Homeಕರ್ನಾಟಕಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

ಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

‘ಚೆ’ ಎಲ್ಲಾ ಸಂಸ್ಕೃತಿಯವರನ್ನು ಸೆಳೆದ ಕ್ರಾಂತಿಕಾರಿಯಾಗಿದ್ದಾರೆ. ಬಹುತ್ವವನ್ನು ಪ್ರತಿಪಾದಿಸುವ ಈ ನೆಲದಲ್ಲಿ ಬಹುಸಂಸ್ಕೃತಿಯನ್ನು ನಾಶ ಮಾಡಲು ಹೊರಟ್ಟಿದ್ದಾರೆ. ಅಂತವರ ಅಟಾಟೋಪಕ್ಕೆ ‘ಚೆ’ ಅಭಿಮಾನಿಗಳು ಉತ್ತರ ಕೊಡುತ್ತೇವೆ ಎಂದು ಚಿಂತಕ ಮತ್ತು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಅವರು ಬೆಂಗಳೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ಸ್ಕೌಟ್ ಮತ್ತು ಗೈಡ್‌ ಸಭಾಂಗಣದಲ್ಲಿ ‘ಚೆ ಗೆವಾರ’ ಅವರ ಮಗಳು ಡಾ. ಅಲಿಡಾ ಗೆವಾರ ಮತ್ತು ಮೊಮ್ಮಗಳು ಎಸ್ತೆಫಾನಿಯಾ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ಚೇ ಗೆವೆರಾ ಅವರ ಮಗಳು ಮತ್ತು ಮೊಮ್ಮಗಳಿಗೆ ಕನ್ನಡದ ನೆಲದಲ್ಲಿ ನಾಗರಿಕ ಸನ್ಮಾನ ಮಾಡಿದ್ದು ಚಾರಿತ್ರಿಕ ಸಂದರ್ಭವಾಗಿದೆ. ಕರ್ನಾಟಕ ಹುಸಿ ಸಂಸ್ಕೃತಿಯ ಪರವಾಗಿಲ್ಲ, ಜನಸಂಸ್ಕೃತಿಯ ಪರವಾಗಿದೆ, ಸಂವೇದನೆಗೆ ಪೂರಕವಾಗಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿ” ಎಂದು ಬರಗೂರು ಹೇಳಿದರು.

ಹಿರಿಯ ವಿದ್ವಾಂಸರಾದ ಜಿ. ರಾಮಕೃಷ್ಣ ಅವರು ಮಾತನಾಡಿ, “ಯಾರದ್ದೊ ಶ್ರಮವನ್ನು ಇನ್ಯಾರೊ ಕಬಳಿಸುತ್ತಿದ್ದ ಸಂದರ್ಭದಲ್ಲಿ, ‘ಚೆ’ ತಲೆ ಮೇಲೆ ನಕ್ಷತ್ರ ಚಿಹ್ನೆಯ ಟೋಪಿ ಹಾಕಿದ ಭರವಸೆಯ ಆಶಾಕಿರಣವಾಗಿದ್ದ. ವಿಶ್ವದ ಯಾವುದೇ ಮೂಲೆಯಲ್ಲಿ ಅನ್ಯಾಯವಾಗುತ್ತಿದ್ದರೆ, ಅದರ ವಿರುದ್ಧ ದನಿ ಎತ್ತುವ ಮನುಜರು ನನ್ನ ಸಂಗಾತಿಗಳು ಎಂದು ಹೇಳಿದ್ದ” ಎಂದು ಹೇಳಿದರು.

‘‘ಇಂದು ‘ಚೆ’ ಎಂದರೇ ಇಡೀ ವಿಶ್ವ ಇವ ನಮ್ಮವ ಎನ್ನುತ್ತಿದೆ. ವಿಶ್ವಮಾನವ ಪರಿಕಲ್ಪನೆ ಹೊಂದಿದ್ದ ‘ಚೆ’ ಕ್ಯೂಬಾದ ಹವಾನದಲ್ಲಿ ‘ಪ್ರತಿಯೊಬ್ಬ ಕ್ರಾಂತಿಕಾರಿಯ ಕೆಲಸ ಕ್ರಾಂತಿ ಮಾಡುವುದೆ ಹೊರತು ಸಾಮ್ರಾಜ್ಯಶಾಹಿ ಎಂಬ ಹೆಣ ಬೀಳುತ್ತದೆ, ಅದನ್ನು ಹೊರೋಣ ಎಂದು ಕಾಯುವುದಲ್ಲ. ಗೆಲ್ಲುವವರೆಗೂ ಹೋರಾಡುತ್ತಿರಬೇಕು’ ಎಂಬ ಸಂದೇಶ ಕೊಟ್ಟಿದ್ದರು” ಎಂದು ಹೇಳಿದರು.

“ಅಮೆರಿಕದ ಸಿಎಎ ‘ಚೆ’ಯನ್ನು ಕೊಲೆ ಮಾಡಿದ್ದು ಇತಿಹಾಸದಲ್ಲಿ ಹಲವರು ರಂಜನೀಯವಾಗಿ ಚಿತ್ರಿಸಿದರೆ, ಕೆಲವರು ಆತ್ಮಾವಲೋಕನ ಮಾಡಿಕೊಂಡಿದ್ದಾರೆ. ಭಾರತದಲ್ಲಿ ಮೂರನೇ ಬಾರಿಗೂ ಅಧಿಕಾರಕ್ಕೆ ಬರುತ್ತೇವೆ ಎಂದುಕೊಂಡಿರುವ ಮೋದಿಯನ್ನು ಮಹಾನಾಯಕ ಎಂದರೆ ಅಂತಹ ದೇಶ ಭ್ರಮಾತ್ಮಕವಾಗಿದೆ ಎಂದರ್ಥ. ಈ ವೇಳೆ ‘ಚೆ’ ಎಂಬ ಮಹಾನ್ ವ್ಯಕ್ತಿಯನ್ನು ಅನುಕರಿಸಲು ಎಲ್ಲರೂ ಸಾಮೂದಾಯಿಕವಾಗಿ ಪಾಲ್ಗೊಳ್ಳುವುದು ಒಂದೇ ದಾರಿ” ಎಂದು ವಿಧ್ವಾಂಸ ಜಿ. ರಾಮಕೃಷ್ಣ ಅವರು ಕರೆ ಕೊಟ್ಟಿದ್ದಾರೆ.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್ ಎಲ್ ಪುಷ್ಪ ಮಾತನಾಡಿ, “ಎಲ್ಲ ತಲೆಮಾರಿನ ಜನರು ‘ಚೆ’ಗೆ ಆಕರ್ಷಿತರಾಗಿದ್ದಾರೆ. ಭಾರತದ ಇಂದಿನ ಪರಿಸ್ಥಿತಿಯಲ್ಲಿ ‘ಚೆ’ ವ್ಯಕ್ತಿತ್ವ ಬಹುಮುಖ್ಯ. ಕಾವ್ಯ ಮತ್ತು ಕೋವಿಯನ್ನು ಪ್ರೀತಿಯಿಂದ ಜೊತೆಗಿರಿಸಿಕೊಂಡ ಚೇತನ ನಮ್ಮೊಳಗೂ ಮೂಡಲಿ” ಎಂದು ಆಶಿಸಿದರು.

ಅಪ್ಪನ ನೆನಪಿನ ಬುತ್ತಿ ತೆರೆದು ಹಾಡು ಹಾಡಿದ ಚೆ ಗೆವಾರ ಪುತ್ರಿ!

“ನನ್ನಪ್ಪ ತುಂಬಾ ಒಳ್ಳೆಯ ಕವಿಯಾಗಿದ್ದರು, ಹಲವು ಪುಸ್ತಕಗಳನ್ನು, ಕವಿತೆಗಳನ್ನು ಓದುತ್ತಿದ್ದರು. ಆದರೆ ಅವರು ತಮ್ಮ ಕವಿತೆಗಳನ್ನು ತಾವೆ ಓದುತ್ತಿರಲಿಲ್ಲ. ಯಾಕೆಂದರೆ ಅವರೊಳಗೊಬ್ಬ ವಿಮರ್ಶಕನಿದ್ದ” ಎಂದು 7ನೇ ವಯಸ್ಸಿಗೆ ಅಪ್ಪನನ್ನು ಕಳೆದುಕೊಂಡಿರುವ ಅಲಿಡಾ, ತಮ್ಮ ನೆನಪುಗಳ ಬುತ್ತಿಯನ್ನು ತೆರೆದಿಟ್ಟರು.

“ಅಸ್ತಮಾ ಇದ್ದ ಕಾರಣ ವೈದ್ಯರು ದಿನಕ್ಕೆ ಒಂದೇ ಸಿಗಾರ್ ಸೇದುವಂತೆ ಅಪ್ಪನಿಗೆ ಸೂಚಿಸಿದ್ದರು. ಆದರೆ, ಅಪ್ಪನಿಗೆ ತಂಬಾಕು ತೋಟದ ಕಾರ್ಮಿಕರು ದೊಡ್ಡ ಗಾತ್ರದ ಸಿಗಾರ್ ಮಾಡಿಕೊಟ್ಟಿದ್ದರು. ಅದನ್ನು ಸೇದಿ ವೈದ್ಯರಿಗೆ ಒಂದೇ ಸಿಗಾರ್ ಸೇದಿದೆ ಎಂದು ಫೋನ್ ಮಾಡಿ ಹೇಳುತ್ತಿದ್ದರು” ಎಂದು ಅಪ್ಪ ಅದೆಷ್ಟು ಉಡಾಫೆತನ ತೋರುತ್ತಿದ್ದರೆಂಬುದನ್ನು ಅವರು ವಿವರಿಸಿದರು.

“ಕೊರೋನಾ ಸೋಂಕು‌ ನಿಯಂತ್ರಿಸಲು ಕ್ಯೂಬಾ ತನ್ನದೆ ಆದ ವ್ಯಾಕ್ಸಿನ್ ಕಂಡು ಹಿಡಿದಿತ್ತು. ಆದರೆ ಅಮೇರಿಕಾ ಪೇಟೆಂಟ್ ಕಾರಣಕ್ಕೆ ಸಿರಿಂಜ್ ಕೊಳ್ಳಲು ಸಾಧ್ಯವಿರಲಿಲ್ಲ. ಹಾಗಾಗಿ ಮೂಗಿನ ಮೂಲಕ ಹಾಕುವ ವ್ಯಾಕ್ಸಿನ್ ಅನ್ನು ಕಂಡುಕೊಂಡೆವು. ನಾವು ಯಾವಾಗಲೂ ಪರ್ಯಾಯವನ್ನು ಹುಡುಕುತ್ತೇವೆ” ಎಂದು ತಮ್ಮ ದೇಶದ ಸ್ವಾಭಿಮಾನದ ಬಗ್ಗೆ ಅಭಿಮಾನದಿಂದ ನುಡಿದರು. ಭಾಷಣದ ಕೊನೆಯಲ್ಲಿ ಅಲಿಡಾ ಹಾಡನ್ನು ಕೂಡಾ ಹಾಡಿದರು.

ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ಹಿರಿಯ ಲೇಖಕಿ ಡಾ. ವಿಜಯಾ, ಕೇರಳದ ಮಾಜಿ ಸಚಿವ ಎಂ.ಎ. ಬೇಬಿ, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ದಲಿತ ಹಕ್ಕುಗಳ ಮುಖಂಡ ಮಾವಳ್ಳಿ ಶಂಕರ್, ಜನವಾದಿ ಮಹಿಳಾ ಸಂಘಟನೆ ನಾಯಕಿ ವಿಮಲಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...