Homeಅಂಕಣಗಳುಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

ಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

- Advertisement -
- Advertisement -

ಈದೇಶದಲ್ಲಿ ದಲಿತರು ಆದಿವಾಸಿಗಳು ಅಲ್ಪಸಂಖ್ಯಾತರು ಮಲತಾಯಿ ಮಕ್ಕಳು. ಛತ್ತೀಸಗಢದ ಬಿಜಾಪುರ ಜಿಲ್ಲೆಯ ಸರ್ಕೇಗುಡದಲ್ಲಿ 2012ರಲ್ಲಿ ಹುಸಿ ಎನ್ಕೌಂಟರೊಂದು ನಡೆಯಿತು. ಆರು ಮಂದಿ ಅಪ್ರಾಪ್ತ ವಯಸ್ಕರೂ ಸೇರಿದಂತೆ 17 ಮಂದಿ ಆದಿವಾಸಿಗಳನ್ನು ಈ ಎನ್ಕೌಂಟರಿನಲ್ಲಿ ಕೊಲ್ಲಲಾಗಿತ್ತು. ಈ ಹತ್ಯಾಕಾಂಡದಲ್ಲಿ ಹತರಾದವರಿಗೆ ಮಾವೋವಾದಿಗಳ ಹಣೆಪಟ್ಟಿ ಹಚ್ಚಿತ್ತು ಅಂದಿನ ರಮಣಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ. ಭಾರೀ ಪ್ರತಿಭಟನೆ ವಿವಾದದ ನಂತರ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿತ್ತು.

ಮಧ್ಯಪ್ರದೇಶ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ವಿ.ಕೆ. ಅಗರವಾಲ ಆಯೋಗ ಸಲ್ಲಿಸಿದ ವರದಿಯನ್ನು 2019ರ ಡಿಸೆಂಬರಿನಲ್ಲಿ ಛತ್ತೀಸಗಢ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಭದ್ರತಾ ಪಡೆಗಳಿಂದ ಹತರಾದ 17 ಮಂದಿಯ ಪೈಕಿ ಯಾರೂ ಮಾವೋವಾದಿಗಳಾಗಿರಲಿಲ್ಲ ಎಂದು ಈ ವರದಿಯಲ್ಲಿ ಹೇಳಲಾಗಿತ್ತು. ಗ್ರಾಮಸ್ಥರನ್ನು ಬಹಳ ಸಮೀಪದಿಂದ ಗುಂಡು ಹಾರಿಸಿ ಕೊಲ್ಲಲಾಗಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಸ್ಥಳೀಯ ಪೊಲೀಸರಿದ್ದ ಭದ್ರತಾ ಪಡೆಯು ಗಾಬರಿಯಲ್ಲಿ ಗುಂಡು ಹಾರಿಸಿರಬೇಕು. ಎನ್ಕೌಂಟರ್ ಜರುಗಿದ್ದು ರಾತ್ರಿಯ ಹೊತ್ತು. ಆದರೆ ಈ 17 ಮಂದಿಯ ಪೈಕಿ ಒಬ್ಬ ಯುವಕನನ್ನು ಬೆಳಿಗ್ಗೆ ಹಿಡಿದು ಗುಂಡು ಹಾರಿಸಿ ಕೊಲ್ಲಲಾಗಿದೆ ಎಂದೂ ಆಯೋಗ ಹೇಳಿತ್ತು.

ಭದ್ರತಾ ಪಡೆಯ ಕೆಲವರಿಗೆ ಆಗಿರುವ ಗಾಯಗಳಿಗೆ ತಮ್ಮದೇ ಸಂಗಾತಿಗಳ ಮತ್ತೊಂದು ತಂಡ ಕತ್ತಲಲ್ಲಿ ಗೊತ್ತಿಲ್ಲದೆ ಹಾರಿಸಿರುವ ಗುಂಡುಗಳೇ ಕಾರಣ. ಆದರೆ ಅಷ್ಟು ಮಂದಿ ಗ್ರಾಮಸ್ಥರ ಹಬ್ಬದ ಆಚರಣೆಯ ಯೋಜನೆಯನ್ನು ಚರ್ಚಿಸಲು ಸೇರಿದ್ದರು ಎಂಬ ಕಾರಣವನ್ನು ನಂಬಲಾಗದು ಎಂದೂ ವರದಿಯಲ್ಲಿ ಸಂದೇಹ ಪ್ರಕಟಿಸಲಾಗಿತ್ತು.

ಬಸಗುಡಾದಿಂದ ಹೊರಟ ಎರಡು ಭದ್ರತಾ ಪಡೆಯ ತಂಡಗಳು ಮೂರು ಕಿ.ಮೀ. ದೂರದ ಸರ್ಕೇಗುಡದಲ್ಲಿ ’ಮಾವೋವಾದಿಗಳ ಸಭೆ’ ನಡೆಯುತ್ತಿದ್ದುದನ್ನು ಕಂಡವು. ಸಭೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರ ಭದ್ರತಾ ಪಡೆಯ ತಂಡಗಳ ಮೇಲೆ ಗುಂಡು ಹಾರಿಸಿದರು. ಭದ್ರತಾ ಪಡೆಗಳು ವಾಪಸು ಗುಂಡು ಹಾರಿಸಿದರು ಎಂಬುದು ಭದ್ರತಾ ಪಡೆಗಳ ಹೇಳಿಕೆಯಾಗಿತ್ತು.

ಆದರೆ ಗ್ರಾಮಸ್ಥರ ಪ್ರಕಾರ ತಾವು ಬೀಜ ಪಂಡುಮ್ ಹಬ್ಬದ ಸಿದ್ಧತೆಗಾಗಿ ಸಭೆ ಸೇರಿದ್ದು. ಭದ್ರತಾ ಪಡೆಗಳು ಅವರನ್ನು ಸುತ್ತುವರೆದು ಗುಂಡು ಹಾರಿಸಿದವು. ಪಡೆಗಳಿಂದ ಹತ್ಯೆಗೀಡಾದ ಮತ್ತು ಗಾಯಗೊಂಡ ಗ್ರಾಮಸ್ಥರ ನಕ್ಸಲೀಯರು ಎನ್ನಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ. ’ದೂರದಲ್ಲಿ ಅನುಮಾನಾಸ್ಪದ ಸದ್ದು ಕೇಳಿಬರುತ್ತಿದೆ ಎಂಬುದಾಗಿ ತಮ್ಮ ’ಮಾರ್ಗದರ್ಶಿ’ಯ ಮಾತಿನಿಂದ ಪ್ರಭಾವಿತರಾದಂತಿರುವ ಪೊಲೀಸರು ಗಾಬರಿಯಾಗಿ ನಕ್ಸಲೀಯರಿದ್ದಾರೆಂದು ಭಾವಿಸಿ ಗುಂಡು ಹಾರಿಸಿ ಗ್ರಾಮಸ್ಥರ ಸಾವು ನೋವುಗಳಿಗೆ ಕಾರಣರಾಗಿದ್ದಾರೆ. ಗ್ರಾಮಸ್ಥರ ಗುಂಡು ಹಾರಿಸಿಲ್ಲವೆಂಬ ಅಂಶವು ಹಿರಿಯ ಪೊಲೀಸ್ ಅಧಿಕಾರಿಗಳಾದ ಎಸ್.ಇಳಂಗೋ ಮತ್ತು ಮನೀಶ್ ಬರ್ಮೋಲ ಅವರ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಸಾಕ್ಷ್ಯಾಧಾರಗಳ ಪ್ರಕಾರ 17 ರಲ್ಲಿ ಹತ್ತು ಮಂದಿ ಬೆನ್ನಿಗೆ ಗುಂಡು ಬಿದ್ದು ಸತ್ತಿದ್ದಾರೆ. ಅರ್ಥಾತ್ ಪರಾರಿಯಾಗುತ್ತಿದ್ದಾಗ ಕೊಲ್ಲಲಾಗಿದೆ. ಕೆಲವರು ತಲೆಗೆ ಗುಂಡು ಬಿದ್ದು ಸತ್ತಿದ್ದಾರೆ. ಈ ಅಂಶಗಳನ್ನು ಗಮನಿಸಿದರೆ ಗುಂಡು ಹಾರಿಸಿದ್ದು ಬಲು ಸಮೀಪದಿಂದಲೇ ವಿನಾ ಪೊಲೀಸರು ಹೇಳುವಂತೆ ದೂರದಿಂದ ಅಲ್ಲ. ಗಾಯಗೊಂಡವರ ಮೈ ಮೇಲಿನ ಗಾಯಗಳು ಕೂಡ ಬಂದೂಕದ ಹಿಡಿಯಿಂದ ಮತ್ತು ಹರಿತ ಅಂಚಿನ ಮತ್ತು ಮೊಂಡು ವಸ್ತುವಿನಿಂದ ಆದಂತಹವು. ಈ ಗಾಯಗಳು ಆದದ್ದು ಹೇಗೆ ಎಂಬುದಕ್ಕೆ ಭದ್ರತಾ ಪಡೆಗಳಿಂದ ಉತ್ತರ ಬರಲಿಲ್ಲ’ ಎಂದು ನ್ಯಾಯಾಂಗ ವರದಿ ಹೇಳಿತ್ತು.

ಹತ್ಯೆಗೀಡಾದವರ ಪೈಕಿ ಕಾಕಾ ಸರಸ್ವತಿ ಮತ್ತು ಕಾಕಾ ನಾಗೇಶ್ 12 ವರ್ಷ ವಯಸ್ಸಿನವರು. ಇರ್ಪಾ ಸುರೇಶ್ ವಯಸ್ಸು ಹದಿನೈದು. ಹಾಪ್ಕಾ ಮಿಟ್ಟೂಗೆ 17 ವರ್ಷ. ಹದಿನೇಳು ವರ್ಷದ ಕುಂಜಮ್ ಮಲ್ಲಾ, ಹದಿನಾರು ವಯಸ್ಸಿನ ಕೊರ್ಸಾ ಬಿಚೆಮ್ ಅವರಂತಹ ಸಣ್ಣ ವಯಸ್ಸಿನವರೂ ಇದ್ದರು. ಇವರನ್ನು ’ಹಾರ್ಡ್ ಕೋರ್’ ನಕ್ಸಲೀಯರು ಎಂದು ಬಣ್ಣಿಸಲಾಗಿತ್ತು. ಅಂದಿನ ಕೇಂದ್ರ ಗೃಹಮಂತ್ರಿ ಪಿ.ಚಿದಂಬರಂ ಅವರಂತೂ ಮೂವರು ಬಹುಮುಖ್ಯ ನಕ್ಸಲೀಯ ನಾಯಕರನ್ನು ಕೊಲ್ಲಲಾಯಿತು ಎಂದು ಎದೆ ಉಬ್ಬಿಸಿದ್ದರು. ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಮತ್ತು ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಈ ಎನ್ಕೌಂಟರನ್ನು ಬಹುದೊಡ್ಡ ಮಾವೋವಾದಿ ಎನ್ಕೌಂಟರ್ ಎಂದು ಬಣ್ಣಿಸಿದ್ದವು. ವರದಿ ಬಂದ ನಂತರ ಚಿದಂಬರಂ ಅವರು ಕ್ಷಮಾಪಣೆ ಕೇಳಬೇಕಾಯಿತು.

ಬಂಡುಕೋರರನ್ನು ಹತ್ತಿಕ್ಕುವ ಯಶಸ್ವೀ ಕಾರ್ಯಾಚರಣೆ ಎಂದು ಈ ನರಮೇಧವನ್ನು ಸರ್ಕಾರ ಬಣ್ಣಿಸಿತ್ತು. ಮುಖ್ಯವಾಹಿನಿಯ ಸಮೂಹ ಮಾಧ್ಯಮಗಳು ಈ ಸುಳ್ಳನ್ನು ಧ್ವನಿವರ್ಧಕ ಹಿಡಿದು ಕೂಗಿ ಹೇಳಿದ್ದವು. ಆದರೆ ಹತ್ಯೆಗೀಡಾದವರು ಅಮಾಯಕ ಗ್ರಾಮಸ್ಥರಷ್ಟೇ ಎಂಬ ಅಂಶವಷ್ಟೇ ಅಲ್ಲ, ಈ ಎನ್ಕೌಂಟರ್ ನಡೆದ ಸ್ಥಳದ ಸುತ್ತಮುತ್ತ ಎಲ್ಲಿಯೂ ಮಾವೋವಾದಿಗಳು ಇದ್ದ ಕುರಿತು ಯಾವ ಸಾಕ್ಷ್ಯವೂ ಸಿಕ್ಕಿಲ್ಲ. ಎನ್ಕೌಂಟರ್ ನಡೆದ ನಂತರ ಈ ನಿರಪರಾಧಿ ಗ್ರಾಮಸ್ಥರ ನರಮೇಧವನ್ನು ಸಮರ್ಥಿಸಲು ಸುಳ್ಳಿನ ಜಾಲವನ್ನೇ ಹೆಣೆಯಲಾಯಿತು ಎಂದು ವರದಿ ಹೇಳಿತ್ತು.

ಎಡಪಂಥೀಯ ಉಗ್ರವಾದದ ನೆಲೆಯೆಂದು ಹೆಸರಾಗಿದ್ದ ಬಿಜಾಪುರದ ಸರ್ಕೇಗುಡ ಅದೇ ಕಾರಣಕ್ಕಾಗಿ ಕೆಂಡದ ಹೊಂಡದ ಮೇಲೆ ಜೀವಿಸಿದ ಗ್ರಾಮ. ಆದಿವಾಸಿಗಳಿಂದಲೇ ಆದಿವಾಸಿಗಳನ್ನು ಬೇಟೆಯಾಡಲು ಛತ್ತೀಸಗಢ ಸರ್ಕಾರ ಕಟ್ಟಿದ ಖಾಸಗಿ ಆದಿವಾಸಿ ಸೇನೆ ಸಲ್ವಾ ಜುದುಮ್ ಈ ಗ್ರಾಮವನ್ನು 2005ರಲ್ಲಿ ಸುಟ್ಟು ಹಾಕಿತ್ತು. 2009ರಲ್ಲಿ ಗ್ರಾಮಸ್ಥರ ಈ ಹಳ್ಳಿಗೆ ವಾಪಸು ಬರಲು ಆರಂಭಿಸಿದ್ದರು. ಬೂದಿಯಾಗಿದ್ದ ತಮ್ಮ ಬದುಕುಗಳನ್ನು ಪುನಃ ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದರು. ನರಮೇಧ ನಡೆದ ರಾತ್ರಿ ನಡೆದ ಗ್ರಾಮಸ್ಥರ ಸಭೆಯಲ್ಲಿ ಬೀಜ ಪಂಡುಮ್ ಉತ್ಸವ ಆಚರಣೆಯ ಜೊತೆಗೆ ಜಾನುವಾರು ಇಲ್ಲದ ಕುಟುಂಬಗಳು ಮತ್ತು ಏಕಮಹಿಳೆಯ ಕುಟುಂಬಗಳಿಗೆ ನೆರವಾಗುವ ಬಗೆ ಎಂತು ಎಂದು ಚರ್ಚಿಸಲಾಗುತ್ತಿತ್ತು. ಆದಿವಾಸಿ ರೂಢಿ ರಿವಾಜುಗಳ ಪ್ರಕಾರ ಉತ್ಸವದ ಸಿದ್ಧತೆಗಳು ರಾತ್ರಿ ನಡೆಯುತ್ತವೆ. ಮರುದಿನ ಮುಂಜಾನೆ ಉತ್ಸವ ಆರಂಭವಾಗುತ್ತದೆ.

ನ್ಯಾಯಾಂಗ ವರದಿ ಬಂದನಂತರ ಈ ನರಮೇಧಕ್ಕೆ ಕಾರಣರಾದವರ ವಿರುದ್ಧ ಅತ್ಯಂತ ಬಿಗಿ ಕ್ರಮವನ್ನು ಜರುಗಿಸಲಾಗುವುದು ಎಂದು ಛತ್ತೀಸಗಢದ ಹಾಲಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಾರಿದ್ದುಂಟು. ಆದರೆ ಎರಡು ವರ್ಷ ಉರುಳಿದರೂ ಹಂತಕರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿಲ್ಲ. ಸರ್ಕೇಗುಡದಲ್ಲಿ ಒಂಬತ್ತು ವರ್ಷಗಳ ಹಿಂದೆ ಜರುಗಿದ ಸರ್ಕಾರಿ ನರಮೇಧದಲ್ಲಿ ಹತರಾದ 17 ಮಂದಿಗೆ ಶ್ರದ್ಧಾಂಜಲಿ ಮೇಳವನ್ನು ಮೊನ್ನೆ ನಡೆಸಲಾಯಿತು. ಸಾವಿರಾರು ಆದಿವಾಸಿಗಳು ಸೇರಿದ್ದರು. ಭಾರೀ ಸಂಖ್ಯೆಯ ಅರೆಸೇನಾ ಪಡೆಗಳು ಈ ಮೇಳವನ್ನು ಸುತ್ತುವರೆದು ನಿಗಾ ಇಟ್ಟಿದ್ದವು.

ಬಿಗಿ ಕ್ರಮ ಕೈಗೊಳ್ಳುವ ಬಾಘೇಲ್ ಸರ್ಕಾರ ತುಟಿ ಹೊಲಿದುಕೊಂಡಿದೆ. ಈ ದೇಶದಲ್ಲಿ ದಲಿತರು ಆದಿವಾಸಿಗಳು ಅಲ್ಪಸಂಖ್ಯಾತರು ಮಲತಾಯಿ ಮಕ್ಕಳು.


ಇದನ್ನೂ ಓದಿ: ಬಹುಜನ ಭಾರತ: ಪಾರುಲ್ ಖಕ್ಕಡ್ ಎಂಬ ಗೃಹಿಣಿ ಬರೆದ ರಾಜಕೀಯ ಕವಿತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...