Homeಕರ್ನಾಟಕಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

ಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

‘ಚೆ’ ಎಲ್ಲಾ ಸಂಸ್ಕೃತಿಯವರನ್ನು ಸೆಳೆದ ಕ್ರಾಂತಿಕಾರಿಯಾಗಿದ್ದಾರೆ. ಬಹುತ್ವವನ್ನು ಪ್ರತಿಪಾದಿಸುವ ಈ ನೆಲದಲ್ಲಿ ಬಹುಸಂಸ್ಕೃತಿಯನ್ನು ನಾಶ ಮಾಡಲು ಹೊರಟ್ಟಿದ್ದಾರೆ. ಅಂತವರ ಅಟಾಟೋಪಕ್ಕೆ ‘ಚೆ’ ಅಭಿಮಾನಿಗಳು ಉತ್ತರ ಕೊಡುತ್ತೇವೆ ಎಂದು ಚಿಂತಕ ಮತ್ತು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಅವರು ಬೆಂಗಳೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ಸ್ಕೌಟ್ ಮತ್ತು ಗೈಡ್‌ ಸಭಾಂಗಣದಲ್ಲಿ ‘ಚೆ ಗೆವಾರ’ ಅವರ ಮಗಳು ಡಾ. ಅಲಿಡಾ ಗೆವಾರ ಮತ್ತು ಮೊಮ್ಮಗಳು ಎಸ್ತೆಫಾನಿಯಾ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ಚೇ ಗೆವೆರಾ ಅವರ ಮಗಳು ಮತ್ತು ಮೊಮ್ಮಗಳಿಗೆ ಕನ್ನಡದ ನೆಲದಲ್ಲಿ ನಾಗರಿಕ ಸನ್ಮಾನ ಮಾಡಿದ್ದು ಚಾರಿತ್ರಿಕ ಸಂದರ್ಭವಾಗಿದೆ. ಕರ್ನಾಟಕ ಹುಸಿ ಸಂಸ್ಕೃತಿಯ ಪರವಾಗಿಲ್ಲ, ಜನಸಂಸ್ಕೃತಿಯ ಪರವಾಗಿದೆ, ಸಂವೇದನೆಗೆ ಪೂರಕವಾಗಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿ” ಎಂದು ಬರಗೂರು ಹೇಳಿದರು.

ಹಿರಿಯ ವಿದ್ವಾಂಸರಾದ ಜಿ. ರಾಮಕೃಷ್ಣ ಅವರು ಮಾತನಾಡಿ, “ಯಾರದ್ದೊ ಶ್ರಮವನ್ನು ಇನ್ಯಾರೊ ಕಬಳಿಸುತ್ತಿದ್ದ ಸಂದರ್ಭದಲ್ಲಿ, ‘ಚೆ’ ತಲೆ ಮೇಲೆ ನಕ್ಷತ್ರ ಚಿಹ್ನೆಯ ಟೋಪಿ ಹಾಕಿದ ಭರವಸೆಯ ಆಶಾಕಿರಣವಾಗಿದ್ದ. ವಿಶ್ವದ ಯಾವುದೇ ಮೂಲೆಯಲ್ಲಿ ಅನ್ಯಾಯವಾಗುತ್ತಿದ್ದರೆ, ಅದರ ವಿರುದ್ಧ ದನಿ ಎತ್ತುವ ಮನುಜರು ನನ್ನ ಸಂಗಾತಿಗಳು ಎಂದು ಹೇಳಿದ್ದ” ಎಂದು ಹೇಳಿದರು.

‘‘ಇಂದು ‘ಚೆ’ ಎಂದರೇ ಇಡೀ ವಿಶ್ವ ಇವ ನಮ್ಮವ ಎನ್ನುತ್ತಿದೆ. ವಿಶ್ವಮಾನವ ಪರಿಕಲ್ಪನೆ ಹೊಂದಿದ್ದ ‘ಚೆ’ ಕ್ಯೂಬಾದ ಹವಾನದಲ್ಲಿ ‘ಪ್ರತಿಯೊಬ್ಬ ಕ್ರಾಂತಿಕಾರಿಯ ಕೆಲಸ ಕ್ರಾಂತಿ ಮಾಡುವುದೆ ಹೊರತು ಸಾಮ್ರಾಜ್ಯಶಾಹಿ ಎಂಬ ಹೆಣ ಬೀಳುತ್ತದೆ, ಅದನ್ನು ಹೊರೋಣ ಎಂದು ಕಾಯುವುದಲ್ಲ. ಗೆಲ್ಲುವವರೆಗೂ ಹೋರಾಡುತ್ತಿರಬೇಕು’ ಎಂಬ ಸಂದೇಶ ಕೊಟ್ಟಿದ್ದರು” ಎಂದು ಹೇಳಿದರು.

“ಅಮೆರಿಕದ ಸಿಎಎ ‘ಚೆ’ಯನ್ನು ಕೊಲೆ ಮಾಡಿದ್ದು ಇತಿಹಾಸದಲ್ಲಿ ಹಲವರು ರಂಜನೀಯವಾಗಿ ಚಿತ್ರಿಸಿದರೆ, ಕೆಲವರು ಆತ್ಮಾವಲೋಕನ ಮಾಡಿಕೊಂಡಿದ್ದಾರೆ. ಭಾರತದಲ್ಲಿ ಮೂರನೇ ಬಾರಿಗೂ ಅಧಿಕಾರಕ್ಕೆ ಬರುತ್ತೇವೆ ಎಂದುಕೊಂಡಿರುವ ಮೋದಿಯನ್ನು ಮಹಾನಾಯಕ ಎಂದರೆ ಅಂತಹ ದೇಶ ಭ್ರಮಾತ್ಮಕವಾಗಿದೆ ಎಂದರ್ಥ. ಈ ವೇಳೆ ‘ಚೆ’ ಎಂಬ ಮಹಾನ್ ವ್ಯಕ್ತಿಯನ್ನು ಅನುಕರಿಸಲು ಎಲ್ಲರೂ ಸಾಮೂದಾಯಿಕವಾಗಿ ಪಾಲ್ಗೊಳ್ಳುವುದು ಒಂದೇ ದಾರಿ” ಎಂದು ವಿಧ್ವಾಂಸ ಜಿ. ರಾಮಕೃಷ್ಣ ಅವರು ಕರೆ ಕೊಟ್ಟಿದ್ದಾರೆ.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್ ಎಲ್ ಪುಷ್ಪ ಮಾತನಾಡಿ, “ಎಲ್ಲ ತಲೆಮಾರಿನ ಜನರು ‘ಚೆ’ಗೆ ಆಕರ್ಷಿತರಾಗಿದ್ದಾರೆ. ಭಾರತದ ಇಂದಿನ ಪರಿಸ್ಥಿತಿಯಲ್ಲಿ ‘ಚೆ’ ವ್ಯಕ್ತಿತ್ವ ಬಹುಮುಖ್ಯ. ಕಾವ್ಯ ಮತ್ತು ಕೋವಿಯನ್ನು ಪ್ರೀತಿಯಿಂದ ಜೊತೆಗಿರಿಸಿಕೊಂಡ ಚೇತನ ನಮ್ಮೊಳಗೂ ಮೂಡಲಿ” ಎಂದು ಆಶಿಸಿದರು.

ಅಪ್ಪನ ನೆನಪಿನ ಬುತ್ತಿ ತೆರೆದು ಹಾಡು ಹಾಡಿದ ಚೆ ಗೆವಾರ ಪುತ್ರಿ!

“ನನ್ನಪ್ಪ ತುಂಬಾ ಒಳ್ಳೆಯ ಕವಿಯಾಗಿದ್ದರು, ಹಲವು ಪುಸ್ತಕಗಳನ್ನು, ಕವಿತೆಗಳನ್ನು ಓದುತ್ತಿದ್ದರು. ಆದರೆ ಅವರು ತಮ್ಮ ಕವಿತೆಗಳನ್ನು ತಾವೆ ಓದುತ್ತಿರಲಿಲ್ಲ. ಯಾಕೆಂದರೆ ಅವರೊಳಗೊಬ್ಬ ವಿಮರ್ಶಕನಿದ್ದ” ಎಂದು 7ನೇ ವಯಸ್ಸಿಗೆ ಅಪ್ಪನನ್ನು ಕಳೆದುಕೊಂಡಿರುವ ಅಲಿಡಾ, ತಮ್ಮ ನೆನಪುಗಳ ಬುತ್ತಿಯನ್ನು ತೆರೆದಿಟ್ಟರು.

“ಅಸ್ತಮಾ ಇದ್ದ ಕಾರಣ ವೈದ್ಯರು ದಿನಕ್ಕೆ ಒಂದೇ ಸಿಗಾರ್ ಸೇದುವಂತೆ ಅಪ್ಪನಿಗೆ ಸೂಚಿಸಿದ್ದರು. ಆದರೆ, ಅಪ್ಪನಿಗೆ ತಂಬಾಕು ತೋಟದ ಕಾರ್ಮಿಕರು ದೊಡ್ಡ ಗಾತ್ರದ ಸಿಗಾರ್ ಮಾಡಿಕೊಟ್ಟಿದ್ದರು. ಅದನ್ನು ಸೇದಿ ವೈದ್ಯರಿಗೆ ಒಂದೇ ಸಿಗಾರ್ ಸೇದಿದೆ ಎಂದು ಫೋನ್ ಮಾಡಿ ಹೇಳುತ್ತಿದ್ದರು” ಎಂದು ಅಪ್ಪ ಅದೆಷ್ಟು ಉಡಾಫೆತನ ತೋರುತ್ತಿದ್ದರೆಂಬುದನ್ನು ಅವರು ವಿವರಿಸಿದರು.

“ಕೊರೋನಾ ಸೋಂಕು‌ ನಿಯಂತ್ರಿಸಲು ಕ್ಯೂಬಾ ತನ್ನದೆ ಆದ ವ್ಯಾಕ್ಸಿನ್ ಕಂಡು ಹಿಡಿದಿತ್ತು. ಆದರೆ ಅಮೇರಿಕಾ ಪೇಟೆಂಟ್ ಕಾರಣಕ್ಕೆ ಸಿರಿಂಜ್ ಕೊಳ್ಳಲು ಸಾಧ್ಯವಿರಲಿಲ್ಲ. ಹಾಗಾಗಿ ಮೂಗಿನ ಮೂಲಕ ಹಾಕುವ ವ್ಯಾಕ್ಸಿನ್ ಅನ್ನು ಕಂಡುಕೊಂಡೆವು. ನಾವು ಯಾವಾಗಲೂ ಪರ್ಯಾಯವನ್ನು ಹುಡುಕುತ್ತೇವೆ” ಎಂದು ತಮ್ಮ ದೇಶದ ಸ್ವಾಭಿಮಾನದ ಬಗ್ಗೆ ಅಭಿಮಾನದಿಂದ ನುಡಿದರು. ಭಾಷಣದ ಕೊನೆಯಲ್ಲಿ ಅಲಿಡಾ ಹಾಡನ್ನು ಕೂಡಾ ಹಾಡಿದರು.

ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ಹಿರಿಯ ಲೇಖಕಿ ಡಾ. ವಿಜಯಾ, ಕೇರಳದ ಮಾಜಿ ಸಚಿವ ಎಂ.ಎ. ಬೇಬಿ, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ದಲಿತ ಹಕ್ಕುಗಳ ಮುಖಂಡ ಮಾವಳ್ಳಿ ಶಂಕರ್, ಜನವಾದಿ ಮಹಿಳಾ ಸಂಘಟನೆ ನಾಯಕಿ ವಿಮಲಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...