Homeಮುಖಪುಟವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

ವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

- Advertisement -
- Advertisement -

ಮುಂಬೈ ಕರಾವಳಿಯ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್‌ಸಿಬಿ ದಾಳಿ ನಡೆಸಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದ ಪ್ರಕರಣದ ವಿವಾದಾತ್ಮಕ ಸ್ವತಂತ್ರ ಸಾಕ್ಷಿಯಾಗಿದ್ದ ಕೆ.ಪಿ ಗೋಸಾವಿಯನ್ನು ವಂಚನೆ ಪ್ರಕರಣದಲ್ಲಿ ಪುಣೆಯಲ್ಲಿ ಬಂಧಿಸಲಾಗಿದೆ.

ಗೋಸಾವಿ ಎನ್‌ಸಿಬಿಯ ಸಾಕ್ಷಿಯಾಗಿದ್ದರೂ ಇಷ್ಟು ದಿನ ನಾಪತ್ತೆಯಾಗಿದ್ದ. 2018ರ ವಂಚನೆ ಪ್ರಕರಣ ಆತನ ಮೇಲಿದ್ದು ಆತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿತ್ತು. ತನಗೆ ಮಹಾರಾಷ್ಟ್ರದಲ್ಲಿ ಜೀವ ಬೆದರಿಕೆಯಿರುವುದರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ಈತ ಮೂರು ದಿನದ ಹಿಂದೆ ಹೇಳಿಕೆ ನೀಡಿದ್ದ. ಆತನ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದರು.

ತನ್ನನ್ನು ಖಾಸಗಿ ತನಿಖಾಧಿಕಾರಿ ಎಂದು ಹೇಳಿಕೊಳ್ಳುವ ಕೆ.ಪಿ. ಗೋಸಾವಿ, ಬಂಧಿತ ಆರೋಪಿ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಮತ್ತು ಹಲವಾರು ವಿಡಿಯೊಗಳನ್ನು ತೆಗೆದುಕೊಳ್ಳುವುದು ಮಾಡಿದ್ದರು. ಈತ ಪ್ರಕರಣದ ‘ಸ್ವತಂತ್ರ ಸಾಕ್ಷಿ’ ಎಂದು ಎನ್‌ಸಿಬಿ ಹೇಳಿತ್ತು. ಸದ್ಯ ದಾಳಿ ನಡೆದ ಅಕ್ಟೋಬರ್‌ 2 ರಂದು ಕೇಸ್‌ನ ಸ್ವತಂತ್ರ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಬಂದರಿನಲ್ಲಿರುವ ಎನ್‌ಸಿಬಿ ಕಚೇರಿಯ ಒಳಗೆ ಎನ್‌ಸಿಬಿ ಅಧಿಕಾರಿಗಳೊಟ್ಟಿಗೆ ಕಾಣಿಸಿಕೊಂಡಿರುವ ಪೋಟೋಗಳು ವೈರಲ್ ಆಗಿವೆ. ಅದರೊಂದಿಗೆ ಎನ್‌ಸಿಬಿ ದಾಳಿಗೆ ಮಾಹಿತಿ ಒದಗಿಸಿದ್ದಾರೆ ಎನ್ನಲಾಗಿರುವ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಅಂದು ದಾಳಿಯಲ್ಲಿ ಬಂಧಿಸಲ್ಪಟ್ಟ ಇಬ್ಬರೊಂದಿಗೆ ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಮಾತುಕತೆ ನಡೆಸುತ್ತಿರುವುದು ವೈರಲ್ ಆಗಿದೆ.

PC: NDTV

PC: NDTV (ದಾಳಿ ದಿನ ಮುಂಬೈ ಬಂದರಿನ ಒಳಗಿನ ಫೋಟೋಗಳು, ಕೆಪಿ ಗೋಸಾವಿ ಜೊತೆ ಸಮೀರ್ ವಾಂಖೆಡೆ ಕಾಣಿಸಿಕೊಂಡಿರುವುದು)

ಇತ್ತ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಗೋಸಾವಿ ಕೇವಲ ಮಾಹಿತಿದಾರ ಮತ್ತು ಸಾಕ್ಷಿಯಾಗಿದ್ದಲ್ಲಿ, ಎನ್‌ಸಿಬಿ ದಾಳಿಯಲ್ಲಿ ಭಾಗವಹಿಸಲು ಮತ್ತು ಬಂಧಿತರೊಂದಿಗೆ ಸಂವಹನ ನಡೆಸಲು ಹೇಗೆ  ಅನುಮತಿ ನೀಡಲಾಗಿದೆ ಎಂಬುದು ಹಲವರ ಪ್ರಶ್ನೆಯಾಗಿದೆ. ಹಾಗಾಗಿ ಇಡೀ ಪ್ರಕರಣವೇ ನಕಲಿ ಎಂದು ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ.

ಆರ್ಯನ್ ಖಾನ್ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಪಿ ಗೋಸಾವಿಯ ವೈಯಕ್ತಿಕ ಅಂಗರಕ್ಷಕ ಎಂದು ಹೇಳಿಕೊಳ್ಳುವ ಪ್ರಭಾಕರ್ ಸೈಲ್, ಅಕ್ಟೋಬರ್ 3 ರಂದು ಸ್ಯಾಮ್ ಡಿಸೋಜಾ ಮತ್ತು ಕೆ.ಪಿ ಗೋಸಾವಿ ನಡುವೆ 18 ಕೋಟಿ ರೂಪಾಯಿ ಒಪ್ಪಂದದ ಬಗ್ಗೆ ನಡೆದ ಸಂಭಾಷಣೆಯನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ. ಇದರಲ್ಲಿ 8 ಕೋಟಿ ರೂಪಾಯಿಗಳನ್ನು ಎನ್‌ಸಿಬಿ ಅಧಿಕಾರಿ  ಸಮೀರ್ ವಾಂಖೆಡೆಗೆ ನೀಡಬೇಕಾಗುತ್ತದೆ ಎಂದು ಹೇಳಿದ್ದರು ಎಂದು ಆರೋಪಿಸಿದ್ದಾರೆ.

ಅಕ್ಟೋಬರ್ 3 ರ ಸಂಜೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ, ಕೆ.ಪಿ ಗೋಸಾವಿ ಮತ್ತು ಇನ್ನೊಬ್ಬ ವ್ಯಕ್ತಿ ಸ್ಯಾಮ್ ಡಿಸೋಜಾ ಅವರು ಕಾರಿನೊಳಗೆ 15 ನಿಮಿಷಗಳ ಸಭೆ ನಡೆಸಿದರು ಎಂದಿದ್ದಾರೆ. ಈ  ಪ್ರಕರಣದಲ್ಲಿ ಎನ್‌ಸಿಬಿ ಹೆಸರಿಸಿರುವ ಒಂಬತ್ತು ಸಾಕ್ಷಿಗಳಲ್ಲಿ ಪ್ರಭಾಕರ್ ಸೈಲ್ ಕೂಡ ಒಬ್ಬರು. ಆದರೆ ಈ ಆರೋಪವನ್ನು ಎನ್‌ಸಿಬಿ ನಿರಾಕರಿಸಿದೆ.


ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣದ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಮಾತುಕತೆಯ ಪೋಟೋಗಳು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರಾಚ್ಯ ಸಂಘರ್ಷ| ಇರಾನ್ ಮೇಲಿನ ದಾಳಿಗೆ ಅಮೆರಿಕಾ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ಹೇಳಿಕೆ ವೈರಲ್: ಭಾರತದ ಪ್ರತಿಕ್ರಿಯೆ ಏನು?

ಇರಾನ್ ಮೇಲೆ ನೌಕಾ ದಾಳಿ ನಡೆಸಲು ಅಮೆರಿಕ ಭಾರತದ ಬಂದರುಗಳನ್ನು ಬಳಸುತ್ತಿದೆ ಎಂಬ ವೈರಲ್ ಹೇಳಿಕೆಗಳನ್ನು ಭಾರತ ಬಲವಾಗಿ ತಿರಸ್ಕರಿಸಿದೆ. ಅಲ್ಲದೇ ಈ ಆರೋಪಗಳನ್ನು "ನಕಲಿ"  ಮತ್ತು “ಆಧಾರರಹಿತ” ಎಂದು ಕರೆದಿದೆ. ಬುಧವಾರ ವಿದೇಶಾಂಗ...

ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ‘ಪ್ರಗತಿಪರ ಸೌಹಾರ್ದ ಸಂಘಟನೆಗಳ’ ಆಗ್ರಹ

ಚಿಕ್ಕಮಗಳೂರಿನ ಬಾಬಾ ಬುಡನ್‌ ಗಿರಿಯಲ್ಲಿ ಉರುಸ್ ನಡೆಸಲು ಅನುಮತಿ ನೀಡುವಂತೆ ಆಗ್ರಹಿಸಿದ ಕರ್ನಾಟಕ ಸಮಸ್ತ ಪ್ರಗತಿಪರ ಸೌಹಾರ್ದ ಸಂಘಟನೆಗಳ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದು ಆಗ್ರಹಿಸಿದ್ದಾರೆ. ಚಿಕ್ಕಮಗಳೂರಿನ ಬಾಬಾ ಬುಡನ್‌...

ಖಮೇನಿ ನಿಧನಕ್ಕೆ ತಡವಾಗಿ ಸಂತಾಪ ಸೂಚಿಸಿದ ಭಾರತ; ಇರಾನ್‌ ರಾಯಭಾರ ಕಚೇರಿಯಲ್ಲಿನ ಪುಸ್ತಕದಲ್ಲಿ ವಿಕ್ರಮ್ ಮಿಶ್ರಿ ಸಹಿ

ಇರಾನಿನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನಕ್ಕೆ ಭಾರತ ತಡವಾಗಿ ಸಂತಾಪ ಸೂಚಿಸಿದೆ. ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಗುರುವಾರ ನವದೆಹಲಿಯ ಇರಾನಿನ ರಾಯಭಾರ ಕಚೇರಿಯಲ್ಲಿ ಸಂತಾಪ ಸೂಚಿಸುವ ಪುಸ್ತಕಕ್ಕೆ...

ಉಕ್ರೇನ್, ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷ ತ್ವರಿತವಾಗಿ ಕೊನೆಗೊಳಿಸಲು ಬೆಂಬಲಿಸುತ್ತೇನೆ: ಫಿನ್ಲೆಂಡ್‌ನಲ್ಲಿ ಪ್ರಧಾನಿ ಮೋದಿ

ನವದೆಹಲಿ: ಪಶ್ಚಿಮ ಏಷ್ಯಾ ಮತ್ತು ಉಕ್ರೇನ್‌ನಲ್ಲಿನ ಸಂಘರ್ಷಗಳಿಗೆ "ತ್ವರಿತ ಅಂತ್ಯ" ವನ್ನು ತರಲು ಪ್ರಧಾನಿ ನರೇಂದ್ರ ಮೋದಿ ಗುರುವಾರ ಕರೆ ನೀಡಿದ್ದಾರೆ, ಯಾವುದೇ ಸಮಸ್ಯೆಯನ್ನು ಮಿಲಿಟರಿ ಮುಖಾಮುಖಿಯ ಮೂಲಕ ಪರಿಹರಿಸಲು ಸಾಧ್ಯವಿಲ್ಲ ಎಂದು...

ಮಹಾರಾಷ್ಟ್ರ| ಬಣ್ಣ ಎರಚಿದ ಮೊಮ್ಮಗನ ಮೇಲೆ ಬಿಸಿ ನೀರು ಸುರಿದ ಮಹಿಳೆ; ಬಾಲಕನ ಸ್ಥಿತಿ ಗಂಭೀರ

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಕೊರಾಡಿ ಪ್ರದೇಶದಲ್ಲಿ ಹೋಲಿ ಆಡುತ್ತಿದ್ದಾಗ ನಾಲ್ಕು ವರ್ಷದ ಮೊಮ್ಮಗ ತನ್ನ ಮೇಲೆ ಬಣ್ಣ ಎರಚಿದ್ದರಿಂದ ಕೋಪಗೊಂಡ ಅಜ್ಜಿ ಮಗುವಿನ ಮೇಲೆ ಕುದಿಯುವ ನೀರನ್ನು ಸುರಿದಿರುವ ವಿಡಿಯೋ ಇದೀಗ ವೈರಲ್...

ಭಾರತದ ಕಾಲ ಬುಡದಲ್ಲಿ ಇರಾನ್ ನೌಕೆ ಮೇಲೆ ಅಮೆರಿಕ ದಾಳಿ : 100ರಷ್ಟು ಸಿಬ್ಬಂದಿ ಸಾವಿಗೀಡಾದರೂ ಮೋದಿ ಸರ್ಕಾರ ಮೌನ!

ಭಾರತದಿಂದ ಕೇವಲ 300 ಕಿಲೋ ಮೀಟರ್ ದೂರದಲ್ಲಿ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ 'ಐಆರ್‌ಐಎಸ್ ದೆನಾ' ಮೇಲೆ ಅಮೆರಿಕ ಜಲಾಂತರ್ಗಾಮಿ ಬುಧವಾರ (ಮಾ.4) ಭೀಕರ ದಾಳಿ ನಡೆಸಿದೆ. ಈ ಘಟನೆಯಲ್ಲಿ ಇರಾನ್‌ ನೌಕೆಯಲ್ಲಿದ್ದ 180 ಸಿಬ್ಬಂದಿಯ...

ಹಿಂದೂ ಮಹಾಸಾಗರದಲ್ಲಿ ಇರಾನ್ ನೌಕೆ ಮೇಲೆ ದಾಳಿ: ‘ರಾಜಿ ಮಾಡಿಕೊಂಡ ಪ್ರಧಾನಿ ಕಾರ್ಯತಂತ್ರದ ಸ್ವಾಯತ್ತತೆ ಬಿಟ್ಟುಕೊಟ್ಟರು: ರಾಹುಲ್ ಟೀಕೆ

ಹಿಂದೂ ಮಹಾಸಾಗರದಲ್ಲಿ ಇರಾನ್ ಯುದ್ಧನೌಕೆ ಐರಿಸ್ ದೇನಾದ ಮೇಲೆ ಅಮೆರಿಕಾ ದಾಳಿ ಮಾಡಿದ ಒಂದು ದಿನದ ನಂತರ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ವಾಗ್ದಾಳಿ...

ಟ್ರಂಪ್ ಬೆದರಿಕೆಗೆ ಹೆದರದ ಸ್ಪೇನ್ ಪ್ರಧಾನಿ; ಇರಾನ್ ಮೇಲಿನ ದಾಳಿಗೆ ಸೇನಾ ನೆಲೆ ಬಳಸಲು ಅನುಮತಿ ನಿರಾಕರಿಸಿದ ಪೆಡ್ರೊ ಸ್ಯಾಂಚೆಜ್

ಇರಾನ್ ಮೇಲೆ ದಾಳಿ ಮಾಡಲು ಅಮೆರಿಕದ ವಿಮಾನಗಳು ತನ್ನ ನೆಲೆಗಳನ್ನು ಬಳಸಲು ಅನುಮತಿಸಲು ಮ್ಯಾಡ್ರಿಡ್ ನಿರಾಕರಿಸಿದ್ದಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ ಟೀಕೆಗಳಿಗೆ ಬುಧವಾರ ಸ್ಪ್ಯಾನಿಷ್ ಪ್ರಧಾನಿ ಪೆಡ್ರೊ ಸ್ಯಾಂಚೆಜ್ ತಿರುಗೇಟು...

ಭಾರತದಿಂದ ಹಿಂದಿರುಗುತ್ತಿದ್ದ ಯುದ್ಧನೌಕೆ ಮೇಲೆ ಹಠಾತ್ ದಾಳಿ : ಅಮೆರಿಕ ಪಶ್ಚಾತ್ತಾಪ ಪಡಲಿದೆ ಎಂದ ಇರಾನ್

ಭಾರತೀಯ ನೌಕಾಪಡೆಯ ಆಹ್ವಾನದ ಮೇರೆಗೆ ಸಮರಾಭ್ಯಾಸದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದ ಇರಾನ್‌ನ ಅತ್ಯಾಧುನಿಕ ಯುದ್ಧನೌಕೆ ಐಆರ್‌ಐಎಸ್ ದೆನಾ ಮೇಲೆ ಅಮೆರಿಕದ ಜಲಾಂತರ್ಗಾಮಿ ದಾಳಿ ನಡೆಸಿ ಅದನ್ನು ಮುಳುಗಿಸಿದೆ. ಮಾರ್ಚ್ 4ರಂದು ಶ್ರೀಲಂಕಾದ ದಕ್ಷಿಣ ಕರಾವಳಿಯಿಂದ ಸುಮಾರು 40 ನಾಟಿಕಲ್...

ದೆಹಲಿ| ಹೋಳಿ ಹಬ್ಬ ಸಡಗರದಲ್ಲಿ ಕುಡಿದು ವಾಹನ ಚಾಲನೆ; 1,200 ಕ್ಕೂ ಹೆಚ್ಚು ಜನರ ಮೇಲೆ ಪ್ರಕರಣ ದಾಖಲು

ಹೋಳಿ ಹಬ್ಬದಂದು ನಗರದಾದ್ಯಂತ ನಡೆಸಿದ ವಿಶೇಷ ಪರಿಶೀಲನೆಯಲ್ಲಿ ದೆಹಲಿ ಸಂಚಾರ ಪೊಲೀಸರು 1,200 ಕ್ಕೂ ಹೆಚ್ಚು ವಾಹನ ಚಾಲಕರ ವಿರುದ್ಧ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಿದ್ದಾರೆ. ಪಶ್ಚಿಮ ವಲಯದಿಂದ ಅತಿ ಹೆಚ್ಚು...