Homeಮುಖಪುಟವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

ವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

- Advertisement -
- Advertisement -

ಮುಂಬೈ ಕರಾವಳಿಯ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್‌ಸಿಬಿ ದಾಳಿ ನಡೆಸಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದ ಪ್ರಕರಣದ ವಿವಾದಾತ್ಮಕ ಸ್ವತಂತ್ರ ಸಾಕ್ಷಿಯಾಗಿದ್ದ ಕೆ.ಪಿ ಗೋಸಾವಿಯನ್ನು ವಂಚನೆ ಪ್ರಕರಣದಲ್ಲಿ ಪುಣೆಯಲ್ಲಿ ಬಂಧಿಸಲಾಗಿದೆ.

ಗೋಸಾವಿ ಎನ್‌ಸಿಬಿಯ ಸಾಕ್ಷಿಯಾಗಿದ್ದರೂ ಇಷ್ಟು ದಿನ ನಾಪತ್ತೆಯಾಗಿದ್ದ. 2018ರ ವಂಚನೆ ಪ್ರಕರಣ ಆತನ ಮೇಲಿದ್ದು ಆತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿತ್ತು. ತನಗೆ ಮಹಾರಾಷ್ಟ್ರದಲ್ಲಿ ಜೀವ ಬೆದರಿಕೆಯಿರುವುದರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ಈತ ಮೂರು ದಿನದ ಹಿಂದೆ ಹೇಳಿಕೆ ನೀಡಿದ್ದ. ಆತನ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದರು.

ತನ್ನನ್ನು ಖಾಸಗಿ ತನಿಖಾಧಿಕಾರಿ ಎಂದು ಹೇಳಿಕೊಳ್ಳುವ ಕೆ.ಪಿ. ಗೋಸಾವಿ, ಬಂಧಿತ ಆರೋಪಿ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಮತ್ತು ಹಲವಾರು ವಿಡಿಯೊಗಳನ್ನು ತೆಗೆದುಕೊಳ್ಳುವುದು ಮಾಡಿದ್ದರು. ಈತ ಪ್ರಕರಣದ ‘ಸ್ವತಂತ್ರ ಸಾಕ್ಷಿ’ ಎಂದು ಎನ್‌ಸಿಬಿ ಹೇಳಿತ್ತು. ಸದ್ಯ ದಾಳಿ ನಡೆದ ಅಕ್ಟೋಬರ್‌ 2 ರಂದು ಕೇಸ್‌ನ ಸ್ವತಂತ್ರ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಬಂದರಿನಲ್ಲಿರುವ ಎನ್‌ಸಿಬಿ ಕಚೇರಿಯ ಒಳಗೆ ಎನ್‌ಸಿಬಿ ಅಧಿಕಾರಿಗಳೊಟ್ಟಿಗೆ ಕಾಣಿಸಿಕೊಂಡಿರುವ ಪೋಟೋಗಳು ವೈರಲ್ ಆಗಿವೆ. ಅದರೊಂದಿಗೆ ಎನ್‌ಸಿಬಿ ದಾಳಿಗೆ ಮಾಹಿತಿ ಒದಗಿಸಿದ್ದಾರೆ ಎನ್ನಲಾಗಿರುವ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಅಂದು ದಾಳಿಯಲ್ಲಿ ಬಂಧಿಸಲ್ಪಟ್ಟ ಇಬ್ಬರೊಂದಿಗೆ ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಮಾತುಕತೆ ನಡೆಸುತ್ತಿರುವುದು ವೈರಲ್ ಆಗಿದೆ.

PC: NDTV

PC: NDTV (ದಾಳಿ ದಿನ ಮುಂಬೈ ಬಂದರಿನ ಒಳಗಿನ ಫೋಟೋಗಳು, ಕೆಪಿ ಗೋಸಾವಿ ಜೊತೆ ಸಮೀರ್ ವಾಂಖೆಡೆ ಕಾಣಿಸಿಕೊಂಡಿರುವುದು)

ಇತ್ತ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಗೋಸಾವಿ ಕೇವಲ ಮಾಹಿತಿದಾರ ಮತ್ತು ಸಾಕ್ಷಿಯಾಗಿದ್ದಲ್ಲಿ, ಎನ್‌ಸಿಬಿ ದಾಳಿಯಲ್ಲಿ ಭಾಗವಹಿಸಲು ಮತ್ತು ಬಂಧಿತರೊಂದಿಗೆ ಸಂವಹನ ನಡೆಸಲು ಹೇಗೆ  ಅನುಮತಿ ನೀಡಲಾಗಿದೆ ಎಂಬುದು ಹಲವರ ಪ್ರಶ್ನೆಯಾಗಿದೆ. ಹಾಗಾಗಿ ಇಡೀ ಪ್ರಕರಣವೇ ನಕಲಿ ಎಂದು ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ.

ಆರ್ಯನ್ ಖಾನ್ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಪಿ ಗೋಸಾವಿಯ ವೈಯಕ್ತಿಕ ಅಂಗರಕ್ಷಕ ಎಂದು ಹೇಳಿಕೊಳ್ಳುವ ಪ್ರಭಾಕರ್ ಸೈಲ್, ಅಕ್ಟೋಬರ್ 3 ರಂದು ಸ್ಯಾಮ್ ಡಿಸೋಜಾ ಮತ್ತು ಕೆ.ಪಿ ಗೋಸಾವಿ ನಡುವೆ 18 ಕೋಟಿ ರೂಪಾಯಿ ಒಪ್ಪಂದದ ಬಗ್ಗೆ ನಡೆದ ಸಂಭಾಷಣೆಯನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ. ಇದರಲ್ಲಿ 8 ಕೋಟಿ ರೂಪಾಯಿಗಳನ್ನು ಎನ್‌ಸಿಬಿ ಅಧಿಕಾರಿ  ಸಮೀರ್ ವಾಂಖೆಡೆಗೆ ನೀಡಬೇಕಾಗುತ್ತದೆ ಎಂದು ಹೇಳಿದ್ದರು ಎಂದು ಆರೋಪಿಸಿದ್ದಾರೆ.

ಅಕ್ಟೋಬರ್ 3 ರ ಸಂಜೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ, ಕೆ.ಪಿ ಗೋಸಾವಿ ಮತ್ತು ಇನ್ನೊಬ್ಬ ವ್ಯಕ್ತಿ ಸ್ಯಾಮ್ ಡಿಸೋಜಾ ಅವರು ಕಾರಿನೊಳಗೆ 15 ನಿಮಿಷಗಳ ಸಭೆ ನಡೆಸಿದರು ಎಂದಿದ್ದಾರೆ. ಈ  ಪ್ರಕರಣದಲ್ಲಿ ಎನ್‌ಸಿಬಿ ಹೆಸರಿಸಿರುವ ಒಂಬತ್ತು ಸಾಕ್ಷಿಗಳಲ್ಲಿ ಪ್ರಭಾಕರ್ ಸೈಲ್ ಕೂಡ ಒಬ್ಬರು. ಆದರೆ ಈ ಆರೋಪವನ್ನು ಎನ್‌ಸಿಬಿ ನಿರಾಕರಿಸಿದೆ.


ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣದ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಮಾತುಕತೆಯ ಪೋಟೋಗಳು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...