Homeಮುಖಪುಟಸುರಿಯುತ್ತಿರುವ ಮಳೆಯ ನಡುವೆ ಛತ್ರಿಯಡಿಯಲ್ಲಿ ನಿಂತು ಗಿಡಕ್ಕೆ ನೀರುಣಿಸಿದ ಮುಖ್ಯಮಂತ್ರಿ ಚೌಹಾಣ್!

ಸುರಿಯುತ್ತಿರುವ ಮಳೆಯ ನಡುವೆ ಛತ್ರಿಯಡಿಯಲ್ಲಿ ನಿಂತು ಗಿಡಕ್ಕೆ ನೀರುಣಿಸಿದ ಮುಖ್ಯಮಂತ್ರಿ ಚೌಹಾಣ್!

‘ಬಿಜೆಪಿಯವರು ಎಲ್ಲರೂ ಹಾಗೆಯೆ’ ಎಂದಿರುವ ನೆಟ್ಟಿಗರೊಬ್ಬರು ಅದೇ ರೀತಿ ವರ್ತಿಸಿರುವ ಇತರ ಬಿಜೆಪಿ ಮುಖಂಡರುಗಳ ಚಿತ್ರವನ್ನು ಹಂಚಿಕೊಂಡಿದ್ದಾರೆ.

- Advertisement -
- Advertisement -

ರಾಜಕಾರಣಿಗಳು ತಮ್ಮ ಪ್ರಚಾರಕ್ಕಾಗಿ ಏನೆಲ್ಲಾ ಕಸರತ್ತುಗಳನ್ನು ನಡೆಸುತ್ತಾರೆ. ಆದರೆ ಇದು ಇಂಟರ್‌ನೆಟ್‌ ಯುಗವಾಗಿದ್ದರಿಂದ ಜನರು ರಾಜಕೀಯ ನಾಯಕರನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಇರುತ್ತಾರೆ. ಸಣ್ಣದೊಂದು ತಪ್ಪೆಸಗಿದರೂ ಜನರು ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸುತ್ತಾರೆ ಮತ್ತು ತಮ್ಮ ಆಕ್ಷೇಪವನ್ನು ದಾಖಲು ಮಾಡುತ್ತಾರೆ. ಇದೀಗ ಮಧ್ಯಪ್ರದೇಶದ ಬಿಜೆಪಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಎಡವಟ್ಟೊಂದನ್ನು ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ ಆಗುತ್ತಿದ್ದಾರೆ.

ಶಿವರಾಜ್ ಸಿಂಗ್‌ ಅವರು ಇತ್ತೀಚೆಗೆ ಸುರಿಯುವ ಮಳೆಯ ನಡುವೆಯೂ, ಸಹಾಯಕನೋರ್ವ ಹಿಡಿದ ಕೊಡೆಗಳ ಅಡಿಯಲ್ಲಿ ಟೈಲ್ಸ್‌ ಮೇಲೆ ನಿಂತು ಗಿಡಗಳಿಗೆ ನೀರುಣಿಸುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ಚಿತ್ರವನ್ನು ಬಳಸಿಕೊಂಡು ನೆಟ್ಟಿಗರು ಮುಖ್ಯಮಂತ್ರಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಇದನ್ನೂ ಓದಿ: ಸ್ಮಾರ್ಟ್ ಸಿಟಿ ರ್‍ಯಾಕಿಂಗ್‌ನಲ್ಲಿ ಉತ್ತರಪ್ರದೇಶಕ್ಕೆ ಮೊದಲ ಸ್ಥಾನ!: ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‍

ಆದರೆ ಮುಖ್ಯಮಂತ್ರಿಯ ಈ ಕಾರ್ಯವನ್ನು ಅವರ ಪ್ರಚಾರ ತಂಡದ ಅಧಿಕಾರಿಯೊಬ್ಬರು ಸಮರ್ಥನೆ ಮಾಡಿದ್ದಾಗಿ ವರದಿಯಾಗಿದೆ. “ಪ್ರತಿಕೂಲ ಹವಾಮಾನ ಇದ್ದರೂ ಕೂಡಾ ಮುಖ್ಯಮಂತ್ರಿ ಪ್ರತಿದಿನ ಗಿಡಗಳನ್ನು ನೆಡುತ್ತಾರೆ. ಎಲ್ಲವೂ ಅವರವರ ಭಾವಕ್ಕೆ ಬಿಟ್ಟದ್ದು” ಎಂದು ಅಧಿಕಾರಿ ಹೇಳಿದ್ದಾಗಿ ವರದಿಯಾಗಿದೆ.

ಟೈಲ್ಸ್‌ ಮೇಲೆ ನಿಂತು ಗಿಡಕ್ಕೆ ನೀರು ಹಾಕುತ್ತಿರುವ ಚೌಹಾಣ್‌ ಕುರಿತು ಪ್ರತಿಪಕ್ಷ ಕಾಂಗ್ರೆಸ್‌ ವ್ಯಂಗ್ಯವಾಡಿದೆ. “ಮಣ್ಣಿನ ಮಗ, ರೈತನ ಮಗ, ದುಬಾರಿ ಬೆಲೆಯ ಟೈಲ್ಸ್‌ ಮೇಲೆ ನಿಂತುಕೊಂಡು ಮಳೆಯ ನಡುವೆ ಕೊಡೆ ಹಿಡಿದುಕೊಂಡು ಗಿಡಗಳಿಗೆ ನೀರುಣಿಸುತ್ತಿರುವ ಅಪರೂಪದ ದೃಶ್ಯ” ಎಂದು ಹೇಳಿದೆ.

ಪತ್ರಕರ್ತ ಗುರುಪ್ರೀತ್ ಅವರು ಹಂಚಿವರು ಚಿತ್ರಕ್ಕೆ ಪ್ರತಿಕ್ರಿಯಿಸಿರುವ ವ್ಯಕ್ತಿಯೊಬ್ಬರು, ಬಿಜೆಪಿಯವರು ಎಲ್ಲರೂ ಹಾಗೆಯೆ ಎಂದು ಚಿತ್ರವವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಹಲವಾರು ಬಿಜಿಪಿ ನಾಯಕರು ಮುಖ್ಯಮಂತ್ರಿ ಶಿವರಾಜ್ ಅವರ ರೀತಿಯಲ್ಲೇ ಗಿಡಗಳಿಗೆ ನೀರುಣಿಸುತ್ತಿರುವ ಚಿತ್ರವನ್ನು ಕೊಲಾಜ್ ಮಾಡಲಾಗಿದೆ.

ಇದನ್ನೂ ಓದಿ: ಸುಪ್ರೀಂ ಚಾಟಿಗೂ ಮೊದಲೇ ಮೋದಿ ಉಚಿತ ಲಸಿಕೆ ನೀತಿ ಸಿದ್ಧ ಮಾಡಿದ್ದರೆ?: ಮೋದಿ ಸರ್ಕಾರದ ಡ್ಯಾಮೇಜ್ ಕಂಟ್ರೋಲ್‌ಗೆ ಮುಂದಾದ ಪತ್ರಕರ್ತರು

ಮತ್ತೊಬ್ಬ ಬಳಕೆದಾರರು, ಶಿವರಾಜ್ ಅವರನ್ನು ಅಧಿಕಾರಿಗಳು ಎತ್ತಿಕೊಂಡು ನದಿಯೊಂದನ್ನು ದಾಟಿಸುತ್ತಿರುವ ಚಿತ್ರವನ್ನು ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ತೆಲಂಗಾಣ: ಕೆರೆಗೆ ಬೈಕ್‌ ಎಸೆದು ಪೆಟ್ರೋಲ್‌ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಡಾ. ರಾಗಿಣಿ ನಾಯಕ್ ಅವರು ಮುಖ್ಯಮಂತ್ರಿಯನ್ನು, “ಬುದ್ಧಿವಂತಿಕೆಯ ಕುರುಡು” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್‌: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಆಗುತ್ತದೆ ಎಂದ ದಾವಣಗೆರೆ ಬಿಜೆಪಿ ಸಂಸದ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...