Homeಮುಖಪುಟಚೆಗುವಾರ ನೆನಪು: ಸಂಗಾತಿ 'ಚೆ' ಎಂಬ ವಿಸ್ಮಯಕ್ಕೆ ಸಾವಿಲ್ಲ..

ಚೆಗುವಾರ ನೆನಪು: ಸಂಗಾತಿ ‘ಚೆ’ ಎಂಬ ವಿಸ್ಮಯಕ್ಕೆ ಸಾವಿಲ್ಲ..

ಕ್ಯೂಬಾ ವಿಮೋಚನಾ ಹೋರಾಟದ ಮಹಾದಂಡನಾಯಕನಾಗಿ ಕಾರ್ಯನಿರ್ವಹಿಸಿದ ಚೆ ಕ್ಯೂಬಾ ವಿಮೋಚನೆಯಾದ ಬಳಿಕ ಅಧಿಕಾರದ ಕುರ್ಚಿಯಲ್ಲಿ ಆಸೀನನಾಗಿ ಸುಖಃ ಅನುಭವಿಸಬಹುದಿತ್ತು. ಆತನಿಗೆ ಉನ್ನತೋನ್ನತ ಸ್ಥಾನಗಳು ಒದಗಿಬಂದರೂ ಆತ ಎಂದೂ ‌ಮೈ ಮರೆಯಲಿಲ್ಲ. ಕ್ಯೂಬಾದ ಮಂತ್ರಿಯಾಗಿಯೂ ಕಬ್ಬಿನ ಗದ್ದೆಗಳಲ್ಲಿ ಅತೀ ಸಾಮಾನ್ಯ ರೈತನಂತೆ ದುಡಿದ.

- Advertisement -
- Advertisement -

ಸಂಗಾತಿ ಅರ್ನೆಸ್ಟೋ ಚೆಗುವಾರ ಅವರನ್ನು ಕ್ಯೂಬನ್ ಕ್ರಾಂತಿಕಾರಿಯೆನ್ನುವುದು ಆತನ ವ್ಯಕ್ತಿತ್ವವನ್ನು ಸಂಕುಚಿತಗೊಳಿಸಿದಂತೆ. ಆತ ಅರ್ಜೆಂಟೈನಾದಲ್ಲಿ ಹುಟ್ಟಿದ… ಕ್ಯೂಬಾದಲ್ಲಿ ತನ್ನ ಬದುಕಿನ ಹೆಚ್ಚಿನ ವರ್ಷಗಳನ್ನು ಕಳೆದು ಕ್ರಾಂತಿಯಲ್ಲಿ ಪ್ರಮುಖ ಪಾತ್ರ ವಹಿಸಿದ. ಕೊನೆಗೆ ಬೊಲಿವಿಯಾದಲ್ಲಿ ಕಾಂತ್ರಿ ಸಾಧಿಸಲು ಹೊರಟು ಹುತಾತ್ಮನಾದ.

ಆದರೆ ಆತ ಯಾವುದೇ ಒಂದು ದೇಶಕ್ಕೆ ಮಾತ್ರ ಸೀಮಿತವಾಗಲಿಲ್ಲ… ಆತನ ಪ್ರಭಾವ ಲ್ಯಾಟಿನ್ ಅಮೆರಿಕಾದ ಹೆಚ್ಚು ಕಡಿಮೆ ಎಲ್ಲೆಡೆಯ ವಿಮೋಚನಾ ಹೋರಾಟದಲ್ಲಿತ್ತು. ಆತ ಕ್ರಾಂತಿಯ ಅದೆಂತಹ ಅದಮ್ಯ ಚೇತನವೆಂದರೆ ಜಗತ್ತಿನ ಯಾವುದೇ ಮೂಲೆಯಲ್ಲಿಯಾದರೂ ಅನ್ಯಾಯ, ಶೋಷಣೆ, ದೌರ್ಜನ್ಯದ ವಿರುದ್ಧ ಯಾರು ಹೋರಾಡುತ್ತಾರೋ…. ತಮ್ಮ ನಾಡಿನ ವಿಮೋಚನೆಗಾಗಿ ಯಾರು ಹೋರಾಡುತ್ತಾರೋ… ಅವರೆಲ್ಲರೂ ನನ್ನ ಸಂಗಾತಿಗಳು ಎಂದು ಘೋಷಿಸಿದ್ದ.

ಆತ ಹುತಾತ್ಮನಾಗಿ ಸುಮಾರು ಐವತ್ತೈದು ವರ್ಷಗಳಾದರೂ ಆತ ಇಂದಿಗೂ ಓರ್ವ ಸೆಲೆಬ್ರಿಟಿಯಾಗಿ ಜನಮಾನಸದಲ್ಲಿ ಅಚ್ಚಳಿಯದೇ ಉಳಿದಿದ್ದಾನೆ. ಇನ್ನೂ ವಿಚಿತ್ರವೆಂದರೆ ನಮ್ಮ ದೇಶದಲ್ಲಿ ಆತನ ಸಿದ್ಧಾಂತದ ಕಟುವಿರೋಧಿಗಳಾದ ಬಲಪಂಥೀಯ ಯುವಕರೂ ಆತನ ಭಾವಚಿತ್ರವಿರುವ ಟೀ ಶರ್ಟ್ ಧರಿಸುತ್ತಾರೆ…. ಕ್ಯಾಪ್ ಧರಿಸುತ್ತಾರೆ… ಅವರ್ಯಾರೂ ಆತನನ್ನು ಓದಿರಲು ಸಾಧ್ಯವಿಲ್ಲ… ಮತ್ತು ಜಗತ್ತಿನಾದ್ಯಂತದ ಎಡಪಂಥೀಯ ಚಳವಳಿಗಾರರಿಗೆ ಆತ ಓರ್ವ ರೋಲ್ ಮಾಡೆಲ್‌ ಆಗಿ ಇಂದಿಗೂ ಪ್ರಸ್ತುತ.

ಚೆ ಮೂಲತಃ ಓರ್ವ ಚರ್ಮರೋಗ ಶಾಸ್ತ್ರದಲ್ಲಿ ಪರಿಣತಿ ಪಡೆದ ವೈದ್ಯ. ಒಂದು ಕಾಲಕ್ಕೆ ಆತ ತಾನೋರ್ವ ಮಹಾನ್ ವೈದ್ಯಕೀಯ ಸಂಶೋಧಕನಾಗಬೇಕೆಂಬ ಕನಸು ಕಂಡವನು. ಆತ ತಾನು ಬದಲಾದ ಬಗೆಯನ್ನು ತನ್ನ ದಿನಚರಿಯಲ್ಲಿ ಹೀಗೆ ಬರೆಯುತ್ತಾನೆ

“ಕ್ರಾಂತಿಯ ಹಂಬಲ ಹೋರಾಟಗಳಲ್ಲಿ ನನ್ನನ್ನು ನಾನು ತೊಡಗಿಸಿಕೊಂಡು ಪಡೆದ ಪಕ್ವ ದೃಷ್ಟಿಕೋನ ನನ್ನ ಹಿಂದಿನ ವೈದ್ಯಕೀಯ ವಿದ್ಯಾರ್ಥಿ ದೆಸೆಯಲ್ಲಿ ಇರಲಿಲ್ಲ. ನಾನು ಎಲ್ಲರಂತೆ ಯಶಸ್ಸಿಗೆ ಆಶಿಸಿದೆ. ನಾನೊಬ್ಬ ಪ್ರಸಿದ್ಧ ಸಂಶೋಧಕನಾಗಿ , ಬಿಡುವಿಲ್ಲದೇ ದುಡಿದು, ಮಾನವ ಜೀವಿಗಳೆಲ್ಲರಿಗೂ ಲಾಭವಾಗುವಂತಹ ಏನಾದರೂ ಸಂಶೋಧನೆ ಮಾಡುವ ಕನಸು ಕಾಣುತ್ತಿದ್ದೆ. ಆದರೆ ಇವೆಲ್ಲಾ ವೈಯಕ್ತಿಕ ಯಶಸ್ಸಿಗಾಗಿ ಕಟ್ಟಿದ ಕನಸುಗಳು.ನಮ್ಮೆಲ್ಲರಂತೆ ನಾನೂ ಸಹ ನಮ್ಮ ಪರಿಸರದಿಂದ ರೂಪಿತವಾದ ವ್ಯಕ್ತಿಯಾಗಿದ್ದೆ. ದಾರಿದ್ರ್ಯದಿಂದಾಗಿ, ಹೇಗೆ ತಂದೆ ತಾಯಿಯರು ತಮ್ಮ ಮಕ್ಕಳ ರೋಗಗಳಿಗೆ ಔಷಧಿ ಕೊಡಲಾರದಾಗಿದ್ದರೆಂಬುದನ್ನು ಕಂಡೆ, ಹಸಿವೆ ಮತ್ತು ನರಳಿಕೆಗಳಿಂದ ಪೀಡಿತನಾದ ತಂದೆ ತನ್ನ ಮಗು ಸಾಯುವುದನ್ನು ನಿರ್ವಿಕಾರವಾಗಿ ಸಾಯುವುದನ್ನು ಸಹಿಸಿಕೊಳ್ಳುವಷ್ಟು ಪಶುಪ್ರಾಯನಾಗಿ ಮನುಷ್ಯನು ಅಧಃಪತನಕ್ಕೆ ಜಾರುವುದನ್ನು ಕಂಡೆ. ಪ್ರಸಿದ್ಧ ಸಂಶೋಧಕನಾಗುವುದಕ್ಕಿಂತ ಅಥವಾ ಆರೋಗ್ಯ ಶಾಸ್ತ್ರಕ್ಕೆ ಒಂದು ಅಮೂಲ್ಯ ಕೊಡುಗೆ ಕೊಡುವುದಕ್ಕಿಂತಲೂ ಯಾವ ರೀತಿಯಲ್ಲೂ ಕನಿಷ್ಟವೆಂದು ಹೇಳಲಾಗದ ಜೀವನದ ಧ್ಯೇಯ ಇನ್ನೊಂದು ಇದೆಯೆಂದು ನಾನು ಕಂಡುಕೊಂಡೆ . ಆಗ ಈ ಜನರ ಸಹಾಯಕ್ಕೆ ನಾನು ಒದಗಬೇಕೆಂಬ ಜ್ಞಾನೋದಯವಾಗಿತ್ತು.”

ಚೆ ಒಂದರ್ಥದಲ್ಲಿ ವಿಶ್ವ ಸಂಚಾರಿ. ಆತ ತನ್ನ ಸಂಚಾರದಲ್ಲಿ ಕಂಡುಕೊಂಡ ಮಾನವಕುಲದ ಹಸಿವು-ನೋವು-ಸಂಕಟ-ನರಳಿಕೆಗಳು ಆತನ ಬದುಕಿನ ಪಥವನ್ನು ಬದಲಿಸಿದವು. ಅಪ್ಪಟ ಮಾನವತಾವಾದಿಯಾಗಿದ್ದ, ಸೂಕ್ಷ್ಮ ಸಂವೇದನೆಯ ವ್ಯಕ್ತಿಯಾಗಿದ್ದ ಚೆ ವಿಮೋಚನಾ ಹೋರಾಟಕ್ಕೊಂದು ಪರ್ಯಾಯ ಹೆಸರೇ ಆಗಿ ಪರಿವರ್ತಿತಗೊಂಡಿದ್ದರ ಹಿಂದೆ ಇರುವುದೇ ಆತ ಕಂಡು ಕೊಂಡ ಸತ್ಯಗಳು.

ಕ್ಯೂಬಾ ವಿಮೋಚನಾ ಹೋರಾಟದ ಮಹಾದಂಡನಾಯಕನಾಗಿ ಕಾರ್ಯನಿರ್ವಹಿಸಿದ ಚೆ ಕ್ಯೂಬಾ ವಿಮೋಚನೆಯಾದ ಬಳಿಕ ಅಧಿಕಾರದ ಕುರ್ಚಿಯಲ್ಲಿ ಆಸೀನನಾಗಿ ಸುಖಃ ಅನುಭವಿಸಬಹುದಿತ್ತು. ಆತನಿಗೆ ಉನ್ನತೋನ್ನತ ಸ್ಥಾನಗಳು ಒದಗಿಬಂದರೂ ಆತ ಎಂದೂ ‌ಮೈ ಮರೆಯಲಿಲ್ಲ. ಕ್ಯೂಬಾದ ಮಂತ್ರಿಯಾಗಿಯೂ ಕಬ್ಬಿನ ಗದ್ದೆಗಳಲ್ಲಿ ಅತೀ ಸಾಮಾನ್ಯ ರೈತನಂತೆ ದುಡಿದ.

ಚೆ ಕ್ಯೂಬಾದಲ್ಲಿ ಅಧಿಕಾರದ್ದಲ್ಲಿದ್ದಾಗ ಅನಾರೋಗ್ಯ ಪೀಡಿತನಾದ. ಆತನಿಗೆ ವಿಶ್ರಾಂತಿಗಾಗಿ ಒಳ್ಳೆಯ ವಸತಿಯ ಅಗತ್ಯ ಬಿತ್ತು. ಆದರೆ ಅದಕ್ಕೆ ತಗಲುವ ಆರ್ಥಿಕ ಚೈತನ್ಯ ಆತನಲ್ಲಿರಲಿಲ್ಲ.ಸರಕಾರ‌ ಆತನಿಗೆ ಉತ್ತಮ ವಸತಿಯ ವ್ಯವಸ್ಥೆ ಮಾಡಿತು. ಆಗ ಚೆ ಹೇಳಿದ ಮಾತು ಇದು ಅತ್ಯಂತ ಐಷಾರಾಮಿ ವಿಲ್ಲಾ. ಇದರಲ್ಲಿ ನಾನು ಅತ್ಯಂತ ಸಾಧಾರಣವಾದುದನ್ನೇ ಆಯ್ದುಕೊಂಡಿದ್ದೇನೆ. ಆದರೆ ನಾನು ಇಲ್ಲೇ ಬೀಡು ಬಿಟ್ಟಿರುವ ವಿಚಾರ ಜನರನ್ನು ನೋಯಿಸಬಹುದು. ನಾನು ಚೇತರಿಸುತ್ತಲೇ ಈ ಮನೆಯನ್ನು ಬಿಟ್ಟು ಹೋಗುವೆನೆಂದು ಕ್ಯೂಬಾದ ಜನತೆಗೆ ಮಾತು ಕೊಡುತ್ತೇನೆ. ಸುಮ್ಮನೆ ನಮ್ಮ ಮಂತ್ರಿ ಮಹೋದಯರ ಬದುಕನ್ನೊಮ್ಮೆ ತಾಳೆ ಹಾಕಿ ನೋಡಿ. ಅಧಿಕಾರ ಮುಗಿದರೂ ವರ್ಷಾನುಗಟ್ಟಲೆ ಜನತೆಯ ತೆರಿಗೆಯ ಹಣವನ್ನು ತಮ್ಮ ಐಷಾರಾಮಿ ಬದುಕಿಗಾಗಿ ಯಾವ ರೀತಿ ದುರುಪಯೋಗಪಡಿಸುತ್ತಾರೆ…

ಸಂಗಾತಿ ಚೆಗುವಾರನನ್ನು 1967ರಲ್ಲಿ ಕೊಲ್ಲಲಾಗುತ್ತದೆ. ಆತನನ್ನು ಯಾವ ಸೈನಿಕ ಕೊಂದಿದ್ದನೋ ಆ ಸೈನಿಕನಿಗೆ ಆತನ ವೃದ್ದಾಪ್ಯದಲ್ಲಿ ಅನಾರೋಗ್ಯ ಕಾಡಿದಾಗ ಆತನಿಗೆ ಚಿಕಿತ್ಸೆ ನೀಡಿ ಆತನನ್ನು ಗುಣಮುಖವಾಗಿಸಿದ್ದು ಕ್ಯೂಬಾದಲ್ಲಿ ಚೆಗುವಾರ ನ ಹೆಸರಲ್ಲೇ ನಿರ್ಮಿಸಲಾಗಿದ್ದ ಆಸ್ಪತ್ರೆಯಲ್ಲಿ. ‘ಚೆ’ಯ ಸಂಗಾತಿ ಕ್ಯೂಬಾದ ಅಂದಿನ ಅಧ್ಯಕ್ಷ ಫಿಡೆಲ್ ಕಾಸ್ಟ್ರೋನಿಗೆ ಆತ ತನ್ನ ಸಂಗಾತಿ ಚೆ ಯನ್ನು ಕೊಂದ ಸೈನಿಕ ಎಂಬ ಸತ್ಯ ಗೊತ್ತಿದ್ದರೂ ಆತನಿಗೆ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು. ಚೆ ಮತ್ತು ಫಿಡೆಲ್ ಯುದ್ಧಗಳು ಯುದ್ಧಭೂಮಿಗೆ ಮಾತ್ರ ಸೀಮಿತ ಎಂದು ಅಚಲವಾಗಿ ನಂಬಿದ್ದರು. ಫಿಡೆಲ್ ಪ್ರಕಾರ ಚೆ ಯನ್ನು ಕೊಂದಿದ್ದ ಆ ಸೈನಿಕ ಅಂದು ತನ್ನ ಸೇನೆಯ ಪರವಾಗಿ ತನ್ನ ಜವಾಬ್ದಾರಿಯನ್ನು ನಿರ್ವಹಿಸಿದ್ದ.

ಚೆ ಎಂದರೆ ಓದಿದಷ್ಟೂ ಮತ್ತೆ ಮತ್ತೆ ಓದಿಸುವ ಒಂದು ವಿಸ್ಮಯ ಗ್ರಂಥ. ಕ್ರಾಂತಿಕಾರಿಗೆ ಸಾವಿಲ್ಲ… ಆತ ಸದಾ ಜನರ ಮನದಲ್ಲಿ ಅಜರಾಮರ… ಎಂಬುವುದಕ್ಕೆ ಆಧುನಿಕ ಜಗತ್ತಿನಲ್ಲಿ ಚೆ ಒಂದು ನಿದರ್ಶನ..
ಕಾಮ್ರೇಡ್…. ಚೆಗುವಾರ… ನಿನಗಿದೋ ಕ್ರಾಂತಿಯ ಕೆಂಪು ಸಲಾಂ.


ಇದನ್ನೂ ಓದಿ: “ಅಪ್ಪನಿಂದ ಒಂದು ದೊಡ್ಡ ಮುತ್ತು!”: ಅಪ್ಪನ ಕುರಿತು ಆಪ್ತವಾಗಿ ಮಾತಾಡಿದ ಚೆಗೆವೆರಾನ ಮಗಳು ಅಲೈದಾ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...