Homeಮುಖಪುಟಸುರಿಯುತ್ತಿರುವ ಮಳೆಯ ನಡುವೆ ಛತ್ರಿಯಡಿಯಲ್ಲಿ ನಿಂತು ಗಿಡಕ್ಕೆ ನೀರುಣಿಸಿದ ಮುಖ್ಯಮಂತ್ರಿ ಚೌಹಾಣ್!

ಸುರಿಯುತ್ತಿರುವ ಮಳೆಯ ನಡುವೆ ಛತ್ರಿಯಡಿಯಲ್ಲಿ ನಿಂತು ಗಿಡಕ್ಕೆ ನೀರುಣಿಸಿದ ಮುಖ್ಯಮಂತ್ರಿ ಚೌಹಾಣ್!

‘ಬಿಜೆಪಿಯವರು ಎಲ್ಲರೂ ಹಾಗೆಯೆ’ ಎಂದಿರುವ ನೆಟ್ಟಿಗರೊಬ್ಬರು ಅದೇ ರೀತಿ ವರ್ತಿಸಿರುವ ಇತರ ಬಿಜೆಪಿ ಮುಖಂಡರುಗಳ ಚಿತ್ರವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ರಾಜಕಾರಣಿಗಳು ತಮ್ಮ ಪ್ರಚಾರಕ್ಕಾಗಿ ಏನೆಲ್ಲಾ ಕಸರತ್ತುಗಳನ್ನು ನಡೆಸುತ್ತಾರೆ. ಆದರೆ ಇದು ಇಂಟರ್‌ನೆಟ್‌ ಯುಗವಾಗಿದ್ದರಿಂದ ಜನರು ರಾಜಕೀಯ ನಾಯಕರನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಇರುತ್ತಾರೆ. ಸಣ್ಣದೊಂದು ತಪ್ಪೆಸಗಿದರೂ ಜನರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಾರೆ ಮತ್ತು ತಮ್ಮ ಆಕ್ಷೇಪವನ್ನು ದಾಖಲು ಮಾಡುತ್ತಾರೆ. ಇದೀಗ ಮಧ್ಯಪ್ರದೇಶದ ಬಿಜೆಪಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಎಡವಟ್ಟೊಂದನ್ನು ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ ಆಗುತ್ತಿದ್ದಾರೆ.

ಶಿವರಾಜ್ ಸಿಂಗ್‌ ಅವರು ಇತ್ತೀಚೆಗೆ ಸುರಿಯುವ ಮಳೆಯ ನಡುವೆಯೂ, ಸಹಾಯಕನೋರ್ವ ಹಿಡಿದ ಕೊಡೆಗಳ ಅಡಿಯಲ್ಲಿ ಟೈಲ್ಸ್‌ ಮೇಲೆ ನಿಂತು ಗಿಡಗಳಿಗೆ ನೀರುಣಿಸುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಚಿತ್ರವನ್ನು ಬಳಸಿಕೊಂಡು ನೆಟ್ಟಿಗರು ಮುಖ್ಯಮಂತ್ರಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸ್ಮಾರ್ಟ್ ಸಿಟಿ ರ್‍ಯಾಕಿಂಗ್‌ನಲ್ಲಿ ಉತ್ತರಪ್ರದೇಶಕ್ಕೆ ಮೊದಲ ಸ್ಥಾನ!: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‍

ಆದರೆ ಮುಖ್ಯಮಂತ್ರಿಯ ಈ ಕಾರ್ಯವನ್ನು ಅವರ ಪ್ರಚಾರ ತಂಡದ ಅಧಿಕಾರಿಯೊಬ್ಬರು ಸಮರ್ಥನೆ ಮಾಡಿದ್ದಾಗಿ ವರದಿಯಾಗಿದೆ. “ಪ್ರತಿಕೂಲ ಹವಾಮಾನ ಇದ್ದರೂ ಕೂಡಾ ಮುಖ್ಯಮಂತ್ರಿ ಪ್ರತಿದಿನ ಗಿಡಗಳನ್ನು ನೆಡುತ್ತಾರೆ. ಎಲ್ಲವೂ ಅವರವರ ಭಾವಕ್ಕೆ ಬಿಟ್ಟದ್ದು” ಎಂದು ಅಧಿಕಾರಿ ಹೇಳಿದ್ದಾಗಿ ವರದಿಯಾಗಿದೆ.

ಟೈಲ್ಸ್‌ ಮೇಲೆ ನಿಂತು ಗಿಡಕ್ಕೆ ನೀರು ಹಾಕುತ್ತಿರುವ ಚೌಹಾಣ್‌ ಕುರಿತು ಪ್ರತಿಪಕ್ಷ ಕಾಂಗ್ರೆಸ್‌ ವ್ಯಂಗ್ಯವಾಡಿದೆ. “ಮಣ್ಣಿನ ಮಗ, ರೈತನ ಮಗ, ದುಬಾರಿ ಬೆಲೆಯ ಟೈಲ್ಸ್‌ ಮೇಲೆ ನಿಂತುಕೊಂಡು ಮಳೆಯ ನಡುವೆ ಕೊಡೆ ಹಿಡಿದುಕೊಂಡು ಗಿಡಗಳಿಗೆ ನೀರುಣಿಸುತ್ತಿರುವ ಅಪರೂಪದ ದೃಶ್ಯ” ಎಂದು ಹೇಳಿದೆ.

ಪತ್ರಕರ್ತ ಗುರುಪ್ರೀತ್ ಅವರು ಹಂಚಿವರು ಚಿತ್ರಕ್ಕೆ ಪ್ರತಿಕ್ರಿಯಿಸಿರುವ ವ್ಯಕ್ತಿಯೊಬ್ಬರು, ಬಿಜೆಪಿಯವರು ಎಲ್ಲರೂ ಹಾಗೆಯೆ ಎಂದು ಚಿತ್ರವವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹಲವಾರು ಬಿಜಿಪಿ ನಾಯಕರು ಮುಖ್ಯಮಂತ್ರಿ ಶಿವರಾಜ್ ಅವರ ರೀತಿಯಲ್ಲೇ ಗಿಡಗಳಿಗೆ ನೀರುಣಿಸುತ್ತಿರುವ ಚಿತ್ರವನ್ನು ಕೊಲಾಜ್ ಮಾಡಲಾಗಿದೆ.

ಇದನ್ನೂ ಓದಿ: ಸುಪ್ರೀಂ ಚಾಟಿಗೂ ಮೊದಲೇ ಮೋದಿ ಉಚಿತ ಲಸಿಕೆ ನೀತಿ ಸಿದ್ಧ ಮಾಡಿದ್ದರೆ?: ಮೋದಿ ಸರ್ಕಾರದ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಪತ್ರಕರ್ತರು

ಮತ್ತೊಬ್ಬ ಬಳಕೆದಾರರು, ಶಿವರಾಜ್ ಅವರನ್ನು ಅಧಿಕಾರಿಗಳು ಎತ್ತಿಕೊಂಡು ನದಿಯೊಂದನ್ನು ದಾಟಿಸುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಕೆರೆಗೆ ಬೈಕ್‌ ಎಸೆದು ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಡಾ. ರಾಗಿಣಿ ನಾಯಕ್ ಅವರು ಮುಖ್ಯಮಂತ್ರಿಯನ್ನು, “ಬುದ್ಧಿವಂತಿಕೆಯ ಕುರುಡು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್‌: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಆಗುತ್ತದೆ ಎಂದ ದಾವಣಗೆರೆ ಬಿಜೆಪಿ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...