Homeಅಂತರಾಷ್ಟ್ರೀಯಪ್ರಜ್ವಲ ಕ್ರಾಂತಿಕಾರಿ ಚೇ ಗೆವಾರ ಹುತಾತ್ಮನಾಗುವ ಮುನ್ನ ಹೇಳಿದ ಮಾತುಗಳೇನು ಗೊತ್ತೆ?

ಪ್ರಜ್ವಲ ಕ್ರಾಂತಿಕಾರಿ ಚೇ ಗೆವಾರ ಹುತಾತ್ಮನಾಗುವ ಮುನ್ನ ಹೇಳಿದ ಮಾತುಗಳೇನು ಗೊತ್ತೆ?

ಪ್ರಪಂಚದಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ, ಕ್ರಾಂತಿಗೆ ಮತ್ತೊಂದು ಹೆಸರಾದ ಬಡಜನರ ಸ್ನೇಹಿತ ಚೇ ಗೆವಾರನಿಗೆ ಇಂದು 91ನೇ ಜನ್ಮದಿನದ ಸಂಭ್ರಮ

- Advertisement -
| ನಾನುಗೌರಿ ಡೆಸ್ಕ್ |

- Advertisement -
ನಡುಬಗ್ಗಿಸಿ ಬದುಕುವುದಕ್ಕಿಂತ ನೇರ ನಿಂತು ಸಾಯುವುದು ಮೇಲು
—————————
ಕ್ಯಾಸ್ಟ್ರೊ ಕುರಿತು ಚೇ ಹೇಳಿದ್ದು.
ಫಿಡೆಲ್ ಒಬ್ಬ ಅಸಾಮಾನ್ಯ ವ್ಯಕ್ತಿಯಾಗಿ ನನ್ನ ಮೆಚ್ಚುಗೆ ಗಳಿಸಿದ. ಅವನು ಅಸಾದ್ಯ ಕೆಲಸಗಳನ್ನು ಕೈಗೆತ್ತಿಕೊಂಡು ಮಾಡಿಯೇ ಬಿಡುತ್ತಿದ್ದ. ಕ್ಯೂಬಾಕ್ಕೆ ಹೊರಟು ನಿಂತ ಮೇಲೆ ಅಲ್ಲಿ ತಲುಪಿಯೇ ತಲುಪುತ್ತೇನೆ,ಅಲ್ಲಿ ತಲುಪಿದ ಮೇಲೆ ಹೋರಾಟ ಮಾಡಿಯೇ ಮಾಡುತ್ತೇನೆ.,ಹೋರಾಟದಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂಬ ಅದಮ್ಯ ವಿಶ್ವಾಸ ಹೊಂದಿದ್ದ. ನನಗೂ ಆತನ ಆಶಾವಾದ ಅಂಟಿಕೊಂಡಿತು.
—————————
ಕೊನೆಯ ಮಾತು

“ನನ್ನ ಹೆಂಡತಿಗೆ ಹೇಳಿ
ಅವಳು ಮತ್ತೊಂದು ಮದುವೆಯಾಗಲಿ
ನನ್ನ ಮಕ್ಕಳಿಗೆ ಹೇಳಿ
ಅವರು ನನ್ನ ಹೋರಾಟವನ್ನು ಮುಂದುವರೆಸಲಿ

ಮತ್ತು ಕೊನೆಯದಾಗಿ
ಅಲ್ಲಿ ನಿಂತು ನನ್ನದೆಗೆ ಗುರಿಯಿಟ್ಟಿರುವ
ನಿಮ್ಮ ಸೈನಿಕನಿಗೆ ಹೇಳಿ
ಅವನ ಗುರಿ ತಪ್ಪದಿರಲಿ”


ಚುನಾವಣೆಗಳನ್ನು ಶ್ರೀಮಂತರು ಮತ್ತು ವೃತ್ತಿಪರ ರಾಜಕಾರಣಿಗಳು ನಿರ್ವಹಿಸುವ ಕಾರಣದಿಂದ , ಚುನಾವಣೆ ಒಂದರಿಂದಲೇ ಪ್ರಜಾಪ್ರಭುತ್ವವನ್ನು ಉಳಿಸುತ್ತೇವೆ ಎಂಬುದು ಸುಳ್ಳು.

—————————

ಜಗತ್ತಿನ ಯಾವುದೇ ಮೂಲೆಯಲ್ಲಿದ್ದರೂ ಸರಿ. ಅನ್ಯಾಯ ಅಸಮಾನತೆಯ ವಿರುದ್ಧ ಹೋರಾಡುವುದಾದರೆ ಆಗ ನೀನು ನನ್ನ ಸಂಗಾತಿ.


ಸಾಹಿತ್ಯವನ್ನು ಯಾವ ರೀತಿ ಓದಬೇಕು ಮತ್ತು ಬರೆಯಬೇಕು ಎಂದು ಗೊತ್ತಿಲ್ಲದ‌ ದೇಶವನ್ನು ಸುಳ್ಳಿನಿಂದ ದಾರಿ ತಪ್ಪಿಸುವುದು ಬಹಳ ಸುಲಭ.


ನಾನೇನು ವಿಮೋಚಕನೇನಲ್ಲ. ಆ ರೀತಿಯ ವಿಮೋಚಕರು ಸಹ ಇರುವುದಿಲ್ಲ. ಜನ ತಮ್ಮನ್ನು ತಾವೇ ವಿಮೋಚನೆಗೊಳಿಸಿಕೊಳ್ಳುತ್ತಾರೆ.


ಆರ್ಥಿಕ ಸರ್ವಾಧಿಕಾರದ ಎದರು ಹೋರಾಟ ಮಾಡಲು ಪ್ರಜಾಪ್ರಭುತ್ವ  ಮಾದರಿಗೆ ಶಕ್ತಿ ಸಾಲದು

—————————

ಪ್ರಪಂಚದ ದೊಡ್ಡ ಶ್ರೀಮಂತನ ಒಟ್ಟು ಆಸ್ತಿಗಿಂತ ಮಿಲಿಯಂತರ ಪಟ್ಟು ಹೆಚ್ಚು ಒಬ್ಬ ಸಾಮಾನ್ಯನ ಪ್ರಾಣಕ್ಕೆ ಬೆಲೆ ಇರುತ್ತದೆ.

—————————

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. Your comments are hard hitting and so truthful. Pl continue your efforts. Pl give me your bank account number preferably if in sbi. Or else details such as: name of bank,a/c no, name of a/c holder and etc. Also your postal address to send u a token amount cheque. Good luck .

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...