Homeಮುಖಪುಟವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

ವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

- Advertisement -
- Advertisement -

ಮುಂಬೈ ಕರಾವಳಿಯ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್‌ಸಿಬಿ ದಾಳಿ ನಡೆಸಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದ ಪ್ರಕರಣದ ವಿವಾದಾತ್ಮಕ ಸ್ವತಂತ್ರ ಸಾಕ್ಷಿಯಾಗಿದ್ದ ಕೆ.ಪಿ ಗೋಸಾವಿಯನ್ನು ವಂಚನೆ ಪ್ರಕರಣದಲ್ಲಿ ಪುಣೆಯಲ್ಲಿ ಬಂಧಿಸಲಾಗಿದೆ.

ಗೋಸಾವಿ ಎನ್‌ಸಿಬಿಯ ಸಾಕ್ಷಿಯಾಗಿದ್ದರೂ ಇಷ್ಟು ದಿನ ನಾಪತ್ತೆಯಾಗಿದ್ದ. 2018ರ ವಂಚನೆ ಪ್ರಕರಣ ಆತನ ಮೇಲಿದ್ದು ಆತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿತ್ತು. ತನಗೆ ಮಹಾರಾಷ್ಟ್ರದಲ್ಲಿ ಜೀವ ಬೆದರಿಕೆಯಿರುವುದರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ಈತ ಮೂರು ದಿನದ ಹಿಂದೆ ಹೇಳಿಕೆ ನೀಡಿದ್ದ. ಆತನ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದರು.

ತನ್ನನ್ನು ಖಾಸಗಿ ತನಿಖಾಧಿಕಾರಿ ಎಂದು ಹೇಳಿಕೊಳ್ಳುವ ಕೆ.ಪಿ. ಗೋಸಾವಿ, ಬಂಧಿತ ಆರೋಪಿ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಮತ್ತು ಹಲವಾರು ವಿಡಿಯೊಗಳನ್ನು ತೆಗೆದುಕೊಳ್ಳುವುದು ಮಾಡಿದ್ದರು. ಈತ ಪ್ರಕರಣದ ‘ಸ್ವತಂತ್ರ ಸಾಕ್ಷಿ’ ಎಂದು ಎನ್‌ಸಿಬಿ ಹೇಳಿತ್ತು. ಸದ್ಯ ದಾಳಿ ನಡೆದ ಅಕ್ಟೋಬರ್‌ 2 ರಂದು ಕೇಸ್‌ನ ಸ್ವತಂತ್ರ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಬಂದರಿನಲ್ಲಿರುವ ಎನ್‌ಸಿಬಿ ಕಚೇರಿಯ ಒಳಗೆ ಎನ್‌ಸಿಬಿ ಅಧಿಕಾರಿಗಳೊಟ್ಟಿಗೆ ಕಾಣಿಸಿಕೊಂಡಿರುವ ಪೋಟೋಗಳು ವೈರಲ್ ಆಗಿವೆ. ಅದರೊಂದಿಗೆ ಎನ್‌ಸಿಬಿ ದಾಳಿಗೆ ಮಾಹಿತಿ ಒದಗಿಸಿದ್ದಾರೆ ಎನ್ನಲಾಗಿರುವ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಅಂದು ದಾಳಿಯಲ್ಲಿ ಬಂಧಿಸಲ್ಪಟ್ಟ ಇಬ್ಬರೊಂದಿಗೆ ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಮಾತುಕತೆ ನಡೆಸುತ್ತಿರುವುದು ವೈರಲ್ ಆಗಿದೆ.

PC: NDTV

PC: NDTV (ದಾಳಿ ದಿನ ಮುಂಬೈ ಬಂದರಿನ ಒಳಗಿನ ಫೋಟೋಗಳು, ಕೆಪಿ ಗೋಸಾವಿ ಜೊತೆ ಸಮೀರ್ ವಾಂಖೆಡೆ ಕಾಣಿಸಿಕೊಂಡಿರುವುದು)

ಇತ್ತ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಗೋಸಾವಿ ಕೇವಲ ಮಾಹಿತಿದಾರ ಮತ್ತು ಸಾಕ್ಷಿಯಾಗಿದ್ದಲ್ಲಿ, ಎನ್‌ಸಿಬಿ ದಾಳಿಯಲ್ಲಿ ಭಾಗವಹಿಸಲು ಮತ್ತು ಬಂಧಿತರೊಂದಿಗೆ ಸಂವಹನ ನಡೆಸಲು ಹೇಗೆ  ಅನುಮತಿ ನೀಡಲಾಗಿದೆ ಎಂಬುದು ಹಲವರ ಪ್ರಶ್ನೆಯಾಗಿದೆ. ಹಾಗಾಗಿ ಇಡೀ ಪ್ರಕರಣವೇ ನಕಲಿ ಎಂದು ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ.

ಆರ್ಯನ್ ಖಾನ್ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಪಿ ಗೋಸಾವಿಯ ವೈಯಕ್ತಿಕ ಅಂಗರಕ್ಷಕ ಎಂದು ಹೇಳಿಕೊಳ್ಳುವ ಪ್ರಭಾಕರ್ ಸೈಲ್, ಅಕ್ಟೋಬರ್ 3 ರಂದು ಸ್ಯಾಮ್ ಡಿಸೋಜಾ ಮತ್ತು ಕೆ.ಪಿ ಗೋಸಾವಿ ನಡುವೆ 18 ಕೋಟಿ ರೂಪಾಯಿ ಒಪ್ಪಂದದ ಬಗ್ಗೆ ನಡೆದ ಸಂಭಾಷಣೆಯನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ. ಇದರಲ್ಲಿ 8 ಕೋಟಿ ರೂಪಾಯಿಗಳನ್ನು ಎನ್‌ಸಿಬಿ ಅಧಿಕಾರಿ  ಸಮೀರ್ ವಾಂಖೆಡೆಗೆ ನೀಡಬೇಕಾಗುತ್ತದೆ ಎಂದು ಹೇಳಿದ್ದರು ಎಂದು ಆರೋಪಿಸಿದ್ದಾರೆ.

ಅಕ್ಟೋಬರ್ 3 ರ ಸಂಜೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ, ಕೆ.ಪಿ ಗೋಸಾವಿ ಮತ್ತು ಇನ್ನೊಬ್ಬ ವ್ಯಕ್ತಿ ಸ್ಯಾಮ್ ಡಿಸೋಜಾ ಅವರು ಕಾರಿನೊಳಗೆ 15 ನಿಮಿಷಗಳ ಸಭೆ ನಡೆಸಿದರು ಎಂದಿದ್ದಾರೆ. ಈ  ಪ್ರಕರಣದಲ್ಲಿ ಎನ್‌ಸಿಬಿ ಹೆಸರಿಸಿರುವ ಒಂಬತ್ತು ಸಾಕ್ಷಿಗಳಲ್ಲಿ ಪ್ರಭಾಕರ್ ಸೈಲ್ ಕೂಡ ಒಬ್ಬರು. ಆದರೆ ಈ ಆರೋಪವನ್ನು ಎನ್‌ಸಿಬಿ ನಿರಾಕರಿಸಿದೆ.


ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣದ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಮಾತುಕತೆಯ ಪೋಟೋಗಳು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...

ಬಿಜೆಪಿ ಕಾರ್ಯಕರ್ತನ ಬಳಿ 3,400ಕ್ಕೂ ಹೆಚ್ಚು SIR ಎನ್ಯುಮರೇಷನ್‌ ಫಾರಂಗಳು ಪತ್ತೆ!-ವರದಿ

ಮತದಾರರ ವಿವರಗಳಿರುವ 3,400ಕ್ಕೂ ಹೆಚ್ಚು ಎಸ್‌ಐಆರ್ ಎನ್ಯುಮರೇಷನ್ ಫಾರಂಗಳು ಸ್ಥಳೀಯ ಬಿಜೆಪಿ ಕಾರ್ಯಕರ್ತನ ಬಳಿ ಪತ್ತೆಯಾದ ಬಳಿಕ, ನವಿ ಮುಂಬೈನಲ್ಲಿ ಐವರು ಬೂತ್ ಮಟ್ಟದ ಅಧಿಕಾರಿಗಳನ್ನು (ಬಿಎಲ್‌ಒ) ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ. ಗುರುವಾರ (ಆ.27)...

ಹಾವೇರಿ| ಆಹಾರ ಸಂಸ್ಕರಣಾ ಘಟಕಗಳ ಮೇಲೆ ಅಧಿಕಾರಿಗಳ ದಾಳಿ; 1,033 ಕೆಜಿ ಕಲುಷಿತ ಆಹಾರ ಪದಾರ್ಥ ವಶಕ್ಕೆ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಹಶೀಲ್ದಾರ್ ನೇತೃತ್ವದ ತಂಡ ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ರಾಣೆಬೆನ್ನೂರು ತಾಲೂಕಿನ ವಿವಿಧ ಆಹಾರ ಸಂಸ್ಕರಣಾ ಘಟಕಗಳ ಮೇಲೆ ದಿಢೀರ್ ದಾಳಿ ನಡೆಸಿ, 1,033 ಕೆಜಿ ಕಲುಷಿತ ಆಹಾರ...

ಹಾಸನ: ಎಡಪಂಥೀಯರು ಮೋಸ್ಟ್ ಡೇಂಜರಸ್, ಕಳ್ಳರು! ನಿಶ್ಚಲಾನಂದನಾಥ ಸ್ವಾಮೀಜಿ ವಿವಾದಾತ್ಮಕ ಹೇಳಿಕೆಗೆ CPI(M) ಖಂಡನೆ

ಹಾಸನ ನಗರದ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಹಾಸನ ಜಿಲ್ಲಾ ಶಾಖೆ, ಯುವ ರೆಡ್ ಕ್ರಾಸ್ ಘಟಕ ಹಾಗೂ ಅರ್ಥಶಾಸ್ತ್ರ ವಿಭಾಗದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 'ವಿಶ್ವ...

ನೇಪಾಳ ಪ್ರವಾಹ : 620 ದಾಟಿದ ಮೃತರ ಸಂಖ್ಯೆ; 3 ಸಾವಿರದಷ್ಟು ಜನರು ಇನ್ನೂ ನಾಪತ್ತೆ-ವರದಿ

ನೇಪಾಳ-ಟಿಬೆಟ್ ಗಡಿ ಪ್ರದೇಶದಲ್ಲಿ ಉಂಟಾಗಿರುವ ಭೀಕರ ಪ್ರವಾಹದಿಂದಾಗಿ ಕನಿಷ್ಠ 616 ಜನರು ಸಾವನ್ನಪ್ಪಿದ್ದಾರೆ ಎಂದು ನೇಪಾಳ ಪೊಲೀಸರು ಶನಿವಾರ (ಆ.29) ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎಎಫ್‌ಪಿ ವರದಿ ಮಾಡಿದೆ. ಶುಕ್ರವಾರ (ಆ.28) ಪೊಲೀಸರು...

ನಾಗೇಂದ್ರ ರಾಜೀನಾಮೆ: ಬಡಿಗೆ ಕೊಟ್ಟು ಹೊಡೆಸಿಕೊಂಡಂತಾಯ್ತು ಕಾಂಗ್ರೆಸ್ ಪರಿಸ್ಥಿತಿ

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದಕ್ಕಿದ 136 ಸ್ಥಾನಗಳ ಅಭೂತಪೂರ್ವ ಬಹುಮತಕ್ಕೆ ಪ್ರಮುಖ ಕಾರಣ '40% ಸರ್ಕಾರ' ಮತ್ತು 'ಪೇ ಸಿಎಂ' ಅಭಿಯಾನಗಳು. ಬಿಜೆಪಿಯ ಭ್ರಷ್ಟಾಚಾರವನ್ನು ಅಸ್ತ್ರವಾಗಿಸಿಕೊಂಡು ಆಡಳಿತ ಹಿಡಿದ ಕಾಂಗ್ರೆಸ್‌ಗೆ,...

SIR ಕುತಂತ್ರ: 43.81 ಲಕ್ಷ ಜನರ ಮನೆ ಬಾಗಿಲಿಗೆ ನೋಟಿಸ್‌ ಬಿಸಿ, ಪೌರತ್ವ ಸಾಬೀತುಪಡಿಸಲು ನಾಗರಿಕರು ಅಲೆಯಬೇಕೇ ?

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಇದೀಗ ಲಕ್ಷಾಂತರ ನಾಗರಿಕರನ್ನು ಅತಂತ್ರ ಸ್ಥಿತಿಗೆ ತಳ್ಳಿದೆ.ಚುನಾವಣಾ ಆಯೋಗವು ರಾಜ್ಯದಲ್ಲಿದ್ದ ಒಟ್ಟು 5.54 ಕೋಟಿ ಮತದಾರರ ಪೈಕಿ ಸುಮಾರು 1.08...

ದಿಮಾಗಿ ನಕ್ಸಲ್: ರೈತ, ವಿದ್ಯಾರ್ಥಿ ಹೋರಾಟಗಳೂ ದೇಶದ್ರೋಹವೇ? RSS ಪತ್ರಿಕೆಯ ವಿವಾದಾತ್ಮಕ ಪ್ರತಿಪಾದನೆ

ಶಿಕ್ಷಣ, ಆರೋಗ್ಯ ಮತ್ತು ಒಟ್ಟಾರೆ ಅಭಿವೃದ್ಧಿ ಮಾದರಿಗೆ ತೀವ್ರ ಸ್ವರೂಪದ ಸುಧಾರಣೆಗಳ ಅಗತ್ಯವಿದೆ. ಆದರೆ ಈ ಸಮಸ್ಯೆಗಳು ಕಳೆದ ಹನ್ನೆರಡು ವರ್ಷಗಳಲ್ಲಿ ಹುಟ್ಟಿಕೊಂಡಿದ್ದಲ್ಲ ಅಥವಾ ಬಿಜೆಪಿ ಆಡಳಿತವಿರುವ ರಾಜ್ಯಗಳಿಗಷ್ಟೇ ಸೀಮಿತವಾಗಿಲ್ಲ. ಹಿಂದುತ್ವವನ್ನು ದಮನಕಾರಿ...

ಅಹಮದಾಬಾದ್‌ನಲ್ಲಿ ಪುಸ್ತಕ ಓದುಗರ ಮೇಲೆ ಭಜರಂಗದಳ ದೌರ್ಜನ್ಯ: ಮಲಾಲಾ, ಆನ್ ಫ್ರಾಂಕ್ ಕೃತಿಗಳಿಗೆ ವಿರೋಧಿಸಿ ಬೆದರಿಕೆ!

ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಾಹಿತ್ಯಾಭಿಮಾನಿಗಳ ಮೇಲೆ ಭಜರಂಗದಳ ಕಾರ್ಯಕರ್ತರು ಭೀಕರ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ನಗರದ ಸಾರ್ವಜನಿಕ ಉದ್ಯಾನವನವೊಂದರಲ್ಲಿ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ಮಲಾಲಾ ಯೂಸಫ್‌ಜೈ ಹಾಗೂ ವಿಶ್ವಪ್ರಸಿದ್ಧ ಲೇಖಕಿ ಆನ್...

ಉಮರ್ ಖಾಲಿದ್ – ಶಾರ್ಜೀಲ್ ಇಮಾಮ್ ಜಾಮೀನಿಗೆ ದೆಹಲಿ ಪೊಲೀಸರ ವಿರೋಧ

2020ರ ಈಶಾನ್ಯ ದೆಹಲಿ ಕೋಮು ಗಲಭೆಯ ಹಿಂದಿನ ಪ್ರಮುಖ ಸಂಚುಕೋರರು ಎಂದು ಆರೋಪಿಸಿರುವ ದೆಹಲಿ ಪೊಲೀಸರು, ಕಾರಾಗೃಹದಲ್ಲಿರುವ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳನ್ನು ದೆಹಲಿ...