Homeಅಂಕಣಗಳುಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

ಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

- Advertisement -
- Advertisement -

ಈದೇಶದಲ್ಲಿ ದಲಿತರು ಆದಿವಾಸಿಗಳು ಅಲ್ಪಸಂಖ್ಯಾತರು ಮಲತಾಯಿ ಮಕ್ಕಳು. ಛತ್ತೀಸಗಢದ ಬಿಜಾಪುರ ಜಿಲ್ಲೆಯ ಸರ್ಕೇಗುಡದಲ್ಲಿ 2012ರಲ್ಲಿ ಹುಸಿ ಎನ್ಕೌಂಟರೊಂದು ನಡೆಯಿತು. ಆರು ಮಂದಿ ಅಪ್ರಾಪ್ತ ವಯಸ್ಕರೂ ಸೇರಿದಂತೆ 17 ಮಂದಿ ಆದಿವಾಸಿಗಳನ್ನು ಈ ಎನ್ಕೌಂಟರಿನಲ್ಲಿ ಕೊಲ್ಲಲಾಗಿತ್ತು. ಈ ಹತ್ಯಾಕಾಂಡದಲ್ಲಿ ಹತರಾದವರಿಗೆ ಮಾವೋವಾದಿಗಳ ಹಣೆಪಟ್ಟಿ ಹಚ್ಚಿತ್ತು ಅಂದಿನ ರಮಣಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ. ಭಾರೀ ಪ್ರತಿಭಟನೆ ವಿವಾದದ ನಂತರ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿತ್ತು.

ಮಧ್ಯಪ್ರದೇಶ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ವಿ.ಕೆ. ಅಗರವಾಲ ಆಯೋಗ ಸಲ್ಲಿಸಿದ ವರದಿಯನ್ನು 2019ರ ಡಿಸೆಂಬರಿನಲ್ಲಿ ಛತ್ತೀಸಗಢ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಭದ್ರತಾ ಪಡೆಗಳಿಂದ ಹತರಾದ 17 ಮಂದಿಯ ಪೈಕಿ ಯಾರೂ ಮಾವೋವಾದಿಗಳಾಗಿರಲಿಲ್ಲ ಎಂದು ಈ ವರದಿಯಲ್ಲಿ ಹೇಳಲಾಗಿತ್ತು. ಗ್ರಾಮಸ್ಥರನ್ನು ಬಹಳ ಸಮೀಪದಿಂದ ಗುಂಡು ಹಾರಿಸಿ ಕೊಲ್ಲಲಾಗಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಸ್ಥಳೀಯ ಪೊಲೀಸರಿದ್ದ ಭದ್ರತಾ ಪಡೆಯು ಗಾಬರಿಯಲ್ಲಿ ಗುಂಡು ಹಾರಿಸಿರಬೇಕು. ಎನ್ಕೌಂಟರ್ ಜರುಗಿದ್ದು ರಾತ್ರಿಯ ಹೊತ್ತು. ಆದರೆ ಈ 17 ಮಂದಿಯ ಪೈಕಿ ಒಬ್ಬ ಯುವಕನನ್ನು ಬೆಳಿಗ್ಗೆ ಹಿಡಿದು ಗುಂಡು ಹಾರಿಸಿ ಕೊಲ್ಲಲಾಗಿದೆ ಎಂದೂ ಆಯೋಗ ಹೇಳಿತ್ತು.

ಭದ್ರತಾ ಪಡೆಯ ಕೆಲವರಿಗೆ ಆಗಿರುವ ಗಾಯಗಳಿಗೆ ತಮ್ಮದೇ ಸಂಗಾತಿಗಳ ಮತ್ತೊಂದು ತಂಡ ಕತ್ತಲಲ್ಲಿ ಗೊತ್ತಿಲ್ಲದೆ ಹಾರಿಸಿರುವ ಗುಂಡುಗಳೇ ಕಾರಣ. ಆದರೆ ಅಷ್ಟು ಮಂದಿ ಗ್ರಾಮಸ್ಥರ ಹಬ್ಬದ ಆಚರಣೆಯ ಯೋಜನೆಯನ್ನು ಚರ್ಚಿಸಲು ಸೇರಿದ್ದರು ಎಂಬ ಕಾರಣವನ್ನು ನಂಬಲಾಗದು ಎಂದೂ ವರದಿಯಲ್ಲಿ ಸಂದೇಹ ಪ್ರಕಟಿಸಲಾಗಿತ್ತು.

ಬಸಗುಡಾದಿಂದ ಹೊರಟ ಎರಡು ಭದ್ರತಾ ಪಡೆಯ ತಂಡಗಳು ಮೂರು ಕಿ.ಮೀ. ದೂರದ ಸರ್ಕೇಗುಡದಲ್ಲಿ ’ಮಾವೋವಾದಿಗಳ ಸಭೆ’ ನಡೆಯುತ್ತಿದ್ದುದನ್ನು ಕಂಡವು. ಸಭೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರ ಭದ್ರತಾ ಪಡೆಯ ತಂಡಗಳ ಮೇಲೆ ಗುಂಡು ಹಾರಿಸಿದರು. ಭದ್ರತಾ ಪಡೆಗಳು ವಾಪಸು ಗುಂಡು ಹಾರಿಸಿದರು ಎಂಬುದು ಭದ್ರತಾ ಪಡೆಗಳ ಹೇಳಿಕೆಯಾಗಿತ್ತು.

ಆದರೆ ಗ್ರಾಮಸ್ಥರ ಪ್ರಕಾರ ತಾವು ಬೀಜ ಪಂಡುಮ್ ಹಬ್ಬದ ಸಿದ್ಧತೆಗಾಗಿ ಸಭೆ ಸೇರಿದ್ದು. ಭದ್ರತಾ ಪಡೆಗಳು ಅವರನ್ನು ಸುತ್ತುವರೆದು ಗುಂಡು ಹಾರಿಸಿದವು. ಪಡೆಗಳಿಂದ ಹತ್ಯೆಗೀಡಾದ ಮತ್ತು ಗಾಯಗೊಂಡ ಗ್ರಾಮಸ್ಥರ ನಕ್ಸಲೀಯರು ಎನ್ನಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ. ’ದೂರದಲ್ಲಿ ಅನುಮಾನಾಸ್ಪದ ಸದ್ದು ಕೇಳಿಬರುತ್ತಿದೆ ಎಂಬುದಾಗಿ ತಮ್ಮ ’ಮಾರ್ಗದರ್ಶಿ’ಯ ಮಾತಿನಿಂದ ಪ್ರಭಾವಿತರಾದಂತಿರುವ ಪೊಲೀಸರು ಗಾಬರಿಯಾಗಿ ನಕ್ಸಲೀಯರಿದ್ದಾರೆಂದು ಭಾವಿಸಿ ಗುಂಡು ಹಾರಿಸಿ ಗ್ರಾಮಸ್ಥರ ಸಾವು ನೋವುಗಳಿಗೆ ಕಾರಣರಾಗಿದ್ದಾರೆ. ಗ್ರಾಮಸ್ಥರ ಗುಂಡು ಹಾರಿಸಿಲ್ಲವೆಂಬ ಅಂಶವು ಹಿರಿಯ ಪೊಲೀಸ್ ಅಧಿಕಾರಿಗಳಾದ ಎಸ್.ಇಳಂಗೋ ಮತ್ತು ಮನೀಶ್ ಬರ್ಮೋಲ ಅವರ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಸಾಕ್ಷ್ಯಾಧಾರಗಳ ಪ್ರಕಾರ 17 ರಲ್ಲಿ ಹತ್ತು ಮಂದಿ ಬೆನ್ನಿಗೆ ಗುಂಡು ಬಿದ್ದು ಸತ್ತಿದ್ದಾರೆ. ಅರ್ಥಾತ್ ಪರಾರಿಯಾಗುತ್ತಿದ್ದಾಗ ಕೊಲ್ಲಲಾಗಿದೆ. ಕೆಲವರು ತಲೆಗೆ ಗುಂಡು ಬಿದ್ದು ಸತ್ತಿದ್ದಾರೆ. ಈ ಅಂಶಗಳನ್ನು ಗಮನಿಸಿದರೆ ಗುಂಡು ಹಾರಿಸಿದ್ದು ಬಲು ಸಮೀಪದಿಂದಲೇ ವಿನಾ ಪೊಲೀಸರು ಹೇಳುವಂತೆ ದೂರದಿಂದ ಅಲ್ಲ. ಗಾಯಗೊಂಡವರ ಮೈ ಮೇಲಿನ ಗಾಯಗಳು ಕೂಡ ಬಂದೂಕದ ಹಿಡಿಯಿಂದ ಮತ್ತು ಹರಿತ ಅಂಚಿನ ಮತ್ತು ಮೊಂಡು ವಸ್ತುವಿನಿಂದ ಆದಂತಹವು. ಈ ಗಾಯಗಳು ಆದದ್ದು ಹೇಗೆ ಎಂಬುದಕ್ಕೆ ಭದ್ರತಾ ಪಡೆಗಳಿಂದ ಉತ್ತರ ಬರಲಿಲ್ಲ’ ಎಂದು ನ್ಯಾಯಾಂಗ ವರದಿ ಹೇಳಿತ್ತು.

ಹತ್ಯೆಗೀಡಾದವರ ಪೈಕಿ ಕಾಕಾ ಸರಸ್ವತಿ ಮತ್ತು ಕಾಕಾ ನಾಗೇಶ್ 12 ವರ್ಷ ವಯಸ್ಸಿನವರು. ಇರ್ಪಾ ಸುರೇಶ್ ವಯಸ್ಸು ಹದಿನೈದು. ಹಾಪ್ಕಾ ಮಿಟ್ಟೂಗೆ 17 ವರ್ಷ. ಹದಿನೇಳು ವರ್ಷದ ಕುಂಜಮ್ ಮಲ್ಲಾ, ಹದಿನಾರು ವಯಸ್ಸಿನ ಕೊರ್ಸಾ ಬಿಚೆಮ್ ಅವರಂತಹ ಸಣ್ಣ ವಯಸ್ಸಿನವರೂ ಇದ್ದರು. ಇವರನ್ನು ’ಹಾರ್ಡ್ ಕೋರ್’ ನಕ್ಸಲೀಯರು ಎಂದು ಬಣ್ಣಿಸಲಾಗಿತ್ತು. ಅಂದಿನ ಕೇಂದ್ರ ಗೃಹಮಂತ್ರಿ ಪಿ.ಚಿದಂಬರಂ ಅವರಂತೂ ಮೂವರು ಬಹುಮುಖ್ಯ ನಕ್ಸಲೀಯ ನಾಯಕರನ್ನು ಕೊಲ್ಲಲಾಯಿತು ಎಂದು ಎದೆ ಉಬ್ಬಿಸಿದ್ದರು. ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಮತ್ತು ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಈ ಎನ್ಕೌಂಟರನ್ನು ಬಹುದೊಡ್ಡ ಮಾವೋವಾದಿ ಎನ್ಕೌಂಟರ್ ಎಂದು ಬಣ್ಣಿಸಿದ್ದವು. ವರದಿ ಬಂದ ನಂತರ ಚಿದಂಬರಂ ಅವರು ಕ್ಷಮಾಪಣೆ ಕೇಳಬೇಕಾಯಿತು.

ಬಂಡುಕೋರರನ್ನು ಹತ್ತಿಕ್ಕುವ ಯಶಸ್ವೀ ಕಾರ್ಯಾಚರಣೆ ಎಂದು ಈ ನರಮೇಧವನ್ನು ಸರ್ಕಾರ ಬಣ್ಣಿಸಿತ್ತು. ಮುಖ್ಯವಾಹಿನಿಯ ಸಮೂಹ ಮಾಧ್ಯಮಗಳು ಈ ಸುಳ್ಳನ್ನು ಧ್ವನಿವರ್ಧಕ ಹಿಡಿದು ಕೂಗಿ ಹೇಳಿದ್ದವು. ಆದರೆ ಹತ್ಯೆಗೀಡಾದವರು ಅಮಾಯಕ ಗ್ರಾಮಸ್ಥರಷ್ಟೇ ಎಂಬ ಅಂಶವಷ್ಟೇ ಅಲ್ಲ, ಈ ಎನ್ಕೌಂಟರ್ ನಡೆದ ಸ್ಥಳದ ಸುತ್ತಮುತ್ತ ಎಲ್ಲಿಯೂ ಮಾವೋವಾದಿಗಳು ಇದ್ದ ಕುರಿತು ಯಾವ ಸಾಕ್ಷ್ಯವೂ ಸಿಕ್ಕಿಲ್ಲ. ಎನ್ಕೌಂಟರ್ ನಡೆದ ನಂತರ ಈ ನಿರಪರಾಧಿ ಗ್ರಾಮಸ್ಥರ ನರಮೇಧವನ್ನು ಸಮರ್ಥಿಸಲು ಸುಳ್ಳಿನ ಜಾಲವನ್ನೇ ಹೆಣೆಯಲಾಯಿತು ಎಂದು ವರದಿ ಹೇಳಿತ್ತು.

ಎಡಪಂಥೀಯ ಉಗ್ರವಾದದ ನೆಲೆಯೆಂದು ಹೆಸರಾಗಿದ್ದ ಬಿಜಾಪುರದ ಸರ್ಕೇಗುಡ ಅದೇ ಕಾರಣಕ್ಕಾಗಿ ಕೆಂಡದ ಹೊಂಡದ ಮೇಲೆ ಜೀವಿಸಿದ ಗ್ರಾಮ. ಆದಿವಾಸಿಗಳಿಂದಲೇ ಆದಿವಾಸಿಗಳನ್ನು ಬೇಟೆಯಾಡಲು ಛತ್ತೀಸಗಢ ಸರ್ಕಾರ ಕಟ್ಟಿದ ಖಾಸಗಿ ಆದಿವಾಸಿ ಸೇನೆ ಸಲ್ವಾ ಜುದುಮ್ ಈ ಗ್ರಾಮವನ್ನು 2005ರಲ್ಲಿ ಸುಟ್ಟು ಹಾಕಿತ್ತು. 2009ರಲ್ಲಿ ಗ್ರಾಮಸ್ಥರ ಈ ಹಳ್ಳಿಗೆ ವಾಪಸು ಬರಲು ಆರಂಭಿಸಿದ್ದರು. ಬೂದಿಯಾಗಿದ್ದ ತಮ್ಮ ಬದುಕುಗಳನ್ನು ಪುನಃ ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದರು. ನರಮೇಧ ನಡೆದ ರಾತ್ರಿ ನಡೆದ ಗ್ರಾಮಸ್ಥರ ಸಭೆಯಲ್ಲಿ ಬೀಜ ಪಂಡುಮ್ ಉತ್ಸವ ಆಚರಣೆಯ ಜೊತೆಗೆ ಜಾನುವಾರು ಇಲ್ಲದ ಕುಟುಂಬಗಳು ಮತ್ತು ಏಕಮಹಿಳೆಯ ಕುಟುಂಬಗಳಿಗೆ ನೆರವಾಗುವ ಬಗೆ ಎಂತು ಎಂದು ಚರ್ಚಿಸಲಾಗುತ್ತಿತ್ತು. ಆದಿವಾಸಿ ರೂಢಿ ರಿವಾಜುಗಳ ಪ್ರಕಾರ ಉತ್ಸವದ ಸಿದ್ಧತೆಗಳು ರಾತ್ರಿ ನಡೆಯುತ್ತವೆ. ಮರುದಿನ ಮುಂಜಾನೆ ಉತ್ಸವ ಆರಂಭವಾಗುತ್ತದೆ.

ನ್ಯಾಯಾಂಗ ವರದಿ ಬಂದನಂತರ ಈ ನರಮೇಧಕ್ಕೆ ಕಾರಣರಾದವರ ವಿರುದ್ಧ ಅತ್ಯಂತ ಬಿಗಿ ಕ್ರಮವನ್ನು ಜರುಗಿಸಲಾಗುವುದು ಎಂದು ಛತ್ತೀಸಗಢದ ಹಾಲಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಾರಿದ್ದುಂಟು. ಆದರೆ ಎರಡು ವರ್ಷ ಉರುಳಿದರೂ ಹಂತಕರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿಲ್ಲ. ಸರ್ಕೇಗುಡದಲ್ಲಿ ಒಂಬತ್ತು ವರ್ಷಗಳ ಹಿಂದೆ ಜರುಗಿದ ಸರ್ಕಾರಿ ನರಮೇಧದಲ್ಲಿ ಹತರಾದ 17 ಮಂದಿಗೆ ಶ್ರದ್ಧಾಂಜಲಿ ಮೇಳವನ್ನು ಮೊನ್ನೆ ನಡೆಸಲಾಯಿತು. ಸಾವಿರಾರು ಆದಿವಾಸಿಗಳು ಸೇರಿದ್ದರು. ಭಾರೀ ಸಂಖ್ಯೆಯ ಅರೆಸೇನಾ ಪಡೆಗಳು ಈ ಮೇಳವನ್ನು ಸುತ್ತುವರೆದು ನಿಗಾ ಇಟ್ಟಿದ್ದವು.

ಬಿಗಿ ಕ್ರಮ ಕೈಗೊಳ್ಳುವ ಬಾಘೇಲ್ ಸರ್ಕಾರ ತುಟಿ ಹೊಲಿದುಕೊಂಡಿದೆ. ಈ ದೇಶದಲ್ಲಿ ದಲಿತರು ಆದಿವಾಸಿಗಳು ಅಲ್ಪಸಂಖ್ಯಾತರು ಮಲತಾಯಿ ಮಕ್ಕಳು.


ಇದನ್ನೂ ಓದಿ: ಬಹುಜನ ಭಾರತ: ಪಾರುಲ್ ಖಕ್ಕಡ್ ಎಂಬ ಗೃಹಿಣಿ ಬರೆದ ರಾಜಕೀಯ ಕವಿತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...