Homeಕರ್ನಾಟಕ‘ಕೋವಿಡ್‌ ಆಕ್ಸಿಜನ್ ದುರಂತ: ಚಾ.ನಗರ ಸಂತ್ರಸ್ತರಿಗೆ ಇನ್ನೂ ಸಿಗದ ಪರಿಹಾರ’

‘ಕೋವಿಡ್‌ ಆಕ್ಸಿಜನ್ ದುರಂತ: ಚಾ.ನಗರ ಸಂತ್ರಸ್ತರಿಗೆ ಇನ್ನೂ ಸಿಗದ ಪರಿಹಾರ’

- Advertisement -
- Advertisement -

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 2021ನೇ ಮೇ 2ರ ಮಧ್ಯರಾತ್ರಿ ಆಕ್ಸಿಜನ್ ಪೂರೈಕೆಯಾಗದೆ 37 ಮಂದಿ ಮೃತರಾಗಿ ಈಗಾಗಲೇ 9 ತಿಂಗಳು ಕಳೆದಿದ್ದು, ಸಂತ್ರಸ್ತರಿಗೆ ಇನ್ನೂ ಪೂರ್ಣ ಪರಿಹಾರ ದೊರೆತಿಲ್ಲ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ.

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರ್ಘಟನೆ ಸಂಬಂಧ ಮೈಸೂರಿನಲ್ಲಿ ‘ಸಂತ್ರಸ್ತರೊಂದಿಗೆ ಸಮಾಲೋಚನೆ ಸಭೆ’ ನಡೆಸಿದ ಬಳಿಕ ಮಾತನಾಡಿದ ಅವರು, “ಘಟನೆಗೆ ಸಂಬಂಧಿಸಿದಂತೆ ನೇಮಕಗೊಂಡ ನ್ಯಾಯಮೂರ್ತಿ ವೇಣುಗೋಪಾಲಗೌಡ ಸಮಿತಿ ವರದಿಯಲ್ಲಿ ಘಟನೆಗೆ ಆಕ್ಸಿಜನ್ ಕೊರತೆಯೇ ಪ್ರಮುಖ ಕಾರಣವಾಗಿದ್ದು, ಅಂದಿನ ಜಿಲ್ಲಾಧಿಕಾರಿಗಳ ಕಾರ್ಯವೈಖರಿಯ ವಿಫಲತೆಯಿಂದ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ. ಆದರೆ ಜಿಲ್ಲಾಧಿಕಾರಿಗಳು ಸೇರಿದಂತೆ ಯಾವ ಒಬ್ಬ ವೈದ್ಯಾಧಿಕಾರಿಯ ವಿರುದ್ಧವೂ ಸರ್ಕಾರ ಇದುವರೆಗೂ ಸೂಕ್ತ ಕ್ರಮ ತೆಗೆದುಕೊಂಡಿಲ್ಲ” ಎಂದು ಅವರು ದೂರಿದರು.

ಇನ್ನೊಂದು ಕಡೆ ಸರ್ಕಾರ ನೇಮಕ ಮಾಡಿರುವ ಏಕಸದಸ್ಯ ಆಯೋಗದ ಅಧ್ಯಕ್ಷ ಬಿ.ಎಪಾಟೀಲ್ ಅವರ ವರದಿ ಸಹ ಬಹಿರಂಗಗೊಂಡಿಲ್ಲ. ಒಟ್ಟು 37 ಮೃತರ ಕುಟುಂಬಸ್ಥರ ಪೈಕಿ ಕೇವಲ 24 ಮಂದಿಯ ಕುಟುಂಬಸ್ಥರಿಗೆ ಅಲ್ಪಸ್ವಲ್ಪ ಪರಿಹಾರ ನೀಡಿದೆ. ಇನ್ನು 13 ಸಂತ್ರಸ್ಥ ಕುಟುಂಬಸ್ಥರಿಗೆ ಪರಿಹಾರದ ಒಂದು ನಯಾಪೈಸೆಯೂ ನೀಡಿರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದುರ್ಘಟನೆಗೆ ಬಲಿಯಾದವರಲ್ಲಿ ಶೇಕಡ 50ಕ್ಕಿಂತ ಹೆಚ್ಚು ಜನರು ಎಸ್.ಸಿ., ಎಸ್.ಟಿ. ಸಮುದಾಯದವರಾಗಿದ್ದು, ಕೂಲಿ ಕಾರ್ಮಿಕರು ಹೆಚ್ಚಾಗಿದ್ದಾರೆ. ಆಧಾರ ಸ್ಥಂಭವಾಗಿದ್ದ ಮನೆಯ ಮುಖ್ಯಸ್ಥ ಇಲ್ಲದೆ ಈ ಬಡಪಾಯಿ ಕುಟುಂಬಸ್ಥರ ಜೀವನ ಅಸ್ತವ್ಯಸ್ತವಾಗಿದೆ. ಸಂತ್ರಸ್ತರ ಕುಟುಂಬಸ್ಥರಲ್ಲಿ ಮಕ್ಕಳು ಸಹ ಇದ್ದು, ಆ ಮಕ್ಕಳ ವಿದ್ಯಾಭ್ಯಾಸಕ್ಕೆ, ಆರೈಕೆಗೆ ಬಹಳ ತೊಂದರೆ ಆಗುತ್ತಿದೆ ಎಂದು ವಿವರಿಸಿದರು.

ಸಂತ್ರಸ್ತರ ಈ ದುಸ್ಥಿತಿಯನ್ನು ನೋಡಿಕೊಂಡು ರಾಜ್ಯ ಸರ್ಕಾರ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿರುವುದು ವಿಪರ್ಯಾಸವಾಗಿದೆ. ಸಂತ್ರಸ್ತರಿಗೆ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಸಂತ್ರಸ್ತ ಕುಟುಂಬಸ್ಥರಿಗೆ 50 ಲಕ್ಷ ರೂಪಾಯಿ ಪರಿಹಾರ, ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ನೀಡಲಾಗುವುದು. ಅಂತಿಮವಾಗಿ ಸಂತ್ರಸ್ತರಿಗೆ ನ್ಯಾಯ ಸಿಗುವರೆಗೂ ಎಸ್.ಡಿ.ಪಿ.ಐ. ತನ್ನ ಹೋರಾಟ ಮುಂದುವರಿಸಲಿದೆ ಎಂದು ಎಚ್ಚರಿಸಿದ್ದಾರೆ.

ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್, ಚಾಮರಾಜನಗರ ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅಬ್ರಾರ್ ಅಹಮದ್, ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ, ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್, ಅಫ್ಸರ್ ಕೂಡ್ಲಿಪೇಟೆ, ಹೈಕೋರ್ಟ್ ವಕೀಲರಾದ ಮಜೀದ್ ಖಾನ್, ರಾಜ್ಯ ಮಾಧ್ಯಮ ಸಂಯೋಜಕರಾದ ರಿಯಾಜ್ ಕಡಂಬು, ಚಾಮರಾಜನಗರ ನಗರಸಭಾ ಸದಸ್ಯ ಮಹೇಶ್ ಹಾಗೂ ಸಂತ್ರಸ್ತ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.


ಇದನ್ನೂ ಓದಿರಿ: ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...