HomeUncategorizedಚೌಹಾಣ್-ತೋಮರ್-ಸಿಂಧಿಯಾ: ಯಾರಾಗ್ತಾರೆ ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ?

ಚೌಹಾಣ್-ತೋಮರ್-ಸಿಂಧಿಯಾ: ಯಾರಾಗ್ತಾರೆ ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ?

- Advertisement -
- Advertisement -

ಮಧ್ಯಪ್ರದೇಶದ ಅಧಿಕಾರ ಉಳಿಸಿಕೊಳ್ಳುವಲ್ಲಿ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಯಶಸ್ವಿಯಾಗಿದೆ. ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಘೋಷಣೆ ಮಾಡದೆ ಸಾಮೂಹಿಕ ನಾಯಕತ್ವ ತಂತ್ರಕ್ಕೆ ಮೊರೆ ಹೋದ ಹೈಕಮಾಂಡ್, ಕೇಂದ್ರ ಸಚಿವರಾದ ನರೇಂದ್ರ ಸಿಂಗ್ ತೋಮರ್, ಫಗ್ಗನ್ ಸಿಂಗ್ ಕುಲಸ್ತೆ, ಪ್ರಹ್ಲಾದ್ ಪಟೇಲ್ ಹಾಗೂ ಕೈಲಾಶ್ ವಿಜಯವರ್ಗಿಯಾ ಜತೆಗೆ ಏಳು ಲೋಕಸಭಾ ಸದಸ್ಯರನ್ನು ವಿಧಾನಸಭಾ ಕಣಕ್ಕಿಳಿಸಿತ್ತು. ಹೈಕಮಾಂಡ್‌ನ ಈ ಪ್ರಯೋಗ ಫಲಿಸಿದ್ದು, ಮುಖ್ಯಮಂತ್ರಿ ಹುದ್ದೆಗೆ ಹೊಸ ಆಯ್ಕೆಗಳು ತೆರೆದುಕೊಂಡಿದೆ. ಇದೀಗ ಶಿವರಾಜ್ ಸಿಂಗ್ ಚೌಹಾಣ್ ಅಧಿಕಾರಿದಲ್ಲಿ ಮುಂದುವರಿಯುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

2003 ರಿಂದಲೂ ಮಧ್ಯಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ, 2018ರ ನಂತರ 15 ತಿಂಗಳ ಅವಧಿಯನ್ನು ಹೊರತುಪಡಿಸಿ ಮುಂದಿನ ಐದು ವರ್ಷಗಳವರೆಗೆ (2028ರ ವರೆಗೆ) ಅಧಿಕಾರ ಖಚಿತಪಡಿಸಿಕೊಂಡಿದೆ. 163 ಸ್ಥಾನಗಳನ್ನು ಗೆಲ್ಲುವ ಮೂಲಕ ಪ್ರಚಂಡ ಬಹುಮತ ಸಾಧಿಸಿದೆ. ಇದೀಗ ಮಧ್ಯಪ್ರದೇಶದ ಮುಂದಿನ ಮುಖ್ಯಮಂತ್ರಿ ಯಾರು ಎಂಬುದು ಎಲ್ಲರಿಗೂ ಇರುವ ಬಹುದೊಡ್ಡ ಪ್ರಶ್ನೆಯಾಗಿದೆ.

ಮುಂದಿನ ಅವಧಿಗೆ ಶಿವರಾಜ್ ಸಿಂಗ್ ಚೌಹಾಣ್ ಅವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸದ ಹೈಕಮಾಂಡ್ ತಂತ್ರ ಫಲಿಸಿದೆ. ಆಡಳಿತ ವಿರೋಧಿ ಅಲೆಯ ಹೊರತಾಗಿಯೂ ಸಾಮೂಹಿಕ ನಾಯಕತ್ವ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆಯ ಮೇಲೆ ಪ್ರಚಾರ ನಡೆಸಿದ ಬಿಜೆಪಿ, ತನ್ನ ಓಟ್ ಬ್ಯಾಂಕ್ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ರಾಜ್ಯದ 230 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 163 ಸ್ಥಾನಗಳನ್ನು ಗಳಿಸಿದ್ದು, ಕಾಂಗ್ರೆಸ್ ಕೇವಲ 66ಕ್ಕೆ ಕುಸಿದಿದೆ.

ಮೂವರು ಕೇಂದ್ರ ಸಚಿವರು ಸೇರಿದಂತೆ ಏಳು ಸಂಸದರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದರೊಂದಿಗೆ ಚೌಹಾಣ್ ಅವರನ್ನು ಸೈಡ್ಲೈನ್ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಬಿಜೆಪಿಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದವರು ಎಂಬ ಹೆಗ್ಗಳಿಕೆಯೂ ಪಕ್ಷದ ಅಮೋಘ ಸಾಧನೆಗೆ ಬಲ ನೀಡಿದೆ ಎನ್ನಲಾಗಿದೆ. ಮುಂದಿನ ಲೋಕಸಭಾ ಚುನಾವಣೆವರೆಗೂ ಚೌಹಾಣ್ ಅವರೇ ಸಿಎಂ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಕೇಂದ್ರ ಸಚಿವರಾದ ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಜ್ಯೋತಿರಾದಿತ್ಯ ಸಿಂಧಿಯಾ (ಇಬ್ಬರೂ ರಾಜ್ಯದ ಜನಸಂಖ್ಯೆಯ ಅರ್ಧದಷ್ಟು ಇರುವ ಇತರೆ ಹಿಂದುಳಿದ ವರ್ಗಗಳ ನಾಯಕರು), ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ ಮತ್ತು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರ ಹೆಸರುಗಳು ಮುಖ್ಯಮಂತ್ರಿ ಹುದ್ದೆಗೆ ಕೇಳಿಬರುತ್ತಿವೆ. ಆದರೆ, ಯಾರೂ ಕೂಡ ಬಹಿರಂಗವಾಗಿ ‘ಬಯಕೆ’ ವ್ಯಕ್ತಪಡಿಸಿಲ್ಲ.

ರಾಜ್ಯ ಬಿಜೆಪಿಯ ಒಂದು ಬಣವು ಚೌಹಾಣ್ ಅವರೇ ಮುಂದಿನ ಲೋಕಸಭಾ ಚುನಾವಣೆಯವರೆಗೂ ಮುಖ್ಯಮಂತ್ರಿಯಾಗಿ ಉಳಿಯಬಹುದು ಎಂದು ನಂಬಿದ್ದಾರೆ. ಆದರೆ, ಅದು ಆರು ತಿಂಗಳಿಗಿಂತ ಕಡಿಮೆ ಅವಧಿಯದ್ದಾಗಿದೆ. ಈ ಬಗ್ಗೆ ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಚೌಹಾಣ್, ‘ನಾವ್ಯಾರೂ ನಮ್ಮ ಬಗ್ಗೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳುವುದಿಲ್ಲ. ನಾವೆಲ್ಲಾ ದೊಡ್ಡ ಕಾರ್ಯತಂತ್ರದ ಭಾಗವಾಗಿದ್ದೇವೆ. ನಾವು ಪಕ್ಷದ ಕಾರ್ಯಕರ್ತರು, ವರಿಷ್ಠರು ಏನು ನಿರ್ಧಾರ ಮಾಡುತ್ತಾರೋ ಅದಕ್ಕೆ ಬದ್ದರಾಗಿದ್ದೇವೆ’ ಎಂದಿದ್ದಾರೆ.

ರಾಷ್ಟ್ರೀಯ ರಾಜಕಾರಣದಲ್ಲಿ ಗುರುತಿಸಿಕೊಂಡಿರುವ ವಿಜಯವರ್ಗಿಯಾ ಮಾಲ್ವಾ-ನಿಮಾರ್ ಪ್ರದೇಶದಿಂದ ಬಂದವರು. ಅಲ್ಲಿನ 66 ಸ್ಥಾನಗಳಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆದ್ದಿದೆ. ಇವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ನಿಕಟವರ್ತಿಯಾಗಿದ್ದು, ಪಶ್ಚಿಮ ಬಂಗಾಳದ ಅತ್ಯಾಚಾರ ಪ್ರಕರಣವೊಂದಲ್ಲಿ ಇವರ ಹೆಸರು ಕೇಳಿಬಂದಿದೆ.

ಸಿಂಧಿಯಾಯಾಗೆ ಒಲಿಯುತ್ತಾ ಪಟ್ಟ?

ಕಾಂಗ್ರೆಸ್‌ನಲ್ಲಿದ್ದ ಜ್ಯೋತಿರಾದಿತ್ಯ ಸಿಂಧಿಯಾ, ಕಮಲ್ ನಾಥ್ ವಿರುದ್ಧ ಬಂಡಾಯ ಸಾರಿ ಬಿಜೆಪಿ ಸೇರಿದ್ದರು. ಈ ಚುನಾವಣೆಯಲ್ಲಿ ಸಿಂಧಿಯಾ ಅವರು ಗ್ವಾಲಿಯರ್-ಚಂಬಲ್ ಪ್ರದೇಶದಲ್ಲಿ ಪಕ್ಷದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎನ್ನಲಾಗಿದೆ. 2018 ರಲ್ಲಿ 7 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಈಗ 18 ಸ್ಥಾನಗಳನ್ನು ಇಲ್ಲಿ ತನ್ನದಾಗಿಸಿಕೊಂಡಿದೆ. ಜೊತೆಗೆ, ಮಾಲ್ವಾ ಮತ್ತು ವಿಂಧ್ಯಾ ಪ್ರದೇಶದ ಕೆಲವು ಪ್ರದೇಶಗಳಲ್ಲೂ ಇವರ ಪ್ರಭಾವ ಕೆಲಸ ಮಾಡಿದೆ ಎನ್ನಲಾಗುತ್ತಿದೆ. ಇದೀಗ ಇವರು ಮುಖ್ಯಮಂತ್ರಿ ಹುದ್ದೆಗೆ ಪ್ರಬಲ ಪ್ರತಿಸ್ಪರ್ಧಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹತ್ತಿರದಲ್ಲಿರುವ ಸಿಂಧಿಯಾ, ಅವರ ಬಂಡಾಯವೇ ಕಾಂಗ್ರೆಸ್ ಸರ್ಕಾರ ಪತನಕ್ಕೆ ಕಾರಣವಾಯಿತು. ಇದು ರಾಜ್ಯದಲ್ಲಿ ಬಿಜೆಪಿಯ ಪುನರಾಗಮನಕ್ಕೆ ದಾರಿ ಮಾಡಿಕೊಟ್ಟಿತು.

ಆದರೆ, ಈ ಮಾಜಿ ಕಾಂಗ್ರೆಸ್ ನಾಯಕನಿಗೆ ಬಿಜೆಪಿಯಲ್ಲಿ ಕೇವಲ ಮೂರೂವರೆ ವರ್ಷ ಮಾತ್ರ ಅನುಭವವಿದೆ. ಆದ್ದರಿಂದ, ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುವುದರಿಂದ ಪಕ್ಷದ ಹಿರಿಯ ನಾಯಕರು ತಿರುಗಿಬೀಳಬಹುದು. ಮುಖ್ಯವಾಗಿ, ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಇಂತಹ ಗೊಂದಲಗಳನ್ನು ಮೈಮೇಲೆ ಎಳೆದುಕೊಳ್ಳಲು ಹೈಕಮಾಂಡ್ ತಯಾರಿಲ್ಲ ಎನ್ನಲಾಗುತ್ತಿದೆ. ಇನ್ನು ಕೇಂದ್ರ ಕೃಷಿ ಸಚಿವ ಮತ್ತು ಪಕ್ಷದ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಮುಖ್ಯಸ್ಥರಾಗಿರುವ ನರೇಂದ್ರ ಸಿಂಗ್ ತೋಮರ್ ಕೂಡ ಸಿಎಂ ಸ್ಥಾನದ ಪ್ರಬಲ ಸ್ಪರ್ಧಿಯಾಗಿದ್ದಾರೆ.

ಇದನ್ನೂ ಓದಿ; ಚುನಾವಣೆ ಸೋಲು; ಎಂಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರಾ ಕಮಲ್ ನಾಥ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...