Homeಅಂಕಣಗಳುಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

ಬಹುಜನ ಭಾರತ: ಆದಿವಾಸಿಗಳ ನರಮೇಧ; ನ್ಯಾಯವಿನ್ನೂ ಬಿಸಿಲುಗುದುರೆ!

- Advertisement -
- Advertisement -

ಈದೇಶದಲ್ಲಿ ದಲಿತರು ಆದಿವಾಸಿಗಳು ಅಲ್ಪಸಂಖ್ಯಾತರು ಮಲತಾಯಿ ಮಕ್ಕಳು. ಛತ್ತೀಸಗಢದ ಬಿಜಾಪುರ ಜಿಲ್ಲೆಯ ಸರ್ಕೇಗುಡದಲ್ಲಿ 2012ರಲ್ಲಿ ಹುಸಿ ಎನ್ಕೌಂಟರೊಂದು ನಡೆಯಿತು. ಆರು ಮಂದಿ ಅಪ್ರಾಪ್ತ ವಯಸ್ಕರೂ ಸೇರಿದಂತೆ 17 ಮಂದಿ ಆದಿವಾಸಿಗಳನ್ನು ಈ ಎನ್ಕೌಂಟರಿನಲ್ಲಿ ಕೊಲ್ಲಲಾಗಿತ್ತು. ಈ ಹತ್ಯಾಕಾಂಡದಲ್ಲಿ ಹತರಾದವರಿಗೆ ಮಾವೋವಾದಿಗಳ ಹಣೆಪಟ್ಟಿ ಹಚ್ಚಿತ್ತು ಅಂದಿನ ರಮಣಸಿಂಗ್ ನೇತೃತ್ವದ ಬಿಜೆಪಿ ಸರ್ಕಾರ. ಭಾರೀ ಪ್ರತಿಭಟನೆ ವಿವಾದದ ನಂತರ ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿತ್ತು.

ಮಧ್ಯಪ್ರದೇಶ ಹೈಕೋರ್ಟಿನ ನಿವೃತ್ತ ನ್ಯಾಯಮೂರ್ತಿ ವಿ.ಕೆ. ಅಗರವಾಲ ಆಯೋಗ ಸಲ್ಲಿಸಿದ ವರದಿಯನ್ನು 2019ರ ಡಿಸೆಂಬರಿನಲ್ಲಿ ಛತ್ತೀಸಗಢ ವಿಧಾನಸಭೆಯಲ್ಲಿ ಮಂಡಿಸಲಾಯಿತು.

ಭದ್ರತಾ ಪಡೆಗಳಿಂದ ಹತರಾದ 17 ಮಂದಿಯ ಪೈಕಿ ಯಾರೂ ಮಾವೋವಾದಿಗಳಾಗಿರಲಿಲ್ಲ ಎಂದು ಈ ವರದಿಯಲ್ಲಿ ಹೇಳಲಾಗಿತ್ತು. ಗ್ರಾಮಸ್ಥರನ್ನು ಬಹಳ ಸಮೀಪದಿಂದ ಗುಂಡು ಹಾರಿಸಿ ಕೊಲ್ಲಲಾಗಿದೆ. ಕೇಂದ್ರೀಯ ಮೀಸಲು ಪೊಲೀಸ್ ಪಡೆ ಮತ್ತು ಸ್ಥಳೀಯ ಪೊಲೀಸರಿದ್ದ ಭದ್ರತಾ ಪಡೆಯು ಗಾಬರಿಯಲ್ಲಿ ಗುಂಡು ಹಾರಿಸಿರಬೇಕು. ಎನ್ಕೌಂಟರ್ ಜರುಗಿದ್ದು ರಾತ್ರಿಯ ಹೊತ್ತು. ಆದರೆ ಈ 17 ಮಂದಿಯ ಪೈಕಿ ಒಬ್ಬ ಯುವಕನನ್ನು ಬೆಳಿಗ್ಗೆ ಹಿಡಿದು ಗುಂಡು ಹಾರಿಸಿ ಕೊಲ್ಲಲಾಗಿದೆ ಎಂದೂ ಆಯೋಗ ಹೇಳಿತ್ತು.

ಭದ್ರತಾ ಪಡೆಯ ಕೆಲವರಿಗೆ ಆಗಿರುವ ಗಾಯಗಳಿಗೆ ತಮ್ಮದೇ ಸಂಗಾತಿಗಳ ಮತ್ತೊಂದು ತಂಡ ಕತ್ತಲಲ್ಲಿ ಗೊತ್ತಿಲ್ಲದೆ ಹಾರಿಸಿರುವ ಗುಂಡುಗಳೇ ಕಾರಣ. ಆದರೆ ಅಷ್ಟು ಮಂದಿ ಗ್ರಾಮಸ್ಥರ ಹಬ್ಬದ ಆಚರಣೆಯ ಯೋಜನೆಯನ್ನು ಚರ್ಚಿಸಲು ಸೇರಿದ್ದರು ಎಂಬ ಕಾರಣವನ್ನು ನಂಬಲಾಗದು ಎಂದೂ ವರದಿಯಲ್ಲಿ ಸಂದೇಹ ಪ್ರಕಟಿಸಲಾಗಿತ್ತು.

ಬಸಗುಡಾದಿಂದ ಹೊರಟ ಎರಡು ಭದ್ರತಾ ಪಡೆಯ ತಂಡಗಳು ಮೂರು ಕಿ.ಮೀ. ದೂರದ ಸರ್ಕೇಗುಡದಲ್ಲಿ ’ಮಾವೋವಾದಿಗಳ ಸಭೆ’ ನಡೆಯುತ್ತಿದ್ದುದನ್ನು ಕಂಡವು. ಸಭೆಯಲ್ಲಿ ಭಾಗವಹಿಸಿದ್ದ ಗ್ರಾಮಸ್ಥರ ಭದ್ರತಾ ಪಡೆಯ ತಂಡಗಳ ಮೇಲೆ ಗುಂಡು ಹಾರಿಸಿದರು. ಭದ್ರತಾ ಪಡೆಗಳು ವಾಪಸು ಗುಂಡು ಹಾರಿಸಿದರು ಎಂಬುದು ಭದ್ರತಾ ಪಡೆಗಳ ಹೇಳಿಕೆಯಾಗಿತ್ತು.

ಆದರೆ ಗ್ರಾಮಸ್ಥರ ಪ್ರಕಾರ ತಾವು ಬೀಜ ಪಂಡುಮ್ ಹಬ್ಬದ ಸಿದ್ಧತೆಗಾಗಿ ಸಭೆ ಸೇರಿದ್ದು. ಭದ್ರತಾ ಪಡೆಗಳು ಅವರನ್ನು ಸುತ್ತುವರೆದು ಗುಂಡು ಹಾರಿಸಿದವು. ಪಡೆಗಳಿಂದ ಹತ್ಯೆಗೀಡಾದ ಮತ್ತು ಗಾಯಗೊಂಡ ಗ್ರಾಮಸ್ಥರ ನಕ್ಸಲೀಯರು ಎನ್ನಲು ಯಾವುದೇ ಸಾಕ್ಷ್ಯಾಧಾರಗಳಿಲ್ಲ. ’ದೂರದಲ್ಲಿ ಅನುಮಾನಾಸ್ಪದ ಸದ್ದು ಕೇಳಿಬರುತ್ತಿದೆ ಎಂಬುದಾಗಿ ತಮ್ಮ ’ಮಾರ್ಗದರ್ಶಿ’ಯ ಮಾತಿನಿಂದ ಪ್ರಭಾವಿತರಾದಂತಿರುವ ಪೊಲೀಸರು ಗಾಬರಿಯಾಗಿ ನಕ್ಸಲೀಯರಿದ್ದಾರೆಂದು ಭಾವಿಸಿ ಗುಂಡು ಹಾರಿಸಿ ಗ್ರಾಮಸ್ಥರ ಸಾವು ನೋವುಗಳಿಗೆ ಕಾರಣರಾಗಿದ್ದಾರೆ. ಗ್ರಾಮಸ್ಥರ ಗುಂಡು ಹಾರಿಸಿಲ್ಲವೆಂಬ ಅಂಶವು ಹಿರಿಯ ಪೊಲೀಸ್ ಅಧಿಕಾರಿಗಳಾದ ಎಸ್.ಇಳಂಗೋ ಮತ್ತು ಮನೀಶ್ ಬರ್ಮೋಲ ಅವರ ಹೇಳಿಕೆಗಳಿಂದ ಸ್ಪಷ್ಟವಾಗಿದೆ. ಸಾಕ್ಷ್ಯಾಧಾರಗಳ ಪ್ರಕಾರ 17 ರಲ್ಲಿ ಹತ್ತು ಮಂದಿ ಬೆನ್ನಿಗೆ ಗುಂಡು ಬಿದ್ದು ಸತ್ತಿದ್ದಾರೆ. ಅರ್ಥಾತ್ ಪರಾರಿಯಾಗುತ್ತಿದ್ದಾಗ ಕೊಲ್ಲಲಾಗಿದೆ. ಕೆಲವರು ತಲೆಗೆ ಗುಂಡು ಬಿದ್ದು ಸತ್ತಿದ್ದಾರೆ. ಈ ಅಂಶಗಳನ್ನು ಗಮನಿಸಿದರೆ ಗುಂಡು ಹಾರಿಸಿದ್ದು ಬಲು ಸಮೀಪದಿಂದಲೇ ವಿನಾ ಪೊಲೀಸರು ಹೇಳುವಂತೆ ದೂರದಿಂದ ಅಲ್ಲ. ಗಾಯಗೊಂಡವರ ಮೈ ಮೇಲಿನ ಗಾಯಗಳು ಕೂಡ ಬಂದೂಕದ ಹಿಡಿಯಿಂದ ಮತ್ತು ಹರಿತ ಅಂಚಿನ ಮತ್ತು ಮೊಂಡು ವಸ್ತುವಿನಿಂದ ಆದಂತಹವು. ಈ ಗಾಯಗಳು ಆದದ್ದು ಹೇಗೆ ಎಂಬುದಕ್ಕೆ ಭದ್ರತಾ ಪಡೆಗಳಿಂದ ಉತ್ತರ ಬರಲಿಲ್ಲ’ ಎಂದು ನ್ಯಾಯಾಂಗ ವರದಿ ಹೇಳಿತ್ತು.

ಹತ್ಯೆಗೀಡಾದವರ ಪೈಕಿ ಕಾಕಾ ಸರಸ್ವತಿ ಮತ್ತು ಕಾಕಾ ನಾಗೇಶ್ 12 ವರ್ಷ ವಯಸ್ಸಿನವರು. ಇರ್ಪಾ ಸುರೇಶ್ ವಯಸ್ಸು ಹದಿನೈದು. ಹಾಪ್ಕಾ ಮಿಟ್ಟೂಗೆ 17 ವರ್ಷ. ಹದಿನೇಳು ವರ್ಷದ ಕುಂಜಮ್ ಮಲ್ಲಾ, ಹದಿನಾರು ವಯಸ್ಸಿನ ಕೊರ್ಸಾ ಬಿಚೆಮ್ ಅವರಂತಹ ಸಣ್ಣ ವಯಸ್ಸಿನವರೂ ಇದ್ದರು. ಇವರನ್ನು ’ಹಾರ್ಡ್ ಕೋರ್’ ನಕ್ಸಲೀಯರು ಎಂದು ಬಣ್ಣಿಸಲಾಗಿತ್ತು. ಅಂದಿನ ಕೇಂದ್ರ ಗೃಹಮಂತ್ರಿ ಪಿ.ಚಿದಂಬರಂ ಅವರಂತೂ ಮೂವರು ಬಹುಮುಖ್ಯ ನಕ್ಸಲೀಯ ನಾಯಕರನ್ನು ಕೊಲ್ಲಲಾಯಿತು ಎಂದು ಎದೆ ಉಬ್ಬಿಸಿದ್ದರು. ರಾಜ್ಯದಲ್ಲಿದ್ದ ಬಿಜೆಪಿ ಸರ್ಕಾರ ಮತ್ತು ಕೇಂದ್ರದಲ್ಲಿದ್ದ ಕಾಂಗ್ರೆಸ್ ನೇತೃತ್ವದ ಸರ್ಕಾರಗಳು ಈ ಎನ್ಕೌಂಟರನ್ನು ಬಹುದೊಡ್ಡ ಮಾವೋವಾದಿ ಎನ್ಕೌಂಟರ್ ಎಂದು ಬಣ್ಣಿಸಿದ್ದವು. ವರದಿ ಬಂದ ನಂತರ ಚಿದಂಬರಂ ಅವರು ಕ್ಷಮಾಪಣೆ ಕೇಳಬೇಕಾಯಿತು.

ಬಂಡುಕೋರರನ್ನು ಹತ್ತಿಕ್ಕುವ ಯಶಸ್ವೀ ಕಾರ್ಯಾಚರಣೆ ಎಂದು ಈ ನರಮೇಧವನ್ನು ಸರ್ಕಾರ ಬಣ್ಣಿಸಿತ್ತು. ಮುಖ್ಯವಾಹಿನಿಯ ಸಮೂಹ ಮಾಧ್ಯಮಗಳು ಈ ಸುಳ್ಳನ್ನು ಧ್ವನಿವರ್ಧಕ ಹಿಡಿದು ಕೂಗಿ ಹೇಳಿದ್ದವು. ಆದರೆ ಹತ್ಯೆಗೀಡಾದವರು ಅಮಾಯಕ ಗ್ರಾಮಸ್ಥರಷ್ಟೇ ಎಂಬ ಅಂಶವಷ್ಟೇ ಅಲ್ಲ, ಈ ಎನ್ಕೌಂಟರ್ ನಡೆದ ಸ್ಥಳದ ಸುತ್ತಮುತ್ತ ಎಲ್ಲಿಯೂ ಮಾವೋವಾದಿಗಳು ಇದ್ದ ಕುರಿತು ಯಾವ ಸಾಕ್ಷ್ಯವೂ ಸಿಕ್ಕಿಲ್ಲ. ಎನ್ಕೌಂಟರ್ ನಡೆದ ನಂತರ ಈ ನಿರಪರಾಧಿ ಗ್ರಾಮಸ್ಥರ ನರಮೇಧವನ್ನು ಸಮರ್ಥಿಸಲು ಸುಳ್ಳಿನ ಜಾಲವನ್ನೇ ಹೆಣೆಯಲಾಯಿತು ಎಂದು ವರದಿ ಹೇಳಿತ್ತು.

ಎಡಪಂಥೀಯ ಉಗ್ರವಾದದ ನೆಲೆಯೆಂದು ಹೆಸರಾಗಿದ್ದ ಬಿಜಾಪುರದ ಸರ್ಕೇಗುಡ ಅದೇ ಕಾರಣಕ್ಕಾಗಿ ಕೆಂಡದ ಹೊಂಡದ ಮೇಲೆ ಜೀವಿಸಿದ ಗ್ರಾಮ. ಆದಿವಾಸಿಗಳಿಂದಲೇ ಆದಿವಾಸಿಗಳನ್ನು ಬೇಟೆಯಾಡಲು ಛತ್ತೀಸಗಢ ಸರ್ಕಾರ ಕಟ್ಟಿದ ಖಾಸಗಿ ಆದಿವಾಸಿ ಸೇನೆ ಸಲ್ವಾ ಜುದುಮ್ ಈ ಗ್ರಾಮವನ್ನು 2005ರಲ್ಲಿ ಸುಟ್ಟು ಹಾಕಿತ್ತು. 2009ರಲ್ಲಿ ಗ್ರಾಮಸ್ಥರ ಈ ಹಳ್ಳಿಗೆ ವಾಪಸು ಬರಲು ಆರಂಭಿಸಿದ್ದರು. ಬೂದಿಯಾಗಿದ್ದ ತಮ್ಮ ಬದುಕುಗಳನ್ನು ಪುನಃ ಕಟ್ಟಿಕೊಳ್ಳಲು ಹೆಣಗಾಡುತ್ತಿದ್ದರು. ನರಮೇಧ ನಡೆದ ರಾತ್ರಿ ನಡೆದ ಗ್ರಾಮಸ್ಥರ ಸಭೆಯಲ್ಲಿ ಬೀಜ ಪಂಡುಮ್ ಉತ್ಸವ ಆಚರಣೆಯ ಜೊತೆಗೆ ಜಾನುವಾರು ಇಲ್ಲದ ಕುಟುಂಬಗಳು ಮತ್ತು ಏಕಮಹಿಳೆಯ ಕುಟುಂಬಗಳಿಗೆ ನೆರವಾಗುವ ಬಗೆ ಎಂತು ಎಂದು ಚರ್ಚಿಸಲಾಗುತ್ತಿತ್ತು. ಆದಿವಾಸಿ ರೂಢಿ ರಿವಾಜುಗಳ ಪ್ರಕಾರ ಉತ್ಸವದ ಸಿದ್ಧತೆಗಳು ರಾತ್ರಿ ನಡೆಯುತ್ತವೆ. ಮರುದಿನ ಮುಂಜಾನೆ ಉತ್ಸವ ಆರಂಭವಾಗುತ್ತದೆ.

ನ್ಯಾಯಾಂಗ ವರದಿ ಬಂದನಂತರ ಈ ನರಮೇಧಕ್ಕೆ ಕಾರಣರಾದವರ ವಿರುದ್ಧ ಅತ್ಯಂತ ಬಿಗಿ ಕ್ರಮವನ್ನು ಜರುಗಿಸಲಾಗುವುದು ಎಂದು ಛತ್ತೀಸಗಢದ ಹಾಲಿ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಸಾರಿದ್ದುಂಟು. ಆದರೆ ಎರಡು ವರ್ಷ ಉರುಳಿದರೂ ಹಂತಕರ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿಲ್ಲ. ಸರ್ಕೇಗುಡದಲ್ಲಿ ಒಂಬತ್ತು ವರ್ಷಗಳ ಹಿಂದೆ ಜರುಗಿದ ಸರ್ಕಾರಿ ನರಮೇಧದಲ್ಲಿ ಹತರಾದ 17 ಮಂದಿಗೆ ಶ್ರದ್ಧಾಂಜಲಿ ಮೇಳವನ್ನು ಮೊನ್ನೆ ನಡೆಸಲಾಯಿತು. ಸಾವಿರಾರು ಆದಿವಾಸಿಗಳು ಸೇರಿದ್ದರು. ಭಾರೀ ಸಂಖ್ಯೆಯ ಅರೆಸೇನಾ ಪಡೆಗಳು ಈ ಮೇಳವನ್ನು ಸುತ್ತುವರೆದು ನಿಗಾ ಇಟ್ಟಿದ್ದವು.

ಬಿಗಿ ಕ್ರಮ ಕೈಗೊಳ್ಳುವ ಬಾಘೇಲ್ ಸರ್ಕಾರ ತುಟಿ ಹೊಲಿದುಕೊಂಡಿದೆ. ಈ ದೇಶದಲ್ಲಿ ದಲಿತರು ಆದಿವಾಸಿಗಳು ಅಲ್ಪಸಂಖ್ಯಾತರು ಮಲತಾಯಿ ಮಕ್ಕಳು.


ಇದನ್ನೂ ಓದಿ: ಬಹುಜನ ಭಾರತ: ಪಾರುಲ್ ಖಕ್ಕಡ್ ಎಂಬ ಗೃಹಿಣಿ ಬರೆದ ರಾಜಕೀಯ ಕವಿತೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...