Homeಕರ್ನಾಟಕದಲಿತ ಮಹಿಳೆಗೆ ವಂಚನೆ; ಕಸಾಪ ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ಗುರುತರ ಆರೋಪ

ದಲಿತ ಮಹಿಳೆಗೆ ವಂಚನೆ; ಕಸಾಪ ಅಧ್ಯಕ್ಷ ಮಹೇಶ ಜೋಶಿ ವಿರುದ್ಧ ಗುರುತರ ಆರೋಪ

- Advertisement -
- Advertisement -

ಕನ್ನಡ ಸಾಹಿತ್ಯ ಪರಿಷತ್‌ (ಕಸಾಪ) ಅಧ್ಯಕ್ಷ ಮಹೇಶ ಜೋಶಿಯವರು ಮಹಿಳಾ ನೌಕರರೊಬ್ಬರಿಗೆ ವಂಚನೆ ಮಾಡಿದ್ದಾರೆಂಬ ಗುರುತರ ಆರೋಪ ಹೊರಬಿದ್ದಿದೆ.

ಪ್ರಕರಣವು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮೆಟ್ಟಿಲೇರಿದ್ದು, ಕಸಾಪ ಕಾರ್ಯದರ್ಶಿಗೆ ಇಲಾಖೆಯ ನಿರ್ದೇಶಕರು ಪತ್ರ ಬರೆದಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಸೇವೆಯಲ್ಲಿರುವ ಕೆ.ನಾಗರತ್ನಮ್ಮನವರು ಹಾಲಿ ಅಧೀಕ್ಷಕ ಹುದ್ದೆಯಲ್ಲಿದ್ದು, ಖಾಲಿ ಇರುವ ವ್ಯವಸ್ಥಾಪಕ ಹುದ್ದೆಗೆ ಅರ್ಹರಾಗಿರುತ್ತಾರೆ. ಇವರು ಇರಬೇಕಾದ ಹುದ್ದೆಯಲ್ಲಿ ಇವರಿಗಿಂತ ಕಿರಿಯ ಹುದ್ದೆಯ ಪ್ರಥಮ ದರ್ಜೆ ಸಹಾಯಕ ಪಾರ್ಶ್ವನಾಥ ಅವರನ್ನು ಪ್ರಭಾರದಲ್ಲಿ ಇರಿಸಿರುವುದು ವಿವಾದಕ್ಕೆ ಕಾರಣವಾಗಿದೆ.

“ವ್ಯವಸ್ಥಾಪಕ ಹುದ್ದೆಯನ್ನು ಕೆ.ನಾಗರತ್ನಮ್ಮ ಅವರಿಗೆ ನೀಡದೆ ಮಹೇಶ ಜೋಶಿಯವರು ವಂಚನೆ ಮಾಡಿದ್ದಾರೆ. ಮಹಿಳಾ ನೌಕರರಾದ ನಾಗರತ್ನಮ್ಮನವರಿಗೆ ರಕ್ಷಣೆ ನೀಡದೆ ನಿರ್ಲಕ್ಷ್ಯ ಮಾಡಲಾಗಿದೆ. ದಲಿತರ ರಕ್ಷಣೆಗಾಗಿ ಇರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಗಮನಕ್ಕೂ ಈ ವಿಷಯವನ್ನು ತರಲಾಗಿದೆ” ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

“ಸಾಹಿತ್ಯ ಪರಿಷತ್‌ನಲ್ಲಿ ಈ ದಲಿತ ಮಹಿಳೆ ಮಾನಸಿಕ ಅಪಮಾನಕ್ಕೆ ಗುರಿಯಾಗಿದ್ದಾರೆ. ಇದರ ಮೂಲಕ ದಲಿತ ಮಹಿಳೆಗೆ ವಂಚನೆ ಮಾಡಿದ್ದಾರೆ. ಈ ಬಗ್ಗೆ ತನಿಖೆ ನಡೆಸುವಂತೆ ಮನವಿ ಸಲ್ಲಿಸಿದ್ದಾರೆ. ಸದರಿ ವಿಷಯದ ಬಗ್ಗೆ ನಿಯಮಾನುಸಾರ ಪರಿಶೀಲಿಸಿ, ಸಂಪೂರ್ಣ ವರದಿಯನ್ನು ತುರ್ತಾಗಿ ಇಲಾಖೆಗೆ ಸಲ್ಲಿಸುವಂತೆ ತಿಳಿಸಲಾಗಿದೆ. ಮಾಹಿತಿ ಹಕ್ಕು ಅಧಿನಿಯಮದಡಿ ಇಲಾಖೆಯಲ್ಲಿ ಸ್ವೀಕೃತವಾಗಿರುವ ಮನವಿಗಳನ್ನು ಕಸಾಪಕ್ಕೆ ವರ್ಗಾಯಿಸಿ ಮಾಹಿತಿಯನ್ನು ಸಂಬಂಧಪಟ್ಟವರಿಗೆ ನೀಡಿ ಅದರ ಪ್ರತಿಯನ್ನು ಇಲಾಖೆಗೆ ಕಳುಹಿಸಿಕೊಡಲು ತಿಳಿಸಲಾಗಿದೆ. ಆದರೆ ಇಲ್ಲಿಯವರೆಗೂ ತಮ್ಮಿಂದ ಈ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ ಪತ್ರಗಳು ಬಂದಿಲ್ಲ” ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರು ಪತ್ರದಲ್ಲಿ ಪ್ರಸ್ತಾಪಿಸಿದ್ದಾರೆ.

“ಸದರಿ ವಿಷಯಕ್ಕೆ ಸಂಬಂಧಿಸಿದಂತೆ ದಲಿತ ಮಹಾಸಭಾವು ಮಾಹಿತಿ ಹಕ್ಕು ಅಧಿನಿಯಮದಡಿ ಮೊದಲೇ ಮೇಲ್ಮನವಿ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿದೆ. ಮೇಲ್ಮನವಿ ಅರ್ಜಿಯನ್ನು ಇತ್ಯರ್ಥ ಪಡಿಸಬೇಕಾಗಿರುವುದರಿಂದ ದಲಿತ ಮಹಾಸಭಾದವರು ಮಾಹಿತಿ ಹಕ್ಕು ಅಧಿನಿಯಮದಡಿ ಕೋರಿರುವ ಮಾಹಿತಿಯನ್ನು ನೀಡಲಾಗಿದಯೇ? ಅಥವಾ ಇಲ್ಲವೇ ಎಂಬ ಬಗ್ಗೆ ಈ ಪತ್ರ ತಲುಪಿದ ದಿನವೇ ಕಳುಹಿಸಿಕೊಡಬೇಕು” ಎಂದು ಪತ್ರದಲ್ಲಿ ಕೋರಲಾಗಿದೆ.

ಇದನ್ನೂ ಓದಿರಿ: ಶುರುವಾದ ಮಹೇಶ ಜೋಶಿ ಮಂತ್ರಗಳು!

ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ಮಾಹಿತಿ ಹಕ್ಕು ತಜ್ಞರಾದ ಜೆ.ಎಂ.ರಾಜಶೇಖರ ಅವರು, “ದಲಿತ ಮಹಿಳೆಗೆ ವಂಚನೆ ಸಂಬಂಧ ಮಹೇಶ ಜೋಷಿ ವಿರುದ್ಧ ತನಿಖೆಗೆ ದೂರು. ದಿನಕ್ಕೊಂದೊಂದು ರಾದ್ಧಾಂತ ಮೈಮೇಲೆಳೆದುಕೊಂಡು ಕಸಾಪ ಮಾನ, ಘನತೆ ಹರಾಜು ಹಾಕುತ್ತಿರುವ ಹೆಸರಾಂತ ನಾಡಿನ ಸಾಹಿತಿ! ಏನ್ ಗ್ರಹಚಾರನಪ ಛೇ ಛೇ ಛೇ!?” ಎಂದು ಟೀಕಿಸಿದ್ದಾರೆ.

ಮಹೇಶ ಜೋಶಿಯವರ ಸರ್ವಾಧಿಕಾರ

ಕಸಾಪ ಅಧ್ಯಕ್ಷರಾದ ಮಹೇಶ ಜೋಶಿ ಅವರು ವಿಶ್ವ ಮಹಿಳಾ ದಿನಾಚರಣೆಯ ದಿನದಂದು ದೂರದರ್ಶನದ ಸಹಾಯಕ ನಿರ್ದೇಶಕಿ ನಿರ್ಮಲಾ ಎಲಿಗಾರ್ ಅವರನ್ನು ಕಸಾಪ ಸದಸ್ಯತ್ವದಿಂದ ಅಮಾನತು ಮಾಡುವ ಮೂಲಕ ಸರ್ವಾಧಿಕಾರತ್ವ ಪ್ರದರ್ಶಿಸಿದ್ದರು. ಅಧ್ಯಕ್ಷ ಜೋಶಿ ಅವರ ಈ ನಡೆಗೆ ಕಸಾಪ ಸದಸ್ಯರಿಂದಲೇ ವಿರೋಧ ವ್ಯಕ್ತವಾಗಿತ್ತು.

ಹಾವೇರಿಯಲ್ಲಿ ನಡೆದ 8ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಮಲಾ ಸಿ. ಎಲಿಗಾರ್ ಅವರು, ವಸತಿ ಸೌಲಭ್ಯಕ್ಕೆ ಸಂಬಂಧಿಸಿದಂತೆ ಪರಿಷತ್ತಿನ ಅಧ್ಯಕ್ಷರೊಂದಿಗೆ ಬಹಿರಂಗವಾಗಿಯೇ ಮಾತಿನ ಚಕಮಕಿ ನಡೆಸಿದ್ದರು. ಅಷ್ಟೇ ಅಲ್ಲದೇ ದೂರದರ್ಶನದಲ್ಲಿ ಕಸಾಪ ವಿರುದ್ಧ ಒಂದು ನಿಮಿಷದ ಮೌನಾಚರಣೆ ಮಾಡಿದ್ದರು. ಇದು ಮಹೇಶ ಜೋಶಿಯವರ ಕಣ್ಣು ಕೆಂಪಾಗಲು ಕಾರಣವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...