Homeಮುಖಪುಟವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

ವಂಚನೆ ಪ್ರಕರಣ: ಆರ್ಯನ್ ಖಾನ್ ಪ್ರಕರಣದ ಸಾಕ್ಷಿ ಕೆ.ಪಿ ಗೋಸಾವಿ ಬಂಧನ

- Advertisement -
- Advertisement -

ಮುಂಬೈ ಕರಾವಳಿಯ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ಎನ್‌ಸಿಬಿ ದಾಳಿ ನಡೆಸಿ ಬಾಲಿವುಡ್ ನಟ ಶಾರುಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ ಏಳು ಮಂದಿಯನ್ನು ಬಂಧಿಸಿದ್ದ ಪ್ರಕರಣದ ವಿವಾದಾತ್ಮಕ ಸ್ವತಂತ್ರ ಸಾಕ್ಷಿಯಾಗಿದ್ದ ಕೆ.ಪಿ ಗೋಸಾವಿಯನ್ನು ವಂಚನೆ ಪ್ರಕರಣದಲ್ಲಿ ಪುಣೆಯಲ್ಲಿ ಬಂಧಿಸಲಾಗಿದೆ.

ಗೋಸಾವಿ ಎನ್‌ಸಿಬಿಯ ಸಾಕ್ಷಿಯಾಗಿದ್ದರೂ ಇಷ್ಟು ದಿನ ನಾಪತ್ತೆಯಾಗಿದ್ದ. 2018ರ ವಂಚನೆ ಪ್ರಕರಣ ಆತನ ಮೇಲಿದ್ದು ಆತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿತ್ತು. ತನಗೆ ಮಹಾರಾಷ್ಟ್ರದಲ್ಲಿ ಜೀವ ಬೆದರಿಕೆಯಿರುವುದರಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ಪೊಲೀಸರ ಮುಂದೆ ಶರಣಾಗುವುದಾಗಿ ಈತ ಮೂರು ದಿನದ ಹಿಂದೆ ಹೇಳಿಕೆ ನೀಡಿದ್ದ. ಆತನ ಆರೋಪವನ್ನು ಪೊಲೀಸರು ತಳ್ಳಿ ಹಾಕಿದ್ದರು.

ತನ್ನನ್ನು ಖಾಸಗಿ ತನಿಖಾಧಿಕಾರಿ ಎಂದು ಹೇಳಿಕೊಳ್ಳುವ ಕೆ.ಪಿ. ಗೋಸಾವಿ, ಬಂಧಿತ ಆರೋಪಿ ಆರ್ಯನ್ ಖಾನ್ ಅವರೊಂದಿಗೆ ಸೆಲ್ಫಿ ಮತ್ತು ಹಲವಾರು ವಿಡಿಯೊಗಳನ್ನು ತೆಗೆದುಕೊಳ್ಳುವುದು ಮಾಡಿದ್ದರು. ಈತ ಪ್ರಕರಣದ ‘ಸ್ವತಂತ್ರ ಸಾಕ್ಷಿ’ ಎಂದು ಎನ್‌ಸಿಬಿ ಹೇಳಿತ್ತು. ಸದ್ಯ ದಾಳಿ ನಡೆದ ಅಕ್ಟೋಬರ್‌ 2 ರಂದು ಕೇಸ್‌ನ ಸ್ವತಂತ್ರ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಬಂದರಿನಲ್ಲಿರುವ ಎನ್‌ಸಿಬಿ ಕಚೇರಿಯ ಒಳಗೆ ಎನ್‌ಸಿಬಿ ಅಧಿಕಾರಿಗಳೊಟ್ಟಿಗೆ ಕಾಣಿಸಿಕೊಂಡಿರುವ ಪೋಟೋಗಳು ವೈರಲ್ ಆಗಿವೆ. ಅದರೊಂದಿಗೆ ಎನ್‌ಸಿಬಿ ದಾಳಿಗೆ ಮಾಹಿತಿ ಒದಗಿಸಿದ್ದಾರೆ ಎನ್ನಲಾಗಿರುವ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಅಂದು ದಾಳಿಯಲ್ಲಿ ಬಂಧಿಸಲ್ಪಟ್ಟ ಇಬ್ಬರೊಂದಿಗೆ ಎನ್‌ಸಿಬಿ ಅಧಿಕಾರಿ ಸಮೀರ್‌ ವಾಂಖೆಡೆ ಮಾತುಕತೆ ನಡೆಸುತ್ತಿರುವುದು ವೈರಲ್ ಆಗಿದೆ.

PC: NDTV

PC: NDTV (ದಾಳಿ ದಿನ ಮುಂಬೈ ಬಂದರಿನ ಒಳಗಿನ ಫೋಟೋಗಳು, ಕೆಪಿ ಗೋಸಾವಿ ಜೊತೆ ಸಮೀರ್ ವಾಂಖೆಡೆ ಕಾಣಿಸಿಕೊಂಡಿರುವುದು)

ಇತ್ತ ಬಿಜೆಪಿ ಕಾರ್ಯಕರ್ತ ಮನೀಷ್ ಭಾನುಸಾಲಿ ಮತ್ತು ಗೋಸಾವಿ ಕೇವಲ ಮಾಹಿತಿದಾರ ಮತ್ತು ಸಾಕ್ಷಿಯಾಗಿದ್ದಲ್ಲಿ, ಎನ್‌ಸಿಬಿ ದಾಳಿಯಲ್ಲಿ ಭಾಗವಹಿಸಲು ಮತ್ತು ಬಂಧಿತರೊಂದಿಗೆ ಸಂವಹನ ನಡೆಸಲು ಹೇಗೆ  ಅನುಮತಿ ನೀಡಲಾಗಿದೆ ಎಂಬುದು ಹಲವರ ಪ್ರಶ್ನೆಯಾಗಿದೆ. ಹಾಗಾಗಿ ಇಡೀ ಪ್ರಕರಣವೇ ನಕಲಿ ಎಂದು ಮಹಾರಾಷ್ಟ್ರ ಸರ್ಕಾರ ವಾದಿಸುತ್ತಿದೆ.

ಆರ್ಯನ್ ಖಾನ್ ಪ್ರಕರಣದಲ್ಲಿ ಬಂಧಿತನಾಗಿರುವ ಕೆ.ಪಿ ಗೋಸಾವಿಯ ವೈಯಕ್ತಿಕ ಅಂಗರಕ್ಷಕ ಎಂದು ಹೇಳಿಕೊಳ್ಳುವ ಪ್ರಭಾಕರ್ ಸೈಲ್, ಅಕ್ಟೋಬರ್ 3 ರಂದು ಸ್ಯಾಮ್ ಡಿಸೋಜಾ ಮತ್ತು ಕೆ.ಪಿ ಗೋಸಾವಿ ನಡುವೆ 18 ಕೋಟಿ ರೂಪಾಯಿ ಒಪ್ಪಂದದ ಬಗ್ಗೆ ನಡೆದ ಸಂಭಾಷಣೆಯನ್ನು ಕೇಳಿದ್ದೇನೆ ಎಂದು ಹೇಳಿದ್ದಾರೆ. ಇದರಲ್ಲಿ 8 ಕೋಟಿ ರೂಪಾಯಿಗಳನ್ನು ಎನ್‌ಸಿಬಿ ಅಧಿಕಾರಿ  ಸಮೀರ್ ವಾಂಖೆಡೆಗೆ ನೀಡಬೇಕಾಗುತ್ತದೆ ಎಂದು ಹೇಳಿದ್ದರು ಎಂದು ಆರೋಪಿಸಿದ್ದಾರೆ.

ಅಕ್ಟೋಬರ್ 3 ರ ಸಂಜೆ ಬಾಲಿವುಡ್ ನಟ ಶಾರುಖ್ ಖಾನ್ ಅವರ ಮ್ಯಾನೇಜರ್ ಪೂಜಾ ದದ್ಲಾನಿ, ಕೆ.ಪಿ ಗೋಸಾವಿ ಮತ್ತು ಇನ್ನೊಬ್ಬ ವ್ಯಕ್ತಿ ಸ್ಯಾಮ್ ಡಿಸೋಜಾ ಅವರು ಕಾರಿನೊಳಗೆ 15 ನಿಮಿಷಗಳ ಸಭೆ ನಡೆಸಿದರು ಎಂದಿದ್ದಾರೆ. ಈ  ಪ್ರಕರಣದಲ್ಲಿ ಎನ್‌ಸಿಬಿ ಹೆಸರಿಸಿರುವ ಒಂಬತ್ತು ಸಾಕ್ಷಿಗಳಲ್ಲಿ ಪ್ರಭಾಕರ್ ಸೈಲ್ ಕೂಡ ಒಬ್ಬರು. ಆದರೆ ಈ ಆರೋಪವನ್ನು ಎನ್‌ಸಿಬಿ ನಿರಾಕರಿಸಿದೆ.


ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣದ ಸಾಕ್ಷಿ, ಬಿಜೆಪಿ ಕಾರ್ಯಕರ್ತ, ಎನ್‌ಸಿಬಿ ಅಧಿಕಾರಿ ಮಾತುಕತೆಯ ಪೋಟೋಗಳು ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...