Homeಮುಖಪುಟಚೆಗುವಾರ ನೆನಪು: ಸಂಗಾತಿ 'ಚೆ' ಎಂಬ ವಿಸ್ಮಯಕ್ಕೆ ಸಾವಿಲ್ಲ..

ಚೆಗುವಾರ ನೆನಪು: ಸಂಗಾತಿ ‘ಚೆ’ ಎಂಬ ವಿಸ್ಮಯಕ್ಕೆ ಸಾವಿಲ್ಲ..

ಕ್ಯೂಬಾ ವಿಮೋಚನಾ ಹೋರಾಟದ ಮಹಾದಂಡನಾಯಕನಾಗಿ ಕಾರ್ಯನಿರ್ವಹಿಸಿದ ಚೆ ಕ್ಯೂಬಾ ವಿಮೋಚನೆಯಾದ ಬಳಿಕ ಅಧಿಕಾರದ ಕುರ್ಚಿಯಲ್ಲಿ ಆಸೀನನಾಗಿ ಸುಖಃ ಅನುಭವಿಸಬಹುದಿತ್ತು. ಆತನಿಗೆ ಉನ್ನತೋನ್ನತ ಸ್ಥಾನಗಳು ಒದಗಿಬಂದರೂ ಆತ ಎಂದೂ ‌ಮೈ ಮರೆಯಲಿಲ್ಲ. ಕ್ಯೂಬಾದ ಮಂತ್ರಿಯಾಗಿಯೂ ಕಬ್ಬಿನ ಗದ್ದೆಗಳಲ್ಲಿ ಅತೀ ಸಾಮಾನ್ಯ ರೈತನಂತೆ ದುಡಿದ.

- Advertisement -
- Advertisement -

ಸಂಗಾತಿ ಅರ್ನೆಸ್ಟೋ ಚೆಗುವಾರ ಅವರನ್ನು ಕ್ಯೂಬನ್ ಕ್ರಾಂತಿಕಾರಿಯೆನ್ನುವುದು ಆತನ ವ್ಯಕ್ತಿತ್ವವನ್ನು ಸಂಕುಚಿತಗೊಳಿಸಿದಂತೆ. ಆತ ಅರ್ಜೆಂಟೈನಾದಲ್ಲಿ ಹುಟ್ಟಿದ… ಕ್ಯೂಬಾದಲ್ಲಿ ತನ್ನ ಬದುಕಿನ ಹೆಚ್ಚಿನ ವರ್ಷಗಳನ್ನು ಕಳೆದು ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ. ಕೊನೆಗೆ ಬೊಲಿವಿಯಾದಲ್ಲಿ ಕಾಂತ್ರಿ ಸಾಧಿಸಲು ಹೊರಟು ಹುತಾತ್ಮನಾದ.

ಆದರೆ ಆತ ಯಾವುದೇ ಒಂದು ದೇಶಕ್ಕೆ ಮಾತ್ರ ಸೀಮಿತವಾಗಲಿಲ್ಲ… ಆತನ ಪ್ರಭಾವ ಲ್ಯಾಟಿನ್ ಅಮೆರಿಕಾದ ಹೆಚ್ಚು ಕಡಿಮೆ ಎಲ್ಲೆಡೆಯ ವಿಮೋಚನಾ ಹೋರಾಟದಲ್ಲಿತ್ತು. ಆತ ಕ್ರಾಂತಿಯ ಅದೆಂತಹ ಅದಮ್ಯ ಚೇತನವೆಂದರೆ ಜಗತ್ತಿನ ಯಾವುದೇ ಮೂಲೆಯಲ್ಲಿಯಾದರೂ ಅನ್ಯಾಯ, ಶೋಷಣೆ, ದೌರ್ಜನ್ಯದ ವಿರುದ್ಧ ಯಾರು ಹೋರಾಡುತ್ತಾರೋ…. ತಮ್ಮ ನಾಡಿನ ವಿಮೋಚನೆಗಾಗಿ ಯಾರು ಹೋರಾಡುತ್ತಾರೋ… ಅವರೆಲ್ಲರೂ ನನ್ನ ಸಂಗಾತಿಗಳು ಎಂದು ಘೋಷಿಸಿದ್ದ.

ಆತ ಹುತಾತ್ಮನಾಗಿ ಸುಮಾರು ಐವತ್ತೈದು ವರ್ಷಗಳಾದರೂ ಆತ ಇಂದಿಗೂ ಓರ್ವ ಸೆಲೆಬ್ರಿಟಿಯಾಗಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾನೆ. ಇನ್ನೂ ವಿಚಿತ್ರವೆಂದರೆ ನಮ್ಮ ದೇಶದಲ್ಲಿ ಆತನ ಸಿದ್ಧಾಂತದ ಕಟುವಿರೋಧಿಗಳಾದ ಬಲಪಂಥೀಯ ಯುವಕರೂ ಆತನ ಭಾವಚಿತ್ರವಿರುವ ಟೀ ಶರ್ಟ್ ಧರಿಸುತ್ತಾರೆ…. ಕ್ಯಾಪ್ ಧರಿಸುತ್ತಾರೆ… ಅವರ್ಯಾರೂ ಆತನನ್ನು ಓದಿರಲು ಸಾಧ್ಯವಿಲ್ಲ… ಮತ್ತು ಜಗತ್ತಿನಾದ್ಯಂತದ ಎಡಪಂಥೀಯ ಚಳವಳಿಗಾರರಿಗೆ ಆತ ಓರ್ವ ರೋಲ್ ಮಾಡೆಲ್‌ ಆಗಿ ಇಂದಿಗೂ ಪ್ರಸ್ತುತ.

ಚೆ ಮೂಲತಃ ಓರ್ವ ಚರ್ಮರೋಗ ಶಾಸ್ತ್ರದಲ್ಲಿ ಪರಿಣತಿ ಪಡೆದ ವೈದ್ಯ. ಒಂದು ಕಾಲಕ್ಕೆ ಆತ ತಾನೋರ್ವ ಮಹಾನ್ ವೈದ್ಯಕೀಯ ಸಂಶೋಧಕನಾಗಬೇಕೆಂಬ ಕನಸು ಕಂಡವನು. ಆತ ತಾನು ಬದಲಾದ ಬಗೆಯನ್ನು ತನ್ನ ದಿನಚರಿಯಲ್ಲಿ ಹೀಗೆ ಬರೆಯುತ್ತಾನೆ

“ಕ್ರಾಂತಿಯ ಹಂಬಲ ಹೋರಾಟಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಂಡು ಪಡೆದ ಪಕ್ವ ದೃಷ್ಟಿಕೋನ ನನ್ನ ಹಿಂದಿನ ವೈದ್ಯಕೀಯ ವಿದ್ಯಾರ್ಥಿ ದೆಸೆಯಲ್ಲಿ ಇರಲಿಲ್ಲ. ನಾನು ಎಲ್ಲರಂತೆ ಯಶಸ್ಸಿಗೆ ಆಶಿಸಿದೆ. ನಾನೊಬ್ಬ ಪ್ರಸಿದ್ಧ ಸಂಶೋಧಕನಾಗಿ , ಬಿಡುವಿಲ್ಲದೇ ದುಡಿದು, ಮಾನವ ಜೀವಿಗಳೆಲ್ಲರಿಗೂ ಲಾಭವಾಗುವಂತಹ ಏನಾದರೂ ಸಂಶೋಧನೆ ಮಾಡುವ ಕನಸು ಕಾಣುತ್ತಿದ್ದೆ. ಆದರೆ ಇವೆಲ್ಲಾ ವೈಯಕ್ತಿಕ ಯಶಸ್ಸಿಗಾಗಿ ಕಟ್ಟಿದ ಕನಸುಗಳು.ನಮ್ಮೆಲ್ಲರಂತೆ ನಾನೂ ಸಹ ನಮ್ಮ ಪರಿಸರದಿಂದ ರೂಪಿತವಾದ ವ್ಯಕ್ತಿಯಾಗಿದ್ದೆ. ದಾರಿದ್ರ್ಯದಿಂದಾಗಿ, ಹೇಗೆ ತಂದೆ ತಾಯಿಯರು ತಮ್ಮ ಮಕ್ಕಳ ರೋಗಗಳಿಗೆ ಔಷಧಿ ಕೊಡಲಾರದಾಗಿದ್ದರೆಂಬುದನ್ನು ಕಂಡೆ, ಹಸಿವೆ ಮತ್ತು ನರಳಿಕೆಗಳಿಂದ ಪೀಡಿತನಾದ ತಂದೆ ತನ್ನ ಮಗು ಸಾಯುವುದನ್ನು ನಿರ್ವಿಕಾರವಾಗಿ ಸಾಯುವುದನ್ನು ಸಹಿಸಿಕೊಳ್ಳುವಷ್ಟು ಪಶುಪ್ರಾಯನಾಗಿ ಮನುಷ್ಯನು ಅಧಃಪತನಕ್ಕೆ ಜಾರುವುದನ್ನು ಕಂಡೆ. ಪ್ರಸಿದ್ಧ ಸಂಶೋಧಕನಾಗುವುದಕ್ಕಿಂತ ಅಥವಾ ಆರೋಗ್ಯ ಶಾಸ್ತ್ರಕ್ಕೆ ಒಂದು ಅಮೂಲ್ಯ ಕೊಡುಗೆ ಕೊಡುವುದಕ್ಕಿಂತಲೂ ಯಾವ ರೀತಿಯಲ್ಲೂ ಕನಿಷ್ಟವೆಂದು ಹೇಳಲಾಗದ ಜೀವನದ ಧ್ಯೇಯ ಇನ್ನೊಂದು ಇದೆಯೆಂದು ನಾನು ಕಂಡುಕೊಂಡೆ . ಆಗ ಈ ಜನರ ಸಹಾಯಕ್ಕೆ ನಾನು ಒದಗಬೇಕೆಂಬ ಜ್ಞಾನೋದಯವಾಗಿತ್ತು.”

ಚೆ ಒಂದರ್ಥದಲ್ಲಿ ವಿಶ್ವ ಸಂಚಾರಿ. ಆತ ತನ್ನ ಸಂಚಾರದಲ್ಲಿ ಕಂಡುಕೊಂಡ ಮಾನವಕುಲದ ಹಸಿವು-ನೋವು-ಸಂಕಟ-ನರಳಿಕೆಗಳು ಆತನ ಬದುಕಿನ ಪಥವನ್ನು ಬದಲಿಸಿದವು. ಅಪ್ಪಟ ಮಾನವತಾವಾದಿಯಾಗಿದ್ದ, ಸೂಕ್ಷ್ಮ ಸಂವೇದನೆಯ ವ್ಯಕ್ತಿಯಾಗಿದ್ದ ಚೆ ವಿಮೋಚನಾ ಹೋರಾಟಕ್ಕೊಂದು ಪರ್ಯಾಯ ಹೆಸರೇ ಆಗಿ ಪರಿವರ್ತಿತಗೊಂಡಿದ್ದರ ಹಿಂದೆ ಇರುವುದೇ ಆತ ಕಂಡು ಕೊಂಡ ಸತ್ಯಗಳು.

ಕ್ಯೂಬಾ ವಿಮೋಚನಾ ಹೋರಾಟದ ಮಹಾದಂಡನಾಯಕನಾಗಿ ಕಾರ್ಯನಿರ್ವಹಿಸಿದ ಚೆ ಕ್ಯೂಬಾ ವಿಮೋಚನೆಯಾದ ಬಳಿಕ ಅಧಿಕಾರದ ಕುರ್ಚಿಯಲ್ಲಿ ಆಸೀನನಾಗಿ ಸುಖಃ ಅನುಭವಿಸಬಹುದಿತ್ತು. ಆತನಿಗೆ ಉನ್ನತೋನ್ನತ ಸ್ಥಾನಗಳು ಒದಗಿಬಂದರೂ ಆತ ಎಂದೂ ‌ಮೈ ಮರೆಯಲಿಲ್ಲ. ಕ್ಯೂಬಾದ ಮಂತ್ರಿಯಾಗಿಯೂ ಕಬ್ಬಿನ ಗದ್ದೆಗಳಲ್ಲಿ ಅತೀ ಸಾಮಾನ್ಯ ರೈತನಂತೆ ದುಡಿದ.

ಚೆ ಕ್ಯೂಬಾದಲ್ಲಿ ಅಧಿಕಾರದ್ದಲ್ಲಿದ್ದಾಗ ಅನಾರೋಗ್ಯ ಪೀಡಿತನಾದ. ಆತನಿಗೆ ವಿಶ್ರಾಂತಿಗಾಗಿ ಒಳ್ಳೆಯ ವಸತಿಯ ಅಗತ್ಯ ಬಿತ್ತು. ಆದರೆ ಅದಕ್ಕೆ ತಗಲುವ ಆರ್ಥಿಕ ಚೈತನ್ಯ ಆತನಲ್ಲಿರಲಿಲ್ಲ.ಸರಕಾರ‌ ಆತನಿಗೆ ಉತ್ತಮ ವಸತಿಯ ವ್ಯವಸ್ಥೆ ಮಾಡಿತು. ಆಗ ಚೆ ಹೇಳಿದ ಮಾತು ಇದು ಅತ್ಯಂತ ಐಷಾರಾಮಿ ವಿಲ್ಲಾ. ಇದರಲ್ಲಿ ನಾನು ಅತ್ಯಂತ ಸಾಧಾರಣವಾದುದನ್ನೇ ಆಯ್ದುಕೊಂಡಿದ್ದೇನೆ. ಆದರೆ ನಾನು ಇಲ್ಲೇ ಬೀಡು ಬಿಟ್ಟಿರುವ ವಿಚಾರ ಜನರನ್ನು ನೋಯಿಸಬಹುದು. ನಾನು ಚೇತರಿಸುತ್ತಲೇ ಈ ಮನೆಯನ್ನು ಬಿಟ್ಟು ಹೋಗುವೆನೆಂದು ಕ್ಯೂಬಾದ ಜನತೆಗೆ ಮಾತು ಕೊಡುತ್ತೇನೆ. ಸುಮ್ಮನೆ ನಮ್ಮ ಮಂತ್ರಿ ಮಹೋದಯರ ಬದುಕನ್ನೊಮ್ಮೆ ತಾಳೆ ಹಾಕಿ ನೋಡಿ. ಅಧಿಕಾರ ಮುಗಿದರೂ ವರ್ಷಾನುಗಟ್ಟಲೆ ಜನತೆಯ ತೆರಿಗೆಯ ಹಣವನ್ನು ತಮ್ಮ ಐಷಾರಾಮಿ ಬದುಕಿಗಾಗಿ ಯಾವ ರೀತಿ ದುರುಪಯೋಗಪಡಿಸುತ್ತಾರೆ…

ಸಂಗಾತಿ ಚೆಗುವಾರನನ್ನು 1967ರಲ್ಲಿ ಕೊಲ್ಲಲಾಗುತ್ತದೆ. ಆತನನ್ನು ಯಾವ ಸೈನಿಕ ಕೊಂದಿದ್ದನೋ ಆ ಸೈನಿಕನಿಗೆ ಆತನ ವೃದ್ದಾಪ್ಯದಲ್ಲಿ ಅನಾರೋಗ್ಯ ಕಾಡಿದಾಗ ಆತನಿಗೆ ಚಿಕಿತ್ಸೆ ನೀಡಿ ಆತನನ್ನು ಗುಣಮುಖವಾಗಿಸಿದ್ದು ಕ್ಯೂಬಾದಲ್ಲಿ ಚೆಗುವಾರ ನ ಹೆಸರಲ್ಲೇ ನಿರ್ಮಿಸಲಾಗಿದ್ದ ಆಸ್ಪತ್ರೆಯಲ್ಲಿ. ‘ಚೆ’ಯ ಸಂಗಾತಿ ಕ್ಯೂಬಾದ ಅಂದಿನ ಅಧ್ಯಕ್ಷ ಫಿಡೆಲ್ ಕಾಸ್ಟ್ರೋನಿಗೆ ಆತ ತನ್ನ ಸಂಗಾತಿ ಚೆ ಯನ್ನು ಕೊಂದ ಸೈನಿಕ ಎಂಬ ಸತ್ಯ ಗೊತ್ತಿದ್ದರೂ ಆತನಿಗೆ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಚೆ ಮತ್ತು ಫಿಡೆಲ್ ಯುದ್ಧಗಳು ಯುದ್ಧಭೂಮಿಗೆ ಮಾತ್ರ ಸೀಮಿತ ಎಂದು ಅಚಲವಾಗಿ ನಂಬಿದ್ದರು. ಫಿಡೆಲ್ ಪ್ರಕಾರ ಚೆ ಯನ್ನು ಕೊಂದಿದ್ದ ಆ ಸೈನಿಕ ಅಂದು ತನ್ನ ಸೇನೆಯ ಪರವಾಗಿ ತನ್ನ ಜವಾಬ್ದಾರಿಯನ್ನು ನಿರ್ವಹಿಸಿದ್ದ.

ಚೆ ಎಂದರೆ ಓದಿದಷ್ಟೂ ಮತ್ತೆ ಮತ್ತೆ ಓದಿಸುವ ಒಂದು ವಿಸ್ಮಯ ಗ್ರಂಥ. ಕ್ರಾಂತಿಕಾರಿಗೆ ಸಾವಿಲ್ಲ… ಆತ ಸದಾ ಜನರ ಮನದಲ್ಲಿ ಅಜರಾಮರ… ಎಂಬುವುದಕ್ಕೆ ಆಧುನಿಕ ಜಗತ್ತಿನಲ್ಲಿ ಚೆ ಒಂದು ನಿದರ್ಶನ..
ಕಾಮ್ರೇಡ್…. ಚೆಗುವಾರ… ನಿನಗಿದೋ ಕ್ರಾಂತಿಯ ಕೆಂಪು ಸಲಾಂ.


ಇದನ್ನೂ ಓದಿ: “ಅಪ್ಪನಿಂದ ಒಂದು ದೊಡ್ಡ ಮುತ್ತು!”: ಅಪ್ಪನ ಕುರಿತು ಆಪ್ತವಾಗಿ ಮಾತಾಡಿದ ಚೆಗೆವೆರಾನ ಮಗಳು ಅಲೈದಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...