Homeಕರ್ನಾಟಕದಲಿತ ಮಹಿಳೆಗೆ ವಂಚನೆ; ಕಸಾಪ ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ಗುರುತರ ಆರೋಪ

ದಲಿತ ಮಹಿಳೆಗೆ ವಂಚನೆ; ಕಸಾಪ ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ಗುರುತರ ಆರೋಪ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಅಧ್ಯಕ್ಷ ಮಹೇಶ ಜೋಶಿಯವರು ಮಹಿಳಾ ನೌಕರರೊಬ್ಬರಿಗೆ ವಂಚನೆ ಮಾಡಿದ್ದಾರೆಂಬ ಗುರುತರ ಆರೋಪ ಹೊರಬಿದ್ದಿದೆ.

ಪ್ರಕರಣವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೆಟ್ಟಿಲೇರಿದ್ದು, ಕಸಾಪ ಕಾರ್ಯದರ್ಶಿಗೆ ಇಲಾಖೆಯ ನಿರ್ದೇಶಕರು ಪತ್ರ ಬರೆದಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೇವೆಯಲ್ಲಿರುವ ಕೆ.ನಾಗರತ್ನಮ್ಮನವರು ಹಾಲಿ ಅಧೀಕ್ಷಕ ಹುದ್ದೆಯಲ್ಲಿದ್ದು, ಖಾಲಿ ಇರುವ ವ್ಯವಸ್ಥಾಪಕ ಹುದ್ದೆಗೆ ಅರ್ಹರಾಗಿರುತ್ತಾರೆ. ಇವರು ಇರಬೇಕಾದ ಹುದ್ದೆಯಲ್ಲಿ ಇವರಿಗಿಂತ ಕಿರಿಯ ಹುದ್ದೆಯ ಪ್ರಥಮ ದರ್ಜೆ ಸಹಾಯಕ ಪಾರ್ಶ್ವನಾಥ ಅವರನ್ನು ಪ್ರಭಾರದಲ್ಲಿ ಇರಿಸಿರುವುದು ವಿವಾದಕ್ಕೆ ಕಾರಣವಾಗಿದೆ.

“ವ್ಯವಸ್ಥಾಪಕ ಹುದ್ದೆಯನ್ನು ಕೆ.ನಾಗರತ್ನಮ್ಮ ಅವರಿಗೆ ನೀಡದೆ ಮಹೇಶ ಜೋಶಿಯವರು ವಂಚನೆ ಮಾಡಿದ್ದಾರೆ. ಮಹಿಳಾ ನೌಕರರಾದ ನಾಗರತ್ನಮ್ಮನವರಿಗೆ ರಕ್ಷಣೆ ನೀಡದೆ ನಿರ್ಲಕ್ಷ್ಯ ಮಾಡಲಾಗಿದೆ. ದಲಿತರ ರಕ್ಷಣೆಗಾಗಿ ಇರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಗಮನಕ್ಕೂ ಈ ವಿಷಯವನ್ನು ತರಲಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಸಾಹಿತ್ಯ ಪರಿಷತ್‌ನಲ್ಲಿ ಈ ದಲಿತ ಮಹಿಳೆ ಮಾನಸಿಕ ಅಪಮಾನಕ್ಕೆ ಗುರಿಯಾಗಿದ್ದಾರೆ. ಇದರ ಮೂಲಕ ದಲಿತ ಮಹಿಳೆಗೆ ವಂಚನೆ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ. ಸದರಿ ವಿಷಯದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಂಪೂರ್ಣ ವರದಿಯನ್ನು ತುರ್ತಾಗಿ ಇಲಾಖೆಗೆ ಸಲ್ಲಿಸುವಂತೆ ತಿಳಿಸಲಾಗಿದೆ. ಮಾಹಿತಿ ಹಕ್ಕು ಅಧಿನಿಯಮದಡಿ ಇಲಾಖೆಯಲ್ಲಿ ಸ್ವೀಕೃತವಾಗಿರುವ ಮನವಿಗಳನ್ನು ಕಸಾಪಕ್ಕೆ ವರ್ಗಾಯಿಸಿ ಮಾಹಿತಿಯನ್ನು ಸಂಬಂಧಪಟ್ಟವರಿಗೆ ನೀಡಿ ಅದರ ಪ್ರತಿಯನ್ನು ಇಲಾಖೆಗೆ ಕಳುಹಿಸಿಕೊಡಲು ತಿಳಿಸಲಾಗಿದೆ. ಆದರೆ ಇಲ್ಲಿಯವರೆಗೂ ತಮ್ಮಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪತ್ರಗಳು ಬಂದಿಲ್ಲ” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

“ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಮಹಾಸಭಾವು ಮಾಹಿತಿ ಹಕ್ಕು ಅಧಿನಿಯಮದಡಿ ಮೊದಲೇ ಮೇಲ್ಮನವಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿದೆ. ಮೇಲ್ಮನವಿ ಅರ್ಜಿಯನ್ನು ಇತ್ಯರ್ಥ ಪಡಿಸಬೇಕಾಗಿರುವುದರಿಂದ ದಲಿತ ಮಹಾಸಭಾದವರು ಮಾಹಿತಿ ಹಕ್ಕು ಅಧಿನಿಯಮದಡಿ ಕೋರಿರುವ ಮಾಹಿತಿಯನ್ನು ನೀಡಲಾಗಿದಯೇ? ಅಥವಾ ಇಲ್ಲವೇ ಎಂಬ ಬಗ್ಗೆ ಈ ಪತ್ರ ತಲುಪಿದ ದಿನವೇ ಕಳುಹಿಸಿಕೊಡಬೇಕು” ಎಂದು ಪತ್ರದಲ್ಲಿ ಕೋರಲಾಗಿದೆ.

ಇದನ್ನೂ ಓದಿರಿ: ಶುರುವಾದ ಮಹೇಶ ಜೋಶಿ ಮಂತ್ರಗಳು!

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಮಾಹಿತಿ ಹಕ್ಕು ತಜ್ಞರಾದ ಜೆ.ಎಂ.ರಾಜಶೇಖರ ಅವರು, “ದಲಿತ ಮಹಿಳೆಗೆ ವಂಚನೆ ಸಂಬಂಧ ಮಹೇಶ ಜೋಷಿ ವಿರುದ್ಧ ತನಿಖೆಗೆ ದೂರು. ದಿನಕ್ಕೊಂದೊಂದು ರಾದ್ಧಾಂತ ಮೈಮೇಲೆಳೆದುಕೊಂಡು ಕಸಾಪ ಮಾನ, ಘನತೆ ಹರಾಜು ಹಾಕುತ್ತಿರುವ ಹೆಸರಾಂತ ನಾಡಿನ ಸಾಹಿತಿ! ಏನ್ ಗ್ರಹಚಾರನಪ ಛೇ ಛೇ ಛೇ!?” ಎಂದು ಟೀಕಿಸಿದ್ದಾರೆ.

ಮಹೇಶ ಜೋಶಿಯವರ ಸರ್ವಾಧಿಕಾರ

ಕಸಾಪ ಅಧ್ಯಕ್ಷರಾದ ಮಹೇಶ ಜೋಶಿ ಅವರು ವಿಶ್ವ ಮಹಿಳಾ ದಿನಾಚರಣೆಯ ದಿನದಂದು ದೂರದರ್ಶನದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅವರನ್ನು ಕಸಾಪ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಸರ್ವಾಧಿಕಾರತ್ವ ಪ್ರದರ್ಶಿಸಿದ್ದರು. ಅಧ್ಯಕ್ಷ ಜೋಶಿ ಅವರ ಈ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ ವ್ಯಕ್ತವಾಗಿತ್ತು.

ಹಾವೇರಿಯಲ್ಲಿ ನಡೆದ 8ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಮಲಾ ಸಿ. ಎಲಿಗಾರ್ ಅವರು, ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಪರಿಷತ್ತಿನ ಅಧ್ಯಕ್ಷರೊಂದಿಗೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದ್ದರು. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ಕಸಾಪ ವಿರುದ್ಧ ಒಂದು ನಿಮಿಷದ ಮೌನಾಚರಣೆ ಮಾಡಿದ್ದರು. ಇದು ಮಹೇಶ ಜೋಶಿಯವರ ಕಣ್ಣು ಕೆಂಪಾಗಲು ಕಾರಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...