Homeಮುಖಪುಟವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

ವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

- Advertisement -
- Advertisement -

ಮುಂಬೈ ಕರಾವಳಿಯ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್‌ಸಿಬಿ ದಾಳಿ ನಡೆಸಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದ ಪ್ರಕರಣದ ವಿವಾದಾತ್ಮಕ ಸ್ವತಂತ್ರ ಸಾಕ್ಷಿಯಾಗಿದ್ದ ಕೆ.ಪಿ ಗೋಸಾವಿಯನ್ನು ವಂಚನೆ ಪ್ರಕರಣದಲ್ಲಿ ಪುಣೆಯಲ್ಲಿ ಬಂಧಿಸಲಾಗಿದೆ.

ಗೋಸಾವಿ ಎನ್‌ಸಿಬಿಯ ಸಾಕ್ಷಿಯಾಗಿದ್ದರೂ ಇಷ್ಟು ದಿನ ನಾಪತ್ತೆಯಾಗಿದ್ದ. 2018ರ ವಂಚನೆ ಪ್ರಕರಣ ಆತನ ಮೇಲಿದ್ದು ಆತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿತ್ತು. ತನಗೆ ಮಹಾರಾಷ್ಟ್ರದಲ್ಲಿ ಜೀವ ಬೆದರಿಕೆಯಿರುವುದರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ಈತ ಮೂರು ದಿನದ ಹಿಂದೆ ಹೇಳಿಕೆ ನೀಡಿದ್ದ. ಆತನ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದರು.

ತನ್ನನ್ನು ಖಾಸಗಿ ತನಿಖಾಧಿಕಾರಿ ಎಂದು ಹೇಳಿಕೊಳ್ಳುವ ಕೆ.ಪಿ. ಗೋಸಾವಿ, ಬಂಧಿತ ಆರೋಪಿ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಮತ್ತು ಹಲವಾರು ವಿಡಿಯೊಗಳನ್ನು ತೆಗೆದುಕೊಳ್ಳುವುದು ಮಾಡಿದ್ದರು. ಈತ ಪ್ರಕರಣದ ‘ಸ್ವತಂತ್ರ ಸಾಕ್ಷಿ’ ಎಂದು ಎನ್‌ಸಿಬಿ ಹೇಳಿತ್ತು. ಸದ್ಯ ದಾಳಿ ನಡೆದ ಅಕ್ಟೋಬರ್‌ 2 ರಂದು ಕೇಸ್‌ನ ಸ್ವತಂತ್ರ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಬಂದರಿನಲ್ಲಿರುವ ಎನ್‌ಸಿಬಿ ಕಚೇರಿಯ ಒಳಗೆ ಎನ್‌ಸಿಬಿ ಅಧಿಕಾರಿಗಳೊಟ್ಟಿಗೆ ಕಾಣಿಸಿಕೊಂಡಿರುವ ಪೋಟೋಗಳು ವೈರಲ್ ಆಗಿವೆ. ಅದರೊಂದಿಗೆ ಎನ್‌ಸಿಬಿ ದಾಳಿಗೆ ಮಾಹಿತಿ ಒದಗಿಸಿದ್ದಾರೆ ಎನ್ನಲಾಗಿರುವ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಅಂದು ದಾಳಿಯಲ್ಲಿ ಬಂಧಿಸಲ್ಪಟ್ಟ ಇಬ್ಬರೊಂದಿಗೆ ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಮಾತುಕತೆ ನಡೆಸುತ್ತಿರುವುದು ವೈರಲ್ ಆಗಿದೆ.

PC: NDTV

PC: NDTV (ದಾಳಿ ದಿನ ಮುಂಬೈ ಬಂದರಿನ ಒಳಗಿನ ಫೋಟೋಗಳು, ಕೆಪಿ ಗೋಸಾವಿ ಜೊತೆ ಸಮೀರ್ ವಾಂಖೆಡೆ ಕಾಣಿಸಿಕೊಂಡಿರುವುದು)

ಇತ್ತ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಗೋಸಾವಿ ಕೇವಲ ಮಾಹಿತಿದಾರ ಮತ್ತು ಸಾಕ್ಷಿಯಾಗಿದ್ದಲ್ಲಿ, ಎನ್‌ಸಿಬಿ ದಾಳಿಯಲ್ಲಿ ಭಾಗವಹಿಸಲು ಮತ್ತು ಬಂಧಿತರೊಂದಿಗೆ ಸಂವಹನ ನಡೆಸಲು ಹೇಗೆ  ಅನುಮತಿ ನೀಡಲಾಗಿದೆ ಎಂಬುದು ಹಲವರ ಪ್ರಶ್ನೆಯಾಗಿದೆ. ಹಾಗಾಗಿ ಇಡೀ ಪ್ರಕರಣವೇ ನಕಲಿ ಎಂದು ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ.

ಆರ್ಯನ್ ಖಾನ್ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಪಿ ಗೋಸಾವಿಯ ವೈಯಕ್ತಿಕ ಅಂಗರಕ್ಷಕ ಎಂದು ಹೇಳಿಕೊಳ್ಳುವ ಪ್ರಭಾಕರ್ ಸೈಲ್, ಅಕ್ಟೋಬರ್ 3 ರಂದು ಸ್ಯಾಮ್ ಡಿಸೋಜಾ ಮತ್ತು ಕೆ.ಪಿ ಗೋಸಾವಿ ನಡುವೆ 18 ಕೋಟಿ ರೂಪಾಯಿ ಒಪ್ಪಂದದ ಬಗ್ಗೆ ನಡೆದ ಸಂಭಾಷಣೆಯನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ. ಇದರಲ್ಲಿ 8 ಕೋಟಿ ರೂಪಾಯಿಗಳನ್ನು ಎನ್‌ಸಿಬಿ ಅಧಿಕಾರಿ  ಸಮೀರ್ ವಾಂಖೆಡೆಗೆ ನೀಡಬೇಕಾಗುತ್ತದೆ ಎಂದು ಹೇಳಿದ್ದರು ಎಂದು ಆರೋಪಿಸಿದ್ದಾರೆ.

ಅಕ್ಟೋಬರ್ 3 ರ ಸಂಜೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ, ಕೆ.ಪಿ ಗೋಸಾವಿ ಮತ್ತು ಇನ್ನೊಬ್ಬ ವ್ಯಕ್ತಿ ಸ್ಯಾಮ್ ಡಿಸೋಜಾ ಅವರು ಕಾರಿನೊಳಗೆ 15 ನಿಮಿಷಗಳ ಸಭೆ ನಡೆಸಿದರು ಎಂದಿದ್ದಾರೆ. ಈ  ಪ್ರಕರಣದಲ್ಲಿ ಎನ್‌ಸಿಬಿ ಹೆಸರಿಸಿರುವ ಒಂಬತ್ತು ಸಾಕ್ಷಿಗಳಲ್ಲಿ ಪ್ರಭಾಕರ್ ಸೈಲ್ ಕೂಡ ಒಬ್ಬರು. ಆದರೆ ಈ ಆರೋಪವನ್ನು ಎನ್‌ಸಿಬಿ ನಿರಾಕರಿಸಿದೆ.


ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣದ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಮಾತುಕತೆಯ ಪೋಟೋಗಳು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...