಂಡು ಬಿದ್ದು ಸತ್ತಿದ್ದಾರೆ. ಈ ಅಂಶಗಳನ್ನು ಗಮನಿಸಿದರೆ ಗುಂಡು ಹಾರಿಸಿದ್ದು ಬಲು ಸಮೀಪದಿಂದಲೇ ವಿನಾ ಪೊಲೀಸರು ಹೇಳುವಂತೆ ದೂರದಿಂದ ಅಲ್ಲ. ಗಾಯಗೊಂಡವರ ಮೈ ಮೇಲಿನ ಗಾಯಗಳು ಕೂಡ ಬಂದೂಕದ ಹಿಡಿಯಿಂದ ಮತ್ತು ಹರಿತ ಅಂಚಿನ ಮತ್ತು ಮೊಂಡು ವಸ್ತುವಿನಿಂದ ಆದಂತಹವು. ಈ ಗಾಯಗಳು ಆದದ್ದು ಹೇಗೆ ಎಂಬುದಕ್ಕೆ ಭದ್ರತಾ ಪಡೆಗಳಿಂದ ಉತ್ತರ ಬರಲಿಲ್ಲ’ ಎಂದು ನ್ಯಾಯಾಂಗ ವರದಿ ಹೇಳಿತ್ತು.

ಹತ್ಯೆಗೀಡಾದವರ ಪೈಕಿ ಕಾಕಾ ಸರಸ್ವತಿ ಮತ್ತು ಕಾಕಾ ನಾಗೇಶ್ 12 ವರ್ಷ ವಯಸ್ಸಿನವರು. ಇರ್ಪಾ ಸುರೇಶ್ ವಯಸ್ಸು ಹದಿನೈದು. ಹಾಪ್ಕಾ ಮಿಟ್ಟೂಗೆ 17 ವರ್ಷ. ಹದಿನೇಳು ವರ್ಷದ ಕುಂಜಮ್ ಮಲ್ಲಾ, ಹದಿನಾರು ವಯಸ್ಸಿನ ಕೊರ್ಸಾ ಬಿಚೆಮ್ ಅವರಂತಹ ಸಣ್ಣ ವಯಸ್ಸಿನವರೂ ಇದ್ದರು. ಇವರನ್ನು ’ಹಾರ್ಡ್ ಕೋರ್’ ನಕ್ಸಲೀಯರು ಎಂದು ಬಣ್ಣಿಸಲಾಗಿತ್ತು. ಅಂದಿನ ಕೇಂದ್ರ ಗೃಹಮಂತ್ರಿ ಪಿ.ಚಿದಂಬರಂ ಅವರಂತೂ ಮೂವರು ಬಹುಮುಖ್ಯ ನಕ್ಸಲೀಯ ನಾಯಕರನ್ನು ಕೊಲ್ಲಲಾಯಿತು ಎಂದು ಎದೆ ಉಬ್ಬಿಸಿದ್ದರು. ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಮತ್ತು ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಈ ಎನ್ಕೌಂಟರನ್ನು ಬಹುದೊಡ್ಡ ಮಾವೋವಾದಿ ಎನ್ಕೌಂಟರ್ ಎಂದು ಬಣ್ಣಿಸಿದ್ದವು. ವರದಿ ಬಂದ ನಂತರ ಚಿದಂಬರಂ ಅವರು ಕ್ಷಮಾಪಣೆ ಕೇಳಬೇಕಾಯಿತು.

ಬಂಡುಕೋರರನ್ನು ಹತ್ತಿಕ್ಕುವ ಯಶಸ್ವೀ ಕಾರ್ಯಾಚರಣೆ ಎಂದು ಈ ನರಮೇಧವನ್ನು ಸರ್ಕಾರ ಬಣ್ಣಿಸಿತ್ತು. ಮುಖ್ಯವಾಹಿನಿಯ ಸಮೂಹ ಮಾಧ್ಯಮಗಳು ಈ ಸುಳ್ಳನ್ನು ಧ್ವನಿವರ್ಧಕ ಹಿಡಿದು ಕೂಗಿ ಹೇಳಿದ್ದವು. ಆದರೆ ಹತ್ಯೆಗೀಡಾದವರು ಅಮಾಯಕ ಗ್ರಾಮಸ್ಥರಷ್ಟೇ ಎಂಬ ಅಂಶವಷ್ಟೇ ಅಲ್ಲ, ಈ ಎನ್ಕೌಂಟರ್ ನಡೆದ ಸ್ಥಳದ ಸುತ್ತಮುತ್ತ ಎಲ್ಲಿಯೂ ಮಾವೋವಾದಿಗಳು ಇದ್ದ ಕುರಿತು ಯಾವ ಸಾಕ್ಷ್ಯವೂ ಸಿಕ್ಕಿಲ್ಲ. ಎನ್ಕೌಂಟರ್ ನಡೆದ ನಂತರ ಈ ನಿರಪರಾಧಿ ಗ್ರಾಮಸ್ಥರ ನರಮೇಧವನ್ನು ಸಮರ್ಥಿಸಲು ಸುಳ್ಳಿನ ಜಾಲವನ್ನೇ ಹೆಣೆಯಲಾಯಿತು ಎಂದು ವರದಿ ಹೇಳಿತ್ತು.

ಎಡಪಂಥೀಯ ಉಗ್ರವಾದದ ನೆಲೆಯೆಂದು ಹೆಸರಾಗಿದ್ದ ಬಿಜಾಪುರದ ಸರ್ಕೇಗುಡ ಅದೇ ಕಾರಣಕ್ಕಾಗಿ ಕೆಂಡದ ಹೊಂಡದ ಮೇಲೆ ಜೀವಿಸಿದ ಗ್ರಾಮ. ಆದಿವಾಸಿಗಳಿಂದಲೇ ಆದಿವಾಸಿಗಳನ್ನು ಬೇಟೆಯಾಡಲು ಛತ್ತೀಸಗಢ ಸರ್ಕಾರ ಕಟ್ಟಿದ ಖಾಸಗಿ ಆದಿವಾಸಿ ಸೇನೆ ಸಲ್ವಾ ಜುದುಮ್ ಈ ಗ್ರಾಮವನ್ನು 2005ರಲ್ಲಿ ಸುಟ್ಟು ಹಾಕಿತ್ತು. 2009ರಲ್ಲಿ ಗ್ರಾಮಸ್ಥರ ಈ ಹಳ್ಳಿಗೆ ವಾಪಸು ಬರಲು ಆರಂಭಿಸಿದ್ದರು. ಬೂದಿಯಾಗಿದ್ದ ತಮ್ಮ ಬದುಕುಗಳನ್ನು ಪುನಃ ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದರು. ನರಮೇಧ ನಡೆದ ರಾತ್ರಿ ನಡೆದ ಗ್ರಾಮಸ್ಥರ ಸಭೆಯಲ್ಲಿ ಬೀಜ ಪಂಡುಮ್ ಉತ್ಸವ ಆಚರಣೆಯ ಜೊತೆಗೆ ಜಾನುವಾರು ಇಲ್ಲದ ಕುಟುಂಬಗಳು ಮತ್ತು ಏಕಮಹಿಳೆಯ ಕುಟುಂಬಗಳಿಗೆ ನೆರವಾಗುವ ಬಗೆ ಎಂತು ಎಂದು ಚರ್ಚಿಸಲಾಗುತ್ತಿತ್ತು. ಆದಿವಾಸಿ ರೂಢಿ ರಿವಾಜುಗಳ ಪ್ರಕಾರ ಉತ್ಸವದ ಸಿದ್ಧತೆಗಳು ರಾತ್ರಿ ನಡೆಯುತ್ತವೆ. ಮರುದಿನ ಮುಂಜಾನೆ ಉತ್ಸವ ಆರಂಭವಾಗುತ್ತದೆ.

ನ್ಯಾಯಾಂಗ ವರದಿ ಬಂದನಂತರ ಈ ನರಮೇಧಕ್ಕೆ ಕಾರಣರಾದವರ ವಿರುದ್ಧ ಅತ್ಯಂತ ಬಿಗಿ ಕ್ರಮವನ್ನು ಜರುಗಿಸಲಾಗುವುದು ಎಂದು ಛತ್ತೀಸಗಢದ ಹಾಲಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಾರಿದ್ದುಂಟು. ಆದರೆ ಎರಡು ವರ್ಷ ಉರುಳಿದರೂ ಹಂತಕರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿಲ್ಲ. ಸರ್ಕೇಗುಡದಲ್ಲಿ ಒಂಬತ್ತು ವರ್ಷಗಳ ಹಿಂದೆ ಜರುಗಿದ ಸರ್ಕಾರಿ ನರಮೇಧದಲ್ಲಿ ಹತರಾದ 17 ಮಂದಿಗೆ ಶ್ರದ್ಧಾಂಜಲಿ ಮೇಳವನ್ನು ಮೊನ್ನೆ ನಡೆಸಲಾಯಿತು. ಸಾವಿರಾರು ಆದಿವಾಸಿಗಳು ಸೇರಿದ್ದರು. ಭಾರೀ ಸಂಖ್ಯೆಯ ಅರೆಸೇನಾ ಪಡೆಗಳು ಈ ಮೇಳವನ್ನು ಸುತ್ತುವರೆದು ನಿಗಾ ಇಟ್ಟಿದ್ದವು.

ಬಿಗಿ ಕ್ರಮ ಕೈಗೊಳ್ಳುವ ಬಾಘೇಲ್ ಸರ್ಕಾರ ತುಟಿ ಹೊಲಿದುಕೊಂಡಿದೆ. ಈ ದೇಶದಲ್ಲಿ ದಲಿತರು ಆದಿವಾಸಿಗಳು ಅಲ್ಪಸಂಖ್ಯಾತರು ಮಲತಾಯಿ ಮಕ್ಕಳು.


ಇದನ್ನೂ ಓದಿ: ಬಹುಜನ ಭಾರತ: ಪಾರುಲ್ ಖಕ್ಕಡ್ ಎಂಬ ಗೃಹಿಣಿ ಬರೆದ ರಾಜಕೀಯ ಕವಿತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

"ಒಳಮೀಸಲಾತಿ ಇಲ್ಲದೆ ಒಂದೇಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ" ಎಂದು ಆಹಾರ...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...