Homeಮುಖಪುಟವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

ವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

- Advertisement -
- Advertisement -

ಮುಂಬೈ ಕರಾವಳಿಯ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್‌ಸಿಬಿ ದಾಳಿ ನಡೆಸಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದ ಪ್ರಕರಣದ ವಿವಾದಾತ್ಮಕ ಸ್ವತಂತ್ರ ಸಾಕ್ಷಿಯಾಗಿದ್ದ ಕೆ.ಪಿ ಗೋಸಾವಿಯನ್ನು ವಂಚನೆ ಪ್ರಕರಣದಲ್ಲಿ ಪುಣೆಯಲ್ಲಿ ಬಂಧಿಸಲಾಗಿದೆ.

ಗೋಸಾವಿ ಎನ್‌ಸಿಬಿಯ ಸಾಕ್ಷಿಯಾಗಿದ್ದರೂ ಇಷ್ಟು ದಿನ ನಾಪತ್ತೆಯಾಗಿದ್ದ. 2018ರ ವಂಚನೆ ಪ್ರಕರಣ ಆತನ ಮೇಲಿದ್ದು ಆತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿತ್ತು. ತನಗೆ ಮಹಾರಾಷ್ಟ್ರದಲ್ಲಿ ಜೀವ ಬೆದರಿಕೆಯಿರುವುದರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ಈತ ಮೂರು ದಿನದ ಹಿಂದೆ ಹೇಳಿಕೆ ನೀಡಿದ್ದ. ಆತನ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದರು.

ತನ್ನನ್ನು ಖಾಸಗಿ ತನಿಖಾಧಿಕಾರಿ ಎಂದು ಹೇಳಿಕೊಳ್ಳುವ ಕೆ.ಪಿ. ಗೋಸಾವಿ, ಬಂಧಿತ ಆರೋಪಿ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಮತ್ತು ಹಲವಾರು ವಿಡಿಯೊಗಳನ್ನು ತೆಗೆದುಕೊಳ್ಳುವುದು ಮಾಡಿದ್ದರು. ಈತ ಪ್ರಕರಣದ ‘ಸ್ವತಂತ್ರ ಸಾಕ್ಷಿ’ ಎಂದು ಎನ್‌ಸಿಬಿ ಹೇಳಿತ್ತು. ಸದ್ಯ ದಾಳಿ ನಡೆದ ಅಕ್ಟೋಬರ್‌ 2 ರಂದು ಕೇಸ್‌ನ ಸ್ವತಂತ್ರ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಬಂದರಿನಲ್ಲಿರುವ ಎನ್‌ಸಿಬಿ ಕಚೇರಿಯ ಒಳಗೆ ಎನ್‌ಸಿಬಿ ಅಧಿಕಾರಿಗಳೊಟ್ಟಿಗೆ ಕಾಣಿಸಿಕೊಂಡಿರುವ ಪೋಟೋಗಳು ವೈರಲ್ ಆಗಿವೆ. ಅದರೊಂದಿಗೆ ಎನ್‌ಸಿಬಿ ದಾಳಿಗೆ ಮಾಹಿತಿ ಒದಗಿಸಿದ್ದಾರೆ ಎನ್ನಲಾಗಿರುವ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಅಂದು ದಾಳಿಯಲ್ಲಿ ಬಂಧಿಸಲ್ಪಟ್ಟ ಇಬ್ಬರೊಂದಿಗೆ ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಮಾತುಕತೆ ನಡೆಸುತ್ತಿರುವುದು ವೈರಲ್ ಆಗಿದೆ.

PC: NDTV

PC: NDTV (ದಾಳಿ ದಿನ ಮುಂಬೈ ಬಂದರಿನ ಒಳಗಿನ ಫೋಟೋಗಳು, ಕೆಪಿ ಗೋಸಾವಿ ಜೊತೆ ಸಮೀರ್ ವಾಂಖೆಡೆ ಕಾಣಿಸಿಕೊಂಡಿರುವುದು)

ಇತ್ತ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಗೋಸಾವಿ ಕೇವಲ ಮಾಹಿತಿದಾರ ಮತ್ತು ಸಾಕ್ಷಿಯಾಗಿದ್ದಲ್ಲಿ, ಎನ್‌ಸಿಬಿ ದಾಳಿಯಲ್ಲಿ ಭಾಗವಹಿಸಲು ಮತ್ತು ಬಂಧಿತರೊಂದಿಗೆ ಸಂವಹನ ನಡೆಸಲು ಹೇಗೆ  ಅನುಮತಿ ನೀಡಲಾಗಿದೆ ಎಂಬುದು ಹಲವರ ಪ್ರಶ್ನೆಯಾಗಿದೆ. ಹಾಗಾಗಿ ಇಡೀ ಪ್ರಕರಣವೇ ನಕಲಿ ಎಂದು ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ.

ಆರ್ಯನ್ ಖಾನ್ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಪಿ ಗೋಸಾವಿಯ ವೈಯಕ್ತಿಕ ಅಂಗರಕ್ಷಕ ಎಂದು ಹೇಳಿಕೊಳ್ಳುವ ಪ್ರಭಾಕರ್ ಸೈಲ್, ಅಕ್ಟೋಬರ್ 3 ರಂದು ಸ್ಯಾಮ್ ಡಿಸೋಜಾ ಮತ್ತು ಕೆ.ಪಿ ಗೋಸಾವಿ ನಡುವೆ 18 ಕೋಟಿ ರೂಪಾಯಿ ಒಪ್ಪಂದದ ಬಗ್ಗೆ ನಡೆದ ಸಂಭಾಷಣೆಯನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ. ಇದರಲ್ಲಿ 8 ಕೋಟಿ ರೂಪಾಯಿಗಳನ್ನು ಎನ್‌ಸಿಬಿ ಅಧಿಕಾರಿ  ಸಮೀರ್ ವಾಂಖೆಡೆಗೆ ನೀಡಬೇಕಾಗುತ್ತದೆ ಎಂದು ಹೇಳಿದ್ದರು ಎಂದು ಆರೋಪಿಸಿದ್ದಾರೆ.

ಅಕ್ಟೋಬರ್ 3 ರ ಸಂಜೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ, ಕೆ.ಪಿ ಗೋಸಾವಿ ಮತ್ತು ಇನ್ನೊಬ್ಬ ವ್ಯಕ್ತಿ ಸ್ಯಾಮ್ ಡಿಸೋಜಾ ಅವರು ಕಾರಿನೊಳಗೆ 15 ನಿಮಿಷಗಳ ಸಭೆ ನಡೆಸಿದರು ಎಂದಿದ್ದಾರೆ. ಈ  ಪ್ರಕರಣದಲ್ಲಿ ಎನ್‌ಸಿಬಿ ಹೆಸರಿಸಿರುವ ಒಂಬತ್ತು ಸಾಕ್ಷಿಗಳಲ್ಲಿ ಪ್ರಭಾಕರ್ ಸೈಲ್ ಕೂಡ ಒಬ್ಬರು. ಆದರೆ ಈ ಆರೋಪವನ್ನು ಎನ್‌ಸಿಬಿ ನಿರಾಕರಿಸಿದೆ.


ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣದ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಮಾತುಕತೆಯ ಪೋಟೋಗಳು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ.​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...

ಪಶ್ಚಿಮ ಬಂಗಾಳ| ಬಕ್ರೀದ್‌ ಹಬ್ಬಕ್ಕೂ ಮುನ್ನ ರೈತರಿಗೆ ಸಂಕಷ್ಟ; ಜಾನುವಾರು ಮಾರುಕಟ್ಟೆಗಳು ನಿರ್ಜನ

ಈದ್ ಅಲ್-ಅಧಾ ಹಬ್ಬದ ಮುನ್ನ ಉತ್ತರ ಬಂಗಾಳದಾದ್ಯಂತ ಜಾನುವಾರು ಮಾರುಕಟ್ಟೆಗಳು ಹೆಚ್ಚಾಗಿ ನಿರ್ಜನವಾಗಿದ್ದವು. ವ್ಯಾಪಾರಿಗಳು ಮತ್ತು ರೈತರು ಜಾನುವಾರು ಮಾರಾಟದ ಮೇಲಿನ ನಿರ್ಬಂಧಗಳಿಂದಾಗಿ ವ್ಯಾಪಾರದಲ್ಲಿ ಪ್ರಮುಖ ಕುಸಿತ ಕಂಡುಬಂದಿದೆ ಎಂದು ಅವಲತ್ತುಕೊಂಡಿದ್ದಾರೆ. ಮಾಲ್ಡಾ...

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...