Homeಕರ್ನಾಟಕಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

ಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

‘ಚೆ’ ಎಲ್ಲಾ ಸಂಸ್ಕೃತಿಯವರನ್ನು ಸೆಳೆದ ಕ್ರಾಂತಿಕಾರಿಯಾಗಿದ್ದಾರೆ. ಬಹುತ್ವವನ್ನು ಪ್ರತಿಪಾದಿಸುವ ಈ ನೆಲದಲ್ಲಿ ಬಹುಸಂಸ್ಕೃತಿಯನ್ನು ನಾಶ ಮಾಡಲು ಹೊರಟ್ಟಿದ್ದಾರೆ. ಅಂತವರ ಅಟಾಟೋಪಕ್ಕೆ ‘ಚೆ’ ಅಭಿಮಾನಿಗಳು ಉತ್ತರ ಕೊಡುತ್ತೇವೆ ಎಂದು ಚಿಂತಕ ಮತ್ತು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಅವರು ಬೆಂಗಳೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ಸ್ಕೌಟ್ ಮತ್ತು ಗೈಡ್‌ ಸಭಾಂಗಣದಲ್ಲಿ ‘ಚೆ ಗೆವಾರ’ ಅವರ ಮಗಳು ಡಾ. ಅಲಿಡಾ ಗೆವಾರ ಮತ್ತು ಮೊಮ್ಮಗಳು ಎಸ್ತೆಫಾನಿಯಾ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ಚೇ ಗೆವೆರಾ ಅವರ ಮಗಳು ಮತ್ತು ಮೊಮ್ಮಗಳಿಗೆ ಕನ್ನಡದ ನೆಲದಲ್ಲಿ ನಾಗರಿಕ ಸನ್ಮಾನ ಮಾಡಿದ್ದು ಚಾರಿತ್ರಿಕ ಸಂದರ್ಭವಾಗಿದೆ. ಕರ್ನಾಟಕ ಹುಸಿ ಸಂಸ್ಕೃತಿಯ ಪರವಾಗಿಲ್ಲ, ಜನಸಂಸ್ಕೃತಿಯ ಪರವಾಗಿದೆ, ಸಂವೇದನೆಗೆ ಪೂರಕವಾಗಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿ” ಎಂದು ಬರಗೂರು ಹೇಳಿದರು.

ಹಿರಿಯ ವಿದ್ವಾಂಸರಾದ ಜಿ. ರಾಮಕೃಷ್ಣ ಅವರು ಮಾತನಾಡಿ, “ಯಾರದ್ದೊ ಶ್ರಮವನ್ನು ಇನ್ಯಾರೊ ಕಬಳಿಸುತ್ತಿದ್ದ ಸಂದರ್ಭದಲ್ಲಿ, ‘ಚೆ’ ತಲೆ ಮೇಲೆ ನಕ್ಷತ್ರ ಚಿಹ್ನೆಯ ಟೋಪಿ ಹಾಕಿದ ಭರವಸೆಯ ಆಶಾಕಿರಣವಾಗಿದ್ದ. ವಿಶ್ವದ ಯಾವುದೇ ಮೂಲೆಯಲ್ಲಿ ಅನ್ಯಾಯವಾಗುತ್ತಿದ್ದರೆ, ಅದರ ವಿರುದ್ಧ ದನಿ ಎತ್ತುವ ಮನುಜರು ನನ್ನ ಸಂಗಾತಿಗಳು ಎಂದು ಹೇಳಿದ್ದ” ಎಂದು ಹೇಳಿದರು.

‘‘ಇಂದು ‘ಚೆ’ ಎಂದರೇ ಇಡೀ ವಿಶ್ವ ಇವ ನಮ್ಮವ ಎನ್ನುತ್ತಿದೆ. ವಿಶ್ವಮಾನವ ಪರಿಕಲ್ಪನೆ ಹೊಂದಿದ್ದ ‘ಚೆ’ ಕ್ಯೂಬಾದ ಹವಾನದಲ್ಲಿ ‘ಪ್ರತಿಯೊಬ್ಬ ಕ್ರಾಂತಿಕಾರಿಯ ಕೆಲಸ ಕ್ರಾಂತಿ ಮಾಡುವುದೆ ಹೊರತು ಸಾಮ್ರಾಜ್ಯಶಾಹಿ ಎಂಬ ಹೆಣ ಬೀಳುತ್ತದೆ, ಅದನ್ನು ಹೊರೋಣ ಎಂದು ಕಾಯುವುದಲ್ಲ. ಗೆಲ್ಲುವವರೆಗೂ ಹೋರಾಡುತ್ತಿರಬೇಕು’ ಎಂಬ ಸಂದೇಶ ಕೊಟ್ಟಿದ್ದರು” ಎಂದು ಹೇಳಿದರು.

“ಅಮೆರಿಕದ ಸಿಎಎ ‘ಚೆ’ಯನ್ನು ಕೊಲೆ ಮಾಡಿದ್ದು ಇತಿಹಾಸದಲ್ಲಿ ಹಲವರು ರಂಜನೀಯವಾಗಿ ಚಿತ್ರಿಸಿದರೆ, ಕೆಲವರು ಆತ್ಮಾವಲೋಕನ ಮಾಡಿಕೊಂಡಿದ್ದಾರೆ. ಭಾರತದಲ್ಲಿ ಮೂರನೇ ಬಾರಿಗೂ ಅಧಿಕಾರಕ್ಕೆ ಬರುತ್ತೇವೆ ಎಂದುಕೊಂಡಿರುವ ಮೋದಿಯನ್ನು ಮಹಾನಾಯಕ ಎಂದರೆ ಅಂತಹ ದೇಶ ಭ್ರಮಾತ್ಮಕವಾಗಿದೆ ಎಂದರ್ಥ. ಈ ವೇಳೆ ‘ಚೆ’ ಎಂಬ ಮಹಾನ್ ವ್ಯಕ್ತಿಯನ್ನು ಅನುಕರಿಸಲು ಎಲ್ಲರೂ ಸಾಮೂದಾಯಿಕವಾಗಿ ಪಾಲ್ಗೊಳ್ಳುವುದು ಒಂದೇ ದಾರಿ” ಎಂದು ವಿಧ್ವಾಂಸ ಜಿ. ರಾಮಕೃಷ್ಣ ಅವರು ಕರೆ ಕೊಟ್ಟಿದ್ದಾರೆ.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್ ಎಲ್ ಪುಷ್ಪ ಮಾತನಾಡಿ, “ಎಲ್ಲ ತಲೆಮಾರಿನ ಜನರು ‘ಚೆ’ಗೆ ಆಕರ್ಷಿತರಾಗಿದ್ದಾರೆ. ಭಾರತದ ಇಂದಿನ ಪರಿಸ್ಥಿತಿಯಲ್ಲಿ ‘ಚೆ’ ವ್ಯಕ್ತಿತ್ವ ಬಹುಮುಖ್ಯ. ಕಾವ್ಯ ಮತ್ತು ಕೋವಿಯನ್ನು ಪ್ರೀತಿಯಿಂದ ಜೊತೆಗಿರಿಸಿಕೊಂಡ ಚೇತನ ನಮ್ಮೊಳಗೂ ಮೂಡಲಿ” ಎಂದು ಆಶಿಸಿದರು.

ಅಪ್ಪನ ನೆನಪಿನ ಬುತ್ತಿ ತೆರೆದು ಹಾಡು ಹಾಡಿದ ಚೆ ಗೆವಾರ ಪುತ್ರಿ!

“ನನ್ನಪ್ಪ ತುಂಬಾ ಒಳ್ಳೆಯ ಕವಿಯಾಗಿದ್ದರು, ಹಲವು ಪುಸ್ತಕಗಳನ್ನು, ಕವಿತೆಗಳನ್ನು ಓದುತ್ತಿದ್ದರು. ಆದರೆ ಅವರು ತಮ್ಮ ಕವಿತೆಗಳನ್ನು ತಾವೆ ಓದುತ್ತಿರಲಿಲ್ಲ. ಯಾಕೆಂದರೆ ಅವರೊಳಗೊಬ್ಬ ವಿಮರ್ಶಕನಿದ್ದ” ಎಂದು 7ನೇ ವಯಸ್ಸಿಗೆ ಅಪ್ಪನನ್ನು ಕಳೆದುಕೊಂಡಿರುವ ಅಲಿಡಾ, ತಮ್ಮ ನೆನಪುಗಳ ಬುತ್ತಿಯನ್ನು ತೆರೆದಿಟ್ಟರು.

“ಅಸ್ತಮಾ ಇದ್ದ ಕಾರಣ ವೈದ್ಯರು ದಿನಕ್ಕೆ ಒಂದೇ ಸಿಗಾರ್ ಸೇದುವಂತೆ ಅಪ್ಪನಿಗೆ ಸೂಚಿಸಿದ್ದರು. ಆದರೆ, ಅಪ್ಪನಿಗೆ ತಂಬಾಕು ತೋಟದ ಕಾರ್ಮಿಕರು ದೊಡ್ಡ ಗಾತ್ರದ ಸಿಗಾರ್ ಮಾಡಿಕೊಟ್ಟಿದ್ದರು. ಅದನ್ನು ಸೇದಿ ವೈದ್ಯರಿಗೆ ಒಂದೇ ಸಿಗಾರ್ ಸೇದಿದೆ ಎಂದು ಫೋನ್ ಮಾಡಿ ಹೇಳುತ್ತಿದ್ದರು” ಎಂದು ಅಪ್ಪ ಅದೆಷ್ಟು ಉಡಾಫೆತನ ತೋರುತ್ತಿದ್ದರೆಂಬುದನ್ನು ಅವರು ವಿವರಿಸಿದರು.

“ಕೊರೋನಾ ಸೋಂಕು‌ ನಿಯಂತ್ರಿಸಲು ಕ್ಯೂಬಾ ತನ್ನದೆ ಆದ ವ್ಯಾಕ್ಸಿನ್ ಕಂಡು ಹಿಡಿದಿತ್ತು. ಆದರೆ ಅಮೇರಿಕಾ ಪೇಟೆಂಟ್ ಕಾರಣಕ್ಕೆ ಸಿರಿಂಜ್ ಕೊಳ್ಳಲು ಸಾಧ್ಯವಿರಲಿಲ್ಲ. ಹಾಗಾಗಿ ಮೂಗಿನ ಮೂಲಕ ಹಾಕುವ ವ್ಯಾಕ್ಸಿನ್ ಅನ್ನು ಕಂಡುಕೊಂಡೆವು. ನಾವು ಯಾವಾಗಲೂ ಪರ್ಯಾಯವನ್ನು ಹುಡುಕುತ್ತೇವೆ” ಎಂದು ತಮ್ಮ ದೇಶದ ಸ್ವಾಭಿಮಾನದ ಬಗ್ಗೆ ಅಭಿಮಾನದಿಂದ ನುಡಿದರು. ಭಾಷಣದ ಕೊನೆಯಲ್ಲಿ ಅಲಿಡಾ ಹಾಡನ್ನು ಕೂಡಾ ಹಾಡಿದರು.

ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ಹಿರಿಯ ಲೇಖಕಿ ಡಾ. ವಿಜಯಾ, ಕೇರಳದ ಮಾಜಿ ಸಚಿವ ಎಂ.ಎ. ಬೇಬಿ, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ದಲಿತ ಹಕ್ಕುಗಳ ಮುಖಂಡ ಮಾವಳ್ಳಿ ಶಂಕರ್, ಜನವಾದಿ ಮಹಿಳಾ ಸಂಘಟನೆ ನಾಯಕಿ ವಿಮಲಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...