Homeಮುಖಪುಟಚೆಗುವಾರ ನೆನಪು: ಸಂಗಾತಿ 'ಚೆ' ಎಂಬ ವಿಸ್ಮಯಕ್ಕೆ ಸಾವಿಲ್ಲ..

ಚೆಗುವಾರ ನೆನಪು: ಸಂಗಾತಿ ‘ಚೆ’ ಎಂಬ ವಿಸ್ಮಯಕ್ಕೆ ಸಾವಿಲ್ಲ..

ಕ್ಯೂಬಾ ವಿಮೋಚನಾ ಹೋರಾಟದ ಮಹಾದಂಡನಾಯಕನಾಗಿ ಕಾರ್ಯನಿರ್ವಹಿಸಿದ ಚೆ ಕ್ಯೂಬಾ ವಿಮೋಚನೆಯಾದ ಬಳಿಕ ಅಧಿಕಾರದ ಕುರ್ಚಿಯಲ್ಲಿ ಆಸೀನನಾಗಿ ಸುಖಃ ಅನುಭವಿಸಬಹುದಿತ್ತು. ಆತನಿಗೆ ಉನ್ನತೋನ್ನತ ಸ್ಥಾನಗಳು ಒದಗಿಬಂದರೂ ಆತ ಎಂದೂ ‌ಮೈ ಮರೆಯಲಿಲ್ಲ. ಕ್ಯೂಬಾದ ಮಂತ್ರಿಯಾಗಿಯೂ ಕಬ್ಬಿನ ಗದ್ದೆಗಳಲ್ಲಿ ಅತೀ ಸಾಮಾನ್ಯ ರೈತನಂತೆ ದುಡಿದ.

- Advertisement -
- Advertisement -

ಸಂಗಾತಿ ಅರ್ನೆಸ್ಟೋ ಚೆಗುವಾರ ಅವರನ್ನು ಕ್ಯೂಬನ್ ಕ್ರಾಂತಿಕಾರಿಯೆನ್ನುವುದು ಆತನ ವ್ಯಕ್ತಿತ್ವವನ್ನು ಸಂಕುಚಿತಗೊಳಿಸಿದಂತೆ. ಆತ ಅರ್ಜೆಂಟೈನಾದಲ್ಲಿ ಹುಟ್ಟಿದ… ಕ್ಯೂಬಾದಲ್ಲಿ ತನ್ನ ಬದುಕಿನ ಹೆಚ್ಚಿನ ವರ್ಷಗಳನ್ನು ಕಳೆದು ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ. ಕೊನೆಗೆ ಬೊಲಿವಿಯಾದಲ್ಲಿ ಕಾಂತ್ರಿ ಸಾಧಿಸಲು ಹೊರಟು ಹುತಾತ್ಮನಾದ.

ಆದರೆ ಆತ ಯಾವುದೇ ಒಂದು ದೇಶಕ್ಕೆ ಮಾತ್ರ ಸೀಮಿತವಾಗಲಿಲ್ಲ… ಆತನ ಪ್ರಭಾವ ಲ್ಯಾಟಿನ್ ಅಮೆರಿಕಾದ ಹೆಚ್ಚು ಕಡಿಮೆ ಎಲ್ಲೆಡೆಯ ವಿಮೋಚನಾ ಹೋರಾಟದಲ್ಲಿತ್ತು. ಆತ ಕ್ರಾಂತಿಯ ಅದೆಂತಹ ಅದಮ್ಯ ಚೇತನವೆಂದರೆ ಜಗತ್ತಿನ ಯಾವುದೇ ಮೂಲೆಯಲ್ಲಿಯಾದರೂ ಅನ್ಯಾಯ, ಶೋಷಣೆ, ದೌರ್ಜನ್ಯದ ವಿರುದ್ಧ ಯಾರು ಹೋರಾಡುತ್ತಾರೋ…. ತಮ್ಮ ನಾಡಿನ ವಿಮೋಚನೆಗಾಗಿ ಯಾರು ಹೋರಾಡುತ್ತಾರೋ… ಅವರೆಲ್ಲರೂ ನನ್ನ ಸಂಗಾತಿಗಳು ಎಂದು ಘೋಷಿಸಿದ್ದ.

ಆತ ಹುತಾತ್ಮನಾಗಿ ಸುಮಾರು ಐವತ್ತೈದು ವರ್ಷಗಳಾದರೂ ಆತ ಇಂದಿಗೂ ಓರ್ವ ಸೆಲೆಬ್ರಿಟಿಯಾಗಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾನೆ. ಇನ್ನೂ ವಿಚಿತ್ರವೆಂದರೆ ನಮ್ಮ ದೇಶದಲ್ಲಿ ಆತನ ಸಿದ್ಧಾಂತದ ಕಟುವಿರೋಧಿಗಳಾದ ಬಲಪಂಥೀಯ ಯುವಕರೂ ಆತನ ಭಾವಚಿತ್ರವಿರುವ ಟೀ ಶರ್ಟ್ ಧರಿಸುತ್ತಾರೆ…. ಕ್ಯಾಪ್ ಧರಿಸುತ್ತಾರೆ… ಅವರ್ಯಾರೂ ಆತನನ್ನು ಓದಿರಲು ಸಾಧ್ಯವಿಲ್ಲ… ಮತ್ತು ಜಗತ್ತಿನಾದ್ಯಂತದ ಎಡಪಂಥೀಯ ಚಳವಳಿಗಾರರಿಗೆ ಆತ ಓರ್ವ ರೋಲ್ ಮಾಡೆಲ್‌ ಆಗಿ ಇಂದಿಗೂ ಪ್ರಸ್ತುತ.

ಚೆ ಮೂಲತಃ ಓರ್ವ ಚರ್ಮರೋಗ ಶಾಸ್ತ್ರದಲ್ಲಿ ಪರಿಣತಿ ಪಡೆದ ವೈದ್ಯ. ಒಂದು ಕಾಲಕ್ಕೆ ಆತ ತಾನೋರ್ವ ಮಹಾನ್ ವೈದ್ಯಕೀಯ ಸಂಶೋಧಕನಾಗಬೇಕೆಂಬ ಕನಸು ಕಂಡವನು. ಆತ ತಾನು ಬದಲಾದ ಬಗೆಯನ್ನು ತನ್ನ ದಿನಚರಿಯಲ್ಲಿ ಹೀಗೆ ಬರೆಯುತ್ತಾನೆ

“ಕ್ರಾಂತಿಯ ಹಂಬಲ ಹೋರಾಟಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಂಡು ಪಡೆದ ಪಕ್ವ ದೃಷ್ಟಿಕೋನ ನನ್ನ ಹಿಂದಿನ ವೈದ್ಯಕೀಯ ವಿದ್ಯಾರ್ಥಿ ದೆಸೆಯಲ್ಲಿ ಇರಲಿಲ್ಲ. ನಾನು ಎಲ್ಲರಂತೆ ಯಶಸ್ಸಿಗೆ ಆಶಿಸಿದೆ. ನಾನೊಬ್ಬ ಪ್ರಸಿದ್ಧ ಸಂಶೋಧಕನಾಗಿ , ಬಿಡುವಿಲ್ಲದೇ ದುಡಿದು, ಮಾನವ ಜೀವಿಗಳೆಲ್ಲರಿಗೂ ಲಾಭವಾಗುವಂತಹ ಏನಾದರೂ ಸಂಶೋಧನೆ ಮಾಡುವ ಕನಸು ಕಾಣುತ್ತಿದ್ದೆ. ಆದರೆ ಇವೆಲ್ಲಾ ವೈಯಕ್ತಿಕ ಯಶಸ್ಸಿಗಾಗಿ ಕಟ್ಟಿದ ಕನಸುಗಳು.ನಮ್ಮೆಲ್ಲರಂತೆ ನಾನೂ ಸಹ ನಮ್ಮ ಪರಿಸರದಿಂದ ರೂಪಿತವಾದ ವ್ಯಕ್ತಿಯಾಗಿದ್ದೆ. ದಾರಿದ್ರ್ಯದಿಂದಾಗಿ, ಹೇಗೆ ತಂದೆ ತಾಯಿಯರು ತಮ್ಮ ಮಕ್ಕಳ ರೋಗಗಳಿಗೆ ಔಷಧಿ ಕೊಡಲಾರದಾಗಿದ್ದರೆಂಬುದನ್ನು ಕಂಡೆ, ಹಸಿವೆ ಮತ್ತು ನರಳಿಕೆಗಳಿಂದ ಪೀಡಿತನಾದ ತಂದೆ ತನ್ನ ಮಗು ಸಾಯುವುದನ್ನು ನಿರ್ವಿಕಾರವಾಗಿ ಸಾಯುವುದನ್ನು ಸಹಿಸಿಕೊಳ್ಳುವಷ್ಟು ಪಶುಪ್ರಾಯನಾಗಿ ಮನುಷ್ಯನು ಅಧಃಪತನಕ್ಕೆ ಜಾರುವುದನ್ನು ಕಂಡೆ. ಪ್ರಸಿದ್ಧ ಸಂಶೋಧಕನಾಗುವುದಕ್ಕಿಂತ ಅಥವಾ ಆರೋಗ್ಯ ಶಾಸ್ತ್ರಕ್ಕೆ ಒಂದು ಅಮೂಲ್ಯ ಕೊಡುಗೆ ಕೊಡುವುದಕ್ಕಿಂತಲೂ ಯಾವ ರೀತಿಯಲ್ಲೂ ಕನಿಷ್ಟವೆಂದು ಹೇಳಲಾಗದ ಜೀವನದ ಧ್ಯೇಯ ಇನ್ನೊಂದು ಇದೆಯೆಂದು ನಾನು ಕಂಡುಕೊಂಡೆ . ಆಗ ಈ ಜನರ ಸಹಾಯಕ್ಕೆ ನಾನು ಒದಗಬೇಕೆಂಬ ಜ್ಞಾನೋದಯವಾಗಿತ್ತು.”

ಚೆ ಒಂದರ್ಥದಲ್ಲಿ ವಿಶ್ವ ಸಂಚಾರಿ. ಆತ ತನ್ನ ಸಂಚಾರದಲ್ಲಿ ಕಂಡುಕೊಂಡ ಮಾನವಕುಲದ ಹಸಿವು-ನೋವು-ಸಂಕಟ-ನರಳಿಕೆಗಳು ಆತನ ಬದುಕಿನ ಪಥವನ್ನು ಬದಲಿಸಿದವು. ಅಪ್ಪಟ ಮಾನವತಾವಾದಿಯಾಗಿದ್ದ, ಸೂಕ್ಷ್ಮ ಸಂವೇದನೆಯ ವ್ಯಕ್ತಿಯಾಗಿದ್ದ ಚೆ ವಿಮೋಚನಾ ಹೋರಾಟಕ್ಕೊಂದು ಪರ್ಯಾಯ ಹೆಸರೇ ಆಗಿ ಪರಿವರ್ತಿತಗೊಂಡಿದ್ದರ ಹಿಂದೆ ಇರುವುದೇ ಆತ ಕಂಡು ಕೊಂಡ ಸತ್ಯಗಳು.

ಕ್ಯೂಬಾ ವಿಮೋಚನಾ ಹೋರಾಟದ ಮಹಾದಂಡನಾಯಕನಾಗಿ ಕಾರ್ಯನಿರ್ವಹಿಸಿದ ಚೆ ಕ್ಯೂಬಾ ವಿಮೋಚನೆಯಾದ ಬಳಿಕ ಅಧಿಕಾರದ ಕುರ್ಚಿಯಲ್ಲಿ ಆಸೀನನಾಗಿ ಸುಖಃ ಅನುಭವಿಸಬಹುದಿತ್ತು. ಆತನಿಗೆ ಉನ್ನತೋನ್ನತ ಸ್ಥಾನಗಳು ಒದಗಿಬಂದರೂ ಆತ ಎಂದೂ ‌ಮೈ ಮರೆಯಲಿಲ್ಲ. ಕ್ಯೂಬಾದ ಮಂತ್ರಿಯಾಗಿಯೂ ಕಬ್ಬಿನ ಗದ್ದೆಗಳಲ್ಲಿ ಅತೀ ಸಾಮಾನ್ಯ ರೈತನಂತೆ ದುಡಿದ.

ಚೆ ಕ್ಯೂಬಾದಲ್ಲಿ ಅಧಿಕಾರದ್ದಲ್ಲಿದ್ದಾಗ ಅನಾರೋಗ್ಯ ಪೀಡಿತನಾದ. ಆತನಿಗೆ ವಿಶ್ರಾಂತಿಗಾಗಿ ಒಳ್ಳೆಯ ವಸತಿಯ ಅಗತ್ಯ ಬಿತ್ತು. ಆದರೆ ಅದಕ್ಕೆ ತಗಲುವ ಆರ್ಥಿಕ ಚೈತನ್ಯ ಆತನಲ್ಲಿರಲಿಲ್ಲ.ಸರಕಾರ‌ ಆತನಿಗೆ ಉತ್ತಮ ವಸತಿಯ ವ್ಯವಸ್ಥೆ ಮಾಡಿತು. ಆಗ ಚೆ ಹೇಳಿದ ಮಾತು ಇದು ಅತ್ಯಂತ ಐಷಾರಾಮಿ ವಿಲ್ಲಾ. ಇದರಲ್ಲಿ ನಾನು ಅತ್ಯಂತ ಸಾಧಾರಣವಾದುದನ್ನೇ ಆಯ್ದುಕೊಂಡಿದ್ದೇನೆ. ಆದರೆ ನಾನು ಇಲ್ಲೇ ಬೀಡು ಬಿಟ್ಟಿರುವ ವಿಚಾರ ಜನರನ್ನು ನೋಯಿಸಬಹುದು. ನಾನು ಚೇತರಿಸುತ್ತಲೇ ಈ ಮನೆಯನ್ನು ಬಿಟ್ಟು ಹೋಗುವೆನೆಂದು ಕ್ಯೂಬಾದ ಜನತೆಗೆ ಮಾತು ಕೊಡುತ್ತೇನೆ. ಸುಮ್ಮನೆ ನಮ್ಮ ಮಂತ್ರಿ ಮಹೋದಯರ ಬದುಕನ್ನೊಮ್ಮೆ ತಾಳೆ ಹಾಕಿ ನೋಡಿ. ಅಧಿಕಾರ ಮುಗಿದರೂ ವರ್ಷಾನುಗಟ್ಟಲೆ ಜನತೆಯ ತೆರಿಗೆಯ ಹಣವನ್ನು ತಮ್ಮ ಐಷಾರಾಮಿ ಬದುಕಿಗಾಗಿ ಯಾವ ರೀತಿ ದುರುಪಯೋಗಪಡಿಸುತ್ತಾರೆ…

ಸಂಗಾತಿ ಚೆಗುವಾರನನ್ನು 1967ರಲ್ಲಿ ಕೊಲ್ಲಲಾಗುತ್ತದೆ. ಆತನನ್ನು ಯಾವ ಸೈನಿಕ ಕೊಂದಿದ್ದನೋ ಆ ಸೈನಿಕನಿಗೆ ಆತನ ವೃದ್ದಾಪ್ಯದಲ್ಲಿ ಅನಾರೋಗ್ಯ ಕಾಡಿದಾಗ ಆತನಿಗೆ ಚಿಕಿತ್ಸೆ ನೀಡಿ ಆತನನ್ನು ಗುಣಮುಖವಾಗಿಸಿದ್ದು ಕ್ಯೂಬಾದಲ್ಲಿ ಚೆಗುವಾರ ನ ಹೆಸರಲ್ಲೇ ನಿರ್ಮಿಸಲಾಗಿದ್ದ ಆಸ್ಪತ್ರೆಯಲ್ಲಿ. ‘ಚೆ’ಯ ಸಂಗಾತಿ ಕ್ಯೂಬಾದ ಅಂದಿನ ಅಧ್ಯಕ್ಷ ಫಿಡೆಲ್ ಕಾಸ್ಟ್ರೋನಿಗೆ ಆತ ತನ್ನ ಸಂಗಾತಿ ಚೆ ಯನ್ನು ಕೊಂದ ಸೈನಿಕ ಎಂಬ ಸತ್ಯ ಗೊತ್ತಿದ್ದರೂ ಆತನಿಗೆ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಚೆ ಮತ್ತು ಫಿಡೆಲ್ ಯುದ್ಧಗಳು ಯುದ್ಧಭೂಮಿಗೆ ಮಾತ್ರ ಸೀಮಿತ ಎಂದು ಅಚಲವಾಗಿ ನಂಬಿದ್ದರು. ಫಿಡೆಲ್ ಪ್ರಕಾರ ಚೆ ಯನ್ನು ಕೊಂದಿದ್ದ ಆ ಸೈನಿಕ ಅಂದು ತನ್ನ ಸೇನೆಯ ಪರವಾಗಿ ತನ್ನ ಜವಾಬ್ದಾರಿಯನ್ನು ನಿರ್ವಹಿಸಿದ್ದ.

ಚೆ ಎಂದರೆ ಓದಿದಷ್ಟೂ ಮತ್ತೆ ಮತ್ತೆ ಓದಿಸುವ ಒಂದು ವಿಸ್ಮಯ ಗ್ರಂಥ. ಕ್ರಾಂತಿಕಾರಿಗೆ ಸಾವಿಲ್ಲ… ಆತ ಸದಾ ಜನರ ಮನದಲ್ಲಿ ಅಜರಾಮರ… ಎಂಬುವುದಕ್ಕೆ ಆಧುನಿಕ ಜಗತ್ತಿನಲ್ಲಿ ಚೆ ಒಂದು ನಿದರ್ಶನ..
ಕಾಮ್ರೇಡ್…. ಚೆಗುವಾರ… ನಿನಗಿದೋ ಕ್ರಾಂತಿಯ ಕೆಂಪು ಸಲಾಂ.


ಇದನ್ನೂ ಓದಿ: “ಅಪ್ಪನಿಂದ ಒಂದು ದೊಡ್ಡ ಮುತ್ತು!”: ಅಪ್ಪನ ಕುರಿತು ಆಪ್ತವಾಗಿ ಮಾತಾಡಿದ ಚೆಗೆವೆರಾನ ಮಗಳು ಅಲೈದಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...