Homeಮುಖಪುಟವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

ವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

- Advertisement -
- Advertisement -

ಮುಂಬೈ ಕರಾವಳಿಯ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್‌ಸಿಬಿ ದಾಳಿ ನಡೆಸಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದ ಪ್ರಕರಣದ ವಿವಾದಾತ್ಮಕ ಸ್ವತಂತ್ರ ಸಾಕ್ಷಿಯಾಗಿದ್ದ ಕೆ.ಪಿ ಗೋಸಾವಿಯನ್ನು ವಂಚನೆ ಪ್ರಕರಣದಲ್ಲಿ ಪುಣೆಯಲ್ಲಿ ಬಂಧಿಸಲಾಗಿದೆ.

ಗೋಸಾವಿ ಎನ್‌ಸಿಬಿಯ ಸಾಕ್ಷಿಯಾಗಿದ್ದರೂ ಇಷ್ಟು ದಿನ ನಾಪತ್ತೆಯಾಗಿದ್ದ. 2018ರ ವಂಚನೆ ಪ್ರಕರಣ ಆತನ ಮೇಲಿದ್ದು ಆತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿತ್ತು. ತನಗೆ ಮಹಾರಾಷ್ಟ್ರದಲ್ಲಿ ಜೀವ ಬೆದರಿಕೆಯಿರುವುದರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ಈತ ಮೂರು ದಿನದ ಹಿಂದೆ ಹೇಳಿಕೆ ನೀಡಿದ್ದ. ಆತನ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದರು.

ತನ್ನನ್ನು ಖಾಸಗಿ ತನಿಖಾಧಿಕಾರಿ ಎಂದು ಹೇಳಿಕೊಳ್ಳುವ ಕೆ.ಪಿ. ಗೋಸಾವಿ, ಬಂಧಿತ ಆರೋಪಿ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಮತ್ತು ಹಲವಾರು ವಿಡಿಯೊಗಳನ್ನು ತೆಗೆದುಕೊಳ್ಳುವುದು ಮಾಡಿದ್ದರು. ಈತ ಪ್ರಕರಣದ ‘ಸ್ವತಂತ್ರ ಸಾಕ್ಷಿ’ ಎಂದು ಎನ್‌ಸಿಬಿ ಹೇಳಿತ್ತು. ಸದ್ಯ ದಾಳಿ ನಡೆದ ಅಕ್ಟೋಬರ್‌ 2 ರಂದು ಕೇಸ್‌ನ ಸ್ವತಂತ್ರ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಬಂದರಿನಲ್ಲಿರುವ ಎನ್‌ಸಿಬಿ ಕಚೇರಿಯ ಒಳಗೆ ಎನ್‌ಸಿಬಿ ಅಧಿಕಾರಿಗಳೊಟ್ಟಿಗೆ ಕಾಣಿಸಿಕೊಂಡಿರುವ ಪೋಟೋಗಳು ವೈರಲ್ ಆಗಿವೆ. ಅದರೊಂದಿಗೆ ಎನ್‌ಸಿಬಿ ದಾಳಿಗೆ ಮಾಹಿತಿ ಒದಗಿಸಿದ್ದಾರೆ ಎನ್ನಲಾಗಿರುವ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಅಂದು ದಾಳಿಯಲ್ಲಿ ಬಂಧಿಸಲ್ಪಟ್ಟ ಇಬ್ಬರೊಂದಿಗೆ ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಮಾತುಕತೆ ನಡೆಸುತ್ತಿರುವುದು ವೈರಲ್ ಆಗಿದೆ.

PC: NDTV

PC: NDTV (ದಾಳಿ ದಿನ ಮುಂಬೈ ಬಂದರಿನ ಒಳಗಿನ ಫೋಟೋಗಳು, ಕೆಪಿ ಗೋಸಾವಿ ಜೊತೆ ಸಮೀರ್ ವಾಂಖೆಡೆ ಕಾಣಿಸಿಕೊಂಡಿರುವುದು)

ಇತ್ತ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಗೋಸಾವಿ ಕೇವಲ ಮಾಹಿತಿದಾರ ಮತ್ತು ಸಾಕ್ಷಿಯಾಗಿದ್ದಲ್ಲಿ, ಎನ್‌ಸಿಬಿ ದಾಳಿಯಲ್ಲಿ ಭಾಗವಹಿಸಲು ಮತ್ತು ಬಂಧಿತರೊಂದಿಗೆ ಸಂವಹನ ನಡೆಸಲು ಹೇಗೆ  ಅನುಮತಿ ನೀಡಲಾಗಿದೆ ಎಂಬುದು ಹಲವರ ಪ್ರಶ್ನೆಯಾಗಿದೆ. ಹಾಗಾಗಿ ಇಡೀ ಪ್ರಕರಣವೇ ನಕಲಿ ಎಂದು ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ.

ಆರ್ಯನ್ ಖಾನ್ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಪಿ ಗೋಸಾವಿಯ ವೈಯಕ್ತಿಕ ಅಂಗರಕ್ಷಕ ಎಂದು ಹೇಳಿಕೊಳ್ಳುವ ಪ್ರಭಾಕರ್ ಸೈಲ್, ಅಕ್ಟೋಬರ್ 3 ರಂದು ಸ್ಯಾಮ್ ಡಿಸೋಜಾ ಮತ್ತು ಕೆ.ಪಿ ಗೋಸಾವಿ ನಡುವೆ 18 ಕೋಟಿ ರೂಪಾಯಿ ಒಪ್ಪಂದದ ಬಗ್ಗೆ ನಡೆದ ಸಂಭಾಷಣೆಯನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ. ಇದರಲ್ಲಿ 8 ಕೋಟಿ ರೂಪಾಯಿಗಳನ್ನು ಎನ್‌ಸಿಬಿ ಅಧಿಕಾರಿ  ಸಮೀರ್ ವಾಂಖೆಡೆಗೆ ನೀಡಬೇಕಾಗುತ್ತದೆ ಎಂದು ಹೇಳಿದ್ದರು ಎಂದು ಆರೋಪಿಸಿದ್ದಾರೆ.

ಅಕ್ಟೋಬರ್ 3 ರ ಸಂಜೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ, ಕೆ.ಪಿ ಗೋಸಾವಿ ಮತ್ತು ಇನ್ನೊಬ್ಬ ವ್ಯಕ್ತಿ ಸ್ಯಾಮ್ ಡಿಸೋಜಾ ಅವರು ಕಾರಿನೊಳಗೆ 15 ನಿಮಿಷಗಳ ಸಭೆ ನಡೆಸಿದರು ಎಂದಿದ್ದಾರೆ. ಈ  ಪ್ರಕರಣದಲ್ಲಿ ಎನ್‌ಸಿಬಿ ಹೆಸರಿಸಿರುವ ಒಂಬತ್ತು ಸಾಕ್ಷಿಗಳಲ್ಲಿ ಪ್ರಭಾಕರ್ ಸೈಲ್ ಕೂಡ ಒಬ್ಬರು. ಆದರೆ ಈ ಆರೋಪವನ್ನು ಎನ್‌ಸಿಬಿ ನಿರಾಕರಿಸಿದೆ.


ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣದ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಮಾತುಕತೆಯ ಪೋಟೋಗಳು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...