Homeಕರ್ನಾಟಕಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

ಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

‘ಚೆ’ ಎಲ್ಲಾ ಸಂಸ್ಕೃತಿಯವರನ್ನು ಸೆಳೆದ ಕ್ರಾಂತಿಕಾರಿಯಾಗಿದ್ದಾರೆ. ಬಹುತ್ವವನ್ನು ಪ್ರತಿಪಾದಿಸುವ ಈ ನೆಲದಲ್ಲಿ ಬಹುಸಂಸ್ಕೃತಿಯನ್ನು ನಾಶ ಮಾಡಲು ಹೊರಟ್ಟಿದ್ದಾರೆ. ಅಂತವರ ಅಟಾಟೋಪಕ್ಕೆ ‘ಚೆ’ ಅಭಿಮಾನಿಗಳು ಉತ್ತರ ಕೊಡುತ್ತೇವೆ ಎಂದು ಚಿಂತಕ ಮತ್ತು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಅವರು ಬೆಂಗಳೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ಸ್ಕೌಟ್ ಮತ್ತು ಗೈಡ್‌ ಸಭಾಂಗಣದಲ್ಲಿ ‘ಚೆ ಗೆವಾರ’ ಅವರ ಮಗಳು ಡಾ. ಅಲಿಡಾ ಗೆವಾರ ಮತ್ತು ಮೊಮ್ಮಗಳು ಎಸ್ತೆಫಾನಿಯಾ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ಚೇ ಗೆವೆರಾ ಅವರ ಮಗಳು ಮತ್ತು ಮೊಮ್ಮಗಳಿಗೆ ಕನ್ನಡದ ನೆಲದಲ್ಲಿ ನಾಗರಿಕ ಸನ್ಮಾನ ಮಾಡಿದ್ದು ಚಾರಿತ್ರಿಕ ಸಂದರ್ಭವಾಗಿದೆ. ಕರ್ನಾಟಕ ಹುಸಿ ಸಂಸ್ಕೃತಿಯ ಪರವಾಗಿಲ್ಲ, ಜನಸಂಸ್ಕೃತಿಯ ಪರವಾಗಿದೆ, ಸಂವೇದನೆಗೆ ಪೂರಕವಾಗಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿ” ಎಂದು ಬರಗೂರು ಹೇಳಿದರು.

ಹಿರಿಯ ವಿದ್ವಾಂಸರಾದ ಜಿ. ರಾಮಕೃಷ್ಣ ಅವರು ಮಾತನಾಡಿ, “ಯಾರದ್ದೊ ಶ್ರಮವನ್ನು ಇನ್ಯಾರೊ ಕಬಳಿಸುತ್ತಿದ್ದ ಸಂದರ್ಭದಲ್ಲಿ, ‘ಚೆ’ ತಲೆ ಮೇಲೆ ನಕ್ಷತ್ರ ಚಿಹ್ನೆಯ ಟೋಪಿ ಹಾಕಿದ ಭರವಸೆಯ ಆಶಾಕಿರಣವಾಗಿದ್ದ. ವಿಶ್ವದ ಯಾವುದೇ ಮೂಲೆಯಲ್ಲಿ ಅನ್ಯಾಯವಾಗುತ್ತಿದ್ದರೆ, ಅದರ ವಿರುದ್ಧ ದನಿ ಎತ್ತುವ ಮನುಜರು ನನ್ನ ಸಂಗಾತಿಗಳು ಎಂದು ಹೇಳಿದ್ದ” ಎಂದು ಹೇಳಿದರು.

‘‘ಇಂದು ‘ಚೆ’ ಎಂದರೇ ಇಡೀ ವಿಶ್ವ ಇವ ನಮ್ಮವ ಎನ್ನುತ್ತಿದೆ. ವಿಶ್ವಮಾನವ ಪರಿಕಲ್ಪನೆ ಹೊಂದಿದ್ದ ‘ಚೆ’ ಕ್ಯೂಬಾದ ಹವಾನದಲ್ಲಿ ‘ಪ್ರತಿಯೊಬ್ಬ ಕ್ರಾಂತಿಕಾರಿಯ ಕೆಲಸ ಕ್ರಾಂತಿ ಮಾಡುವುದೆ ಹೊರತು ಸಾಮ್ರಾಜ್ಯಶಾಹಿ ಎಂಬ ಹೆಣ ಬೀಳುತ್ತದೆ, ಅದನ್ನು ಹೊರೋಣ ಎಂದು ಕಾಯುವುದಲ್ಲ. ಗೆಲ್ಲುವವರೆಗೂ ಹೋರಾಡುತ್ತಿರಬೇಕು’ ಎಂಬ ಸಂದೇಶ ಕೊಟ್ಟಿದ್ದರು” ಎಂದು ಹೇಳಿದರು.

“ಅಮೆರಿಕದ ಸಿಎಎ ‘ಚೆ’ಯನ್ನು ಕೊಲೆ ಮಾಡಿದ್ದು ಇತಿಹಾಸದಲ್ಲಿ ಹಲವರು ರಂಜನೀಯವಾಗಿ ಚಿತ್ರಿಸಿದರೆ, ಕೆಲವರು ಆತ್ಮಾವಲೋಕನ ಮಾಡಿಕೊಂಡಿದ್ದಾರೆ. ಭಾರತದಲ್ಲಿ ಮೂರನೇ ಬಾರಿಗೂ ಅಧಿಕಾರಕ್ಕೆ ಬರುತ್ತೇವೆ ಎಂದುಕೊಂಡಿರುವ ಮೋದಿಯನ್ನು ಮಹಾನಾಯಕ ಎಂದರೆ ಅಂತಹ ದೇಶ ಭ್ರಮಾತ್ಮಕವಾಗಿದೆ ಎಂದರ್ಥ. ಈ ವೇಳೆ ‘ಚೆ’ ಎಂಬ ಮಹಾನ್ ವ್ಯಕ್ತಿಯನ್ನು ಅನುಕರಿಸಲು ಎಲ್ಲರೂ ಸಾಮೂದಾಯಿಕವಾಗಿ ಪಾಲ್ಗೊಳ್ಳುವುದು ಒಂದೇ ದಾರಿ” ಎಂದು ವಿಧ್ವಾಂಸ ಜಿ. ರಾಮಕೃಷ್ಣ ಅವರು ಕರೆ ಕೊಟ್ಟಿದ್ದಾರೆ.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್ ಎಲ್ ಪುಷ್ಪ ಮಾತನಾಡಿ, “ಎಲ್ಲ ತಲೆಮಾರಿನ ಜನರು ‘ಚೆ’ಗೆ ಆಕರ್ಷಿತರಾಗಿದ್ದಾರೆ. ಭಾರತದ ಇಂದಿನ ಪರಿಸ್ಥಿತಿಯಲ್ಲಿ ‘ಚೆ’ ವ್ಯಕ್ತಿತ್ವ ಬಹುಮುಖ್ಯ. ಕಾವ್ಯ ಮತ್ತು ಕೋವಿಯನ್ನು ಪ್ರೀತಿಯಿಂದ ಜೊತೆಗಿರಿಸಿಕೊಂಡ ಚೇತನ ನಮ್ಮೊಳಗೂ ಮೂಡಲಿ” ಎಂದು ಆಶಿಸಿದರು.

ಅಪ್ಪನ ನೆನಪಿನ ಬುತ್ತಿ ತೆರೆದು ಹಾಡು ಹಾಡಿದ ಚೆ ಗೆವಾರ ಪುತ್ರಿ!

“ನನ್ನಪ್ಪ ತುಂಬಾ ಒಳ್ಳೆಯ ಕವಿಯಾಗಿದ್ದರು, ಹಲವು ಪುಸ್ತಕಗಳನ್ನು, ಕವಿತೆಗಳನ್ನು ಓದುತ್ತಿದ್ದರು. ಆದರೆ ಅವರು ತಮ್ಮ ಕವಿತೆಗಳನ್ನು ತಾವೆ ಓದುತ್ತಿರಲಿಲ್ಲ. ಯಾಕೆಂದರೆ ಅವರೊಳಗೊಬ್ಬ ವಿಮರ್ಶಕನಿದ್ದ” ಎಂದು 7ನೇ ವಯಸ್ಸಿಗೆ ಅಪ್ಪನನ್ನು ಕಳೆದುಕೊಂಡಿರುವ ಅಲಿಡಾ, ತಮ್ಮ ನೆನಪುಗಳ ಬುತ್ತಿಯನ್ನು ತೆರೆದಿಟ್ಟರು.

“ಅಸ್ತಮಾ ಇದ್ದ ಕಾರಣ ವೈದ್ಯರು ದಿನಕ್ಕೆ ಒಂದೇ ಸಿಗಾರ್ ಸೇದುವಂತೆ ಅಪ್ಪನಿಗೆ ಸೂಚಿಸಿದ್ದರು. ಆದರೆ, ಅಪ್ಪನಿಗೆ ತಂಬಾಕು ತೋಟದ ಕಾರ್ಮಿಕರು ದೊಡ್ಡ ಗಾತ್ರದ ಸಿಗಾರ್ ಮಾಡಿಕೊಟ್ಟಿದ್ದರು. ಅದನ್ನು ಸೇದಿ ವೈದ್ಯರಿಗೆ ಒಂದೇ ಸಿಗಾರ್ ಸೇದಿದೆ ಎಂದು ಫೋನ್ ಮಾಡಿ ಹೇಳುತ್ತಿದ್ದರು” ಎಂದು ಅಪ್ಪ ಅದೆಷ್ಟು ಉಡಾಫೆತನ ತೋರುತ್ತಿದ್ದರೆಂಬುದನ್ನು ಅವರು ವಿವರಿಸಿದರು.

“ಕೊರೋನಾ ಸೋಂಕು‌ ನಿಯಂತ್ರಿಸಲು ಕ್ಯೂಬಾ ತನ್ನದೆ ಆದ ವ್ಯಾಕ್ಸಿನ್ ಕಂಡು ಹಿಡಿದಿತ್ತು. ಆದರೆ ಅಮೇರಿಕಾ ಪೇಟೆಂಟ್ ಕಾರಣಕ್ಕೆ ಸಿರಿಂಜ್ ಕೊಳ್ಳಲು ಸಾಧ್ಯವಿರಲಿಲ್ಲ. ಹಾಗಾಗಿ ಮೂಗಿನ ಮೂಲಕ ಹಾಕುವ ವ್ಯಾಕ್ಸಿನ್ ಅನ್ನು ಕಂಡುಕೊಂಡೆವು. ನಾವು ಯಾವಾಗಲೂ ಪರ್ಯಾಯವನ್ನು ಹುಡುಕುತ್ತೇವೆ” ಎಂದು ತಮ್ಮ ದೇಶದ ಸ್ವಾಭಿಮಾನದ ಬಗ್ಗೆ ಅಭಿಮಾನದಿಂದ ನುಡಿದರು. ಭಾಷಣದ ಕೊನೆಯಲ್ಲಿ ಅಲಿಡಾ ಹಾಡನ್ನು ಕೂಡಾ ಹಾಡಿದರು.

ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ಹಿರಿಯ ಲೇಖಕಿ ಡಾ. ವಿಜಯಾ, ಕೇರಳದ ಮಾಜಿ ಸಚಿವ ಎಂ.ಎ. ಬೇಬಿ, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ದಲಿತ ಹಕ್ಕುಗಳ ಮುಖಂಡ ಮಾವಳ್ಳಿ ಶಂಕರ್, ಜನವಾದಿ ಮಹಿಳಾ ಸಂಘಟನೆ ನಾಯಕಿ ವಿಮಲಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...