Homeಮುಖಪುಟಆದಿವಾಸಿ ಸಮುದಾಯವನ್ನು ಅವಹೇಳನ ಮಾಡಿದ ಸುಧೀರ್ ಚೌಧರಿ

ಆದಿವಾಸಿ ಸಮುದಾಯವನ್ನು ಅವಹೇಳನ ಮಾಡಿದ ಸುಧೀರ್ ಚೌಧರಿ

- Advertisement -
- Advertisement -

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ ನಂತರ ಆದಿವಾಸಿಗಳ ಬಗ್ಗೆ ಅವಹೇಳನಾಕಾರಿ ಹೇಳಿಕೆಯನ್ನು ಆಜ್ ತಕ್ ಟಿವಿ ವಾಹಿನಿ ನಿರೂಪಕ ಸುಧೀರ್ ಚೌಧರಿ ನೀಡಿದ್ದು, ಅವರ ವಿರುದ್ಧ ಬುಡಕಟ್ಟು ಜನಾಂಗದ ಜನರು ಎಸ್ಸಿ-ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿ ದೂರು ದಾಖಲಿಸಿದ್ದಾರೆ. ಇದರ ಬೆನ್ನಲ್ಲಿ ಸುಧೀರ್ ಚೌಧರಿ ತನ್ನ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ.

ಜನವರಿ 31ರಂದು ಹೇಮಂತ್ ಸೊರೆನ್ ಜಾರ್ಖಂಡ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಭೂ ಹಗರಣ ಪ್ರಕರಣದಲ್ಲಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ. ಈ ಸುದ್ದಿ ಬಗ್ಗೆ ತಮ್ಮ ಕಾರ್ಯಕ್ರಮ ‘ಬ್ಲ್ಯಾಕ್ ಎಂಡ್ ವೈಟ್’ನಲ್ಲಿ ಸುಧೀರ್ ಚೌಧರಿ, 20, 30, 40 ವರ್ಷಗಳ ಹಿಂದೆ ಕಾಡಿನಲ್ಲಿದ್ದ ಆದಿವಾಸಿಗಳಂತೆ ಸೊರೇನ್ ಇಂದು ರಾತ್ರಿ ಜೈಲಿನಲ್ಲಿರಬಹುದು ಎಂದು ವ್ಯಂಗ್ಯವಾಡಿದ್ದರು.

ಆರ್ಥಿಕವಾಗಿ ಉತ್ತಮವಾಗಿರುವ ಸಮುದಾಯದವರಿಗೆ ಮೀಸಲಾತಿ ನೀಡಬಾರದು ಎಂದು ಚೌಧರಿ ಹೇಳಿದ್ದು, ಈ ಕುಟುಂಬವು ಬಡ ಕುಟುಂಬ ಎಂದು ಹೇಳುವ ಹಕ್ಕಿದೆಯೇ? ಅವರು ಆದಿವಾಸಿಗಳಲ್ಲ, ಅವರು ದೊಡ್ಡ ದೊಡ್ಡ ಬಂಗಲೆಗಳಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿಕೆಯನ್ನು ನೀಡಿದ್ದರು. ಈ ಬಗ್ಗೆ ರಾಂಚಿಯಲ್ಲಿ ಆದಿವಾಸಿ ಸೇನೆ ದೂರು ದಾಖಲಿಸಿದೆ. ಇದಲ್ಲದೆ  ಸಾಮಾಜಿಕ ಜಾಲತಾಣಗಳ ಬಳಕೆದಾರರು ಚೌಧರಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ. ಸುಧೀರ್‌ ಚೌಧರಿ ಅವರ ಹೇಳಿಕೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯಿದೆ 1989ರ ಅಡಿಯಲ್ಲಿ ರಾಂಚಿ ಪೊಲೀಸ್ ಠಾಣೆಯಲ್ಲಿ ಚೌಧರಿ ವಿರುದ್ಧ ದೂರು ದಾಖಲಿಸಲಾಗಿದೆ. ಚೌದರಿಯ ಬಂಧನಕ್ಕೆ ವ್ಯಾಪಕವಾದ ಆಗ್ರಹ ಕೇಳಿ ಬರುತ್ತಿದೆ. #ArrestSudhirChaudhury ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್‌ನಲ್ಲಿದೆ. ಚೌಧರಿ ಅವರು ತಮ್ಮ ಪ್ರಚೋದನಕಾರಿ ಹೇಳಿಕೆ ನೀಡುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ  ಧಾರ್ಮಿಕ ದ್ವೇಷವನ್ನು ಹರಡಿದ್ದಕ್ಕಾಗಿ ಕೇರಳ ಪೊಲೀಸರು ಅವರ ವಿರುದ್ಧ ಪ್ರಕರಣ ದಾಖಲಿಸಿದ್ದರು.

ಕ್ಷಮೆ ಕೇಳಿದ ಸುಧೀರ್‌ ಚೌಧರಿ:

ತನ್ನ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸುಧೀರ್‌ ಚೌಧರಿ ತಮ್ಮ ಎಕ್ಸ್‌ ಖಾತೆಯಲ್ಲಿ ಕ್ಷಮೆ ಕೋರಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ನಾನು ಆದಿವಾಸಿಗಳನ್ನು ಅವಮಾನಿಸಿದ್ದೇನೆಂಬ ಆಧಾರರಹಿತ ಆರೋಪಗಳನ್ನು ನೋಡಿ ನನಗೆ ನೋವಾಗಿದೆ. ಹೇಮಂತ್ ಸೋರೆನ್ ಅವರನ್ನು ಟೀಕಿಸುವುದು ಎಂದರೆ ಅದು ಆದಿವಾಸಿಗಳನ್ನು ಟೀಕಿಸಿದ್ದು ಅಥವಾ ಅವಮಾನಿಸಿದ್ದು ಎಂದಲ್ಲ. ಶ್ರೀಮಂತ ನಾಯಕರು ಬುಡಕಟ್ಟು ಮತಗಳನ್ನು ಹೇಗೆ ದುರುಪಯೋಗ ಮಾಡುತ್ತಿದ್ದಾರೆ ಎಂಬುದರ ಮೇಲೆ ನನ್ನ ಕಾರ್ಯಕ್ರಮವು ಕೇಂದ್ರೀಕೃತವಾಗಿತ್ತು.  ಕೆಲವರು ಹಂಚಿಕೊಳ್ಳುತ್ತಿರುವ ಕಿರು ವೀಡಿಯೊ ಕ್ಲಿಪ್ ನನ್ನ ಕಾರ್ಯಕ್ರಮದ ಬಗ್ಗೆ ತಪ್ಪು ಸಂದೇಶವನ್ನು ನೀಡಲು ಬಳಕೆಯಾಗುತ್ತಿದೆ. ನಾನು ಯಾವಾಗಲೂ ಬುಡಕಟ್ಟು ಜನಾಂಗದವರನ್ನು ಬೆಂಬಲಿಸುತ್ತೇನೆ ಮತ್ತು ಗೌರವಿಸುತ್ತೇನೆ ಮತ್ತು ಅವರು ಯಾವಾಗಲೂ ನನಗೆ ಮತ್ತು ನನ್ನ ಕಾರ್ಯಕ್ರಮಗಳಿಗೆ ಪ್ರೀತಿಯನ್ನು ತೋರಿಸಿದ್ದಾರೆ ಎಂದು ಬರೆದಿದ್ದಾರೆ.

ಎಕ್ಸ್‌  ಖಾತೆಯನ್ನು ಹೊಂದಿರುವ ಎಲ್ಲರಿಗೂ ನಾನು ಉತ್ತರಿಸಬೇಕಾಗಿಲ್ಲ. ಆದರೆ ನನ್ನ ಆದಿವಾಸಿ ಸಹೋದರ ಸಹೋದರಿಯರಿಗೆ ನನ್ನ ಬಗ್ಗೆ ವಿವರಿಸುವುದು ನನ್ನ ಕರ್ತವ್ಯ ಎಂದು ನಾನು ಭಾವಿಸುತ್ತೇನೆ. ನಾನು ಉದ್ದೇಶಪೂರ್ವಕವಲ್ಲದೇ ಅವರ ಭಾವನೆಗಳನ್ನು ನೋಯಿಸಿದ್ದರೆ, ನಾನು ಅವರಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಇದನ್ನು ಓದಿ: ಬಿಜೆಪಿ ಪರ ಪ್ರಚಾರಕ್ಕೆ ತೆರಳಲು ಸಾರ್ವಜನಿಕ ಬೊಕ್ಕಸದ ಕೋಟ್ಯಾಂತರ ರೂ. ಹಣ ಬಳಸಿದ ಅಸ್ಸಾಂ ಸಿಎಂ: ವರದಿ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...