Homeಅಂಕಣಗಳುಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

ಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

- Advertisement -
- Advertisement -

ಈದೇಶದಲ್ಲಿ ದಲಿತರು ಆದಿವಾಸಿಗಳು ಅಲ್ಪಸಂಖ್ಯಾತರು ಮಲತಾಯಿ ಮಕ್ಕಳು. ಛತ್ತೀಸಗಢದ ಬಿಜಾಪುರ ಜಿಲ್ಲೆಯ ಸರ್ಕೇಗುಡದಲ್ಲಿ 2012ರಲ್ಲಿ ಹುಸಿ ಎನ್ಕೌಂಟರೊಂದು ನಡೆಯಿತು. ಆರು ಮಂದಿ ಅಪ್ರಾಪ್ತ ವಯಸ್ಕರೂ ಸೇರಿದಂತೆ 17 ಮಂದಿ ಆದಿವಾಸಿಗಳನ್ನು ಈ ಎನ್ಕೌಂಟರಿನಲ್ಲಿ ಕೊಲ್ಲಲಾಗಿತ್ತು. ಈ ಹತ್ಯಾಕಾಂಡದಲ್ಲಿ ಹತರಾದವರಿಗೆ ಮಾವೋವಾದಿಗಳ ಹಣೆಪಟ್ಟಿ ಹಚ್ಚಿತ್ತು ಅಂದಿನ ರಮಣಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ. ಭಾರೀ ಪ್ರತಿಭಟನೆ ವಿವಾದದ ನಂತರ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿತ್ತು.

ಮಧ್ಯಪ್ರದೇಶ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ವಿ.ಕೆ. ಅಗರವಾಲ ಆಯೋಗ ಸಲ್ಲಿಸಿದ ವರದಿಯನ್ನು 2019ರ ಡಿಸೆಂಬರಿನಲ್ಲಿ ಛತ್ತೀಸಗಢ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಭದ್ರತಾ ಪಡೆಗಳಿಂದ ಹತರಾದ 17 ಮಂದಿಯ ಪೈಕಿ ಯಾರೂ ಮಾವೋವಾದಿಗಳಾಗಿರಲಿಲ್ಲ ಎಂದು ಈ ವರದಿಯಲ್ಲಿ ಹೇಳಲಾಗಿತ್ತು. ಗ್ರಾಮಸ್ಥರನ್ನು ಬಹಳ ಸಮೀಪದಿಂದ ಗುಂಡು ಹಾರಿಸಿ ಕೊಲ್ಲಲಾಗಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಸ್ಥಳೀಯ ಪೊಲೀಸರಿದ್ದ ಭದ್ರತಾ ಪಡೆಯು ಗಾಬರಿಯಲ್ಲಿ ಗುಂಡು ಹಾರಿಸಿರಬೇಕು. ಎನ್ಕೌಂಟರ್ ಜರುಗಿದ್ದು ರಾತ್ರಿಯ ಹೊತ್ತು. ಆದರೆ ಈ 17 ಮಂದಿಯ ಪೈಕಿ ಒಬ್ಬ ಯುವಕನನ್ನು ಬೆಳಿಗ್ಗೆ ಹಿಡಿದು ಗುಂಡು ಹಾರಿಸಿ ಕೊಲ್ಲಲಾಗಿದೆ ಎಂದೂ ಆಯೋಗ ಹೇಳಿತ್ತು.

ಭದ್ರತಾ ಪಡೆಯ ಕೆಲವರಿಗೆ ಆಗಿರುವ ಗಾಯಗಳಿಗೆ ತಮ್ಮದೇ ಸಂಗಾತಿಗಳ ಮತ್ತೊಂದು ತಂಡ ಕತ್ತಲಲ್ಲಿ ಗೊತ್ತಿಲ್ಲದೆ ಹಾರಿಸಿರುವ ಗುಂಡುಗಳೇ ಕಾರಣ. ಆದರೆ ಅಷ್ಟು ಮಂದಿ ಗ್ರಾಮಸ್ಥರ ಹಬ್ಬದ ಆಚರಣೆಯ ಯೋಜನೆಯನ್ನು ಚರ್ಚಿಸಲು ಸೇರಿದ್ದರು ಎಂಬ ಕಾರಣವನ್ನು ನಂಬಲಾಗದು ಎಂದೂ ವರದಿಯಲ್ಲಿ ಸಂದೇಹ ಪ್ರಕಟಿಸಲಾಗಿತ್ತು.

ಬಸಗುಡಾದಿಂದ ಹೊರಟ ಎರಡು ಭದ್ರತಾ ಪಡೆಯ ತಂಡಗಳು ಮೂರು ಕಿ.ಮೀ. ದೂರದ ಸರ್ಕೇಗುಡದಲ್ಲಿ ’ಮಾವೋವಾದಿಗಳ ಸಭೆ’ ನಡೆಯುತ್ತಿದ್ದುದನ್ನು ಕಂಡವು. ಸಭೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರ ಭದ್ರತಾ ಪಡೆಯ ತಂಡಗಳ ಮೇಲೆ ಗುಂಡು ಹಾರಿಸಿದರು. ಭದ್ರತಾ ಪಡೆಗಳು ವಾಪಸು ಗುಂಡು ಹಾರಿಸಿದರು ಎಂಬುದು ಭದ್ರತಾ ಪಡೆಗಳ ಹೇಳಿಕೆಯಾಗಿತ್ತು.

ಆದರೆ ಗ್ರಾಮಸ್ಥರ ಪ್ರಕಾರ ತಾವು ಬೀಜ ಪಂಡುಮ್ ಹಬ್ಬದ ಸಿದ್ಧತೆಗಾಗಿ ಸಭೆ ಸೇರಿದ್ದು. ಭದ್ರತಾ ಪಡೆಗಳು ಅವರನ್ನು ಸುತ್ತುವರೆದು ಗುಂಡು ಹಾರಿಸಿದವು. ಪಡೆಗಳಿಂದ ಹತ್ಯೆಗೀಡಾದ ಮತ್ತು ಗಾಯಗೊಂಡ ಗ್ರಾಮಸ್ಥರ ನಕ್ಸಲೀಯರು ಎನ್ನಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ. ’ದೂರದಲ್ಲಿ ಅನುಮಾನಾಸ್ಪದ ಸದ್ದು ಕೇಳಿಬರುತ್ತಿದೆ ಎಂಬುದಾಗಿ ತಮ್ಮ ’ಮಾರ್ಗದರ್ಶಿ’ಯ ಮಾತಿನಿಂದ ಪ್ರಭಾವಿತರಾದಂತಿರುವ ಪೊಲೀಸರು ಗಾಬರಿಯಾಗಿ ನಕ್ಸಲೀಯರಿದ್ದಾರೆಂದು ಭಾವಿಸಿ ಗುಂಡು ಹಾರಿಸಿ ಗ್ರಾಮಸ್ಥರ ಸಾವು ನೋವುಗಳಿಗೆ ಕಾರಣರಾಗಿದ್ದಾರೆ. ಗ್ರಾಮಸ್ಥರ ಗುಂಡು ಹಾರಿಸಿಲ್ಲವೆಂಬ ಅಂಶವು ಹಿರಿಯ ಪೊಲೀಸ್ ಅಧಿಕಾರಿಗಳಾದ ಎಸ್.ಇಳಂಗೋ ಮತ್ತು ಮನೀಶ್ ಬರ್ಮೋಲ ಅವರ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಸಾಕ್ಷ್ಯಾಧಾರಗಳ ಪ್ರಕಾರ 17 ರಲ್ಲಿ ಹತ್ತು ಮಂದಿ ಬೆನ್ನಿಗೆ ಗುಂಡು ಬಿದ್ದು ಸತ್ತಿದ್ದಾರೆ. ಅರ್ಥಾತ್ ಪರಾರಿಯಾಗುತ್ತಿದ್ದಾಗ ಕೊಲ್ಲಲಾಗಿದೆ. ಕೆಲವರು ತಲೆಗೆ ಗುಂಡು ಬಿದ್ದು ಸತ್ತಿದ್ದಾರೆ. ಈ ಅಂಶಗಳನ್ನು ಗಮನಿಸಿದರೆ ಗುಂಡು ಹಾರಿಸಿದ್ದು ಬಲು ಸಮೀಪದಿಂದಲೇ ವಿನಾ ಪೊಲೀಸರು ಹೇಳುವಂತೆ ದೂರದಿಂದ ಅಲ್ಲ. ಗಾಯಗೊಂಡವರ ಮೈ ಮೇಲಿನ ಗಾಯಗಳು ಕೂಡ ಬಂದೂಕದ ಹಿಡಿಯಿಂದ ಮತ್ತು ಹರಿತ ಅಂಚಿನ ಮತ್ತು ಮೊಂಡು ವಸ್ತುವಿನಿಂದ ಆದಂತಹವು. ಈ ಗಾಯಗಳು ಆದದ್ದು ಹೇಗೆ ಎಂಬುದಕ್ಕೆ ಭದ್ರತಾ ಪಡೆಗಳಿಂದ ಉತ್ತರ ಬರಲಿಲ್ಲ’ ಎಂದು ನ್ಯಾಯಾಂಗ ವರದಿ ಹೇಳಿತ್ತು.

ಹತ್ಯೆಗೀಡಾದವರ ಪೈಕಿ ಕಾಕಾ ಸರಸ್ವತಿ ಮತ್ತು ಕಾಕಾ ನಾಗೇಶ್ 12 ವರ್ಷ ವಯಸ್ಸಿನವರು. ಇರ್ಪಾ ಸುರೇಶ್ ವಯಸ್ಸು ಹದಿನೈದು. ಹಾಪ್ಕಾ ಮಿಟ್ಟೂಗೆ 17 ವರ್ಷ. ಹದಿನೇಳು ವರ್ಷದ ಕುಂಜಮ್ ಮಲ್ಲಾ, ಹದಿನಾರು ವಯಸ್ಸಿನ ಕೊರ್ಸಾ ಬಿಚೆಮ್ ಅವರಂತಹ ಸಣ್ಣ ವಯಸ್ಸಿನವರೂ ಇದ್ದರು. ಇವರನ್ನು ’ಹಾರ್ಡ್ ಕೋರ್’ ನಕ್ಸಲೀಯರು ಎಂದು ಬಣ್ಣಿಸಲಾಗಿತ್ತು. ಅಂದಿನ ಕೇಂದ್ರ ಗೃಹಮಂತ್ರಿ ಪಿ.ಚಿದಂಬರಂ ಅವರಂತೂ ಮೂವರು ಬಹುಮುಖ್ಯ ನಕ್ಸಲೀಯ ನಾಯಕರನ್ನು ಕೊಲ್ಲಲಾಯಿತು ಎಂದು ಎದೆ ಉಬ್ಬಿಸಿದ್ದರು. ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಮತ್ತು ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಈ ಎನ್ಕೌಂಟರನ್ನು ಬಹುದೊಡ್ಡ ಮಾವೋವಾದಿ ಎನ್ಕೌಂಟರ್ ಎಂದು ಬಣ್ಣಿಸಿದ್ದವು. ವರದಿ ಬಂದ ನಂತರ ಚಿದಂಬರಂ ಅವರು ಕ್ಷಮಾಪಣೆ ಕೇಳಬೇಕಾಯಿತು.

ಬಂಡುಕೋರರನ್ನು ಹತ್ತಿಕ್ಕುವ ಯಶಸ್ವೀ ಕಾರ್ಯಾಚರಣೆ ಎಂದು ಈ ನರಮೇಧವನ್ನು ಸರ್ಕಾರ ಬಣ್ಣಿಸಿತ್ತು. ಮುಖ್ಯವಾಹಿನಿಯ ಸಮೂಹ ಮಾಧ್ಯಮಗಳು ಈ ಸುಳ್ಳನ್ನು ಧ್ವನಿವರ್ಧಕ ಹಿಡಿದು ಕೂಗಿ ಹೇಳಿದ್ದವು. ಆದರೆ ಹತ್ಯೆಗೀಡಾದವರು ಅಮಾಯಕ ಗ್ರಾಮಸ್ಥರಷ್ಟೇ ಎಂಬ ಅಂಶವಷ್ಟೇ ಅಲ್ಲ, ಈ ಎನ್ಕೌಂಟರ್ ನಡೆದ ಸ್ಥಳದ ಸುತ್ತಮುತ್ತ ಎಲ್ಲಿಯೂ ಮಾವೋವಾದಿಗಳು ಇದ್ದ ಕುರಿತು ಯಾವ ಸಾಕ್ಷ್ಯವೂ ಸಿಕ್ಕಿಲ್ಲ. ಎನ್ಕೌಂಟರ್ ನಡೆದ ನಂತರ ಈ ನಿರಪರಾಧಿ ಗ್ರಾಮಸ್ಥರ ನರಮೇಧವನ್ನು ಸಮರ್ಥಿಸಲು ಸುಳ್ಳಿನ ಜಾಲವನ್ನೇ ಹೆಣೆಯಲಾಯಿತು ಎಂದು ವರದಿ ಹೇಳಿತ್ತು.

ಎಡಪಂಥೀಯ ಉಗ್ರವಾದದ ನೆಲೆಯೆಂದು ಹೆಸರಾಗಿದ್ದ ಬಿಜಾಪುರದ ಸರ್ಕೇಗುಡ ಅದೇ ಕಾರಣಕ್ಕಾಗಿ ಕೆಂಡದ ಹೊಂಡದ ಮೇಲೆ ಜೀವಿಸಿದ ಗ್ರಾಮ. ಆದಿವಾಸಿಗಳಿಂದಲೇ ಆದಿವಾಸಿಗಳನ್ನು ಬೇಟೆಯಾಡಲು ಛತ್ತೀಸಗಢ ಸರ್ಕಾರ ಕಟ್ಟಿದ ಖಾಸಗಿ ಆದಿವಾಸಿ ಸೇನೆ ಸಲ್ವಾ ಜುದುಮ್ ಈ ಗ್ರಾಮವನ್ನು 2005ರಲ್ಲಿ ಸುಟ್ಟು ಹಾಕಿತ್ತು. 2009ರಲ್ಲಿ ಗ್ರಾಮಸ್ಥರ ಈ ಹಳ್ಳಿಗೆ ವಾಪಸು ಬರಲು ಆರಂಭಿಸಿದ್ದರು. ಬೂದಿಯಾಗಿದ್ದ ತಮ್ಮ ಬದುಕುಗಳನ್ನು ಪುನಃ ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದರು. ನರಮೇಧ ನಡೆದ ರಾತ್ರಿ ನಡೆದ ಗ್ರಾಮಸ್ಥರ ಸಭೆಯಲ್ಲಿ ಬೀಜ ಪಂಡುಮ್ ಉತ್ಸವ ಆಚರಣೆಯ ಜೊತೆಗೆ ಜಾನುವಾರು ಇಲ್ಲದ ಕುಟುಂಬಗಳು ಮತ್ತು ಏಕಮಹಿಳೆಯ ಕುಟುಂಬಗಳಿಗೆ ನೆರವಾಗುವ ಬಗೆ ಎಂತು ಎಂದು ಚರ್ಚಿಸಲಾಗುತ್ತಿತ್ತು. ಆದಿವಾಸಿ ರೂಢಿ ರಿವಾಜುಗಳ ಪ್ರಕಾರ ಉತ್ಸವದ ಸಿದ್ಧತೆಗಳು ರಾತ್ರಿ ನಡೆಯುತ್ತವೆ. ಮರುದಿನ ಮುಂಜಾನೆ ಉತ್ಸವ ಆರಂಭವಾಗುತ್ತದೆ.

ನ್ಯಾಯಾಂಗ ವರದಿ ಬಂದನಂತರ ಈ ನರಮೇಧಕ್ಕೆ ಕಾರಣರಾದವರ ವಿರುದ್ಧ ಅತ್ಯಂತ ಬಿಗಿ ಕ್ರಮವನ್ನು ಜರುಗಿಸಲಾಗುವುದು ಎಂದು ಛತ್ತೀಸಗಢದ ಹಾಲಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಾರಿದ್ದುಂಟು. ಆದರೆ ಎರಡು ವರ್ಷ ಉರುಳಿದರೂ ಹಂತಕರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿಲ್ಲ. ಸರ್ಕೇಗುಡದಲ್ಲಿ ಒಂಬತ್ತು ವರ್ಷಗಳ ಹಿಂದೆ ಜರುಗಿದ ಸರ್ಕಾರಿ ನರಮೇಧದಲ್ಲಿ ಹತರಾದ 17 ಮಂದಿಗೆ ಶ್ರದ್ಧಾಂಜಲಿ ಮೇಳವನ್ನು ಮೊನ್ನೆ ನಡೆಸಲಾಯಿತು. ಸಾವಿರಾರು ಆದಿವಾಸಿಗಳು ಸೇರಿದ್ದರು. ಭಾರೀ ಸಂಖ್ಯೆಯ ಅರೆಸೇನಾ ಪಡೆಗಳು ಈ ಮೇಳವನ್ನು ಸುತ್ತುವರೆದು ನಿಗಾ ಇಟ್ಟಿದ್ದವು.

ಬಿಗಿ ಕ್ರಮ ಕೈಗೊಳ್ಳುವ ಬಾಘೇಲ್ ಸರ್ಕಾರ ತುಟಿ ಹೊಲಿದುಕೊಂಡಿದೆ. ಈ ದೇಶದಲ್ಲಿ ದಲಿತರು ಆದಿವಾಸಿಗಳು ಅಲ್ಪಸಂಖ್ಯಾತರು ಮಲತಾಯಿ ಮಕ್ಕಳು.


ಇದನ್ನೂ ಓದಿ: ಬಹುಜನ ಭಾರತ: ಪಾರುಲ್ ಖಕ್ಕಡ್ ಎಂಬ ಗೃಹಿಣಿ ಬರೆದ ರಾಜಕೀಯ ಕವಿತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...