Homeಮುಖಪುಟಸುರಿಯುತ್ತಿರುವ ಮಳೆಯ ನಡುವೆ ಛತ್ರಿಯಡಿಯಲ್ಲಿ ನಿಂತು ಗಿಡಕ್ಕೆ ನೀರುಣಿಸಿದ ಮುಖ್ಯಮಂತ್ರಿ ಚೌಹಾಣ್!

ಸುರಿಯುತ್ತಿರುವ ಮಳೆಯ ನಡುವೆ ಛತ್ರಿಯಡಿಯಲ್ಲಿ ನಿಂತು ಗಿಡಕ್ಕೆ ನೀರುಣಿಸಿದ ಮುಖ್ಯಮಂತ್ರಿ ಚೌಹಾಣ್!

‘ಬಿಜೆಪಿಯವರು ಎಲ್ಲರೂ ಹಾಗೆಯೆ’ ಎಂದಿರುವ ನೆಟ್ಟಿಗರೊಬ್ಬರು ಅದೇ ರೀತಿ ವರ್ತಿಸಿರುವ ಇತರ ಬಿಜೆಪಿ ಮುಖಂಡರುಗಳ ಚಿತ್ರವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ರಾಜಕಾರಣಿಗಳು ತಮ್ಮ ಪ್ರಚಾರಕ್ಕಾಗಿ ಏನೆಲ್ಲಾ ಕಸರತ್ತುಗಳನ್ನು ನಡೆಸುತ್ತಾರೆ. ಆದರೆ ಇದು ಇಂಟರ್‌ನೆಟ್‌ ಯುಗವಾಗಿದ್ದರಿಂದ ಜನರು ರಾಜಕೀಯ ನಾಯಕರನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಇರುತ್ತಾರೆ. ಸಣ್ಣದೊಂದು ತಪ್ಪೆಸಗಿದರೂ ಜನರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಾರೆ ಮತ್ತು ತಮ್ಮ ಆಕ್ಷೇಪವನ್ನು ದಾಖಲು ಮಾಡುತ್ತಾರೆ. ಇದೀಗ ಮಧ್ಯಪ್ರದೇಶದ ಬಿಜೆಪಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಎಡವಟ್ಟೊಂದನ್ನು ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ ಆಗುತ್ತಿದ್ದಾರೆ.

ಶಿವರಾಜ್ ಸಿಂಗ್‌ ಅವರು ಇತ್ತೀಚೆಗೆ ಸುರಿಯುವ ಮಳೆಯ ನಡುವೆಯೂ, ಸಹಾಯಕನೋರ್ವ ಹಿಡಿದ ಕೊಡೆಗಳ ಅಡಿಯಲ್ಲಿ ಟೈಲ್ಸ್‌ ಮೇಲೆ ನಿಂತು ಗಿಡಗಳಿಗೆ ನೀರುಣಿಸುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಚಿತ್ರವನ್ನು ಬಳಸಿಕೊಂಡು ನೆಟ್ಟಿಗರು ಮುಖ್ಯಮಂತ್ರಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸ್ಮಾರ್ಟ್ ಸಿಟಿ ರ್‍ಯಾಕಿಂಗ್‌ನಲ್ಲಿ ಉತ್ತರಪ್ರದೇಶಕ್ಕೆ ಮೊದಲ ಸ್ಥಾನ!: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‍

ಆದರೆ ಮುಖ್ಯಮಂತ್ರಿಯ ಈ ಕಾರ್ಯವನ್ನು ಅವರ ಪ್ರಚಾರ ತಂಡದ ಅಧಿಕಾರಿಯೊಬ್ಬರು ಸಮರ್ಥನೆ ಮಾಡಿದ್ದಾಗಿ ವರದಿಯಾಗಿದೆ. “ಪ್ರತಿಕೂಲ ಹವಾಮಾನ ಇದ್ದರೂ ಕೂಡಾ ಮುಖ್ಯಮಂತ್ರಿ ಪ್ರತಿದಿನ ಗಿಡಗಳನ್ನು ನೆಡುತ್ತಾರೆ. ಎಲ್ಲವೂ ಅವರವರ ಭಾವಕ್ಕೆ ಬಿಟ್ಟದ್ದು” ಎಂದು ಅಧಿಕಾರಿ ಹೇಳಿದ್ದಾಗಿ ವರದಿಯಾಗಿದೆ.

ಟೈಲ್ಸ್‌ ಮೇಲೆ ನಿಂತು ಗಿಡಕ್ಕೆ ನೀರು ಹಾಕುತ್ತಿರುವ ಚೌಹಾಣ್‌ ಕುರಿತು ಪ್ರತಿಪಕ್ಷ ಕಾಂಗ್ರೆಸ್‌ ವ್ಯಂಗ್ಯವಾಡಿದೆ. “ಮಣ್ಣಿನ ಮಗ, ರೈತನ ಮಗ, ದುಬಾರಿ ಬೆಲೆಯ ಟೈಲ್ಸ್‌ ಮೇಲೆ ನಿಂತುಕೊಂಡು ಮಳೆಯ ನಡುವೆ ಕೊಡೆ ಹಿಡಿದುಕೊಂಡು ಗಿಡಗಳಿಗೆ ನೀರುಣಿಸುತ್ತಿರುವ ಅಪರೂಪದ ದೃಶ್ಯ” ಎಂದು ಹೇಳಿದೆ.

ಪತ್ರಕರ್ತ ಗುರುಪ್ರೀತ್ ಅವರು ಹಂಚಿವರು ಚಿತ್ರಕ್ಕೆ ಪ್ರತಿಕ್ರಿಯಿಸಿರುವ ವ್ಯಕ್ತಿಯೊಬ್ಬರು, ಬಿಜೆಪಿಯವರು ಎಲ್ಲರೂ ಹಾಗೆಯೆ ಎಂದು ಚಿತ್ರವವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹಲವಾರು ಬಿಜಿಪಿ ನಾಯಕರು ಮುಖ್ಯಮಂತ್ರಿ ಶಿವರಾಜ್ ಅವರ ರೀತಿಯಲ್ಲೇ ಗಿಡಗಳಿಗೆ ನೀರುಣಿಸುತ್ತಿರುವ ಚಿತ್ರವನ್ನು ಕೊಲಾಜ್ ಮಾಡಲಾಗಿದೆ.

ಇದನ್ನೂ ಓದಿ: ಸುಪ್ರೀಂ ಚಾಟಿಗೂ ಮೊದಲೇ ಮೋದಿ ಉಚಿತ ಲಸಿಕೆ ನೀತಿ ಸಿದ್ಧ ಮಾಡಿದ್ದರೆ?: ಮೋದಿ ಸರ್ಕಾರದ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಪತ್ರಕರ್ತರು

ಮತ್ತೊಬ್ಬ ಬಳಕೆದಾರರು, ಶಿವರಾಜ್ ಅವರನ್ನು ಅಧಿಕಾರಿಗಳು ಎತ್ತಿಕೊಂಡು ನದಿಯೊಂದನ್ನು ದಾಟಿಸುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಕೆರೆಗೆ ಬೈಕ್‌ ಎಸೆದು ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಡಾ. ರಾಗಿಣಿ ನಾಯಕ್ ಅವರು ಮುಖ್ಯಮಂತ್ರಿಯನ್ನು, “ಬುದ್ಧಿವಂತಿಕೆಯ ಕುರುಡು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್‌: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಆಗುತ್ತದೆ ಎಂದ ದಾವಣಗೆರೆ ಬಿಜೆಪಿ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...