Homeಮುಖಪುಟಸುರಿಯುತ್ತಿರುವ ಮಳೆಯ ನಡುವೆ ಛತ್ರಿಯಡಿಯಲ್ಲಿ ನಿಂತು ಗಿಡಕ್ಕೆ ನೀರುಣಿಸಿದ ಮುಖ್ಯಮಂತ್ರಿ ಚೌಹಾಣ್!

ಸುರಿಯುತ್ತಿರುವ ಮಳೆಯ ನಡುವೆ ಛತ್ರಿಯಡಿಯಲ್ಲಿ ನಿಂತು ಗಿಡಕ್ಕೆ ನೀರುಣಿಸಿದ ಮುಖ್ಯಮಂತ್ರಿ ಚೌಹಾಣ್!

‘ಬಿಜೆಪಿಯವರು ಎಲ್ಲರೂ ಹಾಗೆಯೆ’ ಎಂದಿರುವ ನೆಟ್ಟಿಗರೊಬ್ಬರು ಅದೇ ರೀತಿ ವರ್ತಿಸಿರುವ ಇತರ ಬಿಜೆಪಿ ಮುಖಂಡರುಗಳ ಚಿತ್ರವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ರಾಜಕಾರಣಿಗಳು ತಮ್ಮ ಪ್ರಚಾರಕ್ಕಾಗಿ ಏನೆಲ್ಲಾ ಕಸರತ್ತುಗಳನ್ನು ನಡೆಸುತ್ತಾರೆ. ಆದರೆ ಇದು ಇಂಟರ್‌ನೆಟ್‌ ಯುಗವಾಗಿದ್ದರಿಂದ ಜನರು ರಾಜಕೀಯ ನಾಯಕರನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಇರುತ್ತಾರೆ. ಸಣ್ಣದೊಂದು ತಪ್ಪೆಸಗಿದರೂ ಜನರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಾರೆ ಮತ್ತು ತಮ್ಮ ಆಕ್ಷೇಪವನ್ನು ದಾಖಲು ಮಾಡುತ್ತಾರೆ. ಇದೀಗ ಮಧ್ಯಪ್ರದೇಶದ ಬಿಜೆಪಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಎಡವಟ್ಟೊಂದನ್ನು ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ ಆಗುತ್ತಿದ್ದಾರೆ.

ಶಿವರಾಜ್ ಸಿಂಗ್‌ ಅವರು ಇತ್ತೀಚೆಗೆ ಸುರಿಯುವ ಮಳೆಯ ನಡುವೆಯೂ, ಸಹಾಯಕನೋರ್ವ ಹಿಡಿದ ಕೊಡೆಗಳ ಅಡಿಯಲ್ಲಿ ಟೈಲ್ಸ್‌ ಮೇಲೆ ನಿಂತು ಗಿಡಗಳಿಗೆ ನೀರುಣಿಸುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಚಿತ್ರವನ್ನು ಬಳಸಿಕೊಂಡು ನೆಟ್ಟಿಗರು ಮುಖ್ಯಮಂತ್ರಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸ್ಮಾರ್ಟ್ ಸಿಟಿ ರ್‍ಯಾಕಿಂಗ್‌ನಲ್ಲಿ ಉತ್ತರಪ್ರದೇಶಕ್ಕೆ ಮೊದಲ ಸ್ಥಾನ!: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‍

ಆದರೆ ಮುಖ್ಯಮಂತ್ರಿಯ ಈ ಕಾರ್ಯವನ್ನು ಅವರ ಪ್ರಚಾರ ತಂಡದ ಅಧಿಕಾರಿಯೊಬ್ಬರು ಸಮರ್ಥನೆ ಮಾಡಿದ್ದಾಗಿ ವರದಿಯಾಗಿದೆ. “ಪ್ರತಿಕೂಲ ಹವಾಮಾನ ಇದ್ದರೂ ಕೂಡಾ ಮುಖ್ಯಮಂತ್ರಿ ಪ್ರತಿದಿನ ಗಿಡಗಳನ್ನು ನೆಡುತ್ತಾರೆ. ಎಲ್ಲವೂ ಅವರವರ ಭಾವಕ್ಕೆ ಬಿಟ್ಟದ್ದು” ಎಂದು ಅಧಿಕಾರಿ ಹೇಳಿದ್ದಾಗಿ ವರದಿಯಾಗಿದೆ.

ಟೈಲ್ಸ್‌ ಮೇಲೆ ನಿಂತು ಗಿಡಕ್ಕೆ ನೀರು ಹಾಕುತ್ತಿರುವ ಚೌಹಾಣ್‌ ಕುರಿತು ಪ್ರತಿಪಕ್ಷ ಕಾಂಗ್ರೆಸ್‌ ವ್ಯಂಗ್ಯವಾಡಿದೆ. “ಮಣ್ಣಿನ ಮಗ, ರೈತನ ಮಗ, ದುಬಾರಿ ಬೆಲೆಯ ಟೈಲ್ಸ್‌ ಮೇಲೆ ನಿಂತುಕೊಂಡು ಮಳೆಯ ನಡುವೆ ಕೊಡೆ ಹಿಡಿದುಕೊಂಡು ಗಿಡಗಳಿಗೆ ನೀರುಣಿಸುತ್ತಿರುವ ಅಪರೂಪದ ದೃಶ್ಯ” ಎಂದು ಹೇಳಿದೆ.

ಪತ್ರಕರ್ತ ಗುರುಪ್ರೀತ್ ಅವರು ಹಂಚಿವರು ಚಿತ್ರಕ್ಕೆ ಪ್ರತಿಕ್ರಿಯಿಸಿರುವ ವ್ಯಕ್ತಿಯೊಬ್ಬರು, ಬಿಜೆಪಿಯವರು ಎಲ್ಲರೂ ಹಾಗೆಯೆ ಎಂದು ಚಿತ್ರವವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹಲವಾರು ಬಿಜಿಪಿ ನಾಯಕರು ಮುಖ್ಯಮಂತ್ರಿ ಶಿವರಾಜ್ ಅವರ ರೀತಿಯಲ್ಲೇ ಗಿಡಗಳಿಗೆ ನೀರುಣಿಸುತ್ತಿರುವ ಚಿತ್ರವನ್ನು ಕೊಲಾಜ್ ಮಾಡಲಾಗಿದೆ.

ಇದನ್ನೂ ಓದಿ: ಸುಪ್ರೀಂ ಚಾಟಿಗೂ ಮೊದಲೇ ಮೋದಿ ಉಚಿತ ಲಸಿಕೆ ನೀತಿ ಸಿದ್ಧ ಮಾಡಿದ್ದರೆ?: ಮೋದಿ ಸರ್ಕಾರದ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಪತ್ರಕರ್ತರು

ಮತ್ತೊಬ್ಬ ಬಳಕೆದಾರರು, ಶಿವರಾಜ್ ಅವರನ್ನು ಅಧಿಕಾರಿಗಳು ಎತ್ತಿಕೊಂಡು ನದಿಯೊಂದನ್ನು ದಾಟಿಸುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಕೆರೆಗೆ ಬೈಕ್‌ ಎಸೆದು ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಡಾ. ರಾಗಿಣಿ ನಾಯಕ್ ಅವರು ಮುಖ್ಯಮಂತ್ರಿಯನ್ನು, “ಬುದ್ಧಿವಂತಿಕೆಯ ಕುರುಡು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್‌: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಆಗುತ್ತದೆ ಎಂದ ದಾವಣಗೆರೆ ಬಿಜೆಪಿ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...