Homeಮುಖಪುಟಚೆಗುವಾರ ನೆನಪು: ಸಂಗಾತಿ 'ಚೆ' ಎಂಬ ವಿಸ್ಮಯಕ್ಕೆ ಸಾವಿಲ್ಲ..

ಚೆಗುವಾರ ನೆನಪು: ಸಂಗಾತಿ ‘ಚೆ’ ಎಂಬ ವಿಸ್ಮಯಕ್ಕೆ ಸಾವಿಲ್ಲ..

ಕ್ಯೂಬಾ ವಿಮೋಚನಾ ಹೋರಾಟದ ಮಹಾದಂಡನಾಯಕನಾಗಿ ಕಾರ್ಯನಿರ್ವಹಿಸಿದ ಚೆ ಕ್ಯೂಬಾ ವಿಮೋಚನೆಯಾದ ಬಳಿಕ ಅಧಿಕಾರದ ಕುರ್ಚಿಯಲ್ಲಿ ಆಸೀನನಾಗಿ ಸುಖಃ ಅನುಭವಿಸಬಹುದಿತ್ತು. ಆತನಿಗೆ ಉನ್ನತೋನ್ನತ ಸ್ಥಾನಗಳು ಒದಗಿಬಂದರೂ ಆತ ಎಂದೂ ‌ಮೈ ಮರೆಯಲಿಲ್ಲ. ಕ್ಯೂಬಾದ ಮಂತ್ರಿಯಾಗಿಯೂ ಕಬ್ಬಿನ ಗದ್ದೆಗಳಲ್ಲಿ ಅತೀ ಸಾಮಾನ್ಯ ರೈತನಂತೆ ದುಡಿದ.

- Advertisement -
- Advertisement -

ಸಂಗಾತಿ ಅರ್ನೆಸ್ಟೋ ಚೆಗುವಾರ ಅವರನ್ನು ಕ್ಯೂಬನ್ ಕ್ರಾಂತಿಕಾರಿಯೆನ್ನುವುದು ಆತನ ವ್ಯಕ್ತಿತ್ವವನ್ನು ಸಂಕುಚಿತಗೊಳಿಸಿದಂತೆ. ಆತ ಅರ್ಜೆಂಟೈನಾದಲ್ಲಿ ಹುಟ್ಟಿದ… ಕ್ಯೂಬಾದಲ್ಲಿ ತನ್ನ ಬದುಕಿನ ಹೆಚ್ಚಿನ ವರ್ಷಗಳನ್ನು ಕಳೆದು ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ. ಕೊನೆಗೆ ಬೊಲಿವಿಯಾದಲ್ಲಿ ಕಾಂತ್ರಿ ಸಾಧಿಸಲು ಹೊರಟು ಹುತಾತ್ಮನಾದ.

ಆದರೆ ಆತ ಯಾವುದೇ ಒಂದು ದೇಶಕ್ಕೆ ಮಾತ್ರ ಸೀಮಿತವಾಗಲಿಲ್ಲ… ಆತನ ಪ್ರಭಾವ ಲ್ಯಾಟಿನ್ ಅಮೆರಿಕಾದ ಹೆಚ್ಚು ಕಡಿಮೆ ಎಲ್ಲೆಡೆಯ ವಿಮೋಚನಾ ಹೋರಾಟದಲ್ಲಿತ್ತು. ಆತ ಕ್ರಾಂತಿಯ ಅದೆಂತಹ ಅದಮ್ಯ ಚೇತನವೆಂದರೆ ಜಗತ್ತಿನ ಯಾವುದೇ ಮೂಲೆಯಲ್ಲಿಯಾದರೂ ಅನ್ಯಾಯ, ಶೋಷಣೆ, ದೌರ್ಜನ್ಯದ ವಿರುದ್ಧ ಯಾರು ಹೋರಾಡುತ್ತಾರೋ…. ತಮ್ಮ ನಾಡಿನ ವಿಮೋಚನೆಗಾಗಿ ಯಾರು ಹೋರಾಡುತ್ತಾರೋ… ಅವರೆಲ್ಲರೂ ನನ್ನ ಸಂಗಾತಿಗಳು ಎಂದು ಘೋಷಿಸಿದ್ದ.

ಆತ ಹುತಾತ್ಮನಾಗಿ ಸುಮಾರು ಐವತ್ತೈದು ವರ್ಷಗಳಾದರೂ ಆತ ಇಂದಿಗೂ ಓರ್ವ ಸೆಲೆಬ್ರಿಟಿಯಾಗಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾನೆ. ಇನ್ನೂ ವಿಚಿತ್ರವೆಂದರೆ ನಮ್ಮ ದೇಶದಲ್ಲಿ ಆತನ ಸಿದ್ಧಾಂತದ ಕಟುವಿರೋಧಿಗಳಾದ ಬಲಪಂಥೀಯ ಯುವಕರೂ ಆತನ ಭಾವಚಿತ್ರವಿರುವ ಟೀ ಶರ್ಟ್ ಧರಿಸುತ್ತಾರೆ…. ಕ್ಯಾಪ್ ಧರಿಸುತ್ತಾರೆ… ಅವರ್ಯಾರೂ ಆತನನ್ನು ಓದಿರಲು ಸಾಧ್ಯವಿಲ್ಲ… ಮತ್ತು ಜಗತ್ತಿನಾದ್ಯಂತದ ಎಡಪಂಥೀಯ ಚಳವಳಿಗಾರರಿಗೆ ಆತ ಓರ್ವ ರೋಲ್ ಮಾಡೆಲ್‌ ಆಗಿ ಇಂದಿಗೂ ಪ್ರಸ್ತುತ.

ಚೆ ಮೂಲತಃ ಓರ್ವ ಚರ್ಮರೋಗ ಶಾಸ್ತ್ರದಲ್ಲಿ ಪರಿಣತಿ ಪಡೆದ ವೈದ್ಯ. ಒಂದು ಕಾಲಕ್ಕೆ ಆತ ತಾನೋರ್ವ ಮಹಾನ್ ವೈದ್ಯಕೀಯ ಸಂಶೋಧಕನಾಗಬೇಕೆಂಬ ಕನಸು ಕಂಡವನು. ಆತ ತಾನು ಬದಲಾದ ಬಗೆಯನ್ನು ತನ್ನ ದಿನಚರಿಯಲ್ಲಿ ಹೀಗೆ ಬರೆಯುತ್ತಾನೆ

“ಕ್ರಾಂತಿಯ ಹಂಬಲ ಹೋರಾಟಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಂಡು ಪಡೆದ ಪಕ್ವ ದೃಷ್ಟಿಕೋನ ನನ್ನ ಹಿಂದಿನ ವೈದ್ಯಕೀಯ ವಿದ್ಯಾರ್ಥಿ ದೆಸೆಯಲ್ಲಿ ಇರಲಿಲ್ಲ. ನಾನು ಎಲ್ಲರಂತೆ ಯಶಸ್ಸಿಗೆ ಆಶಿಸಿದೆ. ನಾನೊಬ್ಬ ಪ್ರಸಿದ್ಧ ಸಂಶೋಧಕನಾಗಿ , ಬಿಡುವಿಲ್ಲದೇ ದುಡಿದು, ಮಾನವ ಜೀವಿಗಳೆಲ್ಲರಿಗೂ ಲಾಭವಾಗುವಂತಹ ಏನಾದರೂ ಸಂಶೋಧನೆ ಮಾಡುವ ಕನಸು ಕಾಣುತ್ತಿದ್ದೆ. ಆದರೆ ಇವೆಲ್ಲಾ ವೈಯಕ್ತಿಕ ಯಶಸ್ಸಿಗಾಗಿ ಕಟ್ಟಿದ ಕನಸುಗಳು.ನಮ್ಮೆಲ್ಲರಂತೆ ನಾನೂ ಸಹ ನಮ್ಮ ಪರಿಸರದಿಂದ ರೂಪಿತವಾದ ವ್ಯಕ್ತಿಯಾಗಿದ್ದೆ. ದಾರಿದ್ರ್ಯದಿಂದಾಗಿ, ಹೇಗೆ ತಂದೆ ತಾಯಿಯರು ತಮ್ಮ ಮಕ್ಕಳ ರೋಗಗಳಿಗೆ ಔಷಧಿ ಕೊಡಲಾರದಾಗಿದ್ದರೆಂಬುದನ್ನು ಕಂಡೆ, ಹಸಿವೆ ಮತ್ತು ನರಳಿಕೆಗಳಿಂದ ಪೀಡಿತನಾದ ತಂದೆ ತನ್ನ ಮಗು ಸಾಯುವುದನ್ನು ನಿರ್ವಿಕಾರವಾಗಿ ಸಾಯುವುದನ್ನು ಸಹಿಸಿಕೊಳ್ಳುವಷ್ಟು ಪಶುಪ್ರಾಯನಾಗಿ ಮನುಷ್ಯನು ಅಧಃಪತನಕ್ಕೆ ಜಾರುವುದನ್ನು ಕಂಡೆ. ಪ್ರಸಿದ್ಧ ಸಂಶೋಧಕನಾಗುವುದಕ್ಕಿಂತ ಅಥವಾ ಆರೋಗ್ಯ ಶಾಸ್ತ್ರಕ್ಕೆ ಒಂದು ಅಮೂಲ್ಯ ಕೊಡುಗೆ ಕೊಡುವುದಕ್ಕಿಂತಲೂ ಯಾವ ರೀತಿಯಲ್ಲೂ ಕನಿಷ್ಟವೆಂದು ಹೇಳಲಾಗದ ಜೀವನದ ಧ್ಯೇಯ ಇನ್ನೊಂದು ಇದೆಯೆಂದು ನಾನು ಕಂಡುಕೊಂಡೆ . ಆಗ ಈ ಜನರ ಸಹಾಯಕ್ಕೆ ನಾನು ಒದಗಬೇಕೆಂಬ ಜ್ಞಾನೋದಯವಾಗಿತ್ತು.”

ಚೆ ಒಂದರ್ಥದಲ್ಲಿ ವಿಶ್ವ ಸಂಚಾರಿ. ಆತ ತನ್ನ ಸಂಚಾರದಲ್ಲಿ ಕಂಡುಕೊಂಡ ಮಾನವಕುಲದ ಹಸಿವು-ನೋವು-ಸಂಕಟ-ನರಳಿಕೆಗಳು ಆತನ ಬದುಕಿನ ಪಥವನ್ನು ಬದಲಿಸಿದವು. ಅಪ್ಪಟ ಮಾನವತಾವಾದಿಯಾಗಿದ್ದ, ಸೂಕ್ಷ್ಮ ಸಂವೇದನೆಯ ವ್ಯಕ್ತಿಯಾಗಿದ್ದ ಚೆ ವಿಮೋಚನಾ ಹೋರಾಟಕ್ಕೊಂದು ಪರ್ಯಾಯ ಹೆಸರೇ ಆಗಿ ಪರಿವರ್ತಿತಗೊಂಡಿದ್ದರ ಹಿಂದೆ ಇರುವುದೇ ಆತ ಕಂಡು ಕೊಂಡ ಸತ್ಯಗಳು.

ಕ್ಯೂಬಾ ವಿಮೋಚನಾ ಹೋರಾಟದ ಮಹಾದಂಡನಾಯಕನಾಗಿ ಕಾರ್ಯನಿರ್ವಹಿಸಿದ ಚೆ ಕ್ಯೂಬಾ ವಿಮೋಚನೆಯಾದ ಬಳಿಕ ಅಧಿಕಾರದ ಕುರ್ಚಿಯಲ್ಲಿ ಆಸೀನನಾಗಿ ಸುಖಃ ಅನುಭವಿಸಬಹುದಿತ್ತು. ಆತನಿಗೆ ಉನ್ನತೋನ್ನತ ಸ್ಥಾನಗಳು ಒದಗಿಬಂದರೂ ಆತ ಎಂದೂ ‌ಮೈ ಮರೆಯಲಿಲ್ಲ. ಕ್ಯೂಬಾದ ಮಂತ್ರಿಯಾಗಿಯೂ ಕಬ್ಬಿನ ಗದ್ದೆಗಳಲ್ಲಿ ಅತೀ ಸಾಮಾನ್ಯ ರೈತನಂತೆ ದುಡಿದ.

ಚೆ ಕ್ಯೂಬಾದಲ್ಲಿ ಅಧಿಕಾರದ್ದಲ್ಲಿದ್ದಾಗ ಅನಾರೋಗ್ಯ ಪೀಡಿತನಾದ. ಆತನಿಗೆ ವಿಶ್ರಾಂತಿಗಾಗಿ ಒಳ್ಳೆಯ ವಸತಿಯ ಅಗತ್ಯ ಬಿತ್ತು. ಆದರೆ ಅದಕ್ಕೆ ತಗಲುವ ಆರ್ಥಿಕ ಚೈತನ್ಯ ಆತನಲ್ಲಿರಲಿಲ್ಲ.ಸರಕಾರ‌ ಆತನಿಗೆ ಉತ್ತಮ ವಸತಿಯ ವ್ಯವಸ್ಥೆ ಮಾಡಿತು. ಆಗ ಚೆ ಹೇಳಿದ ಮಾತು ಇದು ಅತ್ಯಂತ ಐಷಾರಾಮಿ ವಿಲ್ಲಾ. ಇದರಲ್ಲಿ ನಾನು ಅತ್ಯಂತ ಸಾಧಾರಣವಾದುದನ್ನೇ ಆಯ್ದುಕೊಂಡಿದ್ದೇನೆ. ಆದರೆ ನಾನು ಇಲ್ಲೇ ಬೀಡು ಬಿಟ್ಟಿರುವ ವಿಚಾರ ಜನರನ್ನು ನೋಯಿಸಬಹುದು. ನಾನು ಚೇತರಿಸುತ್ತಲೇ ಈ ಮನೆಯನ್ನು ಬಿಟ್ಟು ಹೋಗುವೆನೆಂದು ಕ್ಯೂಬಾದ ಜನತೆಗೆ ಮಾತು ಕೊಡುತ್ತೇನೆ. ಸುಮ್ಮನೆ ನಮ್ಮ ಮಂತ್ರಿ ಮಹೋದಯರ ಬದುಕನ್ನೊಮ್ಮೆ ತಾಳೆ ಹಾಕಿ ನೋಡಿ. ಅಧಿಕಾರ ಮುಗಿದರೂ ವರ್ಷಾನುಗಟ್ಟಲೆ ಜನತೆಯ ತೆರಿಗೆಯ ಹಣವನ್ನು ತಮ್ಮ ಐಷಾರಾಮಿ ಬದುಕಿಗಾಗಿ ಯಾವ ರೀತಿ ದುರುಪಯೋಗಪಡಿಸುತ್ತಾರೆ…

ಸಂಗಾತಿ ಚೆಗುವಾರನನ್ನು 1967ರಲ್ಲಿ ಕೊಲ್ಲಲಾಗುತ್ತದೆ. ಆತನನ್ನು ಯಾವ ಸೈನಿಕ ಕೊಂದಿದ್ದನೋ ಆ ಸೈನಿಕನಿಗೆ ಆತನ ವೃದ್ದಾಪ್ಯದಲ್ಲಿ ಅನಾರೋಗ್ಯ ಕಾಡಿದಾಗ ಆತನಿಗೆ ಚಿಕಿತ್ಸೆ ನೀಡಿ ಆತನನ್ನು ಗುಣಮುಖವಾಗಿಸಿದ್ದು ಕ್ಯೂಬಾದಲ್ಲಿ ಚೆಗುವಾರ ನ ಹೆಸರಲ್ಲೇ ನಿರ್ಮಿಸಲಾಗಿದ್ದ ಆಸ್ಪತ್ರೆಯಲ್ಲಿ. ‘ಚೆ’ಯ ಸಂಗಾತಿ ಕ್ಯೂಬಾದ ಅಂದಿನ ಅಧ್ಯಕ್ಷ ಫಿಡೆಲ್ ಕಾಸ್ಟ್ರೋನಿಗೆ ಆತ ತನ್ನ ಸಂಗಾತಿ ಚೆ ಯನ್ನು ಕೊಂದ ಸೈನಿಕ ಎಂಬ ಸತ್ಯ ಗೊತ್ತಿದ್ದರೂ ಆತನಿಗೆ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಚೆ ಮತ್ತು ಫಿಡೆಲ್ ಯುದ್ಧಗಳು ಯುದ್ಧಭೂಮಿಗೆ ಮಾತ್ರ ಸೀಮಿತ ಎಂದು ಅಚಲವಾಗಿ ನಂಬಿದ್ದರು. ಫಿಡೆಲ್ ಪ್ರಕಾರ ಚೆ ಯನ್ನು ಕೊಂದಿದ್ದ ಆ ಸೈನಿಕ ಅಂದು ತನ್ನ ಸೇನೆಯ ಪರವಾಗಿ ತನ್ನ ಜವಾಬ್ದಾರಿಯನ್ನು ನಿರ್ವಹಿಸಿದ್ದ.

ಚೆ ಎಂದರೆ ಓದಿದಷ್ಟೂ ಮತ್ತೆ ಮತ್ತೆ ಓದಿಸುವ ಒಂದು ವಿಸ್ಮಯ ಗ್ರಂಥ. ಕ್ರಾಂತಿಕಾರಿಗೆ ಸಾವಿಲ್ಲ… ಆತ ಸದಾ ಜನರ ಮನದಲ್ಲಿ ಅಜರಾಮರ… ಎಂಬುವುದಕ್ಕೆ ಆಧುನಿಕ ಜಗತ್ತಿನಲ್ಲಿ ಚೆ ಒಂದು ನಿದರ್ಶನ..
ಕಾಮ್ರೇಡ್…. ಚೆಗುವಾರ… ನಿನಗಿದೋ ಕ್ರಾಂತಿಯ ಕೆಂಪು ಸಲಾಂ.


ಇದನ್ನೂ ಓದಿ: “ಅಪ್ಪನಿಂದ ಒಂದು ದೊಡ್ಡ ಮುತ್ತು!”: ಅಪ್ಪನ ಕುರಿತು ಆಪ್ತವಾಗಿ ಮಾತಾಡಿದ ಚೆಗೆವೆರಾನ ಮಗಳು ಅಲೈದಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...