Homeಮುಖಪುಟವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

ವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

- Advertisement -
- Advertisement -

ಮುಂಬೈ ಕರಾವಳಿಯ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್‌ಸಿಬಿ ದಾಳಿ ನಡೆಸಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದ ಪ್ರಕರಣದ ವಿವಾದಾತ್ಮಕ ಸ್ವತಂತ್ರ ಸಾಕ್ಷಿಯಾಗಿದ್ದ ಕೆ.ಪಿ ಗೋಸಾವಿಯನ್ನು ವಂಚನೆ ಪ್ರಕರಣದಲ್ಲಿ ಪುಣೆಯಲ್ಲಿ ಬಂಧಿಸಲಾಗಿದೆ.

ಗೋಸಾವಿ ಎನ್‌ಸಿಬಿಯ ಸಾಕ್ಷಿಯಾಗಿದ್ದರೂ ಇಷ್ಟು ದಿನ ನಾಪತ್ತೆಯಾಗಿದ್ದ. 2018ರ ವಂಚನೆ ಪ್ರಕರಣ ಆತನ ಮೇಲಿದ್ದು ಆತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿತ್ತು. ತನಗೆ ಮಹಾರಾಷ್ಟ್ರದಲ್ಲಿ ಜೀವ ಬೆದರಿಕೆಯಿರುವುದರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ಈತ ಮೂರು ದಿನದ ಹಿಂದೆ ಹೇಳಿಕೆ ನೀಡಿದ್ದ. ಆತನ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದರು.

ತನ್ನನ್ನು ಖಾಸಗಿ ತನಿಖಾಧಿಕಾರಿ ಎಂದು ಹೇಳಿಕೊಳ್ಳುವ ಕೆ.ಪಿ. ಗೋಸಾವಿ, ಬಂಧಿತ ಆರೋಪಿ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಮತ್ತು ಹಲವಾರು ವಿಡಿಯೊಗಳನ್ನು ತೆಗೆದುಕೊಳ್ಳುವುದು ಮಾಡಿದ್ದರು. ಈತ ಪ್ರಕರಣದ ‘ಸ್ವತಂತ್ರ ಸಾಕ್ಷಿ’ ಎಂದು ಎನ್‌ಸಿಬಿ ಹೇಳಿತ್ತು. ಸದ್ಯ ದಾಳಿ ನಡೆದ ಅಕ್ಟೋಬರ್‌ 2 ರಂದು ಕೇಸ್‌ನ ಸ್ವತಂತ್ರ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಬಂದರಿನಲ್ಲಿರುವ ಎನ್‌ಸಿಬಿ ಕಚೇರಿಯ ಒಳಗೆ ಎನ್‌ಸಿಬಿ ಅಧಿಕಾರಿಗಳೊಟ್ಟಿಗೆ ಕಾಣಿಸಿಕೊಂಡಿರುವ ಪೋಟೋಗಳು ವೈರಲ್ ಆಗಿವೆ. ಅದರೊಂದಿಗೆ ಎನ್‌ಸಿಬಿ ದಾಳಿಗೆ ಮಾಹಿತಿ ಒದಗಿಸಿದ್ದಾರೆ ಎನ್ನಲಾಗಿರುವ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಅಂದು ದಾಳಿಯಲ್ಲಿ ಬಂಧಿಸಲ್ಪಟ್ಟ ಇಬ್ಬರೊಂದಿಗೆ ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಮಾತುಕತೆ ನಡೆಸುತ್ತಿರುವುದು ವೈರಲ್ ಆಗಿದೆ.

PC: NDTV

PC: NDTV (ದಾಳಿ ದಿನ ಮುಂಬೈ ಬಂದರಿನ ಒಳಗಿನ ಫೋಟೋಗಳು, ಕೆಪಿ ಗೋಸಾವಿ ಜೊತೆ ಸಮೀರ್ ವಾಂಖೆಡೆ ಕಾಣಿಸಿಕೊಂಡಿರುವುದು)

ಇತ್ತ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಗೋಸಾವಿ ಕೇವಲ ಮಾಹಿತಿದಾರ ಮತ್ತು ಸಾಕ್ಷಿಯಾಗಿದ್ದಲ್ಲಿ, ಎನ್‌ಸಿಬಿ ದಾಳಿಯಲ್ಲಿ ಭಾಗವಹಿಸಲು ಮತ್ತು ಬಂಧಿತರೊಂದಿಗೆ ಸಂವಹನ ನಡೆಸಲು ಹೇಗೆ  ಅನುಮತಿ ನೀಡಲಾಗಿದೆ ಎಂಬುದು ಹಲವರ ಪ್ರಶ್ನೆಯಾಗಿದೆ. ಹಾಗಾಗಿ ಇಡೀ ಪ್ರಕರಣವೇ ನಕಲಿ ಎಂದು ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ.

ಆರ್ಯನ್ ಖಾನ್ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಪಿ ಗೋಸಾವಿಯ ವೈಯಕ್ತಿಕ ಅಂಗರಕ್ಷಕ ಎಂದು ಹೇಳಿಕೊಳ್ಳುವ ಪ್ರಭಾಕರ್ ಸೈಲ್, ಅಕ್ಟೋಬರ್ 3 ರಂದು ಸ್ಯಾಮ್ ಡಿಸೋಜಾ ಮತ್ತು ಕೆ.ಪಿ ಗೋಸಾವಿ ನಡುವೆ 18 ಕೋಟಿ ರೂಪಾಯಿ ಒಪ್ಪಂದದ ಬಗ್ಗೆ ನಡೆದ ಸಂಭಾಷಣೆಯನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ. ಇದರಲ್ಲಿ 8 ಕೋಟಿ ರೂಪಾಯಿಗಳನ್ನು ಎನ್‌ಸಿಬಿ ಅಧಿಕಾರಿ  ಸಮೀರ್ ವಾಂಖೆಡೆಗೆ ನೀಡಬೇಕಾಗುತ್ತದೆ ಎಂದು ಹೇಳಿದ್ದರು ಎಂದು ಆರೋಪಿಸಿದ್ದಾರೆ.

ಅಕ್ಟೋಬರ್ 3 ರ ಸಂಜೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ, ಕೆ.ಪಿ ಗೋಸಾವಿ ಮತ್ತು ಇನ್ನೊಬ್ಬ ವ್ಯಕ್ತಿ ಸ್ಯಾಮ್ ಡಿಸೋಜಾ ಅವರು ಕಾರಿನೊಳಗೆ 15 ನಿಮಿಷಗಳ ಸಭೆ ನಡೆಸಿದರು ಎಂದಿದ್ದಾರೆ. ಈ  ಪ್ರಕರಣದಲ್ಲಿ ಎನ್‌ಸಿಬಿ ಹೆಸರಿಸಿರುವ ಒಂಬತ್ತು ಸಾಕ್ಷಿಗಳಲ್ಲಿ ಪ್ರಭಾಕರ್ ಸೈಲ್ ಕೂಡ ಒಬ್ಬರು. ಆದರೆ ಈ ಆರೋಪವನ್ನು ಎನ್‌ಸಿಬಿ ನಿರಾಕರಿಸಿದೆ.


ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣದ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಮಾತುಕತೆಯ ಪೋಟೋಗಳು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಡಿಯೋ ವೈರಲ್ : ಡಿಜಿಪಿ ರಾಮಚಂದ್ರ ರಾವ್ ಅಮಾನತು

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆದ ಬೆನ್ನಲ್ಲೇ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯ (ಡಿಸಿಆರ್‌ಇ) ಡಿಜಿಪಿ ಕೆ.ರಾಮಚಂದ್ರ ರಾವ್ ಅವರನ್ನು ಕರ್ತವ್ಯದಿಂದ ಅಮಾತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. Download ಈಗಾಗಲೇ ಈ...

ಡಿಜಿಪಿ ರಾಮಚಂದ್ರ ರಾವ್ ವಿಡಿಯೋ ಪ್ರಕರಣ | ವಿಚಾರಣೆ ನಡೆಸಿ ಶಿಸ್ತು ಕ್ರಮ : ಸಿಎಂ ಸಿದ್ದರಾಮಯ್ಯ

ಡಿಜಿಪಿ ರಾಮಚಂದ್ರರಾವ್ ಅವರು ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎನ್ನಲಾದ ವಿಡಿಯೋಗಳು ವೈರಲ್ ಆಗಿದ್ದು, ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಚಾರಣೆ ನಡೆಸಿ, ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದರು. ಬೆಳಗಾವಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ...

ಕರ್ನಲ್ ಖುರೇಷಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ‘ವಿಜಯ್ ಶಾ ವಿರುದ್ಧ 2 ವಾರಗಳಲ್ಲಿ ವಿಚಾರಣೆಗೆ ಅನುಮತಿ ನೀಡುವ ಬಗ್ಗೆ ನಿರ್ಧರಿಸಿ’: ಮಧ್ಯಪ್ರದೇಶ ಸರ್ಕಾರಕ್ಕೆ ಸುಪ್ರೀಂ ಸೂಚನೆ

ನವದೆಹಲಿ: ಆಪರೇಷನ್ ಸಿಂಧೂರ್ ನಂತರ ಭಾರತೀಯ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರನ್ನು ಗುರಿಯಾಗಿಸಿಕೊಂಡು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ರಾಜ್ಯ ಸಚಿವ ಕುನ್ವರ್ ವಿಜಯ್ ಶಾ ಅವರ ವಿರುದ್ಧ ಮೊಕದ್ದಮೆ ಹೂಡಲು ಅನುಮತಿ...

ಎಸ್‌ಸಿ/ಎಸ್‌ಟಿ ಕಾಯ್ದೆಯಡಿ ಆರೋಪಗಳನ್ನು ರೂಪಿಸಲು ಸಂತ್ರಸ್ತ ವ್ಯಕ್ತಿಯ ಹೇಳಿಕೆ ಸಾಕು : ಕೇರಳ ಹೈಕೋರ್ಟ್

ಸಾಕ್ಷಿಗಳ ಹೇಳಿಕೆಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ, 2018 ರ ಸೆಕ್ಷನ್ 3(1)(ಆರ್) ಮತ್ತು 3(1)(ಎಸ್‌) ಅಡಿಯಲ್ಲಿ ಅಪರಾಧದ ಅಂಶಗಳನ್ನು ಬಹಿರಂಗಪಡಿಸುವುದಿಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ದೋಷಮುಕ್ತಗೊಳಿಸಲು...

ಕೇರಳ| ಮಹಿಳೆಯಿಂದ ಲೈಂಗಿಕ ಕಿರುಕುಳ ಆರೋಪ; ಅವಮಾನ ಸಹಿಸದೆ ವ್ಯಕ್ತಿ ಆತ್ಮಹತ್ಯೆ

ಮಹಿಳೆಯೊಬ್ಬರಿಗೆ ಬಸ್‌ನಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪದ ವಿಡಿಯೋ ವೈರಲ್ ಆದ ಬಳಿಕ ಮನನೊಂದ ಆರೋಪಿತ ವ್ಯಕ್ತಿಯು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೇರಳದ ಕೋಝಿಕೋಡ್ ಮೂಲದ ವ್ಯಕ್ತಿಯ ಕುಟುಂಬವು ದೂರುದಾರ ಮಹಿಳೆ ವಿರುದ್ಧ...

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣ : ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್

ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ತಂದೆಯ ಕಸ್ಟಡಿ ಸಾವು ಪ್ರಕರಣದಲ್ಲಿ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ (ಜ.19) ವಜಾಗೊಳಿಸಿದೆ....

ತೆಲಂಗಾಣದಲ್ಲಿ ಹೊಸ ಪಕ್ಷ ಸ್ಥಾಪನೆಗೆ ಮುಂದಾದ ಕೆ.ಕವಿತಾ: ಪ್ರಶಾಂತ್ ಕಿಶೋರ್ ಜೊತೆಗೆ ಮಾತುಕತೆ!

ಹೈದರಾಬಾದ್: ಭಾರತ್ ರಾಷ್ಟ್ರ ಸಮಿತಿ (BRS) ಪಕ್ಷದಿಂದ ಉಚ್ಛಾಟಿಸಲಾಗಿದ್ದ ಕೆ.ಕವಿತಾ ಅವರು ತೆಲಂಗಾಣದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪಿಸಲು ಮುಂದಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರಿಯಾಗಿರುವ ಕವಿತಾ ಅವರು ಈ...

ಉತ್ತರ ಪ್ರದೇಶ| ಹಣಕಾಸಿನ ವಿವಾದ: ದಲಿತ ವ್ಯಕ್ತಿಗೆ ಸಾರ್ವಜನಿಕವಾಗಿ ತಲೆ ಬೋಳಿಸಿ ಅಪಮಾನ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ನವಾಬ್‌ಗಂಜ್ ಪ್ರದೇಶದಲ್ಲಿ, ಪಪ್ಪು ದಿವಾಕರ್ ಎಂಬ ದಲಿತ ವ್ಯಕ್ತಿಯನ್ನು ಶನಿವಾರ ಹಣಕಾಸಿನ ವಿವಾದದ ಹಿನ್ನೆಲೆಯಲ್ಲಿ ಹಲ್ಲೆ ನಡೆಸಿ, ತಲೆ ಬೋಳಿಸಿ ಸಾರ್ವಜನಿಕ ಅವಮಾನಕ್ಕೆ ಒಳಪಡಿಸಲಾಗಿದೆ ಎಂದು ಆರೋಪಿಸಲಾಗಿದೆ. ಸಂತ್ರಸ್ತ...

ಎನ್‌ಡಿಟಿವಿ ಪ್ರಕರಣ : ಪ್ರಣಯ್, ರಾಧಿಕಾ ರಾಯ್‌ಗೆ ನೀಡಿದ್ದ ನೋಟಿಸ್ ರದ್ದುಗೊಳಿಸಿದ ಹೈಕೋರ್ಟ್ ; ಐಟಿ ಇಲಾಖೆಗೆ 2 ಲಕ್ಷ ರೂ. ದಂಡ

ಎನ್‌ಡಿಟಿವಿ ಪ್ರವರ್ತಕರಾದ ಆರ್‌ಆರ್‌ಪಿಆರ್ ಹೋಲ್ಡಿಂಗ್‌ಗೆ ನೀಡಿದ ಕೆಲವು ಬಡ್ಡಿರಹಿತ ಸಾಲಗಳಿಗೆ ಸಂಬಂಧಿಸಿದಂತೆ ಮಾರ್ಚ್ 2016ರಲ್ಲಿ ಎನ್‌ಡಿಟಿವಿ ಸ್ಥಾಪಕರಾದ ಪ್ರಣಯ್ ರಾಯ್ ಮತ್ತು ರಾಧಿಕಾ ರಾಯ್ ಅವರಿಗೆ ನೀಡಲಾಗಿದ್ದ ಆದಾಯ ತೆರಿಗೆ ಮರುಮೌಲ್ಯಮಾಪನ ನೋಟಿಸ್‌ಗಳನ್ನು...

ಕುರ್ದಿಶ್‌ ಪಡೆಗಳ ಜೊತೆ ಕದನ ವಿರಾಮ : ಹಲವು ಪ್ರದೇಶಗಳ ಮೇಲೆ ಹಿಡಿತ ಸಾಧಿಸಿದ ಸಿರಿಯಾ ಸೇನೆ

ಕುರ್ದಿಶ್ ನೇತೃತ್ವದ ಸಿರಿಯನ್ ಡೆಮಾಕ್ರಟಿಕ್ ಫೋರ್ಸಸ್ (ಎಸ್‌ಡಿಎಫ್‌) ಜೊತೆಗಿನ ಎರಡು ವಾರಗಳ ಭಾರೀ ಕಾದಾಟದ ನಂತರ, ಸಿರಿಯಾದ ಸರ್ಕಾರಿ ಪಡೆಗಳು ಉತ್ತರ ಮತ್ತು ಈಶಾನ್ಯ ಸಿರಿಯಾದ ಹಲವಾರು ಪ್ರಮುಖ ಪ್ರದೇಶಗಳ ಮೇಲೆ ಹಿಡಿತ...