Homeಕರ್ನಾಟಕದಲಿತ ಮಹಿಳೆಗೆ ವಂಚನೆ; ಕಸಾಪ ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ಗುರುತರ ಆರೋಪ

ದಲಿತ ಮಹಿಳೆಗೆ ವಂಚನೆ; ಕಸಾಪ ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ಗುರುತರ ಆರೋಪ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಅಧ್ಯಕ್ಷ ಮಹೇಶ ಜೋಶಿಯವರು ಮಹಿಳಾ ನೌಕರರೊಬ್ಬರಿಗೆ ವಂಚನೆ ಮಾಡಿದ್ದಾರೆಂಬ ಗುರುತರ ಆರೋಪ ಹೊರಬಿದ್ದಿದೆ.

ಪ್ರಕರಣವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೆಟ್ಟಿಲೇರಿದ್ದು, ಕಸಾಪ ಕಾರ್ಯದರ್ಶಿಗೆ ಇಲಾಖೆಯ ನಿರ್ದೇಶಕರು ಪತ್ರ ಬರೆದಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೇವೆಯಲ್ಲಿರುವ ಕೆ.ನಾಗರತ್ನಮ್ಮನವರು ಹಾಲಿ ಅಧೀಕ್ಷಕ ಹುದ್ದೆಯಲ್ಲಿದ್ದು, ಖಾಲಿ ಇರುವ ವ್ಯವಸ್ಥಾಪಕ ಹುದ್ದೆಗೆ ಅರ್ಹರಾಗಿರುತ್ತಾರೆ. ಇವರು ಇರಬೇಕಾದ ಹುದ್ದೆಯಲ್ಲಿ ಇವರಿಗಿಂತ ಕಿರಿಯ ಹುದ್ದೆಯ ಪ್ರಥಮ ದರ್ಜೆ ಸಹಾಯಕ ಪಾರ್ಶ್ವನಾಥ ಅವರನ್ನು ಪ್ರಭಾರದಲ್ಲಿ ಇರಿಸಿರುವುದು ವಿವಾದಕ್ಕೆ ಕಾರಣವಾಗಿದೆ.

“ವ್ಯವಸ್ಥಾಪಕ ಹುದ್ದೆಯನ್ನು ಕೆ.ನಾಗರತ್ನಮ್ಮ ಅವರಿಗೆ ನೀಡದೆ ಮಹೇಶ ಜೋಶಿಯವರು ವಂಚನೆ ಮಾಡಿದ್ದಾರೆ. ಮಹಿಳಾ ನೌಕರರಾದ ನಾಗರತ್ನಮ್ಮನವರಿಗೆ ರಕ್ಷಣೆ ನೀಡದೆ ನಿರ್ಲಕ್ಷ್ಯ ಮಾಡಲಾಗಿದೆ. ದಲಿತರ ರಕ್ಷಣೆಗಾಗಿ ಇರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಗಮನಕ್ಕೂ ಈ ವಿಷಯವನ್ನು ತರಲಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಸಾಹಿತ್ಯ ಪರಿಷತ್‌ನಲ್ಲಿ ಈ ದಲಿತ ಮಹಿಳೆ ಮಾನಸಿಕ ಅಪಮಾನಕ್ಕೆ ಗುರಿಯಾಗಿದ್ದಾರೆ. ಇದರ ಮೂಲಕ ದಲಿತ ಮಹಿಳೆಗೆ ವಂಚನೆ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ. ಸದರಿ ವಿಷಯದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಂಪೂರ್ಣ ವರದಿಯನ್ನು ತುರ್ತಾಗಿ ಇಲಾಖೆಗೆ ಸಲ್ಲಿಸುವಂತೆ ತಿಳಿಸಲಾಗಿದೆ. ಮಾಹಿತಿ ಹಕ್ಕು ಅಧಿನಿಯಮದಡಿ ಇಲಾಖೆಯಲ್ಲಿ ಸ್ವೀಕೃತವಾಗಿರುವ ಮನವಿಗಳನ್ನು ಕಸಾಪಕ್ಕೆ ವರ್ಗಾಯಿಸಿ ಮಾಹಿತಿಯನ್ನು ಸಂಬಂಧಪಟ್ಟವರಿಗೆ ನೀಡಿ ಅದರ ಪ್ರತಿಯನ್ನು ಇಲಾಖೆಗೆ ಕಳುಹಿಸಿಕೊಡಲು ತಿಳಿಸಲಾಗಿದೆ. ಆದರೆ ಇಲ್ಲಿಯವರೆಗೂ ತಮ್ಮಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪತ್ರಗಳು ಬಂದಿಲ್ಲ” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

“ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಮಹಾಸಭಾವು ಮಾಹಿತಿ ಹಕ್ಕು ಅಧಿನಿಯಮದಡಿ ಮೊದಲೇ ಮೇಲ್ಮನವಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿದೆ. ಮೇಲ್ಮನವಿ ಅರ್ಜಿಯನ್ನು ಇತ್ಯರ್ಥ ಪಡಿಸಬೇಕಾಗಿರುವುದರಿಂದ ದಲಿತ ಮಹಾಸಭಾದವರು ಮಾಹಿತಿ ಹಕ್ಕು ಅಧಿನಿಯಮದಡಿ ಕೋರಿರುವ ಮಾಹಿತಿಯನ್ನು ನೀಡಲಾಗಿದಯೇ? ಅಥವಾ ಇಲ್ಲವೇ ಎಂಬ ಬಗ್ಗೆ ಈ ಪತ್ರ ತಲುಪಿದ ದಿನವೇ ಕಳುಹಿಸಿಕೊಡಬೇಕು” ಎಂದು ಪತ್ರದಲ್ಲಿ ಕೋರಲಾಗಿದೆ.

ಇದನ್ನೂ ಓದಿರಿ: ಶುರುವಾದ ಮಹೇಶ ಜೋಶಿ ಮಂತ್ರಗಳು!

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಮಾಹಿತಿ ಹಕ್ಕು ತಜ್ಞರಾದ ಜೆ.ಎಂ.ರಾಜಶೇಖರ ಅವರು, “ದಲಿತ ಮಹಿಳೆಗೆ ವಂಚನೆ ಸಂಬಂಧ ಮಹೇಶ ಜೋಷಿ ವಿರುದ್ಧ ತನಿಖೆಗೆ ದೂರು. ದಿನಕ್ಕೊಂದೊಂದು ರಾದ್ಧಾಂತ ಮೈಮೇಲೆಳೆದುಕೊಂಡು ಕಸಾಪ ಮಾನ, ಘನತೆ ಹರಾಜು ಹಾಕುತ್ತಿರುವ ಹೆಸರಾಂತ ನಾಡಿನ ಸಾಹಿತಿ! ಏನ್ ಗ್ರಹಚಾರನಪ ಛೇ ಛೇ ಛೇ!?” ಎಂದು ಟೀಕಿಸಿದ್ದಾರೆ.

ಮಹೇಶ ಜೋಶಿಯವರ ಸರ್ವಾಧಿಕಾರ

ಕಸಾಪ ಅಧ್ಯಕ್ಷರಾದ ಮಹೇಶ ಜೋಶಿ ಅವರು ವಿಶ್ವ ಮಹಿಳಾ ದಿನಾಚರಣೆಯ ದಿನದಂದು ದೂರದರ್ಶನದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅವರನ್ನು ಕಸಾಪ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಸರ್ವಾಧಿಕಾರತ್ವ ಪ್ರದರ್ಶಿಸಿದ್ದರು. ಅಧ್ಯಕ್ಷ ಜೋಶಿ ಅವರ ಈ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ ವ್ಯಕ್ತವಾಗಿತ್ತು.

ಹಾವೇರಿಯಲ್ಲಿ ನಡೆದ 8ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಮಲಾ ಸಿ. ಎಲಿಗಾರ್ ಅವರು, ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಪರಿಷತ್ತಿನ ಅಧ್ಯಕ್ಷರೊಂದಿಗೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದ್ದರು. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ಕಸಾಪ ವಿರುದ್ಧ ಒಂದು ನಿಮಿಷದ ಮೌನಾಚರಣೆ ಮಾಡಿದ್ದರು. ಇದು ಮಹೇಶ ಜೋಶಿಯವರ ಕಣ್ಣು ಕೆಂಪಾಗಲು ಕಾರಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...