Homeಮುಖಪುಟವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

ವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

- Advertisement -
- Advertisement -

ಮುಂಬೈ ಕರಾವಳಿಯ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್‌ಸಿಬಿ ದಾಳಿ ನಡೆಸಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದ ಪ್ರಕರಣದ ವಿವಾದಾತ್ಮಕ ಸ್ವತಂತ್ರ ಸಾಕ್ಷಿಯಾಗಿದ್ದ ಕೆ.ಪಿ ಗೋಸಾವಿಯನ್ನು ವಂಚನೆ ಪ್ರಕರಣದಲ್ಲಿ ಪುಣೆಯಲ್ಲಿ ಬಂಧಿಸಲಾಗಿದೆ.

ಗೋಸಾವಿ ಎನ್‌ಸಿಬಿಯ ಸಾಕ್ಷಿಯಾಗಿದ್ದರೂ ಇಷ್ಟು ದಿನ ನಾಪತ್ತೆಯಾಗಿದ್ದ. 2018ರ ವಂಚನೆ ಪ್ರಕರಣ ಆತನ ಮೇಲಿದ್ದು ಆತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿತ್ತು. ತನಗೆ ಮಹಾರಾಷ್ಟ್ರದಲ್ಲಿ ಜೀವ ಬೆದರಿಕೆಯಿರುವುದರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ಈತ ಮೂರು ದಿನದ ಹಿಂದೆ ಹೇಳಿಕೆ ನೀಡಿದ್ದ. ಆತನ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದರು.

ತನ್ನನ್ನು ಖಾಸಗಿ ತನಿಖಾಧಿಕಾರಿ ಎಂದು ಹೇಳಿಕೊಳ್ಳುವ ಕೆ.ಪಿ. ಗೋಸಾವಿ, ಬಂಧಿತ ಆರೋಪಿ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಮತ್ತು ಹಲವಾರು ವಿಡಿಯೊಗಳನ್ನು ತೆಗೆದುಕೊಳ್ಳುವುದು ಮಾಡಿದ್ದರು. ಈತ ಪ್ರಕರಣದ ‘ಸ್ವತಂತ್ರ ಸಾಕ್ಷಿ’ ಎಂದು ಎನ್‌ಸಿಬಿ ಹೇಳಿತ್ತು. ಸದ್ಯ ದಾಳಿ ನಡೆದ ಅಕ್ಟೋಬರ್‌ 2 ರಂದು ಕೇಸ್‌ನ ಸ್ವತಂತ್ರ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಬಂದರಿನಲ್ಲಿರುವ ಎನ್‌ಸಿಬಿ ಕಚೇರಿಯ ಒಳಗೆ ಎನ್‌ಸಿಬಿ ಅಧಿಕಾರಿಗಳೊಟ್ಟಿಗೆ ಕಾಣಿಸಿಕೊಂಡಿರುವ ಪೋಟೋಗಳು ವೈರಲ್ ಆಗಿವೆ. ಅದರೊಂದಿಗೆ ಎನ್‌ಸಿಬಿ ದಾಳಿಗೆ ಮಾಹಿತಿ ಒದಗಿಸಿದ್ದಾರೆ ಎನ್ನಲಾಗಿರುವ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಅಂದು ದಾಳಿಯಲ್ಲಿ ಬಂಧಿಸಲ್ಪಟ್ಟ ಇಬ್ಬರೊಂದಿಗೆ ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಮಾತುಕತೆ ನಡೆಸುತ್ತಿರುವುದು ವೈರಲ್ ಆಗಿದೆ.

PC: NDTV

PC: NDTV (ದಾಳಿ ದಿನ ಮುಂಬೈ ಬಂದರಿನ ಒಳಗಿನ ಫೋಟೋಗಳು, ಕೆಪಿ ಗೋಸಾವಿ ಜೊತೆ ಸಮೀರ್ ವಾಂಖೆಡೆ ಕಾಣಿಸಿಕೊಂಡಿರುವುದು)

ಇತ್ತ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಗೋಸಾವಿ ಕೇವಲ ಮಾಹಿತಿದಾರ ಮತ್ತು ಸಾಕ್ಷಿಯಾಗಿದ್ದಲ್ಲಿ, ಎನ್‌ಸಿಬಿ ದಾಳಿಯಲ್ಲಿ ಭಾಗವಹಿಸಲು ಮತ್ತು ಬಂಧಿತರೊಂದಿಗೆ ಸಂವಹನ ನಡೆಸಲು ಹೇಗೆ  ಅನುಮತಿ ನೀಡಲಾಗಿದೆ ಎಂಬುದು ಹಲವರ ಪ್ರಶ್ನೆಯಾಗಿದೆ. ಹಾಗಾಗಿ ಇಡೀ ಪ್ರಕರಣವೇ ನಕಲಿ ಎಂದು ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ.

ಆರ್ಯನ್ ಖಾನ್ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಪಿ ಗೋಸಾವಿಯ ವೈಯಕ್ತಿಕ ಅಂಗರಕ್ಷಕ ಎಂದು ಹೇಳಿಕೊಳ್ಳುವ ಪ್ರಭಾಕರ್ ಸೈಲ್, ಅಕ್ಟೋಬರ್ 3 ರಂದು ಸ್ಯಾಮ್ ಡಿಸೋಜಾ ಮತ್ತು ಕೆ.ಪಿ ಗೋಸಾವಿ ನಡುವೆ 18 ಕೋಟಿ ರೂಪಾಯಿ ಒಪ್ಪಂದದ ಬಗ್ಗೆ ನಡೆದ ಸಂಭಾಷಣೆಯನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ. ಇದರಲ್ಲಿ 8 ಕೋಟಿ ರೂಪಾಯಿಗಳನ್ನು ಎನ್‌ಸಿಬಿ ಅಧಿಕಾರಿ  ಸಮೀರ್ ವಾಂಖೆಡೆಗೆ ನೀಡಬೇಕಾಗುತ್ತದೆ ಎಂದು ಹೇಳಿದ್ದರು ಎಂದು ಆರೋಪಿಸಿದ್ದಾರೆ.

ಅಕ್ಟೋಬರ್ 3 ರ ಸಂಜೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ, ಕೆ.ಪಿ ಗೋಸಾವಿ ಮತ್ತು ಇನ್ನೊಬ್ಬ ವ್ಯಕ್ತಿ ಸ್ಯಾಮ್ ಡಿಸೋಜಾ ಅವರು ಕಾರಿನೊಳಗೆ 15 ನಿಮಿಷಗಳ ಸಭೆ ನಡೆಸಿದರು ಎಂದಿದ್ದಾರೆ. ಈ  ಪ್ರಕರಣದಲ್ಲಿ ಎನ್‌ಸಿಬಿ ಹೆಸರಿಸಿರುವ ಒಂಬತ್ತು ಸಾಕ್ಷಿಗಳಲ್ಲಿ ಪ್ರಭಾಕರ್ ಸೈಲ್ ಕೂಡ ಒಬ್ಬರು. ಆದರೆ ಈ ಆರೋಪವನ್ನು ಎನ್‌ಸಿಬಿ ನಿರಾಕರಿಸಿದೆ.


ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣದ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಮಾತುಕತೆಯ ಪೋಟೋಗಳು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫ್ರೀಡಂ ಪಾರ್ಕ್‌: ಧರಣಿಗೆ 1 ಲಕ್ಷ ರೂ. ಶುಲ್ಕ? ಜಿಬಿಎ ನಡೆಗೆ ಹೋರಾಟಗಾರರ ಆಕ್ರೋಶ

ಬೆಂಗಳೂರಿನ ಐತಿಹಾಸಿಕ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಹಾಗೂ ಧರಣಿ ನಡೆಸಲು ದಿನಕ್ಕೆ 1 ಲಕ್ಷ ರೂ. ಶುಲ್ಕ ಮತ್ತು 10,000 ರೂ. ಮುಂಗಡ ಠೇವಣಿ ವಿಧಿಸಲಾಗುತ್ತಿದೆ ಎಂಬ ಸುದ್ದಿ ಸಾರ್ವಜನಿಕ ಹಾಗೂ ಹೋರಾಟಗಾರರ...

ಅಧಿಕಾರದಲ್ಲಿರುವವರ ವಿರುದ್ಧ ಮಾತನಾಡುವ ಭಯವನ್ನು ನೀಟ್ ಚಳವಳಿ ಹೋಗಲಾಡಿಸಿದೆ: ನೇಹಾ ಬೋರಾ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ 'ಜೆನ್ ಜಿ' ಚಳವಳಿಯು ಜನರಲ್ಲಿದ್ದ ಭಯವನ್ನು ಹೋಗಲಾಡಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಹಾಗೂ ಆರ್‌ಎಸ್‌ಎಸ್‌ನವರು ವಿದ್ಯಾರ್ಥಿ ಮತ್ತು ಯುವಜನರನ್ನು ತಲುಪುವಂತೆ ಮಾಡಿದೆ ಎಂದು ಆಲ್...

Karnataka SIR : ನಿರ್ದೋಷಿ ಜನರೇಕೆ ದಾಖಲೆಗಾಗಿ ಅಲೆದಾಡಬೇಕು? ಲಾಜಿಕಲ್ ಡಿಸ್ಕ್ರಿಪೆನ್ಸಿ ನೋಟಿಸ್‌ಗೆ ನಾಗರಿಕ ಸಂಘಟನೆಗಳ ಆಕ್ಷೇಪ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಭಾಗವಾಗಿ ಮತದಾರರಿಗೆ ನೋಟಿಸ್ ನೀಡಲು ಮುಂದಾಗಿರುವ ಚುನಾವಣಾ ಆಯೋಗದ ಕ್ರಮವನ್ನು ನಾಗರಿಕ ಸಂಘಟನೆಗಳು ತೀವ್ರವಾಗಿ ವಿರೋಧಿಸಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ...

ಮಳೆಯೇ ಇಲ್ಲದೆ ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಕಾರಣವೇನು?

ನೇಪಾಳ-ಟಿಬೆಟ್ ಗಡಿಭಾಗದ ಹಿಮಾಲಯ ಪ್ರದೇಶದಲ್ಲಿ ಹಿಮನದಿ ಇದ್ದಕ್ಕಿದ್ದಂತೆ ಕರಗಿ ಕುಸಿದ ಪರಿಣಾಮ ಭೀಕರ ಪ್ರವಾಹ ಉಂಟಾಗಿದೆ. ಈ ವಿಕೋಪದಲ್ಲಿ ಇದುವರೆಗೆ 160ಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ದೃಢಪಟ್ಟಿದ್ದು, 800ಕ್ಕೂ ಹೆಚ್ಚು ವಿದೇಶಿ ಪ್ರವಾಸಿಗರು...

ರಾಹುಲ್ ಗಾಂಧಿ ಅವರ ‘ಛಾತ್ರೋನ್ ಕೀ ಗೂಂಜ್’ಗೆ ಹೇಳಿಕೆಗಳ ಫ್ಯಾಕ್ಟ್-ಚೆಕ್: ಬಿಜೆಪಿಯಿಂದ ‘ಜೂಠ್ ಕೀ ಗೂಂಜ್’ ವೆಬ್‌ಸೈಟ್ ಆರಂಭ

ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್‌ ಸಂಸದ ರಾಹುಲ್ ಗಾಂಧಿ ಅವರ 'ಛಾತ್ರೋನ್ ಕೀ ಗೂಂಜ್' ಅಭಿಯಾನದ ವೇಳೆ ನೀಡಲಾದ ಹೇಳಿಕೆಗಳನ್ನು ಫ್ಯಾಕ್ಟ್-ಚೆಕ್ (ಸತ್ಯಾಸತ್ಯತೆ ಪರಿಶೀಲನೆ) ಮಾಡುವ ವೆಬ್‌ಸೈಟ್‌ ಒಂದನ್ನು ಉಲ್ಲೇಖಿಸಿರುವ ಬಿಜೆಪಿ, "ರಾಹುಲ್...

101 ತಾಲ್ಲೂಕುಗಳನ್ನು ಬರಪೀಡಿತ ಎಂದು ಅಧಿಕೃತವಾಗಿ ಘೋಷಿಸಿದ ರಾಜ್ಯ ಸರ್ಕಾರ

ಮಳೆ ಕೊರತೆಯಿಂದ ತತ್ತರಿಸಿರುವ ಕರ್ನಾಟಕದಲ್ಲಿ ತೀವ್ರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ಮೊದಲ ಹಂತದಲ್ಲಿ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬರ ನಿರ್ವಹಣೆ ಮತ್ತು ಪರಿಹಾರ ಕಾರ್ಯಗಳಿಗಾಗಿ ಸರ್ಕಾರವು ₹350...

ಕೊಟ್ಟ ಭರವಸೆ ಈಡೇರಿಸದ ಕೇಂದ್ರ ಸರ್ಕಾರ: ಸೆಪ್ಟೆಂಬರ್ 5ರಂದು ಸಿಜೆಪಿಯಿಂದ ದೆಹಲಿಯಲ್ಲಿ ಶಾಂತಿಯುತ ಮೆರವಣಿಗೆ

ಜುಲೈ 25ರಂದು ದೇಶದ ಯುವಜನತೆಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), ಸೆಪ್ಟೆಂಬರ್ 5ರಂದು ರಾಷ್ಟ್ರ ರಾಜಧಾನಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸುವುದಾಗಿ...

Karnataka SIR : ಮತಹರಣದ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ನಾಗರಿಕ ಸಂಘಟನೆಗಳು

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಉಂಟಾದ ಮತಹರಣದ ವಿರುದ್ಧ ಕಾನೂನು ಸಮರ ನಡೆಸಲು ನಾಗರಿಕ ಸಂಘಟನೆಗಳು ಮುಂದಾಗಿವೆ. ಆಗಸ್ಟ್ 25ರಂದು ಎಸ್‌ಐಆರ್‌ಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗದ ವಿರುದ್ದ...

ಬೆಂಗಳೂರು ನ್ಯಾಷನಲ್ ಲಾ ಸ್ಕೂಲ್ ಘಟಿಕೋತ್ಸವ ರದ್ದು: ಸಿಜೆಐ, ಬಾರ್ ಕೌನ್ಸಿಲ್ ಮುಖ್ಯಸ್ಥರ ಆಹ್ವಾನಕ್ಕೆ ವಿದ್ಯಾರ್ಥಿಗಳ ತೀವ್ರ ವಿರೋಧ!

ಬೆಂಗಳೂರು: ದೇಶದ ಪ್ರತಿಷ್ಠಿತ ಕಾನೂನು ಶಿಕ್ಷಣ ಸಂಸ್ಥೆಯಾದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿ (NLSIU), ತನ್ನ 34ನೇ ವಾರ್ಷಿಕ ಘಟಿಕೋತ್ಸವ ಸಮಾರಂಭವನ್ನು ದಿಢೀರ್ ರದ್ದುಗೊಳಿಸಿದೆ. ಸೆಪ್ಟೆಂಬರ್ 12 ರಂದು...

ತಮಿಳುನಾಡು| ದಲಿತ ಯುವಕನ ಲಾಕಪ್ ಡೆತ್ ಪ್ರಕರಣ; ಆರು ಜನ ಪೊಲೀಸರ ವಿರುದ್ಧ ಪ್ರಕರಣ ದಾಖಲು

ಕಲೆದ ಮಾರ್ಚ್‌ನಲ್ಲಿ ತಮಿಳುನಾಡಿನ ಶಿವಗಂಗೈ ಜಿಲ್ಲೆಯಲ್ಲಿ ನಡೆಸಿದ್ದ 26 ವರ್ಷದ ದಲಿತ ಯುವಕ ಆಕಾಶ್ ಡೆಲಿಸನ್ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿ-ಸಿಐಡಿ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯಲ್ಲಿ (ಚಾರ್ಜ್‌ಶೀಟ್), ಆರೋಪಿಗಳಾದ ಆರು ಮಂದಿ...