Homeಮುಖಪುಟಸುರಿಯುತ್ತಿರುವ ಮಳೆಯ ನಡುವೆ ಛತ್ರಿಯಡಿಯಲ್ಲಿ ನಿಂತು ಗಿಡಕ್ಕೆ ನೀರುಣಿಸಿದ ಮುಖ್ಯಮಂತ್ರಿ ಚೌಹಾಣ್!

ಸುರಿಯುತ್ತಿರುವ ಮಳೆಯ ನಡುವೆ ಛತ್ರಿಯಡಿಯಲ್ಲಿ ನಿಂತು ಗಿಡಕ್ಕೆ ನೀರುಣಿಸಿದ ಮುಖ್ಯಮಂತ್ರಿ ಚೌಹಾಣ್!

‘ಬಿಜೆಪಿಯವರು ಎಲ್ಲರೂ ಹಾಗೆಯೆ’ ಎಂದಿರುವ ನೆಟ್ಟಿಗರೊಬ್ಬರು ಅದೇ ರೀತಿ ವರ್ತಿಸಿರುವ ಇತರ ಬಿಜೆಪಿ ಮುಖಂಡರುಗಳ ಚಿತ್ರವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ರಾಜಕಾರಣಿಗಳು ತಮ್ಮ ಪ್ರಚಾರಕ್ಕಾಗಿ ಏನೆಲ್ಲಾ ಕಸರತ್ತುಗಳನ್ನು ನಡೆಸುತ್ತಾರೆ. ಆದರೆ ಇದು ಇಂಟರ್‌ನೆಟ್‌ ಯುಗವಾಗಿದ್ದರಿಂದ ಜನರು ರಾಜಕೀಯ ನಾಯಕರನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಇರುತ್ತಾರೆ. ಸಣ್ಣದೊಂದು ತಪ್ಪೆಸಗಿದರೂ ಜನರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಾರೆ ಮತ್ತು ತಮ್ಮ ಆಕ್ಷೇಪವನ್ನು ದಾಖಲು ಮಾಡುತ್ತಾರೆ. ಇದೀಗ ಮಧ್ಯಪ್ರದೇಶದ ಬಿಜೆಪಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಎಡವಟ್ಟೊಂದನ್ನು ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ ಆಗುತ್ತಿದ್ದಾರೆ.

ಶಿವರಾಜ್ ಸಿಂಗ್‌ ಅವರು ಇತ್ತೀಚೆಗೆ ಸುರಿಯುವ ಮಳೆಯ ನಡುವೆಯೂ, ಸಹಾಯಕನೋರ್ವ ಹಿಡಿದ ಕೊಡೆಗಳ ಅಡಿಯಲ್ಲಿ ಟೈಲ್ಸ್‌ ಮೇಲೆ ನಿಂತು ಗಿಡಗಳಿಗೆ ನೀರುಣಿಸುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಚಿತ್ರವನ್ನು ಬಳಸಿಕೊಂಡು ನೆಟ್ಟಿಗರು ಮುಖ್ಯಮಂತ್ರಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸ್ಮಾರ್ಟ್ ಸಿಟಿ ರ್‍ಯಾಕಿಂಗ್‌ನಲ್ಲಿ ಉತ್ತರಪ್ರದೇಶಕ್ಕೆ ಮೊದಲ ಸ್ಥಾನ!: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‍

ಆದರೆ ಮುಖ್ಯಮಂತ್ರಿಯ ಈ ಕಾರ್ಯವನ್ನು ಅವರ ಪ್ರಚಾರ ತಂಡದ ಅಧಿಕಾರಿಯೊಬ್ಬರು ಸಮರ್ಥನೆ ಮಾಡಿದ್ದಾಗಿ ವರದಿಯಾಗಿದೆ. “ಪ್ರತಿಕೂಲ ಹವಾಮಾನ ಇದ್ದರೂ ಕೂಡಾ ಮುಖ್ಯಮಂತ್ರಿ ಪ್ರತಿದಿನ ಗಿಡಗಳನ್ನು ನೆಡುತ್ತಾರೆ. ಎಲ್ಲವೂ ಅವರವರ ಭಾವಕ್ಕೆ ಬಿಟ್ಟದ್ದು” ಎಂದು ಅಧಿಕಾರಿ ಹೇಳಿದ್ದಾಗಿ ವರದಿಯಾಗಿದೆ.

ಟೈಲ್ಸ್‌ ಮೇಲೆ ನಿಂತು ಗಿಡಕ್ಕೆ ನೀರು ಹಾಕುತ್ತಿರುವ ಚೌಹಾಣ್‌ ಕುರಿತು ಪ್ರತಿಪಕ್ಷ ಕಾಂಗ್ರೆಸ್‌ ವ್ಯಂಗ್ಯವಾಡಿದೆ. “ಮಣ್ಣಿನ ಮಗ, ರೈತನ ಮಗ, ದುಬಾರಿ ಬೆಲೆಯ ಟೈಲ್ಸ್‌ ಮೇಲೆ ನಿಂತುಕೊಂಡು ಮಳೆಯ ನಡುವೆ ಕೊಡೆ ಹಿಡಿದುಕೊಂಡು ಗಿಡಗಳಿಗೆ ನೀರುಣಿಸುತ್ತಿರುವ ಅಪರೂಪದ ದೃಶ್ಯ” ಎಂದು ಹೇಳಿದೆ.

ಪತ್ರಕರ್ತ ಗುರುಪ್ರೀತ್ ಅವರು ಹಂಚಿವರು ಚಿತ್ರಕ್ಕೆ ಪ್ರತಿಕ್ರಿಯಿಸಿರುವ ವ್ಯಕ್ತಿಯೊಬ್ಬರು, ಬಿಜೆಪಿಯವರು ಎಲ್ಲರೂ ಹಾಗೆಯೆ ಎಂದು ಚಿತ್ರವವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹಲವಾರು ಬಿಜಿಪಿ ನಾಯಕರು ಮುಖ್ಯಮಂತ್ರಿ ಶಿವರಾಜ್ ಅವರ ರೀತಿಯಲ್ಲೇ ಗಿಡಗಳಿಗೆ ನೀರುಣಿಸುತ್ತಿರುವ ಚಿತ್ರವನ್ನು ಕೊಲಾಜ್ ಮಾಡಲಾಗಿದೆ.

ಇದನ್ನೂ ಓದಿ: ಸುಪ್ರೀಂ ಚಾಟಿಗೂ ಮೊದಲೇ ಮೋದಿ ಉಚಿತ ಲಸಿಕೆ ನೀತಿ ಸಿದ್ಧ ಮಾಡಿದ್ದರೆ?: ಮೋದಿ ಸರ್ಕಾರದ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಪತ್ರಕರ್ತರು

ಮತ್ತೊಬ್ಬ ಬಳಕೆದಾರರು, ಶಿವರಾಜ್ ಅವರನ್ನು ಅಧಿಕಾರಿಗಳು ಎತ್ತಿಕೊಂಡು ನದಿಯೊಂದನ್ನು ದಾಟಿಸುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಕೆರೆಗೆ ಬೈಕ್‌ ಎಸೆದು ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಡಾ. ರಾಗಿಣಿ ನಾಯಕ್ ಅವರು ಮುಖ್ಯಮಂತ್ರಿಯನ್ನು, “ಬುದ್ಧಿವಂತಿಕೆಯ ಕುರುಡು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್‌: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಆಗುತ್ತದೆ ಎಂದ ದಾವಣಗೆರೆ ಬಿಜೆಪಿ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...