Homeಮುಖಪುಟಆದಿವಾಸಿ ಸಮುದಾಯವನ್ನು ಅವಹೇಳನ ಮಾಡಿದ ಸುಧೀರ್ ಚೌಧರಿ

ಆದಿವಾಸಿ ಸಮುದಾಯವನ್ನು ಅವಹೇಳನ ಮಾಡಿದ ಸುಧೀರ್ ಚೌಧರಿ

- Advertisement -
- Advertisement -

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ನಂತರ ಆದಿವಾಸಿಗಳ ಬಗ್ಗೆ ಅವಹೇಳನಾಕಾರಿ ಹೇಳಿಕೆಯನ್ನು ಆಜ್ ತಕ್ ಟಿವಿ ವಾಹಿನಿ ನಿರೂಪಕ ಸುಧೀರ್ ಚೌಧರಿ ನೀಡಿದ್ದು, ಅವರ ವಿರುದ್ಧ ಬುಡಕಟ್ಟು ಜನಾಂಗದ ಜನರು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲಿ ಸುಧೀರ್ ಚೌಧರಿ ತನ್ನ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ.

ಜನವರಿ 31ರಂದು ಹೇಮಂತ್ ಸೊರೆನ್ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಭೂ ಹಗರಣ ಪ್ರಕರಣದಲ್ಲಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಈ ಸುದ್ದಿ ಬಗ್ಗೆ ತಮ್ಮ ಕಾರ್ಯಕ್ರಮ ‘ಬ್ಲ್ಯಾಕ್ ಎಂಡ್ ವೈಟ್’ನಲ್ಲಿ ಸುಧೀರ್ ಚೌಧರಿ, 20, 30, 40 ವರ್ಷಗಳ ಹಿಂದೆ ಕಾಡಿನಲ್ಲಿದ್ದ ಆದಿವಾಸಿಗಳಂತೆ ಸೊರೇನ್ ಇಂದು ರಾತ್ರಿ ಜೈಲಿನಲ್ಲಿರಬಹುದು ಎಂದು ವ್ಯಂಗ್ಯವಾಡಿದ್ದರು.

ಆರ್ಥಿಕವಾಗಿ ಉತ್ತಮವಾಗಿರುವ ಸಮುದಾಯದವರಿಗೆ ಮೀಸಲಾತಿ ನೀಡಬಾರದು ಎಂದು ಚೌಧರಿ ಹೇಳಿದ್ದು, ಈ ಕುಟುಂಬವು ಬಡ ಕುಟುಂಬ ಎಂದು ಹೇಳುವ ಹಕ್ಕಿದೆಯೇ? ಅವರು ಆದಿವಾಸಿಗಳಲ್ಲ, ಅವರು ದೊಡ್ಡ ದೊಡ್ಡ ಬಂಗಲೆಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿಕೆಯನ್ನು ನೀಡಿದ್ದರು. ಈ ಬಗ್ಗೆ ರಾಂಚಿಯಲ್ಲಿ ಆದಿವಾಸಿ ಸೇನೆ ದೂರು ದಾಖಲಿಸಿದೆ. ಇದಲ್ಲದೆ  ಸಾಮಾಜಿಕ ಜಾಲತಾಣಗಳ ಬಳಕೆದಾರರು ಚೌಧರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸುಧೀರ್‌ ಚೌಧರಿ ಅವರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯಿದೆ 1989ರ ಅಡಿಯಲ್ಲಿ ರಾಂಚಿ ಪೊಲೀಸ್ ಠಾಣೆಯಲ್ಲಿ ಚೌಧರಿ ವಿರುದ್ಧ ದೂರು ದಾಖಲಿಸಲಾಗಿದೆ. ಚೌದರಿಯ ಬಂಧನಕ್ಕೆ ವ್ಯಾಪಕವಾದ ಆಗ್ರಹ ಕೇಳಿ ಬರುತ್ತಿದೆ. #ArrestSudhirChaudhury ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್‌ನಲ್ಲಿದೆ. ಚೌಧರಿ ಅವರು ತಮ್ಮ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ  ಧಾರ್ಮಿಕ ದ್ವೇಷವನ್ನು ಹರಡಿದ್ದಕ್ಕಾಗಿ ಕೇರಳ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಕ್ಷಮೆ ಕೇಳಿದ ಸುಧೀರ್‌ ಚೌಧರಿ:

ತನ್ನ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸುಧೀರ್‌ ಚೌಧರಿ ತಮ್ಮ ಎಕ್ಸ್‌ ಖಾತೆಯಲ್ಲಿ ಕ್ಷಮೆ ಕೋರಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ನಾನು ಆದಿವಾಸಿಗಳನ್ನು ಅವಮಾನಿಸಿದ್ದೇನೆಂಬ ಆಧಾರರಹಿತ ಆರೋಪಗಳನ್ನು ನೋಡಿ ನನಗೆ ನೋವಾಗಿದೆ. ಹೇಮಂತ್ ಸೋರೆನ್ ಅವರನ್ನು ಟೀಕಿಸುವುದು ಎಂದರೆ ಅದು ಆದಿವಾಸಿಗಳನ್ನು ಟೀಕಿಸಿದ್ದು ಅಥವಾ ಅವಮಾನಿಸಿದ್ದು ಎಂದಲ್ಲ. ಶ್ರೀಮಂತ ನಾಯಕರು ಬುಡಕಟ್ಟು ಮತಗಳನ್ನು ಹೇಗೆ ದುರುಪಯೋಗ ಮಾಡುತ್ತಿದ್ದಾರೆ ಎಂಬುದರ ಮೇಲೆ ನನ್ನ ಕಾರ್ಯಕ್ರಮವು ಕೇಂದ್ರೀಕೃತವಾಗಿತ್ತು.  ಕೆಲವರು ಹಂಚಿಕೊಳ್ಳುತ್ತಿರುವ ಕಿರು ವೀಡಿಯೊ ಕ್ಲಿಪ್ ನನ್ನ ಕಾರ್ಯಕ್ರಮದ ಬಗ್ಗೆ ತಪ್ಪು ಸಂದೇಶವನ್ನು ನೀಡಲು ಬಳಕೆಯಾಗುತ್ತಿದೆ. ನಾನು ಯಾವಾಗಲೂ ಬುಡಕಟ್ಟು ಜನಾಂಗದವರನ್ನು ಬೆಂಬಲಿಸುತ್ತೇನೆ ಮತ್ತು ಗೌರವಿಸುತ್ತೇನೆ ಮತ್ತು ಅವರು ಯಾವಾಗಲೂ ನನಗೆ ಮತ್ತು ನನ್ನ ಕಾರ್ಯಕ್ರಮಗಳಿಗೆ ಪ್ರೀತಿಯನ್ನು ತೋರಿಸಿದ್ದಾರೆ ಎಂದು ಬರೆದಿದ್ದಾರೆ.

ಎಕ್ಸ್‌  ಖಾತೆಯನ್ನು ಹೊಂದಿರುವ ಎಲ್ಲರಿಗೂ ನಾನು ಉತ್ತರಿಸಬೇಕಾಗಿಲ್ಲ. ಆದರೆ ನನ್ನ ಆದಿವಾಸಿ ಸಹೋದರ ಸಹೋದರಿಯರಿಗೆ ನನ್ನ ಬಗ್ಗೆ ವಿವರಿಸುವುದು ನನ್ನ ಕರ್ತವ್ಯ ಎಂದು ನಾನು ಭಾವಿಸುತ್ತೇನೆ. ನಾನು ಉದ್ದೇಶಪೂರ್ವಕವಲ್ಲದೇ ಅವರ ಭಾವನೆಗಳನ್ನು ನೋಯಿಸಿದ್ದರೆ, ನಾನು ಅವರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ: ಬಿಜೆಪಿ ಪರ ಪ್ರಚಾರಕ್ಕೆ ತೆರಳಲು ಸಾರ್ವಜನಿಕ ಬೊಕ್ಕಸದ ಕೋಟ್ಯಾಂತರ ರೂ. ಹಣ ಬಳಸಿದ ಅಸ್ಸಾಂ ಸಿಎಂ: ವರದಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...