Homeಕರ್ನಾಟಕ‘ಕೋವಿಡ್‌ ಆಕ್ಸಿಜನ್ ದುರಂತ: ಚಾ.ನಗರ ಸಂತ್ರಸ್ತರಿಗೆ ಇನ್ನೂ ಸಿಗದ ಪರಿಹಾರ’

‘ಕೋವಿಡ್‌ ಆಕ್ಸಿಜನ್ ದುರಂತ: ಚಾ.ನಗರ ಸಂತ್ರಸ್ತರಿಗೆ ಇನ್ನೂ ಸಿಗದ ಪರಿಹಾರ’

- Advertisement -
- Advertisement -

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ 2021ನೇ ಮೇ 2ರ ಮಧ್ಯರಾತ್ರಿ ಆಕ್ಸಿಜನ್ ಪೂರೈಕೆಯಾಗದೆ 37 ಮಂದಿ ಮೃತರಾಗಿ ಈಗಾಗಲೇ 9 ತಿಂಗಳು ಕಳೆದಿದ್ದು, ಸಂತ್ರಸ್ತರಿಗೆ ಇನ್ನೂ ಪೂರ್ಣ ಪರಿಹಾರ ದೊರೆತಿಲ್ಲ ಎಂದು ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಆರೋಪಿಸಿದ್ದಾರೆ.

ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ನಡೆದ ಆಕ್ಸಿಜನ್ ದುರ್ಘಟನೆ ಸಂಬಂಧ ಮೈಸೂರಿನಲ್ಲಿ ‘ಸಂತ್ರಸ್ತರೊಂದಿಗೆ ಸಮಾಲೋಚನೆ ಸಭೆ’ ನಡೆಸಿದ ಬಳಿಕ ಮಾತನಾಡಿದ ಅವರು, “ಘಟನೆಗೆ ಸಂಬಂಧಿಸಿದಂತೆ ನೇಮಕಗೊಂಡ ನ್ಯಾಯಮೂರ್ತಿ ವೇಣುಗೋಪಾಲಗೌಡ ಸಮಿತಿ ವರದಿಯಲ್ಲಿ ಘಟನೆಗೆ ಆಕ್ಸಿಜನ್ ಕೊರತೆಯೇ ಪ್ರಮುಖ ಕಾರಣವಾಗಿದ್ದು, ಅಂದಿನ ಜಿಲ್ಲಾಧಿಕಾರಿಗಳ ಕಾರ್ಯವೈಖರಿಯ ವಿಫಲತೆಯಿಂದ ಘಟನೆ ಸಂಭವಿಸಿದೆ ಎಂದು ಹೇಳಿದ್ದಾರೆ. ಆದರೆ ಜಿಲ್ಲಾಧಿಕಾರಿಗಳು ಸೇರಿದಂತೆ ಯಾವ ಒಬ್ಬ ವೈದ್ಯಾಧಿಕಾರಿಯ ವಿರುದ್ಧವೂ ಸರ್ಕಾರ ಇದುವರೆಗೂ ಸೂಕ್ತ ಕ್ರಮ ತೆಗೆದುಕೊಂಡಿಲ್ಲ” ಎಂದು ಅವರು ದೂರಿದರು.

ಇನ್ನೊಂದು ಕಡೆ ಸರ್ಕಾರ ನೇಮಕ ಮಾಡಿರುವ ಏಕಸದಸ್ಯ ಆಯೋಗದ ಅಧ್ಯಕ್ಷ ಬಿ.ಎಪಾಟೀಲ್ ಅವರ ವರದಿ ಸಹ ಬಹಿರಂಗಗೊಂಡಿಲ್ಲ. ಒಟ್ಟು 37 ಮೃತರ ಕುಟುಂಬಸ್ಥರ ಪೈಕಿ ಕೇವಲ 24 ಮಂದಿಯ ಕುಟುಂಬಸ್ಥರಿಗೆ ಅಲ್ಪಸ್ವಲ್ಪ ಪರಿಹಾರ ನೀಡಿದೆ. ಇನ್ನು 13 ಸಂತ್ರಸ್ಥ ಕುಟುಂಬಸ್ಥರಿಗೆ ಪರಿಹಾರದ ಒಂದು ನಯಾಪೈಸೆಯೂ ನೀಡಿರುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದುರ್ಘಟನೆಗೆ ಬಲಿಯಾದವರಲ್ಲಿ ಶೇಕಡ 50ಕ್ಕಿಂತ ಹೆಚ್ಚು ಜನರು ಎಸ್.ಸಿ., ಎಸ್.ಟಿ. ಸಮುದಾಯದವರಾಗಿದ್ದು, ಕೂಲಿ ಕಾರ್ಮಿಕರು ಹೆಚ್ಚಾಗಿದ್ದಾರೆ. ಆಧಾರ ಸ್ಥಂಭವಾಗಿದ್ದ ಮನೆಯ ಮುಖ್ಯಸ್ಥ ಇಲ್ಲದೆ ಈ ಬಡಪಾಯಿ ಕುಟುಂಬಸ್ಥರ ಜೀವನ ಅಸ್ತವ್ಯಸ್ತವಾಗಿದೆ. ಸಂತ್ರಸ್ತರ ಕುಟುಂಬಸ್ಥರಲ್ಲಿ ಮಕ್ಕಳು ಸಹ ಇದ್ದು, ಆ ಮಕ್ಕಳ ವಿದ್ಯಾಭ್ಯಾಸಕ್ಕೆ, ಆರೈಕೆಗೆ ಬಹಳ ತೊಂದರೆ ಆಗುತ್ತಿದೆ ಎಂದು ವಿವರಿಸಿದರು.

ಸಂತ್ರಸ್ತರ ಈ ದುಸ್ಥಿತಿಯನ್ನು ನೋಡಿಕೊಂಡು ರಾಜ್ಯ ಸರ್ಕಾರ ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿರುವುದು ವಿಪರ್ಯಾಸವಾಗಿದೆ. ಸಂತ್ರಸ್ತರಿಗೆ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಸಂತ್ರಸ್ತ ಕುಟುಂಬಸ್ಥರಿಗೆ 50 ಲಕ್ಷ ರೂಪಾಯಿ ಪರಿಹಾರ, ಕುಟುಂಬಸ್ಥರಲ್ಲಿ ಒಬ್ಬರಿಗೆ ಸರ್ಕಾರಿ ಉದ್ಯೋಗ ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಮನವಿ ನೀಡಲಾಗುವುದು. ಅಂತಿಮವಾಗಿ ಸಂತ್ರಸ್ತರಿಗೆ ನ್ಯಾಯ ಸಿಗುವರೆಗೂ ಎಸ್.ಡಿ.ಪಿ.ಐ. ತನ್ನ ಹೋರಾಟ ಮುಂದುವರಿಸಲಿದೆ ಎಂದು ಎಚ್ಚರಿಸಿದ್ದಾರೆ.

ಸಭೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷರಾದ ಸಿ.ಎಸ್.ದ್ವಾರಕನಾಥ್, ಚಾಮರಾಜನಗರ ಎಸ್.ಡಿ.ಪಿ.ಐ. ಜಿಲ್ಲಾಧ್ಯಕ್ಷ ಅಬ್ರಾರ್ ಅಹಮದ್, ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೋ, ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್, ಅಫ್ಸರ್ ಕೂಡ್ಲಿಪೇಟೆ, ಹೈಕೋರ್ಟ್ ವಕೀಲರಾದ ಮಜೀದ್ ಖಾನ್, ರಾಜ್ಯ ಮಾಧ್ಯಮ ಸಂಯೋಜಕರಾದ ರಿಯಾಜ್ ಕಡಂಬು, ಚಾಮರಾಜನಗರ ನಗರಸಭಾ ಸದಸ್ಯ ಮಹೇಶ್ ಹಾಗೂ ಸಂತ್ರಸ್ತ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.


ಇದನ್ನೂ ಓದಿರಿ: ಅರಕಲಗೂಡು: ದಲಿತರು ಕಬ್ಬಿನ ಹಾಲಿನ ಅಂಗಡಿ ಇಟ್ಟಿದ್ದಕ್ಕೆ ಸವರ್ಣಿಯರಿಂದ ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...