Homeಕರ್ನಾಟಕಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

ಬಹುತ್ವ ನಾಶ ಮಾಡಲು ಹೊರಟವರಿಗೆ ‘ಚೆ’ ಅಭಿಮಾನಿಗಳು ಉತ್ತರಿಸುತ್ತೇವೆ: ಪ್ರೊ. ಬರಗೂರು ರಾಮಚಂದ್ರಪ್ಪ

- Advertisement -
- Advertisement -

‘ಚೆ’ ಎಲ್ಲಾ ಸಂಸ್ಕೃತಿಯವರನ್ನು ಸೆಳೆದ ಕ್ರಾಂತಿಕಾರಿಯಾಗಿದ್ದಾರೆ. ಬಹುತ್ವವನ್ನು ಪ್ರತಿಪಾದಿಸುವ ಈ ನೆಲದಲ್ಲಿ ಬಹುಸಂಸ್ಕೃತಿಯನ್ನು ನಾಶ ಮಾಡಲು ಹೊರಟ್ಟಿದ್ದಾರೆ. ಅಂತವರ ಅಟಾಟೋಪಕ್ಕೆ ‘ಚೆ’ ಅಭಿಮಾನಿಗಳು ಉತ್ತರ ಕೊಡುತ್ತೇವೆ ಎಂದು ಚಿಂತಕ ಮತ್ತು ಸಾಹಿತಿ ಪ್ರೊ. ಬರಗೂರು ರಾಮಚಂದ್ರಪ್ಪ ಎಚ್ಚರಿಕೆ ನೀಡಿದ್ದಾರೆ. ಅವರು ಬೆಂಗಳೂರಿನ ಮಹಾರಾಣಿ ವಿಜ್ಞಾನ ಕಾಲೇಜಿನ ಸ್ಕೌಟ್ ಮತ್ತು ಗೈಡ್‌ ಸಭಾಂಗಣದಲ್ಲಿ ‘ಚೆ ಗೆವಾರ’ ಅವರ ಮಗಳು ಡಾ. ಅಲಿಡಾ ಗೆವಾರ ಮತ್ತು ಮೊಮ್ಮಗಳು ಎಸ್ತೆಫಾನಿಯಾ ಅವರಿಗೆ ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

“ಚೇ ಗೆವೆರಾ ಅವರ ಮಗಳು ಮತ್ತು ಮೊಮ್ಮಗಳಿಗೆ ಕನ್ನಡದ ನೆಲದಲ್ಲಿ ನಾಗರಿಕ ಸನ್ಮಾನ ಮಾಡಿದ್ದು ಚಾರಿತ್ರಿಕ ಸಂದರ್ಭವಾಗಿದೆ. ಕರ್ನಾಟಕ ಹುಸಿ ಸಂಸ್ಕೃತಿಯ ಪರವಾಗಿಲ್ಲ, ಜನಸಂಸ್ಕೃತಿಯ ಪರವಾಗಿದೆ, ಸಂವೇದನೆಗೆ ಪೂರಕವಾಗಿದೆ ಎಂಬುದಕ್ಕೆ ಈ ಕಾರ್ಯಕ್ರಮ ಸಾಕ್ಷಿ” ಎಂದು ಬರಗೂರು ಹೇಳಿದರು.

ಹಿರಿಯ ವಿದ್ವಾಂಸರಾದ ಜಿ. ರಾಮಕೃಷ್ಣ ಅವರು ಮಾತನಾಡಿ, “ಯಾರದ್ದೊ ಶ್ರಮವನ್ನು ಇನ್ಯಾರೊ ಕಬಳಿಸುತ್ತಿದ್ದ ಸಂದರ್ಭದಲ್ಲಿ, ‘ಚೆ’ ತಲೆ ಮೇಲೆ ನಕ್ಷತ್ರ ಚಿಹ್ನೆಯ ಟೋಪಿ ಹಾಕಿದ ಭರವಸೆಯ ಆಶಾಕಿರಣವಾಗಿದ್ದ. ವಿಶ್ವದ ಯಾವುದೇ ಮೂಲೆಯಲ್ಲಿ ಅನ್ಯಾಯವಾಗುತ್ತಿದ್ದರೆ, ಅದರ ವಿರುದ್ಧ ದನಿ ಎತ್ತುವ ಮನುಜರು ನನ್ನ ಸಂಗಾತಿಗಳು ಎಂದು ಹೇಳಿದ್ದ” ಎಂದು ಹೇಳಿದರು.

‘‘ಇಂದು ‘ಚೆ’ ಎಂದರೇ ಇಡೀ ವಿಶ್ವ ಇವ ನಮ್ಮವ ಎನ್ನುತ್ತಿದೆ. ವಿಶ್ವಮಾನವ ಪರಿಕಲ್ಪನೆ ಹೊಂದಿದ್ದ ‘ಚೆ’ ಕ್ಯೂಬಾದ ಹವಾನದಲ್ಲಿ ‘ಪ್ರತಿಯೊಬ್ಬ ಕ್ರಾಂತಿಕಾರಿಯ ಕೆಲಸ ಕ್ರಾಂತಿ ಮಾಡುವುದೆ ಹೊರತು ಸಾಮ್ರಾಜ್ಯಶಾಹಿ ಎಂಬ ಹೆಣ ಬೀಳುತ್ತದೆ, ಅದನ್ನು ಹೊರೋಣ ಎಂದು ಕಾಯುವುದಲ್ಲ. ಗೆಲ್ಲುವವರೆಗೂ ಹೋರಾಡುತ್ತಿರಬೇಕು’ ಎಂಬ ಸಂದೇಶ ಕೊಟ್ಟಿದ್ದರು” ಎಂದು ಹೇಳಿದರು.

“ಅಮೆರಿಕದ ಸಿಎಎ ‘ಚೆ’ಯನ್ನು ಕೊಲೆ ಮಾಡಿದ್ದು ಇತಿಹಾಸದಲ್ಲಿ ಹಲವರು ರಂಜನೀಯವಾಗಿ ಚಿತ್ರಿಸಿದರೆ, ಕೆಲವರು ಆತ್ಮಾವಲೋಕನ ಮಾಡಿಕೊಂಡಿದ್ದಾರೆ. ಭಾರತದಲ್ಲಿ ಮೂರನೇ ಬಾರಿಗೂ ಅಧಿಕಾರಕ್ಕೆ ಬರುತ್ತೇವೆ ಎಂದುಕೊಂಡಿರುವ ಮೋದಿಯನ್ನು ಮಹಾನಾಯಕ ಎಂದರೆ ಅಂತಹ ದೇಶ ಭ್ರಮಾತ್ಮಕವಾಗಿದೆ ಎಂದರ್ಥ. ಈ ವೇಳೆ ‘ಚೆ’ ಎಂಬ ಮಹಾನ್ ವ್ಯಕ್ತಿಯನ್ನು ಅನುಕರಿಸಲು ಎಲ್ಲರೂ ಸಾಮೂದಾಯಿಕವಾಗಿ ಪಾಲ್ಗೊಳ್ಳುವುದು ಒಂದೇ ದಾರಿ” ಎಂದು ವಿಧ್ವಾಂಸ ಜಿ. ರಾಮಕೃಷ್ಣ ಅವರು ಕರೆ ಕೊಟ್ಟಿದ್ದಾರೆ.

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಎಚ್ ಎಲ್ ಪುಷ್ಪ ಮಾತನಾಡಿ, “ಎಲ್ಲ ತಲೆಮಾರಿನ ಜನರು ‘ಚೆ’ಗೆ ಆಕರ್ಷಿತರಾಗಿದ್ದಾರೆ. ಭಾರತದ ಇಂದಿನ ಪರಿಸ್ಥಿತಿಯಲ್ಲಿ ‘ಚೆ’ ವ್ಯಕ್ತಿತ್ವ ಬಹುಮುಖ್ಯ. ಕಾವ್ಯ ಮತ್ತು ಕೋವಿಯನ್ನು ಪ್ರೀತಿಯಿಂದ ಜೊತೆಗಿರಿಸಿಕೊಂಡ ಚೇತನ ನಮ್ಮೊಳಗೂ ಮೂಡಲಿ” ಎಂದು ಆಶಿಸಿದರು.

ಅಪ್ಪನ ನೆನಪಿನ ಬುತ್ತಿ ತೆರೆದು ಹಾಡು ಹಾಡಿದ ಚೆ ಗೆವಾರ ಪುತ್ರಿ!

“ನನ್ನಪ್ಪ ತುಂಬಾ ಒಳ್ಳೆಯ ಕವಿಯಾಗಿದ್ದರು, ಹಲವು ಪುಸ್ತಕಗಳನ್ನು, ಕವಿತೆಗಳನ್ನು ಓದುತ್ತಿದ್ದರು. ಆದರೆ ಅವರು ತಮ್ಮ ಕವಿತೆಗಳನ್ನು ತಾವೆ ಓದುತ್ತಿರಲಿಲ್ಲ. ಯಾಕೆಂದರೆ ಅವರೊಳಗೊಬ್ಬ ವಿಮರ್ಶಕನಿದ್ದ” ಎಂದು 7ನೇ ವಯಸ್ಸಿಗೆ ಅಪ್ಪನನ್ನು ಕಳೆದುಕೊಂಡಿರುವ ಅಲಿಡಾ, ತಮ್ಮ ನೆನಪುಗಳ ಬುತ್ತಿಯನ್ನು ತೆರೆದಿಟ್ಟರು.

“ಅಸ್ತಮಾ ಇದ್ದ ಕಾರಣ ವೈದ್ಯರು ದಿನಕ್ಕೆ ಒಂದೇ ಸಿಗಾರ್ ಸೇದುವಂತೆ ಅಪ್ಪನಿಗೆ ಸೂಚಿಸಿದ್ದರು. ಆದರೆ, ಅಪ್ಪನಿಗೆ ತಂಬಾಕು ತೋಟದ ಕಾರ್ಮಿಕರು ದೊಡ್ಡ ಗಾತ್ರದ ಸಿಗಾರ್ ಮಾಡಿಕೊಟ್ಟಿದ್ದರು. ಅದನ್ನು ಸೇದಿ ವೈದ್ಯರಿಗೆ ಒಂದೇ ಸಿಗಾರ್ ಸೇದಿದೆ ಎಂದು ಫೋನ್ ಮಾಡಿ ಹೇಳುತ್ತಿದ್ದರು” ಎಂದು ಅಪ್ಪ ಅದೆಷ್ಟು ಉಡಾಫೆತನ ತೋರುತ್ತಿದ್ದರೆಂಬುದನ್ನು ಅವರು ವಿವರಿಸಿದರು.

“ಕೊರೋನಾ ಸೋಂಕು‌ ನಿಯಂತ್ರಿಸಲು ಕ್ಯೂಬಾ ತನ್ನದೆ ಆದ ವ್ಯಾಕ್ಸಿನ್ ಕಂಡು ಹಿಡಿದಿತ್ತು. ಆದರೆ ಅಮೇರಿಕಾ ಪೇಟೆಂಟ್ ಕಾರಣಕ್ಕೆ ಸಿರಿಂಜ್ ಕೊಳ್ಳಲು ಸಾಧ್ಯವಿರಲಿಲ್ಲ. ಹಾಗಾಗಿ ಮೂಗಿನ ಮೂಲಕ ಹಾಕುವ ವ್ಯಾಕ್ಸಿನ್ ಅನ್ನು ಕಂಡುಕೊಂಡೆವು. ನಾವು ಯಾವಾಗಲೂ ಪರ್ಯಾಯವನ್ನು ಹುಡುಕುತ್ತೇವೆ” ಎಂದು ತಮ್ಮ ದೇಶದ ಸ್ವಾಭಿಮಾನದ ಬಗ್ಗೆ ಅಭಿಮಾನದಿಂದ ನುಡಿದರು. ಭಾಷಣದ ಕೊನೆಯಲ್ಲಿ ಅಲಿಡಾ ಹಾಡನ್ನು ಕೂಡಾ ಹಾಡಿದರು.

ನಾಗರಿಕ ಸನ್ಮಾನ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್, ಮಾಜಿ ಸಚಿವ ಪಿ.ಜಿ.ಆರ್. ಸಿಂಧ್ಯಾ, ಹಿರಿಯ ಲೇಖಕಿ ಡಾ. ವಿಜಯಾ, ಕೇರಳದ ಮಾಜಿ ಸಚಿವ ಎಂ.ಎ. ಬೇಬಿ, ಸಿಪಿಐ ಮುಖಂಡ ಸಿದ್ದನಗೌಡ ಪಾಟೀಲ್, ದಲಿತ ಹಕ್ಕುಗಳ ಮುಖಂಡ ಮಾವಳ್ಳಿ ಶಂಕರ್, ಜನವಾದಿ ಮಹಿಳಾ ಸಂಘಟನೆ ನಾಯಕಿ ವಿಮಲಾ ಸೇರಿದಂತೆ ಹಲವರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....