Homeಮುಖಪುಟಚೆಗುವಾರ ನೆನಪು: ಸಂಗಾತಿ 'ಚೆ' ಎಂಬ ವಿಸ್ಮಯಕ್ಕೆ ಸಾವಿಲ್ಲ..

ಚೆಗುವಾರ ನೆನಪು: ಸಂಗಾತಿ ‘ಚೆ’ ಎಂಬ ವಿಸ್ಮಯಕ್ಕೆ ಸಾವಿಲ್ಲ..

ಕ್ಯೂಬಾ ವಿಮೋಚನಾ ಹೋರಾಟದ ಮಹಾದಂಡನಾಯಕನಾಗಿ ಕಾರ್ಯನಿರ್ವಹಿಸಿದ ಚೆ ಕ್ಯೂಬಾ ವಿಮೋಚನೆಯಾದ ಬಳಿಕ ಅಧಿಕಾರದ ಕುರ್ಚಿಯಲ್ಲಿ ಆಸೀನನಾಗಿ ಸುಖಃ ಅನುಭವಿಸಬಹುದಿತ್ತು. ಆತನಿಗೆ ಉನ್ನತೋನ್ನತ ಸ್ಥಾನಗಳು ಒದಗಿಬಂದರೂ ಆತ ಎಂದೂ ‌ಮೈ ಮರೆಯಲಿಲ್ಲ. ಕ್ಯೂಬಾದ ಮಂತ್ರಿಯಾಗಿಯೂ ಕಬ್ಬಿನ ಗದ್ದೆಗಳಲ್ಲಿ ಅತೀ ಸಾಮಾನ್ಯ ರೈತನಂತೆ ದುಡಿದ.

- Advertisement -
- Advertisement -

ಸಂಗಾತಿ ಅರ್ನೆಸ್ಟೋ ಚೆಗುವಾರ ಅವರನ್ನು ಕ್ಯೂಬನ್ ಕ್ರಾಂತಿಕಾರಿಯೆನ್ನುವುದು ಆತನ ವ್ಯಕ್ತಿತ್ವವನ್ನು ಸಂಕುಚಿತಗೊಳಿಸಿದಂತೆ. ಆತ ಅರ್ಜೆಂಟೈನಾದಲ್ಲಿ ಹುಟ್ಟಿದ… ಕ್ಯೂಬಾದಲ್ಲಿ ತನ್ನ ಬದುಕಿನ ಹೆಚ್ಚಿನ ವರ್ಷಗಳನ್ನು ಕಳೆದು ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ. ಕೊನೆಗೆ ಬೊಲಿವಿಯಾದಲ್ಲಿ ಕಾಂತ್ರಿ ಸಾಧಿಸಲು ಹೊರಟು ಹುತಾತ್ಮನಾದ.

ಆದರೆ ಆತ ಯಾವುದೇ ಒಂದು ದೇಶಕ್ಕೆ ಮಾತ್ರ ಸೀಮಿತವಾಗಲಿಲ್ಲ… ಆತನ ಪ್ರಭಾವ ಲ್ಯಾಟಿನ್ ಅಮೆರಿಕಾದ ಹೆಚ್ಚು ಕಡಿಮೆ ಎಲ್ಲೆಡೆಯ ವಿಮೋಚನಾ ಹೋರಾಟದಲ್ಲಿತ್ತು. ಆತ ಕ್ರಾಂತಿಯ ಅದೆಂತಹ ಅದಮ್ಯ ಚೇತನವೆಂದರೆ ಜಗತ್ತಿನ ಯಾವುದೇ ಮೂಲೆಯಲ್ಲಿಯಾದರೂ ಅನ್ಯಾಯ, ಶೋಷಣೆ, ದೌರ್ಜನ್ಯದ ವಿರುದ್ಧ ಯಾರು ಹೋರಾಡುತ್ತಾರೋ…. ತಮ್ಮ ನಾಡಿನ ವಿಮೋಚನೆಗಾಗಿ ಯಾರು ಹೋರಾಡುತ್ತಾರೋ… ಅವರೆಲ್ಲರೂ ನನ್ನ ಸಂಗಾತಿಗಳು ಎಂದು ಘೋಷಿಸಿದ್ದ.

ಆತ ಹುತಾತ್ಮನಾಗಿ ಸುಮಾರು ಐವತ್ತೈದು ವರ್ಷಗಳಾದರೂ ಆತ ಇಂದಿಗೂ ಓರ್ವ ಸೆಲೆಬ್ರಿಟಿಯಾಗಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾನೆ. ಇನ್ನೂ ವಿಚಿತ್ರವೆಂದರೆ ನಮ್ಮ ದೇಶದಲ್ಲಿ ಆತನ ಸಿದ್ಧಾಂತದ ಕಟುವಿರೋಧಿಗಳಾದ ಬಲಪಂಥೀಯ ಯುವಕರೂ ಆತನ ಭಾವಚಿತ್ರವಿರುವ ಟೀ ಶರ್ಟ್ ಧರಿಸುತ್ತಾರೆ…. ಕ್ಯಾಪ್ ಧರಿಸುತ್ತಾರೆ… ಅವರ್ಯಾರೂ ಆತನನ್ನು ಓದಿರಲು ಸಾಧ್ಯವಿಲ್ಲ… ಮತ್ತು ಜಗತ್ತಿನಾದ್ಯಂತದ ಎಡಪಂಥೀಯ ಚಳವಳಿಗಾರರಿಗೆ ಆತ ಓರ್ವ ರೋಲ್ ಮಾಡೆಲ್‌ ಆಗಿ ಇಂದಿಗೂ ಪ್ರಸ್ತುತ.

ಚೆ ಮೂಲತಃ ಓರ್ವ ಚರ್ಮರೋಗ ಶಾಸ್ತ್ರದಲ್ಲಿ ಪರಿಣತಿ ಪಡೆದ ವೈದ್ಯ. ಒಂದು ಕಾಲಕ್ಕೆ ಆತ ತಾನೋರ್ವ ಮಹಾನ್ ವೈದ್ಯಕೀಯ ಸಂಶೋಧಕನಾಗಬೇಕೆಂಬ ಕನಸು ಕಂಡವನು. ಆತ ತಾನು ಬದಲಾದ ಬಗೆಯನ್ನು ತನ್ನ ದಿನಚರಿಯಲ್ಲಿ ಹೀಗೆ ಬರೆಯುತ್ತಾನೆ

“ಕ್ರಾಂತಿಯ ಹಂಬಲ ಹೋರಾಟಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಂಡು ಪಡೆದ ಪಕ್ವ ದೃಷ್ಟಿಕೋನ ನನ್ನ ಹಿಂದಿನ ವೈದ್ಯಕೀಯ ವಿದ್ಯಾರ್ಥಿ ದೆಸೆಯಲ್ಲಿ ಇರಲಿಲ್ಲ. ನಾನು ಎಲ್ಲರಂತೆ ಯಶಸ್ಸಿಗೆ ಆಶಿಸಿದೆ. ನಾನೊಬ್ಬ ಪ್ರಸಿದ್ಧ ಸಂಶೋಧಕನಾಗಿ , ಬಿಡುವಿಲ್ಲದೇ ದುಡಿದು, ಮಾನವ ಜೀವಿಗಳೆಲ್ಲರಿಗೂ ಲಾಭವಾಗುವಂತಹ ಏನಾದರೂ ಸಂಶೋಧನೆ ಮಾಡುವ ಕನಸು ಕಾಣುತ್ತಿದ್ದೆ. ಆದರೆ ಇವೆಲ್ಲಾ ವೈಯಕ್ತಿಕ ಯಶಸ್ಸಿಗಾಗಿ ಕಟ್ಟಿದ ಕನಸುಗಳು.ನಮ್ಮೆಲ್ಲರಂತೆ ನಾನೂ ಸಹ ನಮ್ಮ ಪರಿಸರದಿಂದ ರೂಪಿತವಾದ ವ್ಯಕ್ತಿಯಾಗಿದ್ದೆ. ದಾರಿದ್ರ್ಯದಿಂದಾಗಿ, ಹೇಗೆ ತಂದೆ ತಾಯಿಯರು ತಮ್ಮ ಮಕ್ಕಳ ರೋಗಗಳಿಗೆ ಔಷಧಿ ಕೊಡಲಾರದಾಗಿದ್ದರೆಂಬುದನ್ನು ಕಂಡೆ, ಹಸಿವೆ ಮತ್ತು ನರಳಿಕೆಗಳಿಂದ ಪೀಡಿತನಾದ ತಂದೆ ತನ್ನ ಮಗು ಸಾಯುವುದನ್ನು ನಿರ್ವಿಕಾರವಾಗಿ ಸಾಯುವುದನ್ನು ಸಹಿಸಿಕೊಳ್ಳುವಷ್ಟು ಪಶುಪ್ರಾಯನಾಗಿ ಮನುಷ್ಯನು ಅಧಃಪತನಕ್ಕೆ ಜಾರುವುದನ್ನು ಕಂಡೆ. ಪ್ರಸಿದ್ಧ ಸಂಶೋಧಕನಾಗುವುದಕ್ಕಿಂತ ಅಥವಾ ಆರೋಗ್ಯ ಶಾಸ್ತ್ರಕ್ಕೆ ಒಂದು ಅಮೂಲ್ಯ ಕೊಡುಗೆ ಕೊಡುವುದಕ್ಕಿಂತಲೂ ಯಾವ ರೀತಿಯಲ್ಲೂ ಕನಿಷ್ಟವೆಂದು ಹೇಳಲಾಗದ ಜೀವನದ ಧ್ಯೇಯ ಇನ್ನೊಂದು ಇದೆಯೆಂದು ನಾನು ಕಂಡುಕೊಂಡೆ . ಆಗ ಈ ಜನರ ಸಹಾಯಕ್ಕೆ ನಾನು ಒದಗಬೇಕೆಂಬ ಜ್ಞಾನೋದಯವಾಗಿತ್ತು.”

ಚೆ ಒಂದರ್ಥದಲ್ಲಿ ವಿಶ್ವ ಸಂಚಾರಿ. ಆತ ತನ್ನ ಸಂಚಾರದಲ್ಲಿ ಕಂಡುಕೊಂಡ ಮಾನವಕುಲದ ಹಸಿವು-ನೋವು-ಸಂಕಟ-ನರಳಿಕೆಗಳು ಆತನ ಬದುಕಿನ ಪಥವನ್ನು ಬದಲಿಸಿದವು. ಅಪ್ಪಟ ಮಾನವತಾವಾದಿಯಾಗಿದ್ದ, ಸೂಕ್ಷ್ಮ ಸಂವೇದನೆಯ ವ್ಯಕ್ತಿಯಾಗಿದ್ದ ಚೆ ವಿಮೋಚನಾ ಹೋರಾಟಕ್ಕೊಂದು ಪರ್ಯಾಯ ಹೆಸರೇ ಆಗಿ ಪರಿವರ್ತಿತಗೊಂಡಿದ್ದರ ಹಿಂದೆ ಇರುವುದೇ ಆತ ಕಂಡು ಕೊಂಡ ಸತ್ಯಗಳು.

ಕ್ಯೂಬಾ ವಿಮೋಚನಾ ಹೋರಾಟದ ಮಹಾದಂಡನಾಯಕನಾಗಿ ಕಾರ್ಯನಿರ್ವಹಿಸಿದ ಚೆ ಕ್ಯೂಬಾ ವಿಮೋಚನೆಯಾದ ಬಳಿಕ ಅಧಿಕಾರದ ಕುರ್ಚಿಯಲ್ಲಿ ಆಸೀನನಾಗಿ ಸುಖಃ ಅನುಭವಿಸಬಹುದಿತ್ತು. ಆತನಿಗೆ ಉನ್ನತೋನ್ನತ ಸ್ಥಾನಗಳು ಒದಗಿಬಂದರೂ ಆತ ಎಂದೂ ‌ಮೈ ಮರೆಯಲಿಲ್ಲ. ಕ್ಯೂಬಾದ ಮಂತ್ರಿಯಾಗಿಯೂ ಕಬ್ಬಿನ ಗದ್ದೆಗಳಲ್ಲಿ ಅತೀ ಸಾಮಾನ್ಯ ರೈತನಂತೆ ದುಡಿದ.

ಚೆ ಕ್ಯೂಬಾದಲ್ಲಿ ಅಧಿಕಾರದ್ದಲ್ಲಿದ್ದಾಗ ಅನಾರೋಗ್ಯ ಪೀಡಿತನಾದ. ಆತನಿಗೆ ವಿಶ್ರಾಂತಿಗಾಗಿ ಒಳ್ಳೆಯ ವಸತಿಯ ಅಗತ್ಯ ಬಿತ್ತು. ಆದರೆ ಅದಕ್ಕೆ ತಗಲುವ ಆರ್ಥಿಕ ಚೈತನ್ಯ ಆತನಲ್ಲಿರಲಿಲ್ಲ.ಸರಕಾರ‌ ಆತನಿಗೆ ಉತ್ತಮ ವಸತಿಯ ವ್ಯವಸ್ಥೆ ಮಾಡಿತು. ಆಗ ಚೆ ಹೇಳಿದ ಮಾತು ಇದು ಅತ್ಯಂತ ಐಷಾರಾಮಿ ವಿಲ್ಲಾ. ಇದರಲ್ಲಿ ನಾನು ಅತ್ಯಂತ ಸಾಧಾರಣವಾದುದನ್ನೇ ಆಯ್ದುಕೊಂಡಿದ್ದೇನೆ. ಆದರೆ ನಾನು ಇಲ್ಲೇ ಬೀಡು ಬಿಟ್ಟಿರುವ ವಿಚಾರ ಜನರನ್ನು ನೋಯಿಸಬಹುದು. ನಾನು ಚೇತರಿಸುತ್ತಲೇ ಈ ಮನೆಯನ್ನು ಬಿಟ್ಟು ಹೋಗುವೆನೆಂದು ಕ್ಯೂಬಾದ ಜನತೆಗೆ ಮಾತು ಕೊಡುತ್ತೇನೆ. ಸುಮ್ಮನೆ ನಮ್ಮ ಮಂತ್ರಿ ಮಹೋದಯರ ಬದುಕನ್ನೊಮ್ಮೆ ತಾಳೆ ಹಾಕಿ ನೋಡಿ. ಅಧಿಕಾರ ಮುಗಿದರೂ ವರ್ಷಾನುಗಟ್ಟಲೆ ಜನತೆಯ ತೆರಿಗೆಯ ಹಣವನ್ನು ತಮ್ಮ ಐಷಾರಾಮಿ ಬದುಕಿಗಾಗಿ ಯಾವ ರೀತಿ ದುರುಪಯೋಗಪಡಿಸುತ್ತಾರೆ…

ಸಂಗಾತಿ ಚೆಗುವಾರನನ್ನು 1967ರಲ್ಲಿ ಕೊಲ್ಲಲಾಗುತ್ತದೆ. ಆತನನ್ನು ಯಾವ ಸೈನಿಕ ಕೊಂದಿದ್ದನೋ ಆ ಸೈನಿಕನಿಗೆ ಆತನ ವೃದ್ದಾಪ್ಯದಲ್ಲಿ ಅನಾರೋಗ್ಯ ಕಾಡಿದಾಗ ಆತನಿಗೆ ಚಿಕಿತ್ಸೆ ನೀಡಿ ಆತನನ್ನು ಗುಣಮುಖವಾಗಿಸಿದ್ದು ಕ್ಯೂಬಾದಲ್ಲಿ ಚೆಗುವಾರ ನ ಹೆಸರಲ್ಲೇ ನಿರ್ಮಿಸಲಾಗಿದ್ದ ಆಸ್ಪತ್ರೆಯಲ್ಲಿ. ‘ಚೆ’ಯ ಸಂಗಾತಿ ಕ್ಯೂಬಾದ ಅಂದಿನ ಅಧ್ಯಕ್ಷ ಫಿಡೆಲ್ ಕಾಸ್ಟ್ರೋನಿಗೆ ಆತ ತನ್ನ ಸಂಗಾತಿ ಚೆ ಯನ್ನು ಕೊಂದ ಸೈನಿಕ ಎಂಬ ಸತ್ಯ ಗೊತ್ತಿದ್ದರೂ ಆತನಿಗೆ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಚೆ ಮತ್ತು ಫಿಡೆಲ್ ಯುದ್ಧಗಳು ಯುದ್ಧಭೂಮಿಗೆ ಮಾತ್ರ ಸೀಮಿತ ಎಂದು ಅಚಲವಾಗಿ ನಂಬಿದ್ದರು. ಫಿಡೆಲ್ ಪ್ರಕಾರ ಚೆ ಯನ್ನು ಕೊಂದಿದ್ದ ಆ ಸೈನಿಕ ಅಂದು ತನ್ನ ಸೇನೆಯ ಪರವಾಗಿ ತನ್ನ ಜವಾಬ್ದಾರಿಯನ್ನು ನಿರ್ವಹಿಸಿದ್ದ.

ಚೆ ಎಂದರೆ ಓದಿದಷ್ಟೂ ಮತ್ತೆ ಮತ್ತೆ ಓದಿಸುವ ಒಂದು ವಿಸ್ಮಯ ಗ್ರಂಥ. ಕ್ರಾಂತಿಕಾರಿಗೆ ಸಾವಿಲ್ಲ… ಆತ ಸದಾ ಜನರ ಮನದಲ್ಲಿ ಅಜರಾಮರ… ಎಂಬುವುದಕ್ಕೆ ಆಧುನಿಕ ಜಗತ್ತಿನಲ್ಲಿ ಚೆ ಒಂದು ನಿದರ್ಶನ..
ಕಾಮ್ರೇಡ್…. ಚೆಗುವಾರ… ನಿನಗಿದೋ ಕ್ರಾಂತಿಯ ಕೆಂಪು ಸಲಾಂ.


ಇದನ್ನೂ ಓದಿ: “ಅಪ್ಪನಿಂದ ಒಂದು ದೊಡ್ಡ ಮುತ್ತು!”: ಅಪ್ಪನ ಕುರಿತು ಆಪ್ತವಾಗಿ ಮಾತಾಡಿದ ಚೆಗೆವೆರಾನ ಮಗಳು ಅಲೈದಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...